Homeಮುಖಪುಟಗೃಹ ಸಚಿವ ಅಮಿತ್‌ ಷಾರನ್ನು ಭೇಟಿ ಮಾಡಿದ ಕುಸ್ತಿಪಟುಗಳು; ನ್ಯಾಯ ಸಿಗುವುದೇ?

ಗೃಹ ಸಚಿವ ಅಮಿತ್‌ ಷಾರನ್ನು ಭೇಟಿ ಮಾಡಿದ ಕುಸ್ತಿಪಟುಗಳು; ನ್ಯಾಯ ಸಿಗುವುದೇ?

- Advertisement -
- Advertisement -

ಲೈಂಗಿಕ ಕಿರುಕುಳದ ಆರೋಪಿ, ಭಾರತೀಯ ಕುಸ್ತಿ ಫೆಡರೇಷನ್‌ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್‌ ವಿರುದ್ಧ ಕ್ರಮ ಜರುಗಿಸುವಂತೆ ಆಗ್ರಹಿಸಿ ಗಂಗಾ ನದಿಗೆ ತಮ್ಮ ಪದಕಗಳನ್ನು ಎಸೆಯಲು ಮುಂದಾಗಿದ್ದ ಕುಸ್ತಿಪಟುಗಳು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿದ್ದಾರೆ.

ಪದಕಗಳನ್ನು ನದಿಗೆ ಎಸೆಯುವ ನಿರ್ಧಾರದಿಂದ ಹಿಂದೆ ಸರಿದು ಐದು ದಿನಗಳ ಗಡುವನ್ನು ನೀಡಲಾಗಿತ್ತು. ಅದು ಮುಗಿದ ಹಿಂದಿನ ರಾತ್ರಿ ಅಂದರೆ ಶನಿವಾರ ತಡರಾತ್ರಿ ಗೃಹ ಸಚಿವರನ್ನು ದೆಹಲಿಯ ಅಧಿಕೃತ ಗೃಹ ಕಚೇರಿಯಲ್ಲಿ ಭೇಟಿ ಮಾಡಿದ್ದಾರೆ.

ಎರಡು ಗಂಟೆಗಳ ಕಾಲ ಸಭೆ ನಡೆದಿದೆ. ಮಧ್ಯರಾತ್ರಿಯ ನಂತರ ಸಭೆ ಮುಗಿದಿದೆ ಎಂದು ತಿಳಿದುಬಂದಿರುವುದಾಗಿ ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ. ಒಲಿಂಪಿಕ್ ಪದಕ ವಿಜೇತರಾದ ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಮತ್ತು ಹಲವಾರು ತರಬೇತುದಾರರು ಭಾಗವಹಿಸಿದ್ದರು.

“ನಾವು ಗೃಹ ಸಚಿವರೊಂದಿಗೆ ಸಭೆ ನಡೆಸಿದ್ದೇವೆ. ನಾನು ಹೆಚ್ಚಿನ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ” ಎಂದು ಬಜರಂಗ್ ಪೂನಿಯಾ ಅವರು ಪ್ರತಿಕ್ರಿಯಿಸಿರುವುದಾಗಿ ‘ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ಬ್ರಿಜ್‌ ಭೂಷಣ್ ವಿರುದ್ಧದ ಆರೋಪಗಳ ತನಿಖೆಯ ಕುರಿತು ಪ್ರಧಾನ ವಿಷಯವಾಗಿ ಅಮಿತ್ ಷಾ ಅವರಲ್ಲಿ ಕುಸ್ತಿಪಟುಗಳು ಪ್ರಸ್ತಾಪಿಸಿದ್ದಾರೆ. ಬಲವಾದ ಆರೋಪಪಟ್ಟಿಯನ್ನು ತ್ವರಿತವಾಗಿ ಸಲ್ಲಿಸಬೇಕು ಎಂಬ ತಮ್ಮ ಬೇಡಿಕೆಯನ್ನು ಇಟ್ಟಿದ್ದಾರೆ. ಸೂಕ್ತ ಪ್ರಕ್ರಿಯೆಯನ್ನು ಅನುಸರಿಸಬೇಕು ಎಂದು ಗೃಹ ಸಚಿವರು ಹೇಳಿರುವುದಾಗಿ ತಿಳಿದುಬಂದಿದೆ.

ಬಜರಂಗ್, ಸಾಕ್ಷಿ, ವಿಜೇತ ವಿನೇಶ್ ಫೋಗಟ್ ಹೋರಾಟದ ಮುಂಚೂಣಿಯಲ್ಲಿದ್ದಾರೆ. ದೆಹಲಿ ಪೊಲೀಸರು ಏಪ್ರಿಲ್ 28 ರಂದು ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. ಅಪ್ರಾಪ್ತ ಕುಸ್ತಿಪಟುವಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ದಾಖಲಾದ ಪೋಕ್ಸೋ ಪ್ರಕರಣವೂ ಇದರಲ್ಲಿ ಸೇರಿದೆ.

ಇದನ್ನೂ ಓದಿರಿ: ಬಿಜೆಪಿಯ ಮಹಾಸಂಪರ್ಕ ಅಭಿಯಾನದ ರ್ಯಾಲಿಯಲ್ಲಿ ಲೈಂಗಿಕ ಕಿರುಕುಳದ ಆರೋಪಿ ಬ್ರಿಜ್‌ಭೂಷಣ್ ಸಿಂಗ್ ಭಾಗಿ

ಕನಿಷ್ಠ ಮೂವರು ಮಹಿಳಾ ಕುಸ್ತಿಪಟುಗಳ ಆರೋಪಗಳನ್ನು ಒಬ್ಬರು ಒಲಿಂಪಿಯನ್, ಒಬ್ಬರು ಕಾಮನ್‌ವೆಲ್ತ್ ಚಿನ್ನದ ಪದಕ ವಿಜೇತರು, ಅಂತರರಾಷ್ಟ್ರೀಯ ರೆಫರಿ ಮತ್ತು ರಾಜ್ಯ ಮಟ್ಟದ ಕೋಚ್ ಸೇರಿ ದೃಢೀಕರಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದಕ್ಕೂ ಮೊದಲು, ಕ್ರೀಡಾ ಸಚಿವ ಅನುರಾಗ್ ಠಾಕೂರ್ ಕೂಡ ಕುಸ್ತಿಪಟುಗಳಲ್ಲಿ ಮನವಿ ಮಾಡಿದ್ದಾರೆ. “ನ್ಯಾಯಯುತ ತನಿಖೆಗೆ ಸಂಪೂರ್ಣವಾಗಿ ಸಹಕರಿಸಬೇಕು. ಕಾನೂನು ತನ್ನದೇ ಕ್ರಮಗಳನ್ನು ತೆಗೆದುಕೊಳ್ಳಲಿದೆ” ಎಂದು ಹೇಳಿದ್ದಾರೆ.

ಹೊಸ ಸಂಸತ್ತಿನ ಉದ್ಘಾಟನೆಯ ಮುನ್ನಾದಿನದಂದು ಮೇ 27 ರಂದು ಪ್ರತಿಭಟನಾ ನಿರತ ಕುಸ್ತಿಪಟುಗಳು ಮತ್ತು ಸರ್ಕಾರಿ ಪ್ರತಿನಿಧಿಗಳ ನಡುವಿನ ಕೊನೆಯ ಉನ್ನತ ಮಟ್ಟದ ಸಭೆ ನಡೆದಿತ್ತು. ಮಾತುಕತೆಗಳು ವಿಫಲವಾಗಿದ್ದವು. ಕುಸ್ತಿಪಟುಗಳು ತಮ್ಮ ಬೆಂಬಲಿಗರೊಂದಿಗೆ ಹೊಸ ಸಂಸತ್ತಿನತ್ತ ಮೆರವಣಿಗೆ ಮಾಡಲು ಮುಂದಾಗಿದ್ದರು. ದಾರಿಯಲ್ಲೇ ಅವರನ್ನು ತಡೆದು, ಹಲ್ಲೆ ನಡೆಸಿ ದೆಹಲಿ ಪೊಲೀಸರು ಬಂಧಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...