Homeಮುಖಪುಟಬಿಜೆಪಿ ಸಂಸದನ ವಿರುದ್ದ ಕುಸ್ತಿಪಟುಗಳ ಪ್ರತಿಭಟನೆ; ಪ್ರತಿಭಟನಾಕಾರರನ್ನು ಭೇಟಿಯಾದ ಕ್ರೀಡಾ ಪ್ರಾಧಿಕಾರದ ಪ್ರತಿನಿಧಿಗಳು

ಬಿಜೆಪಿ ಸಂಸದನ ವಿರುದ್ದ ಕುಸ್ತಿಪಟುಗಳ ಪ್ರತಿಭಟನೆ; ಪ್ರತಿಭಟನಾಕಾರರನ್ನು ಭೇಟಿಯಾದ ಕ್ರೀಡಾ ಪ್ರಾಧಿಕಾರದ ಪ್ರತಿನಿಧಿಗಳು

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿರುವ ಕುಸ್ತಿಪಟುಗಳು ಎರಡು ದಿನಗಳಿಂದ ಮತ್ತೆ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಮುಂದುವರೆಸಿದ್ದಾರೆ. ಇದೀಗ ಪ್ರತಿಭಟನಾನಿರತರನ್ನು ಭಾರತೀಯ ಕ್ರೀಡಾ ಪ್ರಾಧಿಕಾರದ (ಎಸ್‌ಎಐ) ಪ್ರತಿನಿಧಿಗಳು ಭೇಟಿ ಮಾಡಿ ಸಂವಾದ ನಡೆಸಿದ್ದಾರೆ.

ಈ ವೇಳೆ ಮಾಧ್ಯಮದವರ ಜೊತೆ ಮಾತನಾಡಿದ ಎಸ್‌ಎಐ ಅಧಿಕಾರಿಯೊಬ್ಬರು ”ನಾನು ಕುಸ್ತಿಪಟುಗಳನ್ನು ಭೇಟಿ ಮಾಡಲು ಮತ್ತು ಅವರ ಮಾತುಗಳನ್ನು ಕೇಳಲು ಬಂದಿದ್ದೇನೆ. ಅವರ ಬೇಡಿಕೆಗಳ ಬಗ್ಗೆ ನಾನು ಏನನ್ನೂ ಹೇಳುವುದಿಲ್ಲ” ಎಂದು ತಿಳಿಸಿದ್ದಾರೆ.

ಈ ಜನವರಿಯಲ್ಲಿ ದೇಶದ ಕೆಲವು ಪ್ರಮುಖ ಕುಸ್ತಿಪಟುಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆದಸಿದ್ದರು. ಇದರ ಬೆನ್ನಲ್ಲೇ ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯವು, ಡಬ್ಲ್ಯುಎಫ್‌ಐ ಅದರ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ಇತರ ತರಬೇತುದಾರರ ವಿರುದ್ಧದ ಆರೋಪಗಳನ್ನು ತನಿಖೆ ಮಾಡಲು ‘ಮೇಲ್ವಿಚಾರಣಾ ಸಮಿತಿ’ ರಚನೆ ಮಾಡಲು ಘೋಷಿಸಿತ್ತು.

ಈ ವರ್ಷದ ಆರಂಭದಲ್ಲಿ ಕುಸ್ತಿಪಟುಗಳು ತಮ್ಮ ಪ್ರತಿಭಟನೆಯನ್ನು ಹಿಂತೆಗೆದುಕೊಂಡಿದ್ದರು. ಆದರೆ ಈ ಬಾರಿ ಕುಸ್ತಿಪಟುಗಳು ಮಾಡಿರುವ ಆರೋಪಗಳನ್ನು ಸಮಿತಿಯು ಸರಿಯಾದ ರೀತಿಯಲ್ಲಿ ತನಿಖೆ ಮಾಡುತ್ತದೆ ಎಂದು ಭರವಸೆ ನೀಡಿದ ನಂತರ ಮತ್ತು ಬ್ರಿಜ್ ಭೂಷಣ್ ವಿರುದ್ಧ ಪೊಲೀಸರು ದೂರು ದಾಖಲಿಸುವವರೆಗೆ ಪ್ರತಿಭಟನಾ ಸ್ಥಳದಿಂದ ಹೊರಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸಂಸದನ ಮೇಲೆ ಲೈಂಗಿಕ ಕಿರುಕುಳ ಆರೋಪ: #MeToo ಪ್ರತಿಭಟನೆಗೆ ‘ಎಲ್ಲಾ ಪಕ್ಷಗಳಿಗೂ ಸ್ವಾಗತ’ ಎಂದ ಕುಸ್ತಿಪಟುಗಳು

ಈ ಬಗ್ಗೆ ಮಾತನಾಡಿದ್ದ ಕಾಮನ್‌ವೆಲ್ತ್ ಮತ್ತು ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಅವರು, ”ನಾವು ಯಾರನ್ನೂ ಕುರುಡಾಗಿ ನಂಬುವುದಿಲ್ಲ. ಕಳೆದ ಬಾರಿ ನಾವು ದಾರಿ ತಪ್ಪಿಸಿದ್ದೇವೆ. ಈ ಬಾರಿ ಈ ಪ್ರಕರಣದಲ್ಲಿ ಯಾವುದೇ ರಾಜಕೀಯವಿಲ್ಲ ಎಂದು ನಾವು ಭಾವಿಸುತ್ತೇವೆ” ಎಂದು ಹೇಳಿದ್ದರು.

”ಈ ಹಿಂದೆ ಜನವರಿಯಲ್ಲಿ ಇದು ‘ಕ್ರೀಡಾಪಟುಗಳ ಪ್ರತಿಭಟನೆ’ ಎಂದು ಎಡ ನಾಯಕಿ ವೃಂದಾ ಕಾರಟ್ ಅವರನ್ನು ಪ್ರತಿಭಟನಾಕಾರರು ವೇದಿಕೆಗೆ ಬಿಟ್ಟಿರಲಿಲ್ಲ. ಆದರೆ, ಈ ಬಾರಿ ನಾವು ಯಾರನ್ನೂ ತಿರಸ್ಕರಿಸುವುದಿಲ್ಲ, ತಮ್ಮ ಪ್ರತಿಭಟನೆಯನ್ನು ಬೆಂಬಲಿಸಲು ಬಯಸುವವರು ಬಂದು ಸೇರಬಹುದು. ಬಿಜೆಪಿ, ಕಾಂಗ್ರೆಸ್, ಎಎಪಿ, ಅಥವಾ ಯಾವುದೇ ಪಕ್ಷವಾಗಲಿ ನಮ್ಮ ಪ್ರತಿಭಟನೆಗೆ ಸೇರಲು ಎಲ್ಲಾ ಪಕ್ಷಗಳಿಗೆ ಸ್ವಾಗತವಿದೆ. ನಾವು ಯಾವುದೇ ಪಕ್ಷದೊಂದಿಗೆ ಸಂಬಂಧ ಹೊಂದಿಲ್ಲ” ಎಂದು ಒಲಿಂಪಿಕ್ ಪದಕ ವಿಜೇತ ಬಜರಂಗ್ ಪುನಿಯಾ ಹೇಳಿದ್ದಾರೆ.

ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಏಳು ಮಹಿಳಾ ಕುಸ್ತಿಪಟುಗಳು ಸೆಂಟ್ರಲ್ ದೆಹಲಿಯ ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಕಿರುಕುಳದ ದೂರು ದಾಖಲಿಸಿದ್ದಾರೆ. ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ, ಪೊಲೀಸರು ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸುವವರೆಗೆ ಹೋರಾಟ ಮುಂದುವರಿಸುವುದಾಗಿ ಪ್ರತಿಭಟನಾನಿರತ ಅಥ್ಲೀಟ್‌ಗಳು ಹೇಳಿದ್ದಾರೆ.

”ಸುಳ್ಳು ಆಶ್ವಾಸನೆ”ಯಿಂದ ನಾವು ಜನವರಿಯಲ್ಲಿ ಪ್ರತಿಭಟನೆಯನ್ನು ಕೊನೆಗೊಳಿಸಿದ್ದೇವೆ ಎಂದು ಕುಸ್ತಿಪಟುಗಳು ಹೇಳಿದ್ದಾರೆ.

”ನಾವು ಹಗಲು ರಾತ್ರಿ ಇಲ್ಲಿ ಕುಳಿತುಕೊಳ್ಳುತ್ತೇವೆ. ನಮಗೆ ನ್ಯಾಯ ಸಿಗುವವರೆಗೂ ನಾವು ಇಲ್ಲಿಯೇ ಕುಳಿತುಕೊಳ್ಳುತ್ತೇವೆ” ಎಂದು ಫುಟ್‌ಪಾತ್‌ನಲ್ಲಿ ರಾತ್ರಿ ಕಳೆದ ನಂತರ ಫೋಗಟ್ ಹೇಳಿದರು.

”ನಾವು ಅವರನ್ನು (ಕ್ರೀಡಾ ಸಚಿವ ಅನುರಾಗ್ ಠಾಕೂರ್ ಮತ್ತು ಇತರ ಸಂಬಂಧಿತ ಅಧಿಕಾರಿಗಳನ್ನು) ಸಂಪರ್ಕಿಸಲು ಮೂರು ತಿಂಗಳಿನಿಂದ ಪ್ರಯತ್ನಿಸುತ್ತಿದ್ದೇವೆ. ಸಮಿತಿಯ ಸದಸ್ಯರು ನಮಗೆ ಪ್ರತಿಕ್ರಿಯಿಸುತ್ತಿಲ್ಲ, ಕ್ರೀಡಾ ಸಚಿವಾಲಯವೂ ಏನನ್ನೂ ಹೇಳಿಲ್ಲ, ಅವರು ನಮ್ಮ ಕರೆಗಳನ್ನು ಸಹ ಸ್ವೀಕರಿಸುವುದಿಲ್ಲ. ನಾವು ದೇಶಕ್ಕಾಗಿ ಪದಕಗಳನ್ನು ಗೆದ್ದಿದ್ದೇವೆ ಮತ್ತು ಇದಕ್ಕಾಗಿ ನಮ್ಮ ವೃತ್ತಿಜೀವನವನ್ನು ಪಣಕ್ಕಿಟ್ಟಿದ್ದೇವೆ” ಎಂದು ಅವರು ಹೇಳಿದರು.

”ಕುಸ್ತಿಪಟುಗಳ ದೂರಿನ ಮೇರೆಗೆ ಜನವರಿಯಲ್ಲಿ ಕ್ರೀಡಾ ಸಚಿವಾಲಯವು ತನಿಖೆಗಾಗಿ ಒಲಿಂಪಿಕ್ ಪದಕ ವಿಜೇತ ಬಾಕ್ಸರ್ ಎಂಸಿ ಮೇರಿ ಕೋಮ್ ನೇತೃತ್ವದ ಐದು ಸದಸ್ಯರ ಸಮಿತಿಯನ್ನು ರಚಿಸಿತು. ಒಂದು ತಿಂಗಳೊಳಗೆ ತನ್ನ ವರದಿಯನ್ನು ಸಲ್ಲಿಸುವಂತೆ ಸಮಿತಿಗೆ ಸೂಚಿಸಲಾಗಿತ್ತು. ಆದರೆ ಸಮಿತಿಯು ನೀಡಿದ ವರದಿಯನ್ನು ಇನ್ನೂ ಸಾರ್ವಜನಿಕಗೊಳಿಸಿಲ್ಲ” ಎಂದು ಕುಸ್ತಿಪಟು ಸಾಕ್ಷಿ ಮಲಿಕ್ ಹತಾಶೆ ವ್ಯಕ್ತಪಡಿಸಿದರು.

”ಮಹಿಳಾ ಕುಸ್ತಿಪಟುಗಳ ಹೇಳಿಕೆಗಳನ್ನು ದಾಖಲಿಸಿರುವ ವರದಿಯು ಸಾರ್ವಜನಿಕವಾಗಬೇಕೆಂದು ನಾವು ಬಯಸುತ್ತೇವೆ. ದೂರುದಾರರ ಹೆಸರನ್ನು ಸೋರಿಕೆ ಮಾಡಬಾರದು ಏಕೆಂದರೆ ಇದು ಸೂಕ್ಷ್ಮ ವಿಷಯವಾಗಿದೆ, ದೂರುದಾರರಲ್ಲಿ ಒಬ್ಬರು ಅಪ್ರಾಪ್ತ ಬಾಲಕಿ ಇದ್ದಾರೆ” ಎಂದು ಅವರು ಹೇಳಿದರು.

ಸರ್ಕಾರದ ಸಮಿತಿಯು ತನ್ನ ವರದಿಯನ್ನು ಏಪ್ರಿಲ್ ಮೊದಲ ವಾರದಲ್ಲಿ ಸಲ್ಲಿಸಿದೆ, ಆದರೆ ಸಚಿವಾಲಯವು ಆ ವರದಿಯನ್ನು ಇನ್ನೂ ಸಾರ್ವಜನಿಕವಾಗಿ ಪ್ರಕಟಿಸಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...