Homeಕರ್ನಾಟಕಜಂತರ್‌ಮಂತರ್‌‌ನಲ್ಲಿ ಹೋರಾಟ ನಡೆಸಲು ಕುಸ್ತಿಪಟುಗಳಿಗೆ ಅವಕಾಶ ನೀಡುವುದಿಲ್ಲ: ದೆಹಲಿ ಪೊಲೀಸ್

ಜಂತರ್‌ಮಂತರ್‌‌ನಲ್ಲಿ ಹೋರಾಟ ನಡೆಸಲು ಕುಸ್ತಿಪಟುಗಳಿಗೆ ಅವಕಾಶ ನೀಡುವುದಿಲ್ಲ: ದೆಹಲಿ ಪೊಲೀಸ್

- Advertisement -
- Advertisement -

ಗಲಭೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಪ್ರತಿಭಟನಾನಿರತ ಕುಸ್ತಿಪಟುಗಳ ಮೇಲೆ ಪ್ರಕರಣಗಳನ್ನು ದಾಖಲಿಸಿದ ಒಂದು ದಿನದ ನಂತರ ದೆಹಲಿ ಪೊಲೀಸರು ಪ್ರತಿಕ್ರಿಯಿಸಿದ್ದು, “ಜಂತರ್‌ ಮಂತರ್‌ನಲ್ಲಿ ಕುಸ್ತಿಪಟುಗಳು ಹೋರಾಟ ನಡೆಸಲು ಅವಕಾಶ ನೀಡುವುದಿಲ್ಲ” ಎಂದಿದ್ದಾರೆ.

ಪೊಲೀಸರು ನಿನ್ನೆ ಮತ್ತೆ ಮತ್ತೆ ಕೇಳಿಕೊಂಡರೂ ಪ್ರತಿಭಟನಾಕಾರರು ಉನ್ಮಾದದಲ್ಲಿ ಕಾನೂನನ್ನು ಉಲ್ಲಂಘಿಸಿದ್ದಾರೆ. ಹೀಗಾಗಿ ಪ್ರತಿಭಟನೆಗಾಗಿ ನಿಯೋಜಿತವಾದ ದೆಹಲಿಯ ಜಂತರ್‌ ಮಂತರ್‌ನಲ್ಲಿ ಅವರ ಹೋರಾಟವನ್ನು ತಡೆಯಬೇಕಾಯಿತು.

“ನಮ್ಮ ಸತ್ಯಾಗ್ರಹ ಇಲ್ಲಿಯವರೆಗೆ ಸುಗಮವಾಗಿ ನಡೆಯುತ್ತಿದೆ” ಎಂದಿರುವ ಕುಸ್ತಿಪಟುಗಳು, ಗಲಭೆ ಮತ್ತು ಹಿಂಸಾಚಾರದ ಆರೋಪಗಳನ್ನು ನಿರಾಕರಿಸಿದ್ದಾರೆ.

“ಕುಸ್ತಿಪಟುಗಳು ಮುಂದೇನಾದರೂ ಮತ್ತೆ ಧರಣಿ ನಡೆಸಲು ಅನುಮತಿಗಾಗಿ ಅರ್ಜಿ ಸಲ್ಲಿಸಿದರೆ, ಜಂತರ್ ಮಂತರ್ ಹೊರತುಪಡಿಸಿ ಯಾವುದೇ ಸೂಕ್ತ, ಅಧಿಸೂಚಿತ ಸ್ಥಳಗಳಲ್ಲಿ ಅವರನ್ನು ಅನುಮತಿಸಲಾಗುವುದು” ಎಂದು ನವದೆಹಲಿಯ ಉಪ ಪೊಲೀಸ್ ಆಯುಕ್ತರು ಟ್ವೀಟ್ ಮಾಡಿದ್ದಾರೆ.

ಕುಸ್ತಿಪಟುಗಳಾದ ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪೂನಿಯಾ ಅವರನ್ನು ಪ್ರತಿಭಟನೆ ವೇಳೆ ಭಾನುವಾರ ದೆಹಲಿ ಪೊಲೀಸರು ಬಂಧಿಸಿದ್ದರು. ಕುಸ್ತಿಪಟುಗಳು ಹೊಸ ಸಂಸತ್ ಭವನದತ್ತ ಮೆರವಣಿಗೆ ನಡೆಸಲು ಪ್ರಯತ್ನಿಸುತ್ತಿದ್ದಾಗ ವಶಕ್ಕೆ ಪಡೆಯಲಾಗಿತ್ತು. ಈ ವೇಳೆ ಪೊಲೀಸರು ಮತ್ತು ಕುಸ್ತಿಪಟುಗಳ ನಡುವೆ ನೂಕಾಟ ನಡೆದಿತ್ತು. ಕುಸ್ತಿಪಟುಗಳನ್ನು ಬಲವಂತವಾಗಿ ಪೊಲೀಸರು ಬಂಧನ ಮಾಡಿದ್ದರು. ಜಂತರ್ ಮಂತರ್‌ನಲ್ಲಿ ಪ್ರತಿಭಟನಾ ನಿರತ ಕುಸ್ತಿಪಟುಗಳು ಹಾಕಿದ್ದ ತಾತ್ಕಾಲಿಕ ಟೆಂಟ್‌ಗಳನ್ನೂ ತೆರವು ಮಾಡಿದರು.

ಐಪಿಸಿ ಸೆಕ್ಷನ್ 147 (ಗಲಭೆ), 149 (ಕಾನೂನುಬಾಹಿರ ಸಭೆ), 186 (ಕರ್ತವ್ಯನಿರತ ಸಾರ್ವಜನಿಕ ಸೇವಕರಿಗೆ ಅಡ್ಡಿಪಡಿಸುವುದು), 188 (ಸಾರ್ವಜನಿಕ ಸೇವಕರು ಘೋಷಿಸಿದ ಆದೇಶಕ್ಕೆ ಅಸಹಕಾರ), 332 (ಸಾರ್ವಜನಿಕ ಸೇವಕರ ಕರ್ತವ್ಯ ತಡೆದು ಸ್ವಯಂಪ್ರೇರಣೆಯಿಂದ ಅಡ್ಡಿ) ಮತ್ತು ಪಿಡಿಪಿಪಿ ಕಾಯ್ದೆಯ ಸೆಕ್ಷನ್ 3ರ ಅಡಿಯಲ್ಲಿ ಕುಸ್ತಿಪಟುಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿರಿ: ಕುಸ್ತಿಪಟುಗಳಿಗೆ ಸವಾಲಾಗಿರುವ ‘ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌’ ಯಾರು? ಆತನ ಹಿನ್ನಲೆ, ಪ್ರಭಾವವೇನು?

ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸಾಕ್ಷಿ ಮಲಿಕ್ ಪ್ರತಿಕ್ರಿಯಿಸಿ, “ವೀಡಿಯೊದಲ್ಲಿ ಎಲ್ಲವೂ ದಾಖಲಾಗಿದೆ. ಒಬ್ಬ ಕುಸ್ತಿಪಟುವನ್ನು ತಡೆಯಲು 20-30 ಮಂದಿ ಕಾನ್‌ಸ್ಟೆಬಲ್‌ಗಳು ಇರುವಾಗ, ನಾವು ಯಾವುದೇ ರೀತಿಯ ಗಲಭೆಗಳನ್ನು ಹೇಗೆ ಮಾಡಬಹುದು?” ಎಂದು ಪ್ರಶ್ನಿಸಿದ್ದಾರೆ.

“ದಯವಿಟ್ಟು ನಮ್ಮನ್ನು ಕರೆದುಕೊಂಡು ಹೋಗಬೇಡಿ ಎಂದು ನಾವು ಅವರಿಗೆ ಹೇಳಲು ಪ್ರಯತ್ನಿಸುತ್ತಿದ್ದೇವೆ. ನಾವು ಹಾಗೆಯೇ ನಡೆದುಕೊಳ್ಳಲು ಬಯಸುತ್ತೇವೆ. ಶಾಂತಿಯುತ ಮೆರವಣಿಗೆಯ ವೇಳೆ ಯಾರೂ ನಮ್ಮ ಮಾತು ಕೇಳಲಿಲ್ಲ. ನಮ್ಮನ್ನು ಬಲವಂತವಾಗಿ ಬಸ್ಸಿನೊಳಗೆ ಎಳೆದೊಯ್ದರು, ಅದರಿಂದಾಗಿ ನಮಗೆ ಗಾಯಗಳಾದವು. ನಾವು ಯಾವುದೇ ಗಲಭೆ ಮಾಡಿಲ್ಲ, ಯಾವುದೇ ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿಲ್ಲ, ನಾವು ಬ್ಯಾರಿಕೇಡಿಂಗ್ ಅನ್ನು ಎಳೆದಿಲ್ಲ ಅಥವಾ ತಳ್ಳಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

“ನಾವು ಮೊದಲ ದಿನದಿಂದಲೂ ಶಾಂತಿಯುತ ಪ್ರತಿಭಟನೆಯನ್ನು ಮಾಡುತ್ತಿದ್ದೇವೆ. ಹೊಸ ಸಂಸತ್ ಭವನದ ಎದುರು ಹಮ್ಮಿಕೊಳ್ಳಲಾಗಿದ್ದ ಹೋರಾಟಕ್ಕೆ ಹೋಗಲು ಬಿಡುವಂತೆ ಅವರಲ್ಲಿ ಮನವಿ ಮಾಡಿದೆವು. ಆದರೆ ನಮಗೆ ಹೋಗಲು ಅವಕಾಶ ನೀಡಲಿಲ್ಲ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...