Homeಮುಖಪುಟಕುಸ್ತಿಪಟುಗಳ ಪ್ರತಿಭಟನೆ: ಬೆಂಬಲಕ್ಕಾಗಿ ದೇಶದ ರೈತರು, ಸಾರ್ವಜನಿಕರಿಗೆ ಬಜರಂಗ್ ಪುನಿಯಾ ಮನವಿ

ಕುಸ್ತಿಪಟುಗಳ ಪ್ರತಿಭಟನೆ: ಬೆಂಬಲಕ್ಕಾಗಿ ದೇಶದ ರೈತರು, ಸಾರ್ವಜನಿಕರಿಗೆ ಬಜರಂಗ್ ಪುನಿಯಾ ಮನವಿ

- Advertisement -
- Advertisement -

ಪ್ರತಿಭಟನಾ ನಿರತ ಕುಸ್ತಿಪಟುಗಳ ಮೇಲೆ ದೆಹಲಿ ಪೊಲೀಸರು ಹಲ್ಲೆ ನಡೆಸಿದ ಬಳಿಕ ತಮ್ಮ ಪ್ರತಿಭಟನೆಗೆ ಬೆಂಬಲ ನೀಡಬೇಕು ಎಂದು ದೇಶದ ರೈತರು ಹಾಗೂ ಸಾರ್ವಜನಿಕರಿಗೆ ಕಾಮನ್‌ವೆಲ್ತ್ ಕ್ರಿಡಾಕೂಟದ ಚಿನ್ನದ ಪದಕ ವಿಜೇತ ಬಜರಂಗ್ ಪುನಿಯಾ ವಿನಂತಿ ಮಾಡಿದ್ದಾರೆ.

ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಹಾಗೂ ಬಿಜೆಪಿ ಸಂಸದನೂ ಆಗಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್, ಒಬ್ಬ ಅಪ್ರಾಪ್ತ ಸೇರಿದಂತೆ ಏಳು ಮಹಿಳಾ ಕ್ರೀಡಾಪಟುಗಳ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ, ಅವರನ್ನು ಬಂಧಿಸುವಂತೆ ಒತ್ತಾಯಿಸಿ ಕುಸ್ತಿಪಟುಗಳು ಏಪ್ರಿಲ್ 23ರಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

ನಿನ್ನೆ(ಬುಧವಾರ) ರಾತ್ರಿ 11 ಗಂಟೆಯ ಸುಮಾರಿಗೆ ಜಂತರ್ ಮಂತರ್‌ನಲ್ಲಿ ಪ್ರತಿಭಟನಾ ನಿರತ ಕುಸ್ತಿಪಟುಗಳು ತಮ್ಮ ರಾತ್ರಿ ತಂಗಲು ಮಡಚುವ ಹಾಸಿಗೆಗಳನ್ನು ತರುತ್ತಿದ್ದಾಗ ಪೊಲೀಸರು ತಡೆದಿದ್ದಾರೆ. ಆಗ ಪೊಲೀಸರ ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು ಮತ್ತು ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಆ ಬಗ್ಗೆ ವಿಚಾರಣೆ ಮಾಡಲು ಪ್ರಾರಂಭಿಸಿದರು.

ಕುಸ್ತಿಪಟುಗಳ ಪ್ರಕಾರ, ಪೊಲೀಸ್ ಅಧಿಕಾರಿಗಳು ಅವರೊಂದಿಗೆ ಕೆಟ್ಟದಾಗಿ ವರ್ತಿಸಲು ಪ್ರಾರಂಭಿಸಿದರು ಮತ್ತು ಮಹಿಳಾ ಕುಸ್ತಿಪಟುಗಳನ್ನು ನಿಂದಿಸಿದ್ದಾರೆ ಎಂದು ಹೇಳಲಾಗಿದೆ.

ಈ ಬಗ್ಗೆ ಮಾತನಾಡಿರುವ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತ ಬಜರಂಗ್ ಪೊನಿಯಾ ಮಾತನಾಡಿ, ರೈತರು ಮತ್ತು ಸಾರ್ವಜನಿಕರು ಜಂತರ್ ಮಂತರ್‌ಗೆ ಬಂದು ತಮ್ಮ ಬೆಂಬಲಕ್ಕೆ ನಿಲ್ಲಬೇಕು ಎಂದು ಬಜರಂಗ್ ಪುನಿಯಾ ಕೇಳಿಕೊಂಡರು.

ಇದನ್ನೂ ಓದಿ: ಕುಸ್ತಿಪಟುಗಳ ಮೇಲೆ ದೆಹಲಿ ಪೊಲೀಸರ ಹಲ್ಲೆ: ‘ನೀವು ನಮ್ಮನ್ನು ಕೊಲ್ಲಲು ಬಯಸಿದರೆ, ಕೊಲ್ಲಬಹುದು’ ಎಂದು ಕಣ್ಣೀರಿಟ್ಟ ವಿನೇಶ್ ಫೋಗಟ್

”ಎಲ್ಲರೂ ಬೆಳಿಗ್ಗೆಯೊಳಗೆ ದೆಹಲಿ ತಲುಪಲು ನಾನು ವಿನಂತಿಸುತ್ತೇನೆ. ಇದು ಸರಿಯಾದ ಸಮಯ, ಈಗಲ್ಲದಿದ್ದರೆ, ನಂತರ ಯಾವಾಗ ಒಟ್ಟಾಗೋದು? ಇದು ನಮ್ಮ ಹೆಣ್ಣುಮಕ್ಕಳ ಘನತೆಯ ಪ್ರಶ್ನೆಯಾಗಿದೆ. ಬ್ರಿಜ್ ಭೂಷಣ್ (ಡಬ್ಲ್ಯುಎಫ್‌ಐ ಅಧ್ಯಕ್ಷ) ನಂತಹ ಜನರು ಅಪರಾಧಿಯಾಗಿದ್ದರೂ, ಅವರು ಸ್ವತಂತ್ರವಾಗಿ ತಿರುಗುತ್ತಿದ್ದಾರೆ. ಆದರೆ ನಮಗೆ ಈ ಶಿಕ್ಷೆ ನೀಡುತ್ತಿದ್ದಾರೆ” ಎಂದು ಬಜರಂಗ್ ಹೇಳಿದರು.

ಘಟನೆ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡುವಂತೆ ಕೇಳಿದಾಗ, ”ಸಿಸಿಟಿವಿ ಕ್ಯಾಮೆರಾಗಳು ಇಲ್ಲಿ ಇರುತ್ತವೆ, ಅದರ ದೃಶ್ಯಾವಳಿಗಳು ಸ್ಪಷ್ಟಪಡಿಸುತ್ತವೆ” ಎಂದು ಬಜರಂಗ್ ಹೇಳಿದರು.

ದೆಹಲಿ ಪೊಲೀಸರು ಹೇಳುವಂತೆ ಎಎಪಿ ನಾಯಕ ಸೋಮನಾಥ್ ಭಾರ್ತಿ ಅವರು ಮಡಚುವ ಹಾಸಿಗೆಗಳನ್ನು ತಂದಿದ್ದಾರೆಯೇ? ಎಂದು ಪತ್ರಕರ್ತರು ಪ್ರಶ್ನಿಸಿದಾಗ, ”ನೀವು ಸಿಸಿಟಿವಿ ದೃಶ್ಯಾವಳಿಗಳನ್ನೇ ನೋಡಿ, ಆ ಘಟನೆ ನಡೆದಾಗ ಅವರು ಇರಲಿಲ್ಲ ಎಂಬುದು ನಿಮಗೆ ಅರ್ಥವಾಗುತ್ತದೆ. ನಾವೇ ಹಾಸಿಗೆಗಳನ್ನು ಆರ್ಡರ್ ಮಾಡಿದ್ದೇವು, ಅವುಗಳನ್ನು ಒಳಗೆ ತರುತ್ತಿದ್ದೆವು” ಎಂದು ಉತ್ತರಿಸಿದರು.

ಈ ವೇಳೆ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತರು ವಿನೇಶ್ ಫೋಗಟ್ ಮಾತನಾಡಿ, ”ಮಹಿಳಾ ಪೊಲೀಸ್ ಅಧಿಕಾರಿಗಳು ಎಲ್ಲಿದ್ದರು? ಪುರುಷ ಅಧಿಕಾರಿಗಳು ನಮ್ಮನ್ನು ಹೇಗೆ ತಳ್ಳುತ್ತಾರೆ. ನಾವು ಅಪರಾಧಿಗಳಲ್ಲ, ಅಂತಹ ವರ್ತನೆ ತೋರಲು ನಾವು ಅರ್ಹರಲ್ಲ. ಕುಡಿದು ಬಂದ ಪೊಲೀಸ್ ಅಧಿಕಾರಿ ನನ್ನ ಸಹೋದರನಿಗೆ ಹೊಡೆದರು” ಎಂದು ಹೇಳಿದರು.

”ನಿಜಕ್ಕೂ ಪೊಲೀಸರ ವರ್ತನೆಯಿಂದ ನಮಗೆ ಆಘಾತವಾಗಿದೆ. ಏಕೆಂದರೆ ನಾವು ಅಪರಾಧಿಗಳಲ್ಲ ಮತ್ತು ಅಂತಹ ಅಗೌರವಕ್ಕೆ ಅರ್ಹರಲ್ಲ” ಎಂದರು.

”ನೀವು ನಮ್ಮನ್ನು ಕೊಲ್ಲಲು ಬಯಸಿದರೆ, ನಮ್ಮನ್ನು ಕೊಲ್ಲಿ” ಎಂದು ಅಳುತ್ತಾ ವಿನೇಶ್ ಫೋಗಟ್ ತಡರಾತ್ರಿಯ ಮಾಧ್ಯಮ ಸಂವಾದದಲ್ಲಿ ಹೇಳಿದರು.

”ನಾವು ಈ ದಿನ ದೇಶಕ್ಕಾಗಿ ಪದಕಗಳನ್ನು ಗೆದ್ದಿದ್ದೇವೆಯೇ? ನಾವು ನಮ್ಮ ಆಹಾರವನ್ನು ಸಹ ತಿನ್ನಲಿಲ್ಲ. ಪ್ರತಿಯೊಬ್ಬ ಪುರುಷನಿಗೆ ಮಹಿಳೆಯರನ್ನು ನಿಂದಿಸುವ ಹಕ್ಕು ಇದೆಯೇ? ಈ ಪೊಲೀಸರು ಬಂದೂಕು ಹಿಡಿದಿದ್ದಾರೆ, ಅವರು ನಮ್ಮನ್ನು ಕೊಲ್ಲಬಹುದು” ಎಂದು ಭಾವುಕರಾದ ವಿನೇಶ್ ಕಣ್ಣೀರಿಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...