Homeಮುಖಪುಟಕುಸ್ತಿಪಟುಗಳ ಪ್ರತಿಭಟನೆ: ದೇಶದ ವಿವಿಧ ಭಾಗಗಳಿಂದ ದೆಹಲಿಯತ್ತ ನುಗ್ಗಿ ಬರುತ್ತಿರುವ ರೈತರು; ಗಡಿಯಲ್ಲಿ ಪೊಲೀಸ್ ಬಿಗಿ...

ಕುಸ್ತಿಪಟುಗಳ ಪ್ರತಿಭಟನೆ: ದೇಶದ ವಿವಿಧ ಭಾಗಗಳಿಂದ ದೆಹಲಿಯತ್ತ ನುಗ್ಗಿ ಬರುತ್ತಿರುವ ರೈತರು; ಗಡಿಯಲ್ಲಿ ಪೊಲೀಸ್ ಬಿಗಿ ಭದ್ರತೆ

- Advertisement -
- Advertisement -

ಕಳೆದ ಒಂದು ತಿಂಗಳಿಂದ ಭಾರತದ ಕುಸ್ತಿ ಫೆಡರೇಷನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ರಾಜ್ಯರಾಜಧಾನಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸಧ್ಯ ಅವರ ಪ್ರತಿಭಟನೆ ಬೆಂಬಲಿಸಿ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯತ್ತ ರೈತರು ಮುನ್ನುಗ್ಗುತ್ತಿರುವುದು ಕಂಡುಬಂದಿದೆ. ಇದನ್ನು ಗಮನಿಸಿರುವ ದೆಹಲಿ ಪೊಲೀಸರು ಗುರುವಾರ ದೆಹಲಿಯ ಗಡಿ ಭಾಗಗಳಲ್ಲಿ ಭಾರೀ ಬಿಗಿ ಭದ್ರತೆಯನ್ನು ಕೈಗೊಂಡಿದ್ದಾರೆ. ದೇಶದಲ್ಲಿ ಈ ಹಿಂದೆ ರೈತರ ಹೋರಾಟವನ್ನು ಈ ಕ್ರೀಡಾಪಟುಗಳ ಪ್ರತಿಭಟನೆಯು ನೆನಪಿಸುತ್ತಿದೆ.

ಈ ಬಗ್ಗೆ ದೆಹಲಿ ಪೊಲೀಸ್ ಅಧಿಕಾರಿಗಳು ಮಾತನಾಡಿದ್ದು, ”ಭದ್ರತಾ ಸಿಬ್ಬಂದಿ ಗಡಿ ಭಾಗದಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸುತ್ತಿದ್ದಾರೆ. ಯಾವುದೇ ಅಹಿತಕರ ಘಟನೆಯನ್ನು ತಡೆಯಲು ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

”ಭದ್ರತೆಯನ್ನು ಬಿಗಿಗೊಳಿಸಲಾಗಿದೆ, ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಮತ್ತು ನಾವು ದೆಹಲಿಯ ಗಡಿಗಳಲ್ಲಿ ಹೆಚ್ಚುವರಿ ಗುಂಪುಗಳನ್ನು ಸಹ ನಿಯೋಜಿಸಿದ್ದೇವೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದನ್ನು ಖಚಿತಪಡಿಸಿಕೊಳ್ಳಲು ಮತ್ತು ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ನಾವು ಬಯಸುತ್ತೇವೆ. ಇದನ್ನು ಮುನ್ನೆಚ್ಚರಿಕೆ ಕ್ರಮವಾಗಿ ಮಾಡಲಾಗಿದೆ. ಇನ್ನು ಅಕ್ಕಪಕ್ಕದ ರಾಜ್ಯಗಳಿಂದ ದೆಹಲಿ ಪ್ರವೇಶಿಸುವ ವಾಹನಗಳನ್ನು ಗಡಿಯಲ್ಲಿ ತಪಾಸಣೆ ನಡೆಸಲಾಗುತ್ತಿದೆ” ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿ: ಕುಸ್ತಿಪಟುಗಳ ಪ್ರತಿಭಟನೆ: ಕೇಂದ್ರ ಸರ್ಕಾರದ ನಡೆಯಿಂದ ಹರಿಯಾಣ ಬಿಜೆಪಿ ಘಟಕದಲ್ಲಿ ಅಸಮಾಧಾನ

ಅಪ್ರಾಪ್ತ ಬಾಲಕಿ ಸೇರಿದಂತೆ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಿಜೆಪಿ ಸಂಸದ ಬ್ರಿಜ್‌ಭೂಷಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸುತ್ತಿರುವ ಕುಸ್ತಿಪಟುಗಳನ್ನು ಬೆಂಬಲಿಸಿ ರೈತ ಸಂಘಗಳ ಮಾತೃಸಂಸ್ಥೆಯಾದ ಸಂಯುಕ್ತ ಕಿಸಾನ್ ಮೋರ್ಚಾ ಮಂಗಳವಾರ ಜೂನ್ 1 ರಂದು ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ನೀಡಿತ್ತು.

ಈ ಪ್ರತಿಭಟನೆಯಲ್ಲಿ ಟ್ರೇಡ್ ಯೂನಿಯನ್‌ಗಳು, ಮಹಿಳೆಯರು, ಯುವಕರು, ವಿದ್ಯಾರ್ಥಿಗಳು ಮತ್ತು ಬುದ್ಧಿಜೀವಿಗಳು ಸೇರಿದಂತೆ ಇತರ ಎಲ್ಲಾ ವಿಭಾಗಗಳನ್ನು ಭಾಗವಹಿಸಬೇಕು ಎಂದು ಅದು ಹೇಳಿದೆ.

ಏಪ್ರಿಲ್ 23 ರಿಂದ ಕುಸ್ತಿಪಟುಗಳು ಆರೋಪಿ ಸಿಂಗ್ ಬಂಧನಕ್ಕೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಅದೇ ದಿನ ಉದ್ಘಾಟನೆಗೊಂಡ ಹೊಸ ಸಂಸತ್ ಭವನದ ಮುಂದೆ ಮೆರವಣಿಗೆ ಮಾಡಲು ಯತ್ನಿಸಿದ ನಂತರ ಭಾನುವಾರ ದೆಹಲಿ ಪೊಲೀಸರು ಅವರನ್ನು ಬಂಧಿಸಿ ನಂತರ ಬಿಡುಗಡೆಗೊಳಿಸಿದರು.

ಖ್ಯಾತ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ವಿನೇಶಾ ಫೋಗಟ್‌, ಬಜರಂಗ್ ಪೂನಿಯಾ ಹಾಗೂ ಅವರ ನೂರಾರು ಬೆಂಬಲಿಗರು ದೆಹಲಿಯಿಂದ ಹೊರಟು, ಹರಿದ್ವಾರದ ಹರ್ ಕಿ ಪೌರಿ ಘಾಟ್ ತಲುಪಿದರು. ಈ ವೇಳೆ ಸ್ಥಳದಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ಹಾಕಲಾಗಿತ್ತು.

ಕಣ್ಣೀರು ಹಾಕುತ್ತಿದ್ದ ಸಾಕ್ಷಿ ಮಲಿಕ್, ವಿನೇಶಾ ಹಾಗೂ ಅವರ ಸಂಬಂಧಿ ಸಂಗೀತಾ ಅವರನ್ನು ಸಮಾಧಾನಪಡಿಸಲಾಗುತ್ತಿತ್ತು. ಮತ್ತೊಂದೆಡೆ, ಅವರು ಕುಳಿತಿದ್ದ ಸ್ಥಳವನ್ನು ಬೆಂಬಲಿಗರು ಸುತ್ತುವರಿದಿದ್ದಕ್ಕೆ ‘ಹರ್ ಕಿ ಪೌರಿ’ ಘಾಟ್ ಸಾಕ್ಷಿಯಾಗಿತ್ತು. ನಂತರ, ಕುಸ್ತಿಪಟುಗಳು 20 ನಿಮಿಷಗಳಷ್ಟು ಮೌನಕ್ಕೆ ಮೊರೆ ಹೋದರು. ಬಳಿಕ ತಮ್ಮ ಪ್ರಶಸ್ತಿ ಫಲಕಗಳನ್ನು ಹಿಡಿದುಕೊಂಡು ನದಿ ತೀರದಲ್ಲಿ ಕಣ್ಣೀರು ಹಾಕಿದರು.

ಆರೋಪಿ ಬಿಜೆಪಿಯ ಸಂಸದ ಬ್ರಿಜ್‌ಭೂಷಣ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಕುಸ್ತಿಪಟುಗಳು ಮಂಗಳವಾರ ಐದು ದಿನಗಳ ಗಡುವು ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...