Homeಕರ್ನಾಟಕಜಂತರ್‌ಮಂತರ್‌‌ನಲ್ಲಿ ಹೋರಾಟ ನಡೆಸಲು ಕುಸ್ತಿಪಟುಗಳಿಗೆ ಅವಕಾಶ ನೀಡುವುದಿಲ್ಲ: ದೆಹಲಿ ಪೊಲೀಸ್

ಜಂತರ್‌ಮಂತರ್‌‌ನಲ್ಲಿ ಹೋರಾಟ ನಡೆಸಲು ಕುಸ್ತಿಪಟುಗಳಿಗೆ ಅವಕಾಶ ನೀಡುವುದಿಲ್ಲ: ದೆಹಲಿ ಪೊಲೀಸ್

- Advertisement -
- Advertisement -

ಗಲಭೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಪ್ರತಿಭಟನಾನಿರತ ಕುಸ್ತಿಪಟುಗಳ ಮೇಲೆ ಪ್ರಕರಣಗಳನ್ನು ದಾಖಲಿಸಿದ ಒಂದು ದಿನದ ನಂತರ ದೆಹಲಿ ಪೊಲೀಸರು ಪ್ರತಿಕ್ರಿಯಿಸಿದ್ದು, “ಜಂತರ್‌ ಮಂತರ್‌ನಲ್ಲಿ ಕುಸ್ತಿಪಟುಗಳು ಹೋರಾಟ ನಡೆಸಲು ಅವಕಾಶ ನೀಡುವುದಿಲ್ಲ” ಎಂದಿದ್ದಾರೆ.

ಪೊಲೀಸರು ನಿನ್ನೆ ಮತ್ತೆ ಮತ್ತೆ ಕೇಳಿಕೊಂಡರೂ ಪ್ರತಿಭಟನಾಕಾರರು ಉನ್ಮಾದದಲ್ಲಿ ಕಾನೂನನ್ನು ಉಲ್ಲಂಘಿಸಿದ್ದಾರೆ. ಹೀಗಾಗಿ ಪ್ರತಿಭಟನೆಗಾಗಿ ನಿಯೋಜಿತವಾದ ದೆಹಲಿಯ ಜಂತರ್‌ ಮಂತರ್‌ನಲ್ಲಿ ಅವರ ಹೋರಾಟವನ್ನು ತಡೆಯಬೇಕಾಯಿತು.

“ನಮ್ಮ ಸತ್ಯಾಗ್ರಹ ಇಲ್ಲಿಯವರೆಗೆ ಸುಗಮವಾಗಿ ನಡೆಯುತ್ತಿದೆ” ಎಂದಿರುವ ಕುಸ್ತಿಪಟುಗಳು, ಗಲಭೆ ಮತ್ತು ಹಿಂಸಾಚಾರದ ಆರೋಪಗಳನ್ನು ನಿರಾಕರಿಸಿದ್ದಾರೆ.

“ಕುಸ್ತಿಪಟುಗಳು ಮುಂದೇನಾದರೂ ಮತ್ತೆ ಧರಣಿ ನಡೆಸಲು ಅನುಮತಿಗಾಗಿ ಅರ್ಜಿ ಸಲ್ಲಿಸಿದರೆ, ಜಂತರ್ ಮಂತರ್ ಹೊರತುಪಡಿಸಿ ಯಾವುದೇ ಸೂಕ್ತ, ಅಧಿಸೂಚಿತ ಸ್ಥಳಗಳಲ್ಲಿ ಅವರನ್ನು ಅನುಮತಿಸಲಾಗುವುದು” ಎಂದು ನವದೆಹಲಿಯ ಉಪ ಪೊಲೀಸ್ ಆಯುಕ್ತರು ಟ್ವೀಟ್ ಮಾಡಿದ್ದಾರೆ.

ಕುಸ್ತಿಪಟುಗಳಾದ ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪೂನಿಯಾ ಅವರನ್ನು ಪ್ರತಿಭಟನೆ ವೇಳೆ ಭಾನುವಾರ ದೆಹಲಿ ಪೊಲೀಸರು ಬಂಧಿಸಿದ್ದರು. ಕುಸ್ತಿಪಟುಗಳು ಹೊಸ ಸಂಸತ್ ಭವನದತ್ತ ಮೆರವಣಿಗೆ ನಡೆಸಲು ಪ್ರಯತ್ನಿಸುತ್ತಿದ್ದಾಗ ವಶಕ್ಕೆ ಪಡೆಯಲಾಗಿತ್ತು. ಈ ವೇಳೆ ಪೊಲೀಸರು ಮತ್ತು ಕುಸ್ತಿಪಟುಗಳ ನಡುವೆ ನೂಕಾಟ ನಡೆದಿತ್ತು. ಕುಸ್ತಿಪಟುಗಳನ್ನು ಬಲವಂತವಾಗಿ ಪೊಲೀಸರು ಬಂಧನ ಮಾಡಿದ್ದರು. ಜಂತರ್ ಮಂತರ್‌ನಲ್ಲಿ ಪ್ರತಿಭಟನಾ ನಿರತ ಕುಸ್ತಿಪಟುಗಳು ಹಾಕಿದ್ದ ತಾತ್ಕಾಲಿಕ ಟೆಂಟ್‌ಗಳನ್ನೂ ತೆರವು ಮಾಡಿದರು.

ಐಪಿಸಿ ಸೆಕ್ಷನ್ 147 (ಗಲಭೆ), 149 (ಕಾನೂನುಬಾಹಿರ ಸಭೆ), 186 (ಕರ್ತವ್ಯನಿರತ ಸಾರ್ವಜನಿಕ ಸೇವಕರಿಗೆ ಅಡ್ಡಿಪಡಿಸುವುದು), 188 (ಸಾರ್ವಜನಿಕ ಸೇವಕರು ಘೋಷಿಸಿದ ಆದೇಶಕ್ಕೆ ಅಸಹಕಾರ), 332 (ಸಾರ್ವಜನಿಕ ಸೇವಕರ ಕರ್ತವ್ಯ ತಡೆದು ಸ್ವಯಂಪ್ರೇರಣೆಯಿಂದ ಅಡ್ಡಿ) ಮತ್ತು ಪಿಡಿಪಿಪಿ ಕಾಯ್ದೆಯ ಸೆಕ್ಷನ್ 3ರ ಅಡಿಯಲ್ಲಿ ಕುಸ್ತಿಪಟುಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿರಿ: ಕುಸ್ತಿಪಟುಗಳಿಗೆ ಸವಾಲಾಗಿರುವ ‘ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌’ ಯಾರು? ಆತನ ಹಿನ್ನಲೆ, ಪ್ರಭಾವವೇನು?

ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸಾಕ್ಷಿ ಮಲಿಕ್ ಪ್ರತಿಕ್ರಿಯಿಸಿ, “ವೀಡಿಯೊದಲ್ಲಿ ಎಲ್ಲವೂ ದಾಖಲಾಗಿದೆ. ಒಬ್ಬ ಕುಸ್ತಿಪಟುವನ್ನು ತಡೆಯಲು 20-30 ಮಂದಿ ಕಾನ್‌ಸ್ಟೆಬಲ್‌ಗಳು ಇರುವಾಗ, ನಾವು ಯಾವುದೇ ರೀತಿಯ ಗಲಭೆಗಳನ್ನು ಹೇಗೆ ಮಾಡಬಹುದು?” ಎಂದು ಪ್ರಶ್ನಿಸಿದ್ದಾರೆ.

“ದಯವಿಟ್ಟು ನಮ್ಮನ್ನು ಕರೆದುಕೊಂಡು ಹೋಗಬೇಡಿ ಎಂದು ನಾವು ಅವರಿಗೆ ಹೇಳಲು ಪ್ರಯತ್ನಿಸುತ್ತಿದ್ದೇವೆ. ನಾವು ಹಾಗೆಯೇ ನಡೆದುಕೊಳ್ಳಲು ಬಯಸುತ್ತೇವೆ. ಶಾಂತಿಯುತ ಮೆರವಣಿಗೆಯ ವೇಳೆ ಯಾರೂ ನಮ್ಮ ಮಾತು ಕೇಳಲಿಲ್ಲ. ನಮ್ಮನ್ನು ಬಲವಂತವಾಗಿ ಬಸ್ಸಿನೊಳಗೆ ಎಳೆದೊಯ್ದರು, ಅದರಿಂದಾಗಿ ನಮಗೆ ಗಾಯಗಳಾದವು. ನಾವು ಯಾವುದೇ ಗಲಭೆ ಮಾಡಿಲ್ಲ, ಯಾವುದೇ ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿಲ್ಲ, ನಾವು ಬ್ಯಾರಿಕೇಡಿಂಗ್ ಅನ್ನು ಎಳೆದಿಲ್ಲ ಅಥವಾ ತಳ್ಳಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

“ನಾವು ಮೊದಲ ದಿನದಿಂದಲೂ ಶಾಂತಿಯುತ ಪ್ರತಿಭಟನೆಯನ್ನು ಮಾಡುತ್ತಿದ್ದೇವೆ. ಹೊಸ ಸಂಸತ್ ಭವನದ ಎದುರು ಹಮ್ಮಿಕೊಳ್ಳಲಾಗಿದ್ದ ಹೋರಾಟಕ್ಕೆ ಹೋಗಲು ಬಿಡುವಂತೆ ಅವರಲ್ಲಿ ಮನವಿ ಮಾಡಿದೆವು. ಆದರೆ ನಮಗೆ ಹೋಗಲು ಅವಕಾಶ ನೀಡಲಿಲ್ಲ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...