Homeಅಂಕಣಗಳುಲೈಂಗಿಕ ದೌರ್ಜನ್ಯದ ಆರೋಪ: ಸರ್ಕಾರದ ಉದಾಸೀನವೋ? ಆರೋಪಿಯ ರಕ್ಷಣೆಗೆ ಮಾಡುತ್ತಿರುವ ತಂತ್ರವೋ?

ಲೈಂಗಿಕ ದೌರ್ಜನ್ಯದ ಆರೋಪ: ಸರ್ಕಾರದ ಉದಾಸೀನವೋ? ಆರೋಪಿಯ ರಕ್ಷಣೆಗೆ ಮಾಡುತ್ತಿರುವ ತಂತ್ರವೋ?

- Advertisement -
- Advertisement -

“ನಾನು ಬಾಕ್ಸಿಂಗ್ ರಿಂಗ್ ಒಳಗೆ ಹೋರಾಡುವುದನ್ನು ನೀವು ನೋಡಿದ್ದರೆ, ಆ ಫೈಟ್ ನನ್ನ ಎದುರಾಳಿಯನ್ನು ಸೋಲಿಸುವುದಕ್ಕೆ ಮಾತ್ರ ಇರುತ್ತಿರಲಿಲ್ಲ. ನನ್ನ ಫೈಟ್‌ಗೆ ಒಂದು ಗುರಿ ಇತ್ತು. ನಾನು ಹೇಳುವ ಸಂಗತಿಗಳನ್ನು ಜನರು ಕೇಳುವಂತೆ ಮಾಡಲು ನಾನು ಯಶಸ್ವಿಯಾಗಬೇಕಾದ ಅಗತ್ಯವಿತ್ತು… ಎಲ್ಲರಿಗೂ ಸುಲಭವಾಗಿ ಲಭ್ಯವಾಗುವ ಚಾಂಪಿಯನ್ ಆಗಲು ನಾನು ಬಯಸಿದ್ದೆ. ತಮ್ಮ ಜೀವನದ ಮೇಲೆ ನಿಯಂತ್ರಣ ಸಾಧಿಸಿಕೊಂಡು, ಹೆಮ್ಮೆ ಮತ್ತು ಘನತೆಯಿಂದ ಬದುಕುವಂತೆ ಇತರರಿಗೆ ಸ್ಫೂರ್ತಿ ನೀಡುವ ಭರವಸೆಯನ್ನು ಇಟ್ಟುಕೊಂಡಿದ್ದೆ”
– ಬಾಕ್ಸಿಂಗ್ ದಂತಕಥೆ ಮುಹಮ್ಮದ್ ಅಲಿ

ಮುಹಮ್ಮದ್ ಅಲಿಯವರ ಮೇಲಿನ ಮಾತುಗಳು ದೆಹಲಿಯಲ್ಲಿ ಪ್ರತಿಭಟನಾನಿರತ ಭಾರತೀಯ ಕುಸ್ತಿಪಟುಗಳಿಗೆ ಈ ಸಮಯದಲ್ಲಿ ಹೆಚ್ಚು ಅನ್ವಯವಾಗುತ್ತವೆ. ಈಗ ಅವರು ಕುಸ್ತಿ ಒಕ್ಕೂಟದ ಅಧ್ಯಕ್ಷ- ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಮಾಡಿರುವ ಗಂಭೀರ ಲೈಂಗಿಕ ಕಿರುಕುಳಗಳ ಆಪಾದನೆಗಳನ್ನು ಗಮನಿಸಿದರೆ ಬಹುಶಃ ಈ ಕುಸ್ತಿಪಟುಗಳು ಎದುರಾಳಿಗಳನ್ನು ಸೋಲಿಸುವುದಕ್ಕೆ ಅಥವಾ ಪದಕ ಗಳಿಸಲು ಆಡಿದ್ದಕ್ಕಿಂತಲೂ, ತಮ್ಮ ವಿರುದ್ಧ ನಡೆದ ದೌರ್ಜನ್ಯವನ್ನು ಸೆಣೆಸುವ ಪ್ರತೀಕವಾಗಿ ಕುಸ್ತಿಯಾಡುತ್ತಿದ್ದರೆನಿಸುತ್ತದೆ; ಮತ್ತು ತಮ್ಮ ಮೇಲಾದ ದೌರ್ಜನ್ಯಗಳನ್ನು ಜನ ಮತ್ತು ಅಧಿಕಾರ ಕೇಳಿಸಿಕೊಳ್ಳುವಂತೆ ಮಾಡಲು ಅವರಿಗೆ ಆ ಪದಕಗಳು ಅನಿವಾರ್ಯವಾಗಿದ್ದವೆನಿಸುತ್ತದೆ. ಪದಕಗಳನ್ನು ಗೆದ್ದ ಮೇಲೆಯೂ, ಯಾವಾಗ ಅಧಿಕಾರ ಅವರ ಅಳಲನ್ನು ಆಲಿಸಲು ನಿರಾಕರಿಸಿತೋ, ಯಾವಾಗ ಸಹ ನಾಗರಿಕರಿಂದ ನಿರೀಕ್ಷಿತ ಮಟ್ಟದ ಬೆಂಬಲ ವ್ಯಕ್ತವಾಗಲು ವಿಫಲವಾಯಿತೋ ಅದೇ ಗಳಿಗೆಯಲ್ಲಿ ಅವರಿಗೆ ತಮ್ಮ ಪದಕಗಳನ್ನು ಗಂಗಾ ನದಿಯಲ್ಲಿ ಮುಳುಗಿಸುವುದಕ್ಕೆ ಮಾತ್ರ ಯೋಗ್ಯವೆನಿಸಿರಬೇಕು!

ಮುಹಮದ್ ಅಲಿ

ಅಮೆರಿಕನ್ ಬಾಕ್ಸಿಂಗ್ ದಂತಕಥೆ ಮುಹಮದ್ ಅಲಿ ಕೂಡ ತಮ್ಮ ಒಲಂಪಿಕ್ ಪದಕವನ್ನು ನದಿಗೆ ಎಸೆದಿದ್ದ ಬಗ್ಗೆ ಭಾರತೀಯ ಮಾಧ್ಯಮಗಳು ಮೇಲಿನ ಘಟನೆಗೆ ಹೋಲಿಕೆ ಮಾಡಿದ್ದವು. ಜನಾಂಗೀಯವಾದ ವಿಪರೀತವಾಗಿದ್ದ ಸಮಯ ಮತ್ತು ಸ್ಥಳದಲ್ಲಿ ಅಲಿ ಜನಿಸಿದ್ದು. 1960ಲ್ಲಿ ಒಲಂಪಿಕ್ಸ್ ಬಾಕ್ಸಿಂಗ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದ ಅಲಿ, 48 ಗಂಟೆಗಳ ಕಾಲ ನಿರಂತರವಾಗಿ ಪದಕವನ್ನು ಧರಿಸಿಯೇ ಇದ್ದರಂತೆ. ಇಷ್ಟು ಜನಪ್ರಿಯರಾಗಿದ್ದರೂ ತಾವು ಜನಿಸಿದ್ದ ಸ್ಥಳದ ರೆಸ್ಟೊರೆಂಟ್ ಒಂದರಲ್ಲಿ ಜನಾಂಗೀಯ ತಾರತಮ್ಯಕ್ಕೆ ಒಳಗಾಗಿ, ಅಲ್ಲಿ ಆಹಾರ ಪಡೆಯಲು ನಿರಾಕರಿಸಲ್ಪಟ್ಟಾಗ ಅಲ್ಲಿನ ಬಿಳಿಯರ ಜೊತೆಗೆ ಅಲಿ ಕಾದಾಟಕ್ಕೆ ಇಳಿದಿದ್ದರಂತೆ. ನಂತರ ಯಾವ ಹಂತದಲ್ಲೂ ನಿಲ್ಲದ ಈ ರೇಸಿಸಂಗೆ ಬೇಸತ್ತು ತಮ್ಮ ಪದಕವನ್ನು ಓಹಿಯೋ ನದಿಗೆ ಎಸೆದಿದ್ದ ಬಗ್ಗೆ ಅವರೇ ಹೇಳಿಕೊಂಡಿದ್ದಾರೆ. ಅವರು ಪದಕವನ್ನು ಕಳೆದುಕೊಂಡಿದ್ದರು ಎಂದು ಕೂಡ ಕೆಲವರು ಬರೆದಿದ್ದರೂ, ಒಟ್ಟಿನಲ್ಲಿ ಜನಾಂಗೀಯ ತಾರತಮ್ಯದ ಬಗ್ಗೆ ಅವರಿಗಿದ್ದ ಆಕ್ರೋಶವನ್ನು ಯಾರೂ ಅಲ್ಲಗಳೆಯಲು ಸಾಧ್ಯವಿಲ್ಲ. ತಮ್ಮ ಬಾಕ್ಸಿಂಗ್‌ಅನ್ನು ಅಮೆರಿಕದ ರೇಸಿಸಂ ವಿರುದ್ಧದ ಪ್ರತಿಭಟನೆಯ ಸಂಕೇತವಾಗಿಸಿಕೊಂಡಿದ್ದ ಅಪರೂಪದ ಕ್ರೀಡಾಪಟು ಅಲಿ.

ಪ್ರತಿಭಟನಾ ನಿರತ ಕುಸ್ತಿಪಟುಗಳು ಮೇ 30ರಂದು ತಮ್ಮ ಪದಕಗಳನ್ನು ಗಂಗಾನದಿಗೆ ಎಸೆಯಲು ತೆರಳಿದ್ದಾಗ ಭಾವನಾತ್ಮಕ ಪರಿಸ್ಥಿತಿ ಉಂಟಾಗಿತ್ತು. ರೈತ ಮುಖಂಡ ರಾಕೇಶ್ ಟಿಕಾಯತ್ ಅವರ ಮಧ್ಯಪ್ರವೇಶದಿಂದ ಪದಕಗಳನ್ನು ಎಸೆಯಲಿಲ್ಲವಾದರೂ, ಪ್ರತಿಭಟನೆಗಳನ್ನು ಮುಂದುವರಿಸುವುದಾಗಿ ಅವರೆಲ್ಲರೂ ಶಪಥ ಕೈಗೊಂಡರು. ಇಷ್ಟೆಲ್ಲಾ ಘಟಿಸಿದರೂ ಮುಂದಿನ ಕೆಲವು ದಿನಗಳಲ್ಲಿ ನಡೆದ ಸಂಗತಿಗಳು, ಆರೋಪಿಯ ಮೇಲೆ ಕ್ರಮ ತೆಗೆದುಕೊಳ್ಳಲು ಸೋತಿರುವ ದೆಹಲಿ ಪೊಲೀಸರ ಮತ್ತು ಅಧಿಕಾರ ವರ್ಗದ ದರ್ಪ, ಲೈಂಗಿಕ ದೌರ್ಜನ್ಯದ ಕುರಿತು ಈ ದೇಶದಲ್ಲಿ ಇರುವ ಉದಾಸೀನತೆಗೆ ಸಾಕ್ಷಿಯಾಗಿವೆ.

ಇದನ್ನೂ ಓದಿ: ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಸಾಕ್ಷ್ಯಾಧಾರಗಳಿಲ್ಲ ಎನ್ನುವುದು ಸುಳ್ಳು, ತನಿಖೆ ಪ್ರಗತಿಯಲ್ಲಿದೆ ಎಂದ ದೆಹಲಿ ಪೊಲೀಸರು

ಜೂನ್ 2ನೆಯ ತಾರೀಖು ’ದ ಇಂಡಿಯನ್ ಎಕ್ಸ್‌ಪ್ರೆಸ್’ ಪತ್ರಿಕೆ, ದೆಹಲಿ ಪೊಲೀಸರು ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಹಾಕಿರುವ ಎರಡು ಎಫ್‌ಐಆರ್‌ಗಳ ಕೆಲವು ಅಂಶಗಳನ್ನು ಆಧರಿಸಿ ಮಾಡಿದ ವರದಿ ಯಾವುದೇ ಪ್ರಜ್ಞಾವಂತ ನಾಗರಿಕನನ್ನು ಬೆಚ್ಚಿಬೀಳಿಸುವಂತಿತ್ತು. ಏಪ್ರಿಲ್ 28ರಂದು ಹಾಕಿರುವ ಈ ಎಫ್‌ಐಆರ್‌ನಲ್ಲಿ, ಸಿಂಗ್ ವೃತ್ತಿಪರ ಸಹಾಯ ನೀಡಲು ಅದಕ್ಕೆ ಬದಲಾಗಿ ಲೈಂಗಿಕ ತೃಷೆ ತಣಿಸುವ ಆಗ್ರಹಿಸಿರುವ ಎರಡು ಸಂದರ್ಭಗಳು ಸೇರಿದಂತೆ, ಅನುಚಿತವಾಗಿ ಹೆಣ್ಣುಮಕ್ಕಳ ಮೈಮುಟ್ಟಿರುವುದು, ಬೆದರಿಕೆ, ಹೆಣ್ಣುಮಕ್ಕಳನ್ನು ಚುಡಾಯಿಸಿ ಹಿಂದೆಬಿದ್ದಿರುವ ಕನಿಷ್ಟ 15 ಆರೋಪಗಳನ್ನು ಪಟ್ಟಿ ಮಾಡಲಾಗಿದೆ. ಆ ವರದಿಯಲ್ಲಿ ದಾಖಲಾಗಿರುವಂತೆ, ಆರು ಜನ ಕುಸ್ತಿಪಟುಗಳು ಬ್ರಿಜ್ ಭೂಷಣ್ ತಮ್ಮ ಮೇಲೆ ಎಸಗಿದ ದೌರ್ಜನ್ಯದ ಬಗ್ಗೆ ನೀಡಿರುವ ಹೇಳಿಕೆಗಳು, ಅಧಿಕಾರಸ್ಥರ ಹೀನಾತಿಹೀನ ಮನಸ್ಥಿತಿಗೆ ಪ್ರತೀಕ. ಯಾವುದೇ ನಾಗರಿಕ ಸಮಾಜ ತಲೆತಗ್ಗಿಸಬೇಕಾದಂತ ಆರೋಪಗಳವು. ಈ ಹೀನಾತಿಹೀನ ದೌರ್ಜನ್ಯದ ಬಗ್ಗೆ ತಿಳಿಯಲು ಕುಸ್ತಿಪಟು ಒಬ್ಬರ ಒಂದು ಆರೋಪವನ್ನು ಓದಿದರೆ ಸಾಕು; ಕುಸ್ತಿಪಟು-1: “ಒಂದು ದಿನ ರಾತ್ರಿ ಊಟ ಮಾಡಲು ಹೋಟೆಲ್ ಒಂದಕ್ಕೆ ಹೋಗಿದ್ದೆ. ಆರೋಪಿ (ಸಿಂಗ್) ನನ್ನನ್ನು ಪ್ರತ್ಯೇಕವಾಗಿ ಅವರ ಟೇಬಲ್‌ಗೆ ಕರೆದರು.. ನನಗೆ ಅಚ್ಚರಿ ಮತ್ತು ಆಘಾತವಾಗುವಂತೆ ನನ್ನ ಒಪ್ಪಿಗೆಯಿಲ್ಲದೆ ನನ್ನ ಸ್ತನಗಳ ಮೇಲೆ ಕೈಯ್ಯಿರಿಸಿದರು ಮತ್ತು ನಂತರ ಹೊಟ್ಟೆಯ ಭಾಗಕ್ಕೆ ಕೈಯ್ಯನ್ನು ಜಾರಿಸಿದರು. ನನಗೆ ನಂಬಲಸಾಧ್ಯವೆಂಬಂತೆ, ಆರೋಪಿ (ಸಿಂಗ್) ಅಲ್ಲಿಗೆ ನಿಲ್ಲಿಸದೆ ತನ್ನ ಕೈಯನ್ನು ಮತ್ತೆ ಸ್ತನಗಳ ಮೇಲೆ ತಂದರು. ಅವರು ಸ್ತನಗಳನ್ನು ಹಿಸುಕಿದರು, ಮತ್ತೆ ಹೊಟ್ಟೆಯ ಭಾಗಕ್ಕೆ ಕೈಇಳಿಸಿದರು ಮತ್ತೆ ಸ್ತನಗಳ ಹತ್ತಿರ ತಂದರು, ಹೀಗೆ ಮೂರು-ನಾಲ್ಕು ಬಾರಿ ಪುನರಾವರ್ತಿಸಿದರು.”

ಬ್ರಿಜ್ ಭೂಷಣ್ ಶರಣ್ ಸಿಂಗ್

ತಮ್ಮ ಮೇಲಾದ ಇಂತಹ ಆಘಾತಕಾರಿ ದೌರ್ಜನ್ಯವನ್ನು ಪೊಲೀಸರಲ್ಲಿ ನಿವೇದಿಸಿಕೊಳ್ಳುವಾಗ ಸಂತ್ರಸ್ತ ಕುಸ್ತಿ ಪಟು ಎಷ್ಟು ಮನೋವೇದನೆಯನ್ನು ಅನುಭವಿಸಿರಬೇಕು. ದೂರು ನೀಡಿರುವ ಸಂತ್ರಸ್ತೆಯರಲ್ಲಿ ಒಬ್ಬಾಕೆ ಅಪ್ರಾಪ್ತೆ ಕೂಡ. ಪೋಸ್ಕೋ (Protection of Children from Sexual Offences Act) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದರೂ ಬ್ರಿಜ್ ಭೂಷಣ್‌ನ ಬಂಧನ ಇನ್ನೂ ಆಗಿಲ್ಲ. ಆಡಳಿತ ಪಕ್ಷದ ಬಲಶಾಲಿ ರಾಜಕಾರಣಿ, ಕುಸ್ತಿ ಫೆಡರೇಷನ್ ಅಧ್ಯಕ್ಷನ ವಿರುದ್ಧ ಇಂತಹ ಗಂಭೀರ ಆರೋಪಗಳು ಎದುರಾದಾಗ, ದೆಹಲಿ ಪೊಲೀಸರು ಎಫ್‌ಐಆರ್ ಹಾಕುವುದರಿಂದ ಹಿಡಿದು, ವಿಚಾರಣೆ ಮುಗಿಸುವವರೆಗೆ ವಿಳಂಬ ನೀತಿಯನ್ನು ಅನುಸರಿಸಿದ್ದಾರೆ. ನ್ಯಾಯ ಒಬ್ಬೊಬ್ಬರಿಗೆ ಒಂದೊಂದು ರೀತಿ ಅನ್ನುವುದಕ್ಕೆ ಸಿಂಗ್ ವಿರುದ್ಧದ ಈ ಪ್ರಕರಣವನ್ನು ಪೊಲೀಸರು ನಿರ್ವಹಿಸುತ್ತಿರುವ ರೀತಿ ಸಾಕ್ಷಿಯಾಗಿದೆ. ಬಲಿಪಶುಗಳಾಗಿರುವ ಕುಸ್ತಿಪಟುಗಳ ಮೇಲೆ ಆರೋಪಿಯ ಪ್ರಭಾವದಿಂದ ಒತ್ತಡ ಬೀಳುವ ಸಾಧ್ಯತೆಯಿರುವುದನ್ನು ಕೂಡ ಪೊಲೀಸರು ಪರಿಗಣನೆಗೆ ತೆಗೆದುಕೊಂಡಿಲ್ಲ. ಸಿಂಗ್ ಇಂತಹ ಒತ್ತಡ ಹಾಕುತ್ತಿರುವ ಬಗ್ಗೆ ಕೂಡ ಆರೋಪಗಳು ಬಂದಿವೆ. ಜೂನ್ 6ನೇ ತಾರೀಖು ಆ ಅಪ್ರಾಪ್ತ ಬಾಲಕಿ ಮ್ಯಾಜೆಸ್ಟ್ರೇಟ್ ಮುಂದೆ ತನ್ನ ಹೇಳಿಕೆಯನ್ನು ಬದಲಿಸಿದ್ದಾರೆ ಎಂಬ ವರದಿಗಳು ಮೂಡಿಬಂದವು. ಆದರೆ ಅವರ ತಂದೆ ಅದನ್ನು ಅಲ್ಲಗಳೆದಿರುವ ವರದಿಗಳೂ ಪ್ರಕಟವಾದವು. ಎಲ್ಲಾ ಅಪಪ್ರಚಾರಗಳ ನಡುವೆಯೂ ಸಾಕ್ಷಿ ಮಲಿಕ್, ವಿನೇಶ್ ಪೋಘಟ್ ಮುಂತಾದ ಪ್ರತಿಭಟನಾ ನಿರತ ಕುಸ್ತಿಪಟುಗಳು ಯಾವ ರೀತಿಯಲ್ಲೂ ಹೆಜ್ಜೆ ಹಿಂದಿಟ್ಟಿಲ್ಲ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಮನವಿ ಮಾಡುತ್ತಲೇ ಇದ್ದಾರೆ.

ಕುಸ್ತಿಪಟುಗಳ ನೋವಿಗೆ ವಿರೋಧ ಪಕ್ಷಗಳು, ಪ್ರಜ್ಞಾವಂತ ನಾಗರಿಕರು ಸ್ಪಂದಿಸಿ ಒಂದು ಮಟ್ಟದ ಆಕ್ರೋಶ ವ್ಯಕ್ತಪಡಿಸುತ್ತಿದ್ದರೂ ಅದು ಸಂಘಟಿತ ರೂಪ ತಳೆದಿಲ್ಲ. ಇದೇ ಕಾರಣಕ್ಕಾಗಿಯೂ ಸರ್ಕಾರ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ಮುಂದಾಗದೆ ಇಡೀ ಪ್ರಕರಣವನ್ನು ಹಳ್ಳ ಹಿಡಿಸಲು ಕಾಯುತ್ತಿರುವಂತೆ ಭಾಸವಾಗುತ್ತಿದೆ. ಎಫ್‌ಐಆರ್‌ನಲ್ಲಿ ಸಂತ್ರಸ್ತೆಯೊಬ್ಬರು ತಮಗಾಗುತ್ತಿದ್ದ ದೌರ್ಜನ್ಯದ ಬಗ್ಗೆ ಪ್ರಧಾನಿ ಮೋದಿಯವರ ಗಮನಕ್ಕೆ ತಂದದ್ದು ಕೂಡ ದಾಖಲಾಗಿದೆ. ಹೀಗಿದ್ದೂ ಕೂಡ ಪ್ರಧಾನಿ ಸರ್ಕಾರದ ಮುಖ್ಯಸ್ಥರಾಗಿ ಕಡೇ ಪಕ್ಷ ಸಿಂಗ್ ರಾಜೀನಾಮೆಗೆ ಆಗ್ರಹಿಸಿರುವ ಅಥವಾ ಪೊಲೀಸರ ತನಿಖೆ ಚುರುಕುಗೊಳಿಸಲು ಪ್ರಯತ್ನಿಸಿರುವ ಯಾವ ಕುರುಹೂ ಕಂಡುಬರುತ್ತಿಲ್ಲ! ಇದರ ಅರ್ಥ ರಾಜಕೀಯಕ್ಕೋಸ್ಕರ, ಲೈಂಗಿಕ ದೌರ್ಜನ್ಯದ ಆರೋಪಗಳನ್ನೂ ಲಘುವಾಗಿ ಸ್ವೀಕರಿಸಬಲ್ಲೆ ಎನ್ನುವ ಸಂದೇಶ ನೀಡುವುದೇ? ಹೆಣ್ಣುಮಕ್ಕಳ ಬಗೆಗಿನ ಇವರ ಕಾಳಜಿ ಹುಸಿ ಎಂಬುದು ಇದರಿಂದ ಸ್ಪಷ್ಟವಾಗುವುದಿಲ್ಲವೇ? ರೈತ ವಿರೋಧಿ ಮಸೂದೆಗಳನ್ನು ಹಿಂಪಡೆಯಲು ವರ್ಷಗಟ್ಟಲೆ ಹೋರಾಟ ನಡೆಸಿ, ಹಲವು ಬಲಿದಾನಗಳನ್ನು ನೀಡಿದಂತೆ, ಈ ಪ್ರಕರಣದಲ್ಲಿಯೂ ಸರ್ಕಾರ ಅದನ್ನು ಎದುರುನೋಡುತ್ತಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...