Homeಮುಖಪುಟಬಿಜೆಪಿ ಸಂಸದನ ವಿರುದ್ದ ಕುಸ್ತಿಪಟುಗಳ ಪ್ರತಿಭಟನೆ; ಪ್ರತಿಭಟನಾಕಾರರನ್ನು ಭೇಟಿಯಾದ ಕ್ರೀಡಾ ಪ್ರಾಧಿಕಾರದ ಪ್ರತಿನಿಧಿಗಳು

ಬಿಜೆಪಿ ಸಂಸದನ ವಿರುದ್ದ ಕುಸ್ತಿಪಟುಗಳ ಪ್ರತಿಭಟನೆ; ಪ್ರತಿಭಟನಾಕಾರರನ್ನು ಭೇಟಿಯಾದ ಕ್ರೀಡಾ ಪ್ರಾಧಿಕಾರದ ಪ್ರತಿನಿಧಿಗಳು

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿರುವ ಕುಸ್ತಿಪಟುಗಳು ಎರಡು ದಿನಗಳಿಂದ ಮತ್ತೆ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಮುಂದುವರೆಸಿದ್ದಾರೆ. ಇದೀಗ ಪ್ರತಿಭಟನಾನಿರತರನ್ನು ಭಾರತೀಯ ಕ್ರೀಡಾ ಪ್ರಾಧಿಕಾರದ (ಎಸ್‌ಎಐ) ಪ್ರತಿನಿಧಿಗಳು ಭೇಟಿ ಮಾಡಿ ಸಂವಾದ ನಡೆಸಿದ್ದಾರೆ.

ಈ ವೇಳೆ ಮಾಧ್ಯಮದವರ ಜೊತೆ ಮಾತನಾಡಿದ ಎಸ್‌ಎಐ ಅಧಿಕಾರಿಯೊಬ್ಬರು ”ನಾನು ಕುಸ್ತಿಪಟುಗಳನ್ನು ಭೇಟಿ ಮಾಡಲು ಮತ್ತು ಅವರ ಮಾತುಗಳನ್ನು ಕೇಳಲು ಬಂದಿದ್ದೇನೆ. ಅವರ ಬೇಡಿಕೆಗಳ ಬಗ್ಗೆ ನಾನು ಏನನ್ನೂ ಹೇಳುವುದಿಲ್ಲ” ಎಂದು ತಿಳಿಸಿದ್ದಾರೆ.

ಈ ಜನವರಿಯಲ್ಲಿ ದೇಶದ ಕೆಲವು ಪ್ರಮುಖ ಕುಸ್ತಿಪಟುಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆದಸಿದ್ದರು. ಇದರ ಬೆನ್ನಲ್ಲೇ ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯವು, ಡಬ್ಲ್ಯುಎಫ್‌ಐ ಅದರ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ಇತರ ತರಬೇತುದಾರರ ವಿರುದ್ಧದ ಆರೋಪಗಳನ್ನು ತನಿಖೆ ಮಾಡಲು ‘ಮೇಲ್ವಿಚಾರಣಾ ಸಮಿತಿ’ ರಚನೆ ಮಾಡಲು ಘೋಷಿಸಿತ್ತು.

ಈ ವರ್ಷದ ಆರಂಭದಲ್ಲಿ ಕುಸ್ತಿಪಟುಗಳು ತಮ್ಮ ಪ್ರತಿಭಟನೆಯನ್ನು ಹಿಂತೆಗೆದುಕೊಂಡಿದ್ದರು. ಆದರೆ ಈ ಬಾರಿ ಕುಸ್ತಿಪಟುಗಳು ಮಾಡಿರುವ ಆರೋಪಗಳನ್ನು ಸಮಿತಿಯು ಸರಿಯಾದ ರೀತಿಯಲ್ಲಿ ತನಿಖೆ ಮಾಡುತ್ತದೆ ಎಂದು ಭರವಸೆ ನೀಡಿದ ನಂತರ ಮತ್ತು ಬ್ರಿಜ್ ಭೂಷಣ್ ವಿರುದ್ಧ ಪೊಲೀಸರು ದೂರು ದಾಖಲಿಸುವವರೆಗೆ ಪ್ರತಿಭಟನಾ ಸ್ಥಳದಿಂದ ಹೊರಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸಂಸದನ ಮೇಲೆ ಲೈಂಗಿಕ ಕಿರುಕುಳ ಆರೋಪ: #MeToo ಪ್ರತಿಭಟನೆಗೆ ‘ಎಲ್ಲಾ ಪಕ್ಷಗಳಿಗೂ ಸ್ವಾಗತ’ ಎಂದ ಕುಸ್ತಿಪಟುಗಳು

ಈ ಬಗ್ಗೆ ಮಾತನಾಡಿದ್ದ ಕಾಮನ್‌ವೆಲ್ತ್ ಮತ್ತು ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಅವರು, ”ನಾವು ಯಾರನ್ನೂ ಕುರುಡಾಗಿ ನಂಬುವುದಿಲ್ಲ. ಕಳೆದ ಬಾರಿ ನಾವು ದಾರಿ ತಪ್ಪಿಸಿದ್ದೇವೆ. ಈ ಬಾರಿ ಈ ಪ್ರಕರಣದಲ್ಲಿ ಯಾವುದೇ ರಾಜಕೀಯವಿಲ್ಲ ಎಂದು ನಾವು ಭಾವಿಸುತ್ತೇವೆ” ಎಂದು ಹೇಳಿದ್ದರು.

”ಈ ಹಿಂದೆ ಜನವರಿಯಲ್ಲಿ ಇದು ‘ಕ್ರೀಡಾಪಟುಗಳ ಪ್ರತಿಭಟನೆ’ ಎಂದು ಎಡ ನಾಯಕಿ ವೃಂದಾ ಕಾರಟ್ ಅವರನ್ನು ಪ್ರತಿಭಟನಾಕಾರರು ವೇದಿಕೆಗೆ ಬಿಟ್ಟಿರಲಿಲ್ಲ. ಆದರೆ, ಈ ಬಾರಿ ನಾವು ಯಾರನ್ನೂ ತಿರಸ್ಕರಿಸುವುದಿಲ್ಲ, ತಮ್ಮ ಪ್ರತಿಭಟನೆಯನ್ನು ಬೆಂಬಲಿಸಲು ಬಯಸುವವರು ಬಂದು ಸೇರಬಹುದು. ಬಿಜೆಪಿ, ಕಾಂಗ್ರೆಸ್, ಎಎಪಿ, ಅಥವಾ ಯಾವುದೇ ಪಕ್ಷವಾಗಲಿ ನಮ್ಮ ಪ್ರತಿಭಟನೆಗೆ ಸೇರಲು ಎಲ್ಲಾ ಪಕ್ಷಗಳಿಗೆ ಸ್ವಾಗತವಿದೆ. ನಾವು ಯಾವುದೇ ಪಕ್ಷದೊಂದಿಗೆ ಸಂಬಂಧ ಹೊಂದಿಲ್ಲ” ಎಂದು ಒಲಿಂಪಿಕ್ ಪದಕ ವಿಜೇತ ಬಜರಂಗ್ ಪುನಿಯಾ ಹೇಳಿದ್ದಾರೆ.

ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಏಳು ಮಹಿಳಾ ಕುಸ್ತಿಪಟುಗಳು ಸೆಂಟ್ರಲ್ ದೆಹಲಿಯ ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಕಿರುಕುಳದ ದೂರು ದಾಖಲಿಸಿದ್ದಾರೆ. ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ, ಪೊಲೀಸರು ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸುವವರೆಗೆ ಹೋರಾಟ ಮುಂದುವರಿಸುವುದಾಗಿ ಪ್ರತಿಭಟನಾನಿರತ ಅಥ್ಲೀಟ್‌ಗಳು ಹೇಳಿದ್ದಾರೆ.

”ಸುಳ್ಳು ಆಶ್ವಾಸನೆ”ಯಿಂದ ನಾವು ಜನವರಿಯಲ್ಲಿ ಪ್ರತಿಭಟನೆಯನ್ನು ಕೊನೆಗೊಳಿಸಿದ್ದೇವೆ ಎಂದು ಕುಸ್ತಿಪಟುಗಳು ಹೇಳಿದ್ದಾರೆ.

”ನಾವು ಹಗಲು ರಾತ್ರಿ ಇಲ್ಲಿ ಕುಳಿತುಕೊಳ್ಳುತ್ತೇವೆ. ನಮಗೆ ನ್ಯಾಯ ಸಿಗುವವರೆಗೂ ನಾವು ಇಲ್ಲಿಯೇ ಕುಳಿತುಕೊಳ್ಳುತ್ತೇವೆ” ಎಂದು ಫುಟ್‌ಪಾತ್‌ನಲ್ಲಿ ರಾತ್ರಿ ಕಳೆದ ನಂತರ ಫೋಗಟ್ ಹೇಳಿದರು.

”ನಾವು ಅವರನ್ನು (ಕ್ರೀಡಾ ಸಚಿವ ಅನುರಾಗ್ ಠಾಕೂರ್ ಮತ್ತು ಇತರ ಸಂಬಂಧಿತ ಅಧಿಕಾರಿಗಳನ್ನು) ಸಂಪರ್ಕಿಸಲು ಮೂರು ತಿಂಗಳಿನಿಂದ ಪ್ರಯತ್ನಿಸುತ್ತಿದ್ದೇವೆ. ಸಮಿತಿಯ ಸದಸ್ಯರು ನಮಗೆ ಪ್ರತಿಕ್ರಿಯಿಸುತ್ತಿಲ್ಲ, ಕ್ರೀಡಾ ಸಚಿವಾಲಯವೂ ಏನನ್ನೂ ಹೇಳಿಲ್ಲ, ಅವರು ನಮ್ಮ ಕರೆಗಳನ್ನು ಸಹ ಸ್ವೀಕರಿಸುವುದಿಲ್ಲ. ನಾವು ದೇಶಕ್ಕಾಗಿ ಪದಕಗಳನ್ನು ಗೆದ್ದಿದ್ದೇವೆ ಮತ್ತು ಇದಕ್ಕಾಗಿ ನಮ್ಮ ವೃತ್ತಿಜೀವನವನ್ನು ಪಣಕ್ಕಿಟ್ಟಿದ್ದೇವೆ” ಎಂದು ಅವರು ಹೇಳಿದರು.

”ಕುಸ್ತಿಪಟುಗಳ ದೂರಿನ ಮೇರೆಗೆ ಜನವರಿಯಲ್ಲಿ ಕ್ರೀಡಾ ಸಚಿವಾಲಯವು ತನಿಖೆಗಾಗಿ ಒಲಿಂಪಿಕ್ ಪದಕ ವಿಜೇತ ಬಾಕ್ಸರ್ ಎಂಸಿ ಮೇರಿ ಕೋಮ್ ನೇತೃತ್ವದ ಐದು ಸದಸ್ಯರ ಸಮಿತಿಯನ್ನು ರಚಿಸಿತು. ಒಂದು ತಿಂಗಳೊಳಗೆ ತನ್ನ ವರದಿಯನ್ನು ಸಲ್ಲಿಸುವಂತೆ ಸಮಿತಿಗೆ ಸೂಚಿಸಲಾಗಿತ್ತು. ಆದರೆ ಸಮಿತಿಯು ನೀಡಿದ ವರದಿಯನ್ನು ಇನ್ನೂ ಸಾರ್ವಜನಿಕಗೊಳಿಸಿಲ್ಲ” ಎಂದು ಕುಸ್ತಿಪಟು ಸಾಕ್ಷಿ ಮಲಿಕ್ ಹತಾಶೆ ವ್ಯಕ್ತಪಡಿಸಿದರು.

”ಮಹಿಳಾ ಕುಸ್ತಿಪಟುಗಳ ಹೇಳಿಕೆಗಳನ್ನು ದಾಖಲಿಸಿರುವ ವರದಿಯು ಸಾರ್ವಜನಿಕವಾಗಬೇಕೆಂದು ನಾವು ಬಯಸುತ್ತೇವೆ. ದೂರುದಾರರ ಹೆಸರನ್ನು ಸೋರಿಕೆ ಮಾಡಬಾರದು ಏಕೆಂದರೆ ಇದು ಸೂಕ್ಷ್ಮ ವಿಷಯವಾಗಿದೆ, ದೂರುದಾರರಲ್ಲಿ ಒಬ್ಬರು ಅಪ್ರಾಪ್ತ ಬಾಲಕಿ ಇದ್ದಾರೆ” ಎಂದು ಅವರು ಹೇಳಿದರು.

ಸರ್ಕಾರದ ಸಮಿತಿಯು ತನ್ನ ವರದಿಯನ್ನು ಏಪ್ರಿಲ್ ಮೊದಲ ವಾರದಲ್ಲಿ ಸಲ್ಲಿಸಿದೆ, ಆದರೆ ಸಚಿವಾಲಯವು ಆ ವರದಿಯನ್ನು ಇನ್ನೂ ಸಾರ್ವಜನಿಕವಾಗಿ ಪ್ರಕಟಿಸಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...