Homeಕರ್ನಾಟಕಜಂತರ್‌ಮಂತರ್‌‌ನಲ್ಲಿ ಹೋರಾಟ ನಡೆಸಲು ಕುಸ್ತಿಪಟುಗಳಿಗೆ ಅವಕಾಶ ನೀಡುವುದಿಲ್ಲ: ದೆಹಲಿ ಪೊಲೀಸ್

ಜಂತರ್‌ಮಂತರ್‌‌ನಲ್ಲಿ ಹೋರಾಟ ನಡೆಸಲು ಕುಸ್ತಿಪಟುಗಳಿಗೆ ಅವಕಾಶ ನೀಡುವುದಿಲ್ಲ: ದೆಹಲಿ ಪೊಲೀಸ್

- Advertisement -
- Advertisement -

ಗಲಭೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಪ್ರತಿಭಟನಾನಿರತ ಕುಸ್ತಿಪಟುಗಳ ಮೇಲೆ ಪ್ರಕರಣಗಳನ್ನು ದಾಖಲಿಸಿದ ಒಂದು ದಿನದ ನಂತರ ದೆಹಲಿ ಪೊಲೀಸರು ಪ್ರತಿಕ್ರಿಯಿಸಿದ್ದು, “ಜಂತರ್‌ ಮಂತರ್‌ನಲ್ಲಿ ಕುಸ್ತಿಪಟುಗಳು ಹೋರಾಟ ನಡೆಸಲು ಅವಕಾಶ ನೀಡುವುದಿಲ್ಲ” ಎಂದಿದ್ದಾರೆ.

ಪೊಲೀಸರು ನಿನ್ನೆ ಮತ್ತೆ ಮತ್ತೆ ಕೇಳಿಕೊಂಡರೂ ಪ್ರತಿಭಟನಾಕಾರರು ಉನ್ಮಾದದಲ್ಲಿ ಕಾನೂನನ್ನು ಉಲ್ಲಂಘಿಸಿದ್ದಾರೆ. ಹೀಗಾಗಿ ಪ್ರತಿಭಟನೆಗಾಗಿ ನಿಯೋಜಿತವಾದ ದೆಹಲಿಯ ಜಂತರ್‌ ಮಂತರ್‌ನಲ್ಲಿ ಅವರ ಹೋರಾಟವನ್ನು ತಡೆಯಬೇಕಾಯಿತು.

“ನಮ್ಮ ಸತ್ಯಾಗ್ರಹ ಇಲ್ಲಿಯವರೆಗೆ ಸುಗಮವಾಗಿ ನಡೆಯುತ್ತಿದೆ” ಎಂದಿರುವ ಕುಸ್ತಿಪಟುಗಳು, ಗಲಭೆ ಮತ್ತು ಹಿಂಸಾಚಾರದ ಆರೋಪಗಳನ್ನು ನಿರಾಕರಿಸಿದ್ದಾರೆ.

“ಕುಸ್ತಿಪಟುಗಳು ಮುಂದೇನಾದರೂ ಮತ್ತೆ ಧರಣಿ ನಡೆಸಲು ಅನುಮತಿಗಾಗಿ ಅರ್ಜಿ ಸಲ್ಲಿಸಿದರೆ, ಜಂತರ್ ಮಂತರ್ ಹೊರತುಪಡಿಸಿ ಯಾವುದೇ ಸೂಕ್ತ, ಅಧಿಸೂಚಿತ ಸ್ಥಳಗಳಲ್ಲಿ ಅವರನ್ನು ಅನುಮತಿಸಲಾಗುವುದು” ಎಂದು ನವದೆಹಲಿಯ ಉಪ ಪೊಲೀಸ್ ಆಯುಕ್ತರು ಟ್ವೀಟ್ ಮಾಡಿದ್ದಾರೆ.

ಕುಸ್ತಿಪಟುಗಳಾದ ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪೂನಿಯಾ ಅವರನ್ನು ಪ್ರತಿಭಟನೆ ವೇಳೆ ಭಾನುವಾರ ದೆಹಲಿ ಪೊಲೀಸರು ಬಂಧಿಸಿದ್ದರು. ಕುಸ್ತಿಪಟುಗಳು ಹೊಸ ಸಂಸತ್ ಭವನದತ್ತ ಮೆರವಣಿಗೆ ನಡೆಸಲು ಪ್ರಯತ್ನಿಸುತ್ತಿದ್ದಾಗ ವಶಕ್ಕೆ ಪಡೆಯಲಾಗಿತ್ತು. ಈ ವೇಳೆ ಪೊಲೀಸರು ಮತ್ತು ಕುಸ್ತಿಪಟುಗಳ ನಡುವೆ ನೂಕಾಟ ನಡೆದಿತ್ತು. ಕುಸ್ತಿಪಟುಗಳನ್ನು ಬಲವಂತವಾಗಿ ಪೊಲೀಸರು ಬಂಧನ ಮಾಡಿದ್ದರು. ಜಂತರ್ ಮಂತರ್‌ನಲ್ಲಿ ಪ್ರತಿಭಟನಾ ನಿರತ ಕುಸ್ತಿಪಟುಗಳು ಹಾಕಿದ್ದ ತಾತ್ಕಾಲಿಕ ಟೆಂಟ್‌ಗಳನ್ನೂ ತೆರವು ಮಾಡಿದರು.

ಐಪಿಸಿ ಸೆಕ್ಷನ್ 147 (ಗಲಭೆ), 149 (ಕಾನೂನುಬಾಹಿರ ಸಭೆ), 186 (ಕರ್ತವ್ಯನಿರತ ಸಾರ್ವಜನಿಕ ಸೇವಕರಿಗೆ ಅಡ್ಡಿಪಡಿಸುವುದು), 188 (ಸಾರ್ವಜನಿಕ ಸೇವಕರು ಘೋಷಿಸಿದ ಆದೇಶಕ್ಕೆ ಅಸಹಕಾರ), 332 (ಸಾರ್ವಜನಿಕ ಸೇವಕರ ಕರ್ತವ್ಯ ತಡೆದು ಸ್ವಯಂಪ್ರೇರಣೆಯಿಂದ ಅಡ್ಡಿ) ಮತ್ತು ಪಿಡಿಪಿಪಿ ಕಾಯ್ದೆಯ ಸೆಕ್ಷನ್ 3ರ ಅಡಿಯಲ್ಲಿ ಕುಸ್ತಿಪಟುಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿರಿ: ಕುಸ್ತಿಪಟುಗಳಿಗೆ ಸವಾಲಾಗಿರುವ ‘ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌’ ಯಾರು? ಆತನ ಹಿನ್ನಲೆ, ಪ್ರಭಾವವೇನು?

ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸಾಕ್ಷಿ ಮಲಿಕ್ ಪ್ರತಿಕ್ರಿಯಿಸಿ, “ವೀಡಿಯೊದಲ್ಲಿ ಎಲ್ಲವೂ ದಾಖಲಾಗಿದೆ. ಒಬ್ಬ ಕುಸ್ತಿಪಟುವನ್ನು ತಡೆಯಲು 20-30 ಮಂದಿ ಕಾನ್‌ಸ್ಟೆಬಲ್‌ಗಳು ಇರುವಾಗ, ನಾವು ಯಾವುದೇ ರೀತಿಯ ಗಲಭೆಗಳನ್ನು ಹೇಗೆ ಮಾಡಬಹುದು?” ಎಂದು ಪ್ರಶ್ನಿಸಿದ್ದಾರೆ.

“ದಯವಿಟ್ಟು ನಮ್ಮನ್ನು ಕರೆದುಕೊಂಡು ಹೋಗಬೇಡಿ ಎಂದು ನಾವು ಅವರಿಗೆ ಹೇಳಲು ಪ್ರಯತ್ನಿಸುತ್ತಿದ್ದೇವೆ. ನಾವು ಹಾಗೆಯೇ ನಡೆದುಕೊಳ್ಳಲು ಬಯಸುತ್ತೇವೆ. ಶಾಂತಿಯುತ ಮೆರವಣಿಗೆಯ ವೇಳೆ ಯಾರೂ ನಮ್ಮ ಮಾತು ಕೇಳಲಿಲ್ಲ. ನಮ್ಮನ್ನು ಬಲವಂತವಾಗಿ ಬಸ್ಸಿನೊಳಗೆ ಎಳೆದೊಯ್ದರು, ಅದರಿಂದಾಗಿ ನಮಗೆ ಗಾಯಗಳಾದವು. ನಾವು ಯಾವುದೇ ಗಲಭೆ ಮಾಡಿಲ್ಲ, ಯಾವುದೇ ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿಲ್ಲ, ನಾವು ಬ್ಯಾರಿಕೇಡಿಂಗ್ ಅನ್ನು ಎಳೆದಿಲ್ಲ ಅಥವಾ ತಳ್ಳಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

“ನಾವು ಮೊದಲ ದಿನದಿಂದಲೂ ಶಾಂತಿಯುತ ಪ್ರತಿಭಟನೆಯನ್ನು ಮಾಡುತ್ತಿದ್ದೇವೆ. ಹೊಸ ಸಂಸತ್ ಭವನದ ಎದುರು ಹಮ್ಮಿಕೊಳ್ಳಲಾಗಿದ್ದ ಹೋರಾಟಕ್ಕೆ ಹೋಗಲು ಬಿಡುವಂತೆ ಅವರಲ್ಲಿ ಮನವಿ ಮಾಡಿದೆವು. ಆದರೆ ನಮಗೆ ಹೋಗಲು ಅವಕಾಶ ನೀಡಲಿಲ್ಲ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...