Homeಮುಖಪುಟಕುಸ್ತಿಪಟುಗಳ ಪ್ರತಿಭಟನೆ: ದೇಶದ ವಿವಿಧ ಭಾಗಗಳಿಂದ ದೆಹಲಿಯತ್ತ ನುಗ್ಗಿ ಬರುತ್ತಿರುವ ರೈತರು; ಗಡಿಯಲ್ಲಿ ಪೊಲೀಸ್ ಬಿಗಿ...

ಕುಸ್ತಿಪಟುಗಳ ಪ್ರತಿಭಟನೆ: ದೇಶದ ವಿವಿಧ ಭಾಗಗಳಿಂದ ದೆಹಲಿಯತ್ತ ನುಗ್ಗಿ ಬರುತ್ತಿರುವ ರೈತರು; ಗಡಿಯಲ್ಲಿ ಪೊಲೀಸ್ ಬಿಗಿ ಭದ್ರತೆ

- Advertisement -
- Advertisement -

ಕಳೆದ ಒಂದು ತಿಂಗಳಿಂದ ಭಾರತದ ಕುಸ್ತಿ ಫೆಡರೇಷನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ರಾಜ್ಯರಾಜಧಾನಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸಧ್ಯ ಅವರ ಪ್ರತಿಭಟನೆ ಬೆಂಬಲಿಸಿ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯತ್ತ ರೈತರು ಮುನ್ನುಗ್ಗುತ್ತಿರುವುದು ಕಂಡುಬಂದಿದೆ. ಇದನ್ನು ಗಮನಿಸಿರುವ ದೆಹಲಿ ಪೊಲೀಸರು ಗುರುವಾರ ದೆಹಲಿಯ ಗಡಿ ಭಾಗಗಳಲ್ಲಿ ಭಾರೀ ಬಿಗಿ ಭದ್ರತೆಯನ್ನು ಕೈಗೊಂಡಿದ್ದಾರೆ. ದೇಶದಲ್ಲಿ ಈ ಹಿಂದೆ ರೈತರ ಹೋರಾಟವನ್ನು ಈ ಕ್ರೀಡಾಪಟುಗಳ ಪ್ರತಿಭಟನೆಯು ನೆನಪಿಸುತ್ತಿದೆ.

ಈ ಬಗ್ಗೆ ದೆಹಲಿ ಪೊಲೀಸ್ ಅಧಿಕಾರಿಗಳು ಮಾತನಾಡಿದ್ದು, ”ಭದ್ರತಾ ಸಿಬ್ಬಂದಿ ಗಡಿ ಭಾಗದಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸುತ್ತಿದ್ದಾರೆ. ಯಾವುದೇ ಅಹಿತಕರ ಘಟನೆಯನ್ನು ತಡೆಯಲು ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

”ಭದ್ರತೆಯನ್ನು ಬಿಗಿಗೊಳಿಸಲಾಗಿದೆ, ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಮತ್ತು ನಾವು ದೆಹಲಿಯ ಗಡಿಗಳಲ್ಲಿ ಹೆಚ್ಚುವರಿ ಗುಂಪುಗಳನ್ನು ಸಹ ನಿಯೋಜಿಸಿದ್ದೇವೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದನ್ನು ಖಚಿತಪಡಿಸಿಕೊಳ್ಳಲು ಮತ್ತು ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ನಾವು ಬಯಸುತ್ತೇವೆ. ಇದನ್ನು ಮುನ್ನೆಚ್ಚರಿಕೆ ಕ್ರಮವಾಗಿ ಮಾಡಲಾಗಿದೆ. ಇನ್ನು ಅಕ್ಕಪಕ್ಕದ ರಾಜ್ಯಗಳಿಂದ ದೆಹಲಿ ಪ್ರವೇಶಿಸುವ ವಾಹನಗಳನ್ನು ಗಡಿಯಲ್ಲಿ ತಪಾಸಣೆ ನಡೆಸಲಾಗುತ್ತಿದೆ” ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿ: ಕುಸ್ತಿಪಟುಗಳ ಪ್ರತಿಭಟನೆ: ಕೇಂದ್ರ ಸರ್ಕಾರದ ನಡೆಯಿಂದ ಹರಿಯಾಣ ಬಿಜೆಪಿ ಘಟಕದಲ್ಲಿ ಅಸಮಾಧಾನ

ಅಪ್ರಾಪ್ತ ಬಾಲಕಿ ಸೇರಿದಂತೆ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಿಜೆಪಿ ಸಂಸದ ಬ್ರಿಜ್‌ಭೂಷಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸುತ್ತಿರುವ ಕುಸ್ತಿಪಟುಗಳನ್ನು ಬೆಂಬಲಿಸಿ ರೈತ ಸಂಘಗಳ ಮಾತೃಸಂಸ್ಥೆಯಾದ ಸಂಯುಕ್ತ ಕಿಸಾನ್ ಮೋರ್ಚಾ ಮಂಗಳವಾರ ಜೂನ್ 1 ರಂದು ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ನೀಡಿತ್ತು.

ಈ ಪ್ರತಿಭಟನೆಯಲ್ಲಿ ಟ್ರೇಡ್ ಯೂನಿಯನ್‌ಗಳು, ಮಹಿಳೆಯರು, ಯುವಕರು, ವಿದ್ಯಾರ್ಥಿಗಳು ಮತ್ತು ಬುದ್ಧಿಜೀವಿಗಳು ಸೇರಿದಂತೆ ಇತರ ಎಲ್ಲಾ ವಿಭಾಗಗಳನ್ನು ಭಾಗವಹಿಸಬೇಕು ಎಂದು ಅದು ಹೇಳಿದೆ.

ಏಪ್ರಿಲ್ 23 ರಿಂದ ಕುಸ್ತಿಪಟುಗಳು ಆರೋಪಿ ಸಿಂಗ್ ಬಂಧನಕ್ಕೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಅದೇ ದಿನ ಉದ್ಘಾಟನೆಗೊಂಡ ಹೊಸ ಸಂಸತ್ ಭವನದ ಮುಂದೆ ಮೆರವಣಿಗೆ ಮಾಡಲು ಯತ್ನಿಸಿದ ನಂತರ ಭಾನುವಾರ ದೆಹಲಿ ಪೊಲೀಸರು ಅವರನ್ನು ಬಂಧಿಸಿ ನಂತರ ಬಿಡುಗಡೆಗೊಳಿಸಿದರು.

ಖ್ಯಾತ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ವಿನೇಶಾ ಫೋಗಟ್‌, ಬಜರಂಗ್ ಪೂನಿಯಾ ಹಾಗೂ ಅವರ ನೂರಾರು ಬೆಂಬಲಿಗರು ದೆಹಲಿಯಿಂದ ಹೊರಟು, ಹರಿದ್ವಾರದ ಹರ್ ಕಿ ಪೌರಿ ಘಾಟ್ ತಲುಪಿದರು. ಈ ವೇಳೆ ಸ್ಥಳದಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ಹಾಕಲಾಗಿತ್ತು.

ಕಣ್ಣೀರು ಹಾಕುತ್ತಿದ್ದ ಸಾಕ್ಷಿ ಮಲಿಕ್, ವಿನೇಶಾ ಹಾಗೂ ಅವರ ಸಂಬಂಧಿ ಸಂಗೀತಾ ಅವರನ್ನು ಸಮಾಧಾನಪಡಿಸಲಾಗುತ್ತಿತ್ತು. ಮತ್ತೊಂದೆಡೆ, ಅವರು ಕುಳಿತಿದ್ದ ಸ್ಥಳವನ್ನು ಬೆಂಬಲಿಗರು ಸುತ್ತುವರಿದಿದ್ದಕ್ಕೆ ‘ಹರ್ ಕಿ ಪೌರಿ’ ಘಾಟ್ ಸಾಕ್ಷಿಯಾಗಿತ್ತು. ನಂತರ, ಕುಸ್ತಿಪಟುಗಳು 20 ನಿಮಿಷಗಳಷ್ಟು ಮೌನಕ್ಕೆ ಮೊರೆ ಹೋದರು. ಬಳಿಕ ತಮ್ಮ ಪ್ರಶಸ್ತಿ ಫಲಕಗಳನ್ನು ಹಿಡಿದುಕೊಂಡು ನದಿ ತೀರದಲ್ಲಿ ಕಣ್ಣೀರು ಹಾಕಿದರು.

ಆರೋಪಿ ಬಿಜೆಪಿಯ ಸಂಸದ ಬ್ರಿಜ್‌ಭೂಷಣ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಕುಸ್ತಿಪಟುಗಳು ಮಂಗಳವಾರ ಐದು ದಿನಗಳ ಗಡುವು ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...