Homeಕರ್ನಾಟಕಜಂತರ್‌ಮಂತರ್‌‌ನಲ್ಲಿ ಹೋರಾಟ ನಡೆಸಲು ಕುಸ್ತಿಪಟುಗಳಿಗೆ ಅವಕಾಶ ನೀಡುವುದಿಲ್ಲ: ದೆಹಲಿ ಪೊಲೀಸ್

ಜಂತರ್‌ಮಂತರ್‌‌ನಲ್ಲಿ ಹೋರಾಟ ನಡೆಸಲು ಕುಸ್ತಿಪಟುಗಳಿಗೆ ಅವಕಾಶ ನೀಡುವುದಿಲ್ಲ: ದೆಹಲಿ ಪೊಲೀಸ್

- Advertisement -
- Advertisement -

ಗಲಭೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಪ್ರತಿಭಟನಾನಿರತ ಕುಸ್ತಿಪಟುಗಳ ಮೇಲೆ ಪ್ರಕರಣಗಳನ್ನು ದಾಖಲಿಸಿದ ಒಂದು ದಿನದ ನಂತರ ದೆಹಲಿ ಪೊಲೀಸರು ಪ್ರತಿಕ್ರಿಯಿಸಿದ್ದು, “ಜಂತರ್‌ ಮಂತರ್‌ನಲ್ಲಿ ಕುಸ್ತಿಪಟುಗಳು ಹೋರಾಟ ನಡೆಸಲು ಅವಕಾಶ ನೀಡುವುದಿಲ್ಲ” ಎಂದಿದ್ದಾರೆ.

ಪೊಲೀಸರು ನಿನ್ನೆ ಮತ್ತೆ ಮತ್ತೆ ಕೇಳಿಕೊಂಡರೂ ಪ್ರತಿಭಟನಾಕಾರರು ಉನ್ಮಾದದಲ್ಲಿ ಕಾನೂನನ್ನು ಉಲ್ಲಂಘಿಸಿದ್ದಾರೆ. ಹೀಗಾಗಿ ಪ್ರತಿಭಟನೆಗಾಗಿ ನಿಯೋಜಿತವಾದ ದೆಹಲಿಯ ಜಂತರ್‌ ಮಂತರ್‌ನಲ್ಲಿ ಅವರ ಹೋರಾಟವನ್ನು ತಡೆಯಬೇಕಾಯಿತು.

“ನಮ್ಮ ಸತ್ಯಾಗ್ರಹ ಇಲ್ಲಿಯವರೆಗೆ ಸುಗಮವಾಗಿ ನಡೆಯುತ್ತಿದೆ” ಎಂದಿರುವ ಕುಸ್ತಿಪಟುಗಳು, ಗಲಭೆ ಮತ್ತು ಹಿಂಸಾಚಾರದ ಆರೋಪಗಳನ್ನು ನಿರಾಕರಿಸಿದ್ದಾರೆ.

“ಕುಸ್ತಿಪಟುಗಳು ಮುಂದೇನಾದರೂ ಮತ್ತೆ ಧರಣಿ ನಡೆಸಲು ಅನುಮತಿಗಾಗಿ ಅರ್ಜಿ ಸಲ್ಲಿಸಿದರೆ, ಜಂತರ್ ಮಂತರ್ ಹೊರತುಪಡಿಸಿ ಯಾವುದೇ ಸೂಕ್ತ, ಅಧಿಸೂಚಿತ ಸ್ಥಳಗಳಲ್ಲಿ ಅವರನ್ನು ಅನುಮತಿಸಲಾಗುವುದು” ಎಂದು ನವದೆಹಲಿಯ ಉಪ ಪೊಲೀಸ್ ಆಯುಕ್ತರು ಟ್ವೀಟ್ ಮಾಡಿದ್ದಾರೆ.

ಕುಸ್ತಿಪಟುಗಳಾದ ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪೂನಿಯಾ ಅವರನ್ನು ಪ್ರತಿಭಟನೆ ವೇಳೆ ಭಾನುವಾರ ದೆಹಲಿ ಪೊಲೀಸರು ಬಂಧಿಸಿದ್ದರು. ಕುಸ್ತಿಪಟುಗಳು ಹೊಸ ಸಂಸತ್ ಭವನದತ್ತ ಮೆರವಣಿಗೆ ನಡೆಸಲು ಪ್ರಯತ್ನಿಸುತ್ತಿದ್ದಾಗ ವಶಕ್ಕೆ ಪಡೆಯಲಾಗಿತ್ತು. ಈ ವೇಳೆ ಪೊಲೀಸರು ಮತ್ತು ಕುಸ್ತಿಪಟುಗಳ ನಡುವೆ ನೂಕಾಟ ನಡೆದಿತ್ತು. ಕುಸ್ತಿಪಟುಗಳನ್ನು ಬಲವಂತವಾಗಿ ಪೊಲೀಸರು ಬಂಧನ ಮಾಡಿದ್ದರು. ಜಂತರ್ ಮಂತರ್‌ನಲ್ಲಿ ಪ್ರತಿಭಟನಾ ನಿರತ ಕುಸ್ತಿಪಟುಗಳು ಹಾಕಿದ್ದ ತಾತ್ಕಾಲಿಕ ಟೆಂಟ್‌ಗಳನ್ನೂ ತೆರವು ಮಾಡಿದರು.

ಐಪಿಸಿ ಸೆಕ್ಷನ್ 147 (ಗಲಭೆ), 149 (ಕಾನೂನುಬಾಹಿರ ಸಭೆ), 186 (ಕರ್ತವ್ಯನಿರತ ಸಾರ್ವಜನಿಕ ಸೇವಕರಿಗೆ ಅಡ್ಡಿಪಡಿಸುವುದು), 188 (ಸಾರ್ವಜನಿಕ ಸೇವಕರು ಘೋಷಿಸಿದ ಆದೇಶಕ್ಕೆ ಅಸಹಕಾರ), 332 (ಸಾರ್ವಜನಿಕ ಸೇವಕರ ಕರ್ತವ್ಯ ತಡೆದು ಸ್ವಯಂಪ್ರೇರಣೆಯಿಂದ ಅಡ್ಡಿ) ಮತ್ತು ಪಿಡಿಪಿಪಿ ಕಾಯ್ದೆಯ ಸೆಕ್ಷನ್ 3ರ ಅಡಿಯಲ್ಲಿ ಕುಸ್ತಿಪಟುಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿರಿ: ಕುಸ್ತಿಪಟುಗಳಿಗೆ ಸವಾಲಾಗಿರುವ ‘ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌’ ಯಾರು? ಆತನ ಹಿನ್ನಲೆ, ಪ್ರಭಾವವೇನು?

ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸಾಕ್ಷಿ ಮಲಿಕ್ ಪ್ರತಿಕ್ರಿಯಿಸಿ, “ವೀಡಿಯೊದಲ್ಲಿ ಎಲ್ಲವೂ ದಾಖಲಾಗಿದೆ. ಒಬ್ಬ ಕುಸ್ತಿಪಟುವನ್ನು ತಡೆಯಲು 20-30 ಮಂದಿ ಕಾನ್‌ಸ್ಟೆಬಲ್‌ಗಳು ಇರುವಾಗ, ನಾವು ಯಾವುದೇ ರೀತಿಯ ಗಲಭೆಗಳನ್ನು ಹೇಗೆ ಮಾಡಬಹುದು?” ಎಂದು ಪ್ರಶ್ನಿಸಿದ್ದಾರೆ.

“ದಯವಿಟ್ಟು ನಮ್ಮನ್ನು ಕರೆದುಕೊಂಡು ಹೋಗಬೇಡಿ ಎಂದು ನಾವು ಅವರಿಗೆ ಹೇಳಲು ಪ್ರಯತ್ನಿಸುತ್ತಿದ್ದೇವೆ. ನಾವು ಹಾಗೆಯೇ ನಡೆದುಕೊಳ್ಳಲು ಬಯಸುತ್ತೇವೆ. ಶಾಂತಿಯುತ ಮೆರವಣಿಗೆಯ ವೇಳೆ ಯಾರೂ ನಮ್ಮ ಮಾತು ಕೇಳಲಿಲ್ಲ. ನಮ್ಮನ್ನು ಬಲವಂತವಾಗಿ ಬಸ್ಸಿನೊಳಗೆ ಎಳೆದೊಯ್ದರು, ಅದರಿಂದಾಗಿ ನಮಗೆ ಗಾಯಗಳಾದವು. ನಾವು ಯಾವುದೇ ಗಲಭೆ ಮಾಡಿಲ್ಲ, ಯಾವುದೇ ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿಲ್ಲ, ನಾವು ಬ್ಯಾರಿಕೇಡಿಂಗ್ ಅನ್ನು ಎಳೆದಿಲ್ಲ ಅಥವಾ ತಳ್ಳಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

“ನಾವು ಮೊದಲ ದಿನದಿಂದಲೂ ಶಾಂತಿಯುತ ಪ್ರತಿಭಟನೆಯನ್ನು ಮಾಡುತ್ತಿದ್ದೇವೆ. ಹೊಸ ಸಂಸತ್ ಭವನದ ಎದುರು ಹಮ್ಮಿಕೊಳ್ಳಲಾಗಿದ್ದ ಹೋರಾಟಕ್ಕೆ ಹೋಗಲು ಬಿಡುವಂತೆ ಅವರಲ್ಲಿ ಮನವಿ ಮಾಡಿದೆವು. ಆದರೆ ನಮಗೆ ಹೋಗಲು ಅವಕಾಶ ನೀಡಲಿಲ್ಲ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...