Homeಮುಖಪುಟಕುಸ್ತಿಪಟುಗಳ ಪ್ರತಿಭಟನೆ: ಜೂ. 15ರೊಳಗೆ ತನಿಖೆ ಪೂರ್ಣಗೊಳಿಸುವ ಭರವಸೆ ನೀಡಿದ ಕೇಂದ್ರ; ಪ್ರತಿಭಟನೆ ಇನ್ನೂ ಮುಗಿದಿಲ್ಲ...

ಕುಸ್ತಿಪಟುಗಳ ಪ್ರತಿಭಟನೆ: ಜೂ. 15ರೊಳಗೆ ತನಿಖೆ ಪೂರ್ಣಗೊಳಿಸುವ ಭರವಸೆ ನೀಡಿದ ಕೇಂದ್ರ; ಪ್ರತಿಭಟನೆ ಇನ್ನೂ ಮುಗಿದಿಲ್ಲ ಎಂದ ಸಾಕ್ಷಿ ಮಲಿಕ್

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ, ಬಿಜೆಪಿಯ ಸಂಸದರೂ ಆಗಿರುವ ಬ್ರಿಜ್‌ಭೂಷಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕುಸ್ತಿಪಟುಗಳು ಸೇರಿದಂತೆ, ರೈತ ಸಂಘಟನೆಗಳು ರಾಜಕೀಯ ಮುಖಂಡರು ಕಳೆದ ಒಂದು ತಿಂಗಳಿಗಿಂತ ಹೆಚ್ಚು ದಿನಗಳ ಕಾಲ ಪ್ರತಿಭಟನೆ ನಡೆಸುತ್ತಿದ್ದಾರೆ. ಇದೀಗ ಕೇಂದ್ರ ಸರ್ಕಾರ ಈ ಪ್ರಕರಣದ ತನಿಖೆಯನ್ನು ಮುಕ್ತಾಯಗೊಳಿಸಲು ಜೂನ್ 15 ರವರೆಗೆ ಸಮಯ ಕೇಳಿದೆ, ಆದರೆ ಕುಸ್ತಿಪಟುಗಳ ಪ್ರತಿಭಟನೆ ಇನ್ನೂ ಮುಗಿದಿಲ್ಲ ಎಂದು ಕುಸ್ತಿಪಟು ಸಾಕ್ಷಿ ಮಲಿಕ್ ಬುಧವಾರ ಹೇಳಿದ್ದಾರೆ.

ಬುಧವಾರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರನ್ನು ಸಹ ಕುಸ್ತಿಪಟುಗಳು ಭೇಟಿ ಮಾಡಿದ ಬಳಿಕ ಸಾಕ್ಷಿ ಮಲಿಕ್ ಮಾತನಾಡಿದ್ದು, ”ಜೂನ್ 15 ರೊಳಗೆ ಪೊಲೀಸರು ತನಿಖೆಯನ್ನು ಪೂರ್ಣಗೊಳಿಸುವವರೆಗೆ ನಮ್ಮ ಪ್ರತಿಭಟನೆಯನ್ನು ಅಮಾನತುಗೊಳಿಸುವಂತೆ ನಮಗೆ ಕೇಳಲಾಗಿದೆ” ಎಂದು ಹೇಳಿದರು.

ಮತ್ತೋರ್ವ ಕುಸ್ತಿಪಟು ಬಜರಂಗ್ ಪುನಿಯಾ ಮಾತನಾಡಿ, ”ನಾವು ಕೆಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದೇವೆ. ಜೂನ್ 15 ರೊಳಗೆ ಪೊಲೀಸ್ ತನಿಖೆಯನ್ನು ಪೂರ್ಣಗೊಳಿಸಬೇಕು ಮತ್ತು ಅಲ್ಲಿಯವರೆಗೆ ಪ್ರತಿಭಟನೆ ನಡೆಸದಂತೆ ಸಚಿವರು ನಮಗೆ ಮನವಿ ಮಾಡಿದ್ದಾರೆ. ಮಹಿಳಾ ಕುಸ್ತಿಪಟುಗಳ ಭದ್ರತೆಯನ್ನು ನೋಡಿಕೊಳ್ಳಲಾಗುವುದು” ಎಂದು ಅವರು ಹೇಳಿದರು.

”ಕುಸ್ತಿಪಟುಗಳ ವಿರುದ್ಧದ ಎಲ್ಲಾ ಎಫ್‌ಐಆರ್‌ಗಳನ್ನು ಹಿಂಪಡೆಯಬೇಕು ಎಂದು ನಾವು ಮನವಿ ಮಾಡಿದ್ದೇವೆ ಮತ್ತು ಅವರು ಅದಕ್ಕೆ ಒಪ್ಪಿದ್ದಾರೆ. ಜೂನ್ 15 ರೊಳಗೆ ಯಾವುದೇ ಕ್ರಮ ಕೈಗೊಳ್ಳದಿದ್ದರೆ, ನಾವು ನಮ್ಮ ಪ್ರತಿಭಟನೆಯನ್ನು ಮುಂದುವರಿಸುತ್ತೇವೆ” ಎಂದು ಪುನಿಯಾ ಹೇಳಿದರು.

ಮತ್ತೊಂದೆಡೆ ಸಭೆ ಬಳಿಕ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅನುರಾಗ್ ಠಾಕೂರ್ ”ನಾನು ಕುಸ್ತಿಪಟುಗಳೊಂದಿಗೆ ಸುದೀರ್ಘ 6 ಗಂಟೆಗಳ ಕಾಲ ಚರ್ಚಿಸಿದ್ದೇನೆ. ಜೂನ್ 15 ರೊಳಗೆ ತನಿಖೆಯನ್ನು ಪೂರ್ಣಗೊಳಿಸಿ ಆರೋಪಪಟ್ಟಿ ಸಲ್ಲಿಸಲಾಗುವುದು ಎಂದು ನಾವು ಕುಸ್ತಿಪಟುಗಳಿಗೆ ಭರವಸೆ ನೀಡಿದ್ದೇವೆ. ಜೂನ್ 30 ರೊಳಗೆ WFI ಚುನಾವಣೆ ನಡೆಯಲಿದೆ” ಎಂದು ತಿಳಿಸಿದರು.

”ಕುಸ್ತಿ ಫೆಡರೇಶನ್‌ನ ಆಂತರಿಕ ದೂರು ಸಮಿತಿಯನ್ನು ಮಹಿಳೆಯ ನೇತೃತ್ವದಲ್ಲಿ ರಚಿಸಲಾಗುವುದು. ಕುಸ್ತಿಪಟುಗಳ ವಿರುದ್ಧದ ಎಲ್ಲ ಎಫ್‌ಐಆರ್‌ಗಳನ್ನು ಹಿಂಪಡೆಯಬೇಕು. 3 ಅವಧಿ ಪೂರೈಸಿರುವ ಬ್ರಿಜ್ ಭೂಷಣ್ ಸಿಂಗ್ ಮತ್ತು ಅವರ ಸಹಚರರನ್ನು ಮರು ಆಯ್ಕೆ ಮಾಡಬಾರದು ಎಂದು ಕುಸ್ತಿಪಟುಗಳು ವಿನಂತಿಸಿದ್ದಾರೆ. ಜೂನ್ 15 ರ ಮೊದಲು ಕುಸ್ತಿಪಟುಗಳು ಯಾವುದೇ ಪ್ರತಿಭಟನೆ ನಡೆಸುವುದಿಲ್ಲ” ಎಂದು ಸಚಿವರು ಹೇಳಿದರು.

ಕುಸ್ತಿಪಟುಗಳು ಶನಿವಾರ ರಾತ್ರಿ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಬಳಿಕ ಬುಧವಾರ ಠಾಕೂರ್ ಅವರೊಂದಿಗಿನ ಸಭೆ ನಡೆಸಿದರು.

ಶನಿವಾರ ತಡ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಮಾಡಿದ ಬಳಿಕ ಕ್ರೀಡಾಪಟುಗಳು ಮಾಧ್ಯಮದವರೊಂದಿಗೆ ಯಾವುದೇ ಮಾತುಗಳನ್ನಾಡಲಿಲ್ಲ. ಸೋಮವಾರ ಪ್ರತಿಭಟನಾ ನಿರತ ಕುಸ್ತಿಪಟುಗಳಾದ ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್ ಭಾರತೀಯ ರೈಲ್ವೇಯಲ್ಲಿ ತಮ್ಮ OSD ಸೇವೆಗಳನ್ನು ಪುನರಾರಂಭಿಸಿದರು. ಇದು ಹಲವು ಊಹಾಪೋಹಗಳಿಗೆ ಕಾರಣವಾಯಿತು. ಸರ್ಕಾರದೊಂದಿಗೆ ಕ್ರೀಡಾಪಟುಗಳೊಂದಿಗೆ ಡೀಲ್ ಮಾಡಿಕೊಂಡಿದ್ದಾರೆ ಎನ್ನುವ ಮಾಧ್ಯಮವರದಿಗಳು ಪ್ರಸಾರಗೊಂಡವು.

ಇದನ್ನೂ ಓದಿ: ಕ್ರೀಡಾ ಸಚಿವ ಠಾಕೂರ್ ಎದುರು ಮಹಿಳಾ ಮುಖ್ಯಸ್ಥರ ನೇಮಕ ಸೇರಿದಂತೆ ಐದು ಬೇಡಿಕೆಗಳನ್ನಿಟ್ಟ ಕುಸ್ತಿಪಟುಗಳು

ಮಂಗಳವಾರ ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಕುಸ್ತಿಪಟು ಬಜರಂಗ್ ಪುನಿಯಾ ಅವರು ಎಲ್ಲ ಊಹಾಪೋಹಳಿಗೆ ತೆರೆ ಎಳೆದಿದ್ದಾರೆ. ”ಅಮಿತ್ ಶಾ ಅವರೊಂದಿಗೆ ಕುಸ್ತಿಪಟುಗಳು ಯಾವುದೇ ಹೊಂದಾಣಿಕೆ ಅಥವಾ ಡೀಲ್ ಮಾಡಿಕೊಂಡಿಲ್ಲ ಮತ್ತು ಪ್ರತಿಭಟನೆಗಳು ಮುಂದುವರಿಯುತ್ತವೆ” ಎಂದು ಹೇಳಿದ್ದಾರೆ.

ಗೃಹ ಸಚಿವ ಅಮಿತ್ ಶಾ ಅವರನ್ನು ಶನಿವಾರ ತಡರಾತ್ರಿ ಭೇಟಿಯಾದ ಬಗ್ಗೆ ಮಾತನಾಡದಂತೆ ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ಭಾರತ ಸರ್ಕಾರದಿಂದ ಕೇಳಲಾಗಿದೆ ಎಂದು ಪುನಿಯಾ ಹೇಳಿದ್ದಾರೆ.

ಬ್ರಿಜ್ ಭೂಷಣ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿರುವವರಲ್ಲಿ ಅಪ್ರಾಪ್ತ ವಯಸ್ಕಳು ತನ್ನ ದೂರನ್ನು ಹಿಂಪಡೆದಿದ್ದಾರೆ ಎಂಬ ವರದಿಗಳನ್ನು ಮಾಧ್ಯಮಗಳಲ್ಲಿ ಬಿತ್ತರಿಸಲಾಯಿತು. ಈ ಬಗ್ಗೆ ಮಾತನಾಡಿದ ಪುನಿಯಾ, ”ಪೋಸ್ಕೋ ಕಾಯ್ದೆಯಡಿ ಬ್ರಿಜ್ ಭೂಷಣ್ ವಿರುದ್ದ ಪ್ರಕರಣ ದಾಖಲಿಸಿರುವ ಸಂತ್ರಸ್ತೆಯ ತಂದೆ ಮತ್ತು ಆ ಬಾಲಕಿ, ದೂರನ್ನು ಹಿಂಪಡೆದಿಲ್ಲ, ಆದರೆ ಬ್ರಿಜ್ ಭೂಷಣ್ ವಿರುದ್ಧ ನ್ಯಾಯಾಲಯಕ್ಕೆ ಸಂಬಂಧಿತ ವಿವರಗಳೊಂದಿಗೆ ಹೊಸದಾಗಿ ಸಲ್ಲಿಸಿದ್ದಾಳೆ” ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರತಿಭಟನಾ ನಿರತ ಕುಸ್ತಿಪಟುಗಳಾದ ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್ ಭಾರತೀಯ ರೈಲ್ವೇಯಲ್ಲಿ ತಮ್ಮ OSD ಸೇವೆಗಳನ್ನು ಪುನರಾರಂಭಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ”ನಾವು ಎಲ್ಲವನ್ನೂ ಪಣಕ್ಕಿಟ್ಟಿದ್ದೇವೆ ಮತ್ತು ನಮ್ಮ ಆಂದೋಲನದಲ್ಲಿ ಒಂದು ಅಡಚಣೆಯಾದರೆ ನಮ್ಮ ಸರ್ಕಾರಿ ಉದ್ಯೋಗಗಳನ್ನು ತ್ಯಜಿಸಲು ಸಿದ್ಧರಿದ್ದೇವೆ. ಇದು ದೊಡ್ಡ ವಿಷಯವಲ್ಲ” ಎಂದು ಅವರು ಹೇಳಿದರು.

”ಇದು ಗೌರವ ಮತ್ತು ಘನತೆಗಾಗಿ ಹೋರಾಟವಾಗಿದೆ. ನಾವು ವದಂತಿಗಳಿಗೆ ಹೆದರುವುದಿಲ್ಲ, ಅಥವಾ ರೈಲ್ವೇ ಉದ್ಯೋಗವನ್ನು ಕಳೆದುಕೊಳ್ಳುತ್ತೇವೆ. ಯಾರಾದರೂ ನಮ್ಮ ಮೇಲೆ ಒತ್ತಡ ಹೇರಿದರೆ ನಾವು ಕೆಲಸವನ್ನು ತೊರೆಯುತ್ತೇವೆ” ಎಂದು ಪುನಿಯಾ ಸುದ್ದಿವಾಹಿನಿಗೆ ತಿಳಿಸಿದ್ದಾರೆ.

”ಬಿಜೆಪಿ ಸಂಸದ ಬ್ರಿಜ್ ಭೂಷಣ್ ವಿರುದ್ಧದ ದೂರಿನ ಬಗ್ಗೆ ಕೇಂದ್ರ ಗೃಹ ಸಚಿವರೊಂದಿಗೆ ಯಾವುದೇ ಡೀಲ್ ಮಾಡಿಕೊಂಡಿಲ್ಲ” ಎಂದು ಪುನಿಯಾ ಎನ್‌ಡಿಟಿವಿಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...