Homeಮುಖಪುಟಕುಸ್ತಿಪಟುಗಳ ಪ್ರತಿಭಟನೆ: ದೇಶದ ವಿವಿಧ ಭಾಗಗಳಿಂದ ದೆಹಲಿಯತ್ತ ನುಗ್ಗಿ ಬರುತ್ತಿರುವ ರೈತರು; ಗಡಿಯಲ್ಲಿ ಪೊಲೀಸ್ ಬಿಗಿ...

ಕುಸ್ತಿಪಟುಗಳ ಪ್ರತಿಭಟನೆ: ದೇಶದ ವಿವಿಧ ಭಾಗಗಳಿಂದ ದೆಹಲಿಯತ್ತ ನುಗ್ಗಿ ಬರುತ್ತಿರುವ ರೈತರು; ಗಡಿಯಲ್ಲಿ ಪೊಲೀಸ್ ಬಿಗಿ ಭದ್ರತೆ

- Advertisement -
- Advertisement -

ಕಳೆದ ಒಂದು ತಿಂಗಳಿಂದ ಭಾರತದ ಕುಸ್ತಿ ಫೆಡರೇಷನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ರಾಜ್ಯರಾಜಧಾನಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸಧ್ಯ ಅವರ ಪ್ರತಿಭಟನೆ ಬೆಂಬಲಿಸಿ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯತ್ತ ರೈತರು ಮುನ್ನುಗ್ಗುತ್ತಿರುವುದು ಕಂಡುಬಂದಿದೆ. ಇದನ್ನು ಗಮನಿಸಿರುವ ದೆಹಲಿ ಪೊಲೀಸರು ಗುರುವಾರ ದೆಹಲಿಯ ಗಡಿ ಭಾಗಗಳಲ್ಲಿ ಭಾರೀ ಬಿಗಿ ಭದ್ರತೆಯನ್ನು ಕೈಗೊಂಡಿದ್ದಾರೆ. ದೇಶದಲ್ಲಿ ಈ ಹಿಂದೆ ರೈತರ ಹೋರಾಟವನ್ನು ಈ ಕ್ರೀಡಾಪಟುಗಳ ಪ್ರತಿಭಟನೆಯು ನೆನಪಿಸುತ್ತಿದೆ.

ಈ ಬಗ್ಗೆ ದೆಹಲಿ ಪೊಲೀಸ್ ಅಧಿಕಾರಿಗಳು ಮಾತನಾಡಿದ್ದು, ”ಭದ್ರತಾ ಸಿಬ್ಬಂದಿ ಗಡಿ ಭಾಗದಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸುತ್ತಿದ್ದಾರೆ. ಯಾವುದೇ ಅಹಿತಕರ ಘಟನೆಯನ್ನು ತಡೆಯಲು ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

”ಭದ್ರತೆಯನ್ನು ಬಿಗಿಗೊಳಿಸಲಾಗಿದೆ, ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಮತ್ತು ನಾವು ದೆಹಲಿಯ ಗಡಿಗಳಲ್ಲಿ ಹೆಚ್ಚುವರಿ ಗುಂಪುಗಳನ್ನು ಸಹ ನಿಯೋಜಿಸಿದ್ದೇವೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದನ್ನು ಖಚಿತಪಡಿಸಿಕೊಳ್ಳಲು ಮತ್ತು ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ನಾವು ಬಯಸುತ್ತೇವೆ. ಇದನ್ನು ಮುನ್ನೆಚ್ಚರಿಕೆ ಕ್ರಮವಾಗಿ ಮಾಡಲಾಗಿದೆ. ಇನ್ನು ಅಕ್ಕಪಕ್ಕದ ರಾಜ್ಯಗಳಿಂದ ದೆಹಲಿ ಪ್ರವೇಶಿಸುವ ವಾಹನಗಳನ್ನು ಗಡಿಯಲ್ಲಿ ತಪಾಸಣೆ ನಡೆಸಲಾಗುತ್ತಿದೆ” ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿ: ಕುಸ್ತಿಪಟುಗಳ ಪ್ರತಿಭಟನೆ: ಕೇಂದ್ರ ಸರ್ಕಾರದ ನಡೆಯಿಂದ ಹರಿಯಾಣ ಬಿಜೆಪಿ ಘಟಕದಲ್ಲಿ ಅಸಮಾಧಾನ

ಅಪ್ರಾಪ್ತ ಬಾಲಕಿ ಸೇರಿದಂತೆ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಿಜೆಪಿ ಸಂಸದ ಬ್ರಿಜ್‌ಭೂಷಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸುತ್ತಿರುವ ಕುಸ್ತಿಪಟುಗಳನ್ನು ಬೆಂಬಲಿಸಿ ರೈತ ಸಂಘಗಳ ಮಾತೃಸಂಸ್ಥೆಯಾದ ಸಂಯುಕ್ತ ಕಿಸಾನ್ ಮೋರ್ಚಾ ಮಂಗಳವಾರ ಜೂನ್ 1 ರಂದು ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ನೀಡಿತ್ತು.

ಈ ಪ್ರತಿಭಟನೆಯಲ್ಲಿ ಟ್ರೇಡ್ ಯೂನಿಯನ್‌ಗಳು, ಮಹಿಳೆಯರು, ಯುವಕರು, ವಿದ್ಯಾರ್ಥಿಗಳು ಮತ್ತು ಬುದ್ಧಿಜೀವಿಗಳು ಸೇರಿದಂತೆ ಇತರ ಎಲ್ಲಾ ವಿಭಾಗಗಳನ್ನು ಭಾಗವಹಿಸಬೇಕು ಎಂದು ಅದು ಹೇಳಿದೆ.

ಏಪ್ರಿಲ್ 23 ರಿಂದ ಕುಸ್ತಿಪಟುಗಳು ಆರೋಪಿ ಸಿಂಗ್ ಬಂಧನಕ್ಕೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಅದೇ ದಿನ ಉದ್ಘಾಟನೆಗೊಂಡ ಹೊಸ ಸಂಸತ್ ಭವನದ ಮುಂದೆ ಮೆರವಣಿಗೆ ಮಾಡಲು ಯತ್ನಿಸಿದ ನಂತರ ಭಾನುವಾರ ದೆಹಲಿ ಪೊಲೀಸರು ಅವರನ್ನು ಬಂಧಿಸಿ ನಂತರ ಬಿಡುಗಡೆಗೊಳಿಸಿದರು.

ಖ್ಯಾತ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ವಿನೇಶಾ ಫೋಗಟ್‌, ಬಜರಂಗ್ ಪೂನಿಯಾ ಹಾಗೂ ಅವರ ನೂರಾರು ಬೆಂಬಲಿಗರು ದೆಹಲಿಯಿಂದ ಹೊರಟು, ಹರಿದ್ವಾರದ ಹರ್ ಕಿ ಪೌರಿ ಘಾಟ್ ತಲುಪಿದರು. ಈ ವೇಳೆ ಸ್ಥಳದಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ಹಾಕಲಾಗಿತ್ತು.

ಕಣ್ಣೀರು ಹಾಕುತ್ತಿದ್ದ ಸಾಕ್ಷಿ ಮಲಿಕ್, ವಿನೇಶಾ ಹಾಗೂ ಅವರ ಸಂಬಂಧಿ ಸಂಗೀತಾ ಅವರನ್ನು ಸಮಾಧಾನಪಡಿಸಲಾಗುತ್ತಿತ್ತು. ಮತ್ತೊಂದೆಡೆ, ಅವರು ಕುಳಿತಿದ್ದ ಸ್ಥಳವನ್ನು ಬೆಂಬಲಿಗರು ಸುತ್ತುವರಿದಿದ್ದಕ್ಕೆ ‘ಹರ್ ಕಿ ಪೌರಿ’ ಘಾಟ್ ಸಾಕ್ಷಿಯಾಗಿತ್ತು. ನಂತರ, ಕುಸ್ತಿಪಟುಗಳು 20 ನಿಮಿಷಗಳಷ್ಟು ಮೌನಕ್ಕೆ ಮೊರೆ ಹೋದರು. ಬಳಿಕ ತಮ್ಮ ಪ್ರಶಸ್ತಿ ಫಲಕಗಳನ್ನು ಹಿಡಿದುಕೊಂಡು ನದಿ ತೀರದಲ್ಲಿ ಕಣ್ಣೀರು ಹಾಕಿದರು.

ಆರೋಪಿ ಬಿಜೆಪಿಯ ಸಂಸದ ಬ್ರಿಜ್‌ಭೂಷಣ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಕುಸ್ತಿಪಟುಗಳು ಮಂಗಳವಾರ ಐದು ದಿನಗಳ ಗಡುವು ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...