Homeಮುಖಪುಟಕುಸ್ತಿಪಟುಗಳ ಪ್ರತಿಭಟನೆ: ಕೇಂದ್ರ ಸರ್ಕಾರದ ನಡೆಯಿಂದ ಹರಿಯಾಣ ಬಿಜೆಪಿ ಘಟಕದಲ್ಲಿ ಅಸಮಾಧಾನ

ಕುಸ್ತಿಪಟುಗಳ ಪ್ರತಿಭಟನೆ: ಕೇಂದ್ರ ಸರ್ಕಾರದ ನಡೆಯಿಂದ ಹರಿಯಾಣ ಬಿಜೆಪಿ ಘಟಕದಲ್ಲಿ ಅಸಮಾಧಾನ

- Advertisement -
- Advertisement -

ಕಳೆದ ಒಂದು ತಿಂಗಳಿನಿಂದ ಭಾರತೀಯ ಕುಸ್ತಿ ಒಕ್ಕೂಟದ ಮುಖ್ಯಸ್ಥರ ವಿರುದ್ಧ ಲೈಂಗಿಕ ಕಿರುಕುಳದ ಗಂಭೀರ ಆರೋಪಗಳನ್ನು ಮಾಡಿ ಕುಸ್ತಿಪಟುಗಳ ಗುಂಪು ಪ್ರತಿಭಟನೆ ನಡೆಸುತ್ತಿದೆ. ಆದರೆ ಕೇಂದ್ರ ಸರ್ಕಾರದ ನಡೆ ಬಗ್ಗೆ ಹರಿಯಾಣದ ಬಿಜೆಪಿ ಘಟಕದಲ್ಲಿ ಅಸಮಾಧಾನ ಮೂಡಿದೆ.

ಬಿಜೆಪಿ ಸಂಸದ ಮತ್ತು ಭಾರತೀಯ ಫೆಡರೇಶ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕಳದ ಆರೋಪಗಳು ಕೇಳಿಬಂದಿರುವ ಹಿನ್ನೆಲೆ ಪ್ರತಿಭಟನೆಗಳನ್ನು ಮಾಡಲಾಗುತ್ತಿದೆ. ಈ ಆರೋಪಗಳನ್ನು ಪರಿಹರಿಸಲು ಕೇಂದ್ರ ಸರ್ಕಾರವು ಸಾಕಷ್ಟು ಪ್ರಯತ್ನಗಳನ್ನು ಮಾಡುತ್ತಿಲ್ಲ ಎಂದು ಆರೋಪಿಸಿ ಹರ್ಯಾಣದ ಮೂವರು ಪ್ರಮುಖ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ವಿನೇಶ್ ಫೋಗಟ್ ಮತ್ತು ಬಜರಂಗ್ ಪೂನಿಯಾ  ಅವರು ಪ್ರತಿಭಟನೆಯ ನೇತೃತ್ವ ವಹಿಸಿಕೊಂಡಿದ್ದಾರೆ.

ಪ್ರತಿಭಟನಾಕಾರರು ಭಾನುವಾರ ಹೊಸ ಸಂಸತ್ತಿನ ಕಟ್ಟಡದತ್ತ ಮೆರವಣಿಗೆ ಮಾಡಲು ಪ್ರಯತ್ನಿಸಿದಾಗ ಅವರನ್ನು ತಡೆದು ಬಂಧನ ಮಾಡಲಾಯಿತು. ಮುಂದಿನ ವರ್ಷ ಲೋಕಸಭೆ ಮತ್ತು ಹರಿಯಾಣ ವಿಧಾನಸಭೆ ಚುನಾವಣೆಗಳು ನಡೆಯಲಿರುವ ಹಿನ್ನೆಲೆಯಲ್ಲಿ, ಈ ಘಟನೆಯು ಬಿಜೆಪಿಯೊಳಗೆ ಅಸಮಾಧಾನವನ್ನು ಉಂಟುಮಾಡಿದೆ. ಹಿಸಾರ್ ಸಂಸದ ಬ್ರಿಜೇಂದ್ರ ಸಿಂಗ್ ಮತ್ತು ಹರಿಯಾಣ ಗೃಹ ಸಚಿವ ಅನಿಲ್ ವಿಜ್ ಸೇರಿದಂತೆ ರಾಜ್ಯದ ಕೆಲವು ನಾಯಕರಿಂದ ಅನಿರೀಕ್ಷಿತ ಬೆಂಬಲವನ್ನು ಗಳಿಸಿದೆ.

”ನಮ್ಮ ಕುಸ್ತಿಪಟುಗಳು ಒಲಂಪಿಕ್ಸ್, ಸಿಡಬ್ಲ್ಯೂಜಿ, ಏಷ್ಯನ್ ಕ್ರೀಡಾಕೂಟಗಳಲ್ಲಿ ತಮ್ಮ ಜೀವಮಾನದ ಕಠಿಣ ಪರಿಶ್ರಮದಿಂದ ಗಳಿಸಿದ ಪದಕಗಳನ್ನು ಪವಿತ್ರ ಗಂಗೆಯಲ್ಲಿ ಎಸೆಯಲು ಮುಂದಾಗಿದ್ದು, ಅವರ ನೋವು ಮತ್ತು ಅಸಹಾಯಕತೆಯನ್ನು ತೋರಿಸುತ್ತದೆ. ಇದು ಸಂಪೂರ್ಣವಾಗಿ ಹೃದಯವಿದ್ರಾವಕ” ಎಂದು ಸಿಂಗ್ ಟ್ವೀಟ್ ಮಾಡಿದ್ದಾರೆ.

ಕುಸ್ತಿಪಟುಗಳಿಗೆ ಹೆಚ್ಚುತ್ತಿರುವ ಬೆಂಬಲದ ಹೊರತಾಗಿಯೂ, ಹರಿಯಾಣ ಬಿಜೆಪಿ ನಾಯಕತ್ವವು ಈ ವಿಷಯದ ಬಗ್ಗೆ ಅಧಿಕೃತವಾಗಿ ನಿಲುವು ತಾಳಬೇಕಿದೆ. ಆದರೆ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಮಧ್ಯಪ್ರವೇಶ ಮಾಡದೇ ದೂರವಿದ್ದು ಉಳಿದಿದ್ದಾರೆ. ಅವರು, ”ಈ ಸಮಸ್ಯೆ ಹರಿಯಾಣಕ್ಕೆ ಸಂಬಂಧಿಸಿಲ್ಲ, ಕೇಂದ್ರ ಸರ್ಕಾರಕ್ಕೆ ಸಂಬಂಧಿಸಿದೆ” ಎಂದು ಹೇಳಿದ್ದಾರೆ ಎಂದರು.

ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಬೃಹತ್ ಪ್ರತಿಭಟನೆಗೆ ರಾಜ್ಯದ ಪ್ರಬಲ ರೈತ ಸಂಘಗಳು ಬೆಂಬಲ ನೀಡಿರುವುದರಿಂದ ಕುಸ್ತಿಪಟುಗಳ ಪ್ರತಿಭಟನೆ ಬಲಪಡೆದಿದೆ. ಕಾಂಗ್ರೆಸ್ ಮತ್ತು ಐಎನ್‌ಎಲ್‌ಡಿ ಸೇರಿದಂತೆ ವಿರೋಧ ಪಕ್ಷಗಳು ಕುಸ್ತಿಪಟುಗಳ ಬೆಂಬಲಕ್ಕೆ ನಿಂತಿವೆ.

ಇದನ್ನೂ ಓದಿ: ಕುಸ್ತಿಪಟುಗಳ ಪ್ರತಿಭಟನೆ: ಇಂದು ರೈತ ಮುಖಂಡ ನರೇಶ್ ಟಿಕಾಯತ್ ನೇತೃತ್ವದಲ್ಲಿ ‘ಮಹಾಪಂಚಾಯತ್’

ಮಾಜಿ ಕೇಂದ್ರ ಸಚಿವ ಬಿರೇಂದರ್ ಸಿಂಗ್ ಅವರು ಈ ವಿಷಯದ ಬಗ್ಗೆ ಧ್ವನಿಯೆತ್ತಿದ್ದಾರೆ, ಕುಸ್ತಿಪಟುಗಳನ್ನು ಭೇಟಿ ಮಾಡಿದ್ದಾರೆ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರೊಂದಿಗೆ ವಿಷಯವನ್ನು ಪ್ರಸ್ತಾಪಿಸಿದ್ದಾರೆ, ಪಕ್ಷದ ವಿಶ್ವಾಸಾರ್ಹತೆ ಅಪಾಯದಲ್ಲಿದೆ ಎಂದು ಒತ್ತಿಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಆದಷ್ಟು ಬೇಗ ಈ ಸಮಸ್ಯೆಯನ್ನು ಸೌಹಾರ್ದಯುತವಾಗಿ ಪರಿಹರಿಸಬೇಕೆಂದು ಅವರು ಕರೆ ನೀಡಿದರು ಮತ್ತು ಕ್ರೀಡಾ ಒಕ್ಕೂಟಗಳನ್ನು ನಡೆಸುವ ರೀತಿಯಲ್ಲಿ ಸುಧಾರಣೆಗಳ ಅಗತ್ಯವನ್ನು ಒತ್ತಿ ಹೇಳಿದರು.

ಹರ್ಯಾಣ ಬಿಜೆಪಿ ಅಧ್ಯಕ್ಷ ಓಂ ಪ್ರಕಾಶ್ ಧನಕರ್ ಅವರು, ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರೊಂದಿಗೆ ಈ ವಿಷಯವನ್ನು ಪ್ರಸ್ತಾಪಿಸಿದರು. ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ನ್ಯಾಯ ಸಿಗಬೇಕು ಎಂದು ಒತ್ತಿ ಹೇಳಿದರು.

ಠಾಕೂರ್ ಅವರು ಕುಸ್ತಿಪಟುಗಳಿಗೆ ದೆಹಲಿ ಪೊಲೀಸ್ ತನಿಖೆಯಲ್ಲಿ ವಿಶ್ವಾಸವಿಡಿ, ತನಿಖೆಯ ವರದಿ ಹೊರುವವರೆಗೂ ”ತಾಳ್ಮೆಯಿಂದಿರಿ” ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...