Homeಮುಖಪುಟಕುಸ್ತಿಪಟುಗಳ ಪ್ರತಿಭಟನೆ: ಬೆಂಬಲಕ್ಕಾಗಿ ದೇಶದ ರೈತರು, ಸಾರ್ವಜನಿಕರಿಗೆ ಬಜರಂಗ್ ಪುನಿಯಾ ಮನವಿ

ಕುಸ್ತಿಪಟುಗಳ ಪ್ರತಿಭಟನೆ: ಬೆಂಬಲಕ್ಕಾಗಿ ದೇಶದ ರೈತರು, ಸಾರ್ವಜನಿಕರಿಗೆ ಬಜರಂಗ್ ಪುನಿಯಾ ಮನವಿ

- Advertisement -
- Advertisement -

ಪ್ರತಿಭಟನಾ ನಿರತ ಕುಸ್ತಿಪಟುಗಳ ಮೇಲೆ ದೆಹಲಿ ಪೊಲೀಸರು ಹಲ್ಲೆ ನಡೆಸಿದ ಬಳಿಕ ತಮ್ಮ ಪ್ರತಿಭಟನೆಗೆ ಬೆಂಬಲ ನೀಡಬೇಕು ಎಂದು ದೇಶದ ರೈತರು ಹಾಗೂ ಸಾರ್ವಜನಿಕರಿಗೆ ಕಾಮನ್‌ವೆಲ್ತ್ ಕ್ರಿಡಾಕೂಟದ ಚಿನ್ನದ ಪದಕ ವಿಜೇತ ಬಜರಂಗ್ ಪುನಿಯಾ ವಿನಂತಿ ಮಾಡಿದ್ದಾರೆ.

ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಹಾಗೂ ಬಿಜೆಪಿ ಸಂಸದನೂ ಆಗಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್, ಒಬ್ಬ ಅಪ್ರಾಪ್ತ ಸೇರಿದಂತೆ ಏಳು ಮಹಿಳಾ ಕ್ರೀಡಾಪಟುಗಳ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ, ಅವರನ್ನು ಬಂಧಿಸುವಂತೆ ಒತ್ತಾಯಿಸಿ ಕುಸ್ತಿಪಟುಗಳು ಏಪ್ರಿಲ್ 23ರಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

ನಿನ್ನೆ(ಬುಧವಾರ) ರಾತ್ರಿ 11 ಗಂಟೆಯ ಸುಮಾರಿಗೆ ಜಂತರ್ ಮಂತರ್‌ನಲ್ಲಿ ಪ್ರತಿಭಟನಾ ನಿರತ ಕುಸ್ತಿಪಟುಗಳು ತಮ್ಮ ರಾತ್ರಿ ತಂಗಲು ಮಡಚುವ ಹಾಸಿಗೆಗಳನ್ನು ತರುತ್ತಿದ್ದಾಗ ಪೊಲೀಸರು ತಡೆದಿದ್ದಾರೆ. ಆಗ ಪೊಲೀಸರ ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು ಮತ್ತು ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಆ ಬಗ್ಗೆ ವಿಚಾರಣೆ ಮಾಡಲು ಪ್ರಾರಂಭಿಸಿದರು.

ಕುಸ್ತಿಪಟುಗಳ ಪ್ರಕಾರ, ಪೊಲೀಸ್ ಅಧಿಕಾರಿಗಳು ಅವರೊಂದಿಗೆ ಕೆಟ್ಟದಾಗಿ ವರ್ತಿಸಲು ಪ್ರಾರಂಭಿಸಿದರು ಮತ್ತು ಮಹಿಳಾ ಕುಸ್ತಿಪಟುಗಳನ್ನು ನಿಂದಿಸಿದ್ದಾರೆ ಎಂದು ಹೇಳಲಾಗಿದೆ.

ಈ ಬಗ್ಗೆ ಮಾತನಾಡಿರುವ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತ ಬಜರಂಗ್ ಪೊನಿಯಾ ಮಾತನಾಡಿ, ರೈತರು ಮತ್ತು ಸಾರ್ವಜನಿಕರು ಜಂತರ್ ಮಂತರ್‌ಗೆ ಬಂದು ತಮ್ಮ ಬೆಂಬಲಕ್ಕೆ ನಿಲ್ಲಬೇಕು ಎಂದು ಬಜರಂಗ್ ಪುನಿಯಾ ಕೇಳಿಕೊಂಡರು.

ಇದನ್ನೂ ಓದಿ: ಕುಸ್ತಿಪಟುಗಳ ಮೇಲೆ ದೆಹಲಿ ಪೊಲೀಸರ ಹಲ್ಲೆ: ‘ನೀವು ನಮ್ಮನ್ನು ಕೊಲ್ಲಲು ಬಯಸಿದರೆ, ಕೊಲ್ಲಬಹುದು’ ಎಂದು ಕಣ್ಣೀರಿಟ್ಟ ವಿನೇಶ್ ಫೋಗಟ್

”ಎಲ್ಲರೂ ಬೆಳಿಗ್ಗೆಯೊಳಗೆ ದೆಹಲಿ ತಲುಪಲು ನಾನು ವಿನಂತಿಸುತ್ತೇನೆ. ಇದು ಸರಿಯಾದ ಸಮಯ, ಈಗಲ್ಲದಿದ್ದರೆ, ನಂತರ ಯಾವಾಗ ಒಟ್ಟಾಗೋದು? ಇದು ನಮ್ಮ ಹೆಣ್ಣುಮಕ್ಕಳ ಘನತೆಯ ಪ್ರಶ್ನೆಯಾಗಿದೆ. ಬ್ರಿಜ್ ಭೂಷಣ್ (ಡಬ್ಲ್ಯುಎಫ್‌ಐ ಅಧ್ಯಕ್ಷ) ನಂತಹ ಜನರು ಅಪರಾಧಿಯಾಗಿದ್ದರೂ, ಅವರು ಸ್ವತಂತ್ರವಾಗಿ ತಿರುಗುತ್ತಿದ್ದಾರೆ. ಆದರೆ ನಮಗೆ ಈ ಶಿಕ್ಷೆ ನೀಡುತ್ತಿದ್ದಾರೆ” ಎಂದು ಬಜರಂಗ್ ಹೇಳಿದರು.

ಘಟನೆ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡುವಂತೆ ಕೇಳಿದಾಗ, ”ಸಿಸಿಟಿವಿ ಕ್ಯಾಮೆರಾಗಳು ಇಲ್ಲಿ ಇರುತ್ತವೆ, ಅದರ ದೃಶ್ಯಾವಳಿಗಳು ಸ್ಪಷ್ಟಪಡಿಸುತ್ತವೆ” ಎಂದು ಬಜರಂಗ್ ಹೇಳಿದರು.

ದೆಹಲಿ ಪೊಲೀಸರು ಹೇಳುವಂತೆ ಎಎಪಿ ನಾಯಕ ಸೋಮನಾಥ್ ಭಾರ್ತಿ ಅವರು ಮಡಚುವ ಹಾಸಿಗೆಗಳನ್ನು ತಂದಿದ್ದಾರೆಯೇ? ಎಂದು ಪತ್ರಕರ್ತರು ಪ್ರಶ್ನಿಸಿದಾಗ, ”ನೀವು ಸಿಸಿಟಿವಿ ದೃಶ್ಯಾವಳಿಗಳನ್ನೇ ನೋಡಿ, ಆ ಘಟನೆ ನಡೆದಾಗ ಅವರು ಇರಲಿಲ್ಲ ಎಂಬುದು ನಿಮಗೆ ಅರ್ಥವಾಗುತ್ತದೆ. ನಾವೇ ಹಾಸಿಗೆಗಳನ್ನು ಆರ್ಡರ್ ಮಾಡಿದ್ದೇವು, ಅವುಗಳನ್ನು ಒಳಗೆ ತರುತ್ತಿದ್ದೆವು” ಎಂದು ಉತ್ತರಿಸಿದರು.

ಈ ವೇಳೆ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತರು ವಿನೇಶ್ ಫೋಗಟ್ ಮಾತನಾಡಿ, ”ಮಹಿಳಾ ಪೊಲೀಸ್ ಅಧಿಕಾರಿಗಳು ಎಲ್ಲಿದ್ದರು? ಪುರುಷ ಅಧಿಕಾರಿಗಳು ನಮ್ಮನ್ನು ಹೇಗೆ ತಳ್ಳುತ್ತಾರೆ. ನಾವು ಅಪರಾಧಿಗಳಲ್ಲ, ಅಂತಹ ವರ್ತನೆ ತೋರಲು ನಾವು ಅರ್ಹರಲ್ಲ. ಕುಡಿದು ಬಂದ ಪೊಲೀಸ್ ಅಧಿಕಾರಿ ನನ್ನ ಸಹೋದರನಿಗೆ ಹೊಡೆದರು” ಎಂದು ಹೇಳಿದರು.

”ನಿಜಕ್ಕೂ ಪೊಲೀಸರ ವರ್ತನೆಯಿಂದ ನಮಗೆ ಆಘಾತವಾಗಿದೆ. ಏಕೆಂದರೆ ನಾವು ಅಪರಾಧಿಗಳಲ್ಲ ಮತ್ತು ಅಂತಹ ಅಗೌರವಕ್ಕೆ ಅರ್ಹರಲ್ಲ” ಎಂದರು.

”ನೀವು ನಮ್ಮನ್ನು ಕೊಲ್ಲಲು ಬಯಸಿದರೆ, ನಮ್ಮನ್ನು ಕೊಲ್ಲಿ” ಎಂದು ಅಳುತ್ತಾ ವಿನೇಶ್ ಫೋಗಟ್ ತಡರಾತ್ರಿಯ ಮಾಧ್ಯಮ ಸಂವಾದದಲ್ಲಿ ಹೇಳಿದರು.

”ನಾವು ಈ ದಿನ ದೇಶಕ್ಕಾಗಿ ಪದಕಗಳನ್ನು ಗೆದ್ದಿದ್ದೇವೆಯೇ? ನಾವು ನಮ್ಮ ಆಹಾರವನ್ನು ಸಹ ತಿನ್ನಲಿಲ್ಲ. ಪ್ರತಿಯೊಬ್ಬ ಪುರುಷನಿಗೆ ಮಹಿಳೆಯರನ್ನು ನಿಂದಿಸುವ ಹಕ್ಕು ಇದೆಯೇ? ಈ ಪೊಲೀಸರು ಬಂದೂಕು ಹಿಡಿದಿದ್ದಾರೆ, ಅವರು ನಮ್ಮನ್ನು ಕೊಲ್ಲಬಹುದು” ಎಂದು ಭಾವುಕರಾದ ವಿನೇಶ್ ಕಣ್ಣೀರಿಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...