Homeಮುಖಪುಟಕುಸ್ತಿಪಟುಗಳ ಪ್ರತಿಭಟನೆ: ಬೆಂಬಲಕ್ಕಾಗಿ ದೇಶದ ರೈತರು, ಸಾರ್ವಜನಿಕರಿಗೆ ಬಜರಂಗ್ ಪುನಿಯಾ ಮನವಿ

ಕುಸ್ತಿಪಟುಗಳ ಪ್ರತಿಭಟನೆ: ಬೆಂಬಲಕ್ಕಾಗಿ ದೇಶದ ರೈತರು, ಸಾರ್ವಜನಿಕರಿಗೆ ಬಜರಂಗ್ ಪುನಿಯಾ ಮನವಿ

- Advertisement -
- Advertisement -

ಪ್ರತಿಭಟನಾ ನಿರತ ಕುಸ್ತಿಪಟುಗಳ ಮೇಲೆ ದೆಹಲಿ ಪೊಲೀಸರು ಹಲ್ಲೆ ನಡೆಸಿದ ಬಳಿಕ ತಮ್ಮ ಪ್ರತಿಭಟನೆಗೆ ಬೆಂಬಲ ನೀಡಬೇಕು ಎಂದು ದೇಶದ ರೈತರು ಹಾಗೂ ಸಾರ್ವಜನಿಕರಿಗೆ ಕಾಮನ್‌ವೆಲ್ತ್ ಕ್ರಿಡಾಕೂಟದ ಚಿನ್ನದ ಪದಕ ವಿಜೇತ ಬಜರಂಗ್ ಪುನಿಯಾ ವಿನಂತಿ ಮಾಡಿದ್ದಾರೆ.

ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಹಾಗೂ ಬಿಜೆಪಿ ಸಂಸದನೂ ಆಗಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್, ಒಬ್ಬ ಅಪ್ರಾಪ್ತ ಸೇರಿದಂತೆ ಏಳು ಮಹಿಳಾ ಕ್ರೀಡಾಪಟುಗಳ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ, ಅವರನ್ನು ಬಂಧಿಸುವಂತೆ ಒತ್ತಾಯಿಸಿ ಕುಸ್ತಿಪಟುಗಳು ಏಪ್ರಿಲ್ 23ರಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

ನಿನ್ನೆ(ಬುಧವಾರ) ರಾತ್ರಿ 11 ಗಂಟೆಯ ಸುಮಾರಿಗೆ ಜಂತರ್ ಮಂತರ್‌ನಲ್ಲಿ ಪ್ರತಿಭಟನಾ ನಿರತ ಕುಸ್ತಿಪಟುಗಳು ತಮ್ಮ ರಾತ್ರಿ ತಂಗಲು ಮಡಚುವ ಹಾಸಿಗೆಗಳನ್ನು ತರುತ್ತಿದ್ದಾಗ ಪೊಲೀಸರು ತಡೆದಿದ್ದಾರೆ. ಆಗ ಪೊಲೀಸರ ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು ಮತ್ತು ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಆ ಬಗ್ಗೆ ವಿಚಾರಣೆ ಮಾಡಲು ಪ್ರಾರಂಭಿಸಿದರು.

ಕುಸ್ತಿಪಟುಗಳ ಪ್ರಕಾರ, ಪೊಲೀಸ್ ಅಧಿಕಾರಿಗಳು ಅವರೊಂದಿಗೆ ಕೆಟ್ಟದಾಗಿ ವರ್ತಿಸಲು ಪ್ರಾರಂಭಿಸಿದರು ಮತ್ತು ಮಹಿಳಾ ಕುಸ್ತಿಪಟುಗಳನ್ನು ನಿಂದಿಸಿದ್ದಾರೆ ಎಂದು ಹೇಳಲಾಗಿದೆ.

ಈ ಬಗ್ಗೆ ಮಾತನಾಡಿರುವ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತ ಬಜರಂಗ್ ಪೊನಿಯಾ ಮಾತನಾಡಿ, ರೈತರು ಮತ್ತು ಸಾರ್ವಜನಿಕರು ಜಂತರ್ ಮಂತರ್‌ಗೆ ಬಂದು ತಮ್ಮ ಬೆಂಬಲಕ್ಕೆ ನಿಲ್ಲಬೇಕು ಎಂದು ಬಜರಂಗ್ ಪುನಿಯಾ ಕೇಳಿಕೊಂಡರು.

ಇದನ್ನೂ ಓದಿ: ಕುಸ್ತಿಪಟುಗಳ ಮೇಲೆ ದೆಹಲಿ ಪೊಲೀಸರ ಹಲ್ಲೆ: ‘ನೀವು ನಮ್ಮನ್ನು ಕೊಲ್ಲಲು ಬಯಸಿದರೆ, ಕೊಲ್ಲಬಹುದು’ ಎಂದು ಕಣ್ಣೀರಿಟ್ಟ ವಿನೇಶ್ ಫೋಗಟ್

”ಎಲ್ಲರೂ ಬೆಳಿಗ್ಗೆಯೊಳಗೆ ದೆಹಲಿ ತಲುಪಲು ನಾನು ವಿನಂತಿಸುತ್ತೇನೆ. ಇದು ಸರಿಯಾದ ಸಮಯ, ಈಗಲ್ಲದಿದ್ದರೆ, ನಂತರ ಯಾವಾಗ ಒಟ್ಟಾಗೋದು? ಇದು ನಮ್ಮ ಹೆಣ್ಣುಮಕ್ಕಳ ಘನತೆಯ ಪ್ರಶ್ನೆಯಾಗಿದೆ. ಬ್ರಿಜ್ ಭೂಷಣ್ (ಡಬ್ಲ್ಯುಎಫ್‌ಐ ಅಧ್ಯಕ್ಷ) ನಂತಹ ಜನರು ಅಪರಾಧಿಯಾಗಿದ್ದರೂ, ಅವರು ಸ್ವತಂತ್ರವಾಗಿ ತಿರುಗುತ್ತಿದ್ದಾರೆ. ಆದರೆ ನಮಗೆ ಈ ಶಿಕ್ಷೆ ನೀಡುತ್ತಿದ್ದಾರೆ” ಎಂದು ಬಜರಂಗ್ ಹೇಳಿದರು.

ಘಟನೆ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡುವಂತೆ ಕೇಳಿದಾಗ, ”ಸಿಸಿಟಿವಿ ಕ್ಯಾಮೆರಾಗಳು ಇಲ್ಲಿ ಇರುತ್ತವೆ, ಅದರ ದೃಶ್ಯಾವಳಿಗಳು ಸ್ಪಷ್ಟಪಡಿಸುತ್ತವೆ” ಎಂದು ಬಜರಂಗ್ ಹೇಳಿದರು.

ದೆಹಲಿ ಪೊಲೀಸರು ಹೇಳುವಂತೆ ಎಎಪಿ ನಾಯಕ ಸೋಮನಾಥ್ ಭಾರ್ತಿ ಅವರು ಮಡಚುವ ಹಾಸಿಗೆಗಳನ್ನು ತಂದಿದ್ದಾರೆಯೇ? ಎಂದು ಪತ್ರಕರ್ತರು ಪ್ರಶ್ನಿಸಿದಾಗ, ”ನೀವು ಸಿಸಿಟಿವಿ ದೃಶ್ಯಾವಳಿಗಳನ್ನೇ ನೋಡಿ, ಆ ಘಟನೆ ನಡೆದಾಗ ಅವರು ಇರಲಿಲ್ಲ ಎಂಬುದು ನಿಮಗೆ ಅರ್ಥವಾಗುತ್ತದೆ. ನಾವೇ ಹಾಸಿಗೆಗಳನ್ನು ಆರ್ಡರ್ ಮಾಡಿದ್ದೇವು, ಅವುಗಳನ್ನು ಒಳಗೆ ತರುತ್ತಿದ್ದೆವು” ಎಂದು ಉತ್ತರಿಸಿದರು.

ಈ ವೇಳೆ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತರು ವಿನೇಶ್ ಫೋಗಟ್ ಮಾತನಾಡಿ, ”ಮಹಿಳಾ ಪೊಲೀಸ್ ಅಧಿಕಾರಿಗಳು ಎಲ್ಲಿದ್ದರು? ಪುರುಷ ಅಧಿಕಾರಿಗಳು ನಮ್ಮನ್ನು ಹೇಗೆ ತಳ್ಳುತ್ತಾರೆ. ನಾವು ಅಪರಾಧಿಗಳಲ್ಲ, ಅಂತಹ ವರ್ತನೆ ತೋರಲು ನಾವು ಅರ್ಹರಲ್ಲ. ಕುಡಿದು ಬಂದ ಪೊಲೀಸ್ ಅಧಿಕಾರಿ ನನ್ನ ಸಹೋದರನಿಗೆ ಹೊಡೆದರು” ಎಂದು ಹೇಳಿದರು.

”ನಿಜಕ್ಕೂ ಪೊಲೀಸರ ವರ್ತನೆಯಿಂದ ನಮಗೆ ಆಘಾತವಾಗಿದೆ. ಏಕೆಂದರೆ ನಾವು ಅಪರಾಧಿಗಳಲ್ಲ ಮತ್ತು ಅಂತಹ ಅಗೌರವಕ್ಕೆ ಅರ್ಹರಲ್ಲ” ಎಂದರು.

”ನೀವು ನಮ್ಮನ್ನು ಕೊಲ್ಲಲು ಬಯಸಿದರೆ, ನಮ್ಮನ್ನು ಕೊಲ್ಲಿ” ಎಂದು ಅಳುತ್ತಾ ವಿನೇಶ್ ಫೋಗಟ್ ತಡರಾತ್ರಿಯ ಮಾಧ್ಯಮ ಸಂವಾದದಲ್ಲಿ ಹೇಳಿದರು.

”ನಾವು ಈ ದಿನ ದೇಶಕ್ಕಾಗಿ ಪದಕಗಳನ್ನು ಗೆದ್ದಿದ್ದೇವೆಯೇ? ನಾವು ನಮ್ಮ ಆಹಾರವನ್ನು ಸಹ ತಿನ್ನಲಿಲ್ಲ. ಪ್ರತಿಯೊಬ್ಬ ಪುರುಷನಿಗೆ ಮಹಿಳೆಯರನ್ನು ನಿಂದಿಸುವ ಹಕ್ಕು ಇದೆಯೇ? ಈ ಪೊಲೀಸರು ಬಂದೂಕು ಹಿಡಿದಿದ್ದಾರೆ, ಅವರು ನಮ್ಮನ್ನು ಕೊಲ್ಲಬಹುದು” ಎಂದು ಭಾವುಕರಾದ ವಿನೇಶ್ ಕಣ್ಣೀರಿಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...