Homeಮುಖಪುಟಕುಸ್ತಿಪಟುಗಳ ಪ್ರತಿಭಟನೆ: ಜೂ. 15ರೊಳಗೆ ತನಿಖೆ ಪೂರ್ಣಗೊಳಿಸುವ ಭರವಸೆ ನೀಡಿದ ಕೇಂದ್ರ; ಪ್ರತಿಭಟನೆ ಇನ್ನೂ ಮುಗಿದಿಲ್ಲ...

ಕುಸ್ತಿಪಟುಗಳ ಪ್ರತಿಭಟನೆ: ಜೂ. 15ರೊಳಗೆ ತನಿಖೆ ಪೂರ್ಣಗೊಳಿಸುವ ಭರವಸೆ ನೀಡಿದ ಕೇಂದ್ರ; ಪ್ರತಿಭಟನೆ ಇನ್ನೂ ಮುಗಿದಿಲ್ಲ ಎಂದ ಸಾಕ್ಷಿ ಮಲಿಕ್

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ, ಬಿಜೆಪಿಯ ಸಂಸದರೂ ಆಗಿರುವ ಬ್ರಿಜ್‌ಭೂಷಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕುಸ್ತಿಪಟುಗಳು ಸೇರಿದಂತೆ, ರೈತ ಸಂಘಟನೆಗಳು ರಾಜಕೀಯ ಮುಖಂಡರು ಕಳೆದ ಒಂದು ತಿಂಗಳಿಗಿಂತ ಹೆಚ್ಚು ದಿನಗಳ ಕಾಲ ಪ್ರತಿಭಟನೆ ನಡೆಸುತ್ತಿದ್ದಾರೆ. ಇದೀಗ ಕೇಂದ್ರ ಸರ್ಕಾರ ಈ ಪ್ರಕರಣದ ತನಿಖೆಯನ್ನು ಮುಕ್ತಾಯಗೊಳಿಸಲು ಜೂನ್ 15 ರವರೆಗೆ ಸಮಯ ಕೇಳಿದೆ, ಆದರೆ ಕುಸ್ತಿಪಟುಗಳ ಪ್ರತಿಭಟನೆ ಇನ್ನೂ ಮುಗಿದಿಲ್ಲ ಎಂದು ಕುಸ್ತಿಪಟು ಸಾಕ್ಷಿ ಮಲಿಕ್ ಬುಧವಾರ ಹೇಳಿದ್ದಾರೆ.

ಬುಧವಾರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರನ್ನು ಸಹ ಕುಸ್ತಿಪಟುಗಳು ಭೇಟಿ ಮಾಡಿದ ಬಳಿಕ ಸಾಕ್ಷಿ ಮಲಿಕ್ ಮಾತನಾಡಿದ್ದು, ”ಜೂನ್ 15 ರೊಳಗೆ ಪೊಲೀಸರು ತನಿಖೆಯನ್ನು ಪೂರ್ಣಗೊಳಿಸುವವರೆಗೆ ನಮ್ಮ ಪ್ರತಿಭಟನೆಯನ್ನು ಅಮಾನತುಗೊಳಿಸುವಂತೆ ನಮಗೆ ಕೇಳಲಾಗಿದೆ” ಎಂದು ಹೇಳಿದರು.

ಮತ್ತೋರ್ವ ಕುಸ್ತಿಪಟು ಬಜರಂಗ್ ಪುನಿಯಾ ಮಾತನಾಡಿ, ”ನಾವು ಕೆಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದೇವೆ. ಜೂನ್ 15 ರೊಳಗೆ ಪೊಲೀಸ್ ತನಿಖೆಯನ್ನು ಪೂರ್ಣಗೊಳಿಸಬೇಕು ಮತ್ತು ಅಲ್ಲಿಯವರೆಗೆ ಪ್ರತಿಭಟನೆ ನಡೆಸದಂತೆ ಸಚಿವರು ನಮಗೆ ಮನವಿ ಮಾಡಿದ್ದಾರೆ. ಮಹಿಳಾ ಕುಸ್ತಿಪಟುಗಳ ಭದ್ರತೆಯನ್ನು ನೋಡಿಕೊಳ್ಳಲಾಗುವುದು” ಎಂದು ಅವರು ಹೇಳಿದರು.

”ಕುಸ್ತಿಪಟುಗಳ ವಿರುದ್ಧದ ಎಲ್ಲಾ ಎಫ್‌ಐಆರ್‌ಗಳನ್ನು ಹಿಂಪಡೆಯಬೇಕು ಎಂದು ನಾವು ಮನವಿ ಮಾಡಿದ್ದೇವೆ ಮತ್ತು ಅವರು ಅದಕ್ಕೆ ಒಪ್ಪಿದ್ದಾರೆ. ಜೂನ್ 15 ರೊಳಗೆ ಯಾವುದೇ ಕ್ರಮ ಕೈಗೊಳ್ಳದಿದ್ದರೆ, ನಾವು ನಮ್ಮ ಪ್ರತಿಭಟನೆಯನ್ನು ಮುಂದುವರಿಸುತ್ತೇವೆ” ಎಂದು ಪುನಿಯಾ ಹೇಳಿದರು.

ಮತ್ತೊಂದೆಡೆ ಸಭೆ ಬಳಿಕ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅನುರಾಗ್ ಠಾಕೂರ್ ”ನಾನು ಕುಸ್ತಿಪಟುಗಳೊಂದಿಗೆ ಸುದೀರ್ಘ 6 ಗಂಟೆಗಳ ಕಾಲ ಚರ್ಚಿಸಿದ್ದೇನೆ. ಜೂನ್ 15 ರೊಳಗೆ ತನಿಖೆಯನ್ನು ಪೂರ್ಣಗೊಳಿಸಿ ಆರೋಪಪಟ್ಟಿ ಸಲ್ಲಿಸಲಾಗುವುದು ಎಂದು ನಾವು ಕುಸ್ತಿಪಟುಗಳಿಗೆ ಭರವಸೆ ನೀಡಿದ್ದೇವೆ. ಜೂನ್ 30 ರೊಳಗೆ WFI ಚುನಾವಣೆ ನಡೆಯಲಿದೆ” ಎಂದು ತಿಳಿಸಿದರು.

”ಕುಸ್ತಿ ಫೆಡರೇಶನ್‌ನ ಆಂತರಿಕ ದೂರು ಸಮಿತಿಯನ್ನು ಮಹಿಳೆಯ ನೇತೃತ್ವದಲ್ಲಿ ರಚಿಸಲಾಗುವುದು. ಕುಸ್ತಿಪಟುಗಳ ವಿರುದ್ಧದ ಎಲ್ಲ ಎಫ್‌ಐಆರ್‌ಗಳನ್ನು ಹಿಂಪಡೆಯಬೇಕು. 3 ಅವಧಿ ಪೂರೈಸಿರುವ ಬ್ರಿಜ್ ಭೂಷಣ್ ಸಿಂಗ್ ಮತ್ತು ಅವರ ಸಹಚರರನ್ನು ಮರು ಆಯ್ಕೆ ಮಾಡಬಾರದು ಎಂದು ಕುಸ್ತಿಪಟುಗಳು ವಿನಂತಿಸಿದ್ದಾರೆ. ಜೂನ್ 15 ರ ಮೊದಲು ಕುಸ್ತಿಪಟುಗಳು ಯಾವುದೇ ಪ್ರತಿಭಟನೆ ನಡೆಸುವುದಿಲ್ಲ” ಎಂದು ಸಚಿವರು ಹೇಳಿದರು.

ಕುಸ್ತಿಪಟುಗಳು ಶನಿವಾರ ರಾತ್ರಿ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಬಳಿಕ ಬುಧವಾರ ಠಾಕೂರ್ ಅವರೊಂದಿಗಿನ ಸಭೆ ನಡೆಸಿದರು.

ಶನಿವಾರ ತಡ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಮಾಡಿದ ಬಳಿಕ ಕ್ರೀಡಾಪಟುಗಳು ಮಾಧ್ಯಮದವರೊಂದಿಗೆ ಯಾವುದೇ ಮಾತುಗಳನ್ನಾಡಲಿಲ್ಲ. ಸೋಮವಾರ ಪ್ರತಿಭಟನಾ ನಿರತ ಕುಸ್ತಿಪಟುಗಳಾದ ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್ ಭಾರತೀಯ ರೈಲ್ವೇಯಲ್ಲಿ ತಮ್ಮ OSD ಸೇವೆಗಳನ್ನು ಪುನರಾರಂಭಿಸಿದರು. ಇದು ಹಲವು ಊಹಾಪೋಹಗಳಿಗೆ ಕಾರಣವಾಯಿತು. ಸರ್ಕಾರದೊಂದಿಗೆ ಕ್ರೀಡಾಪಟುಗಳೊಂದಿಗೆ ಡೀಲ್ ಮಾಡಿಕೊಂಡಿದ್ದಾರೆ ಎನ್ನುವ ಮಾಧ್ಯಮವರದಿಗಳು ಪ್ರಸಾರಗೊಂಡವು.

ಇದನ್ನೂ ಓದಿ: ಕ್ರೀಡಾ ಸಚಿವ ಠಾಕೂರ್ ಎದುರು ಮಹಿಳಾ ಮುಖ್ಯಸ್ಥರ ನೇಮಕ ಸೇರಿದಂತೆ ಐದು ಬೇಡಿಕೆಗಳನ್ನಿಟ್ಟ ಕುಸ್ತಿಪಟುಗಳು

ಮಂಗಳವಾರ ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಕುಸ್ತಿಪಟು ಬಜರಂಗ್ ಪುನಿಯಾ ಅವರು ಎಲ್ಲ ಊಹಾಪೋಹಳಿಗೆ ತೆರೆ ಎಳೆದಿದ್ದಾರೆ. ”ಅಮಿತ್ ಶಾ ಅವರೊಂದಿಗೆ ಕುಸ್ತಿಪಟುಗಳು ಯಾವುದೇ ಹೊಂದಾಣಿಕೆ ಅಥವಾ ಡೀಲ್ ಮಾಡಿಕೊಂಡಿಲ್ಲ ಮತ್ತು ಪ್ರತಿಭಟನೆಗಳು ಮುಂದುವರಿಯುತ್ತವೆ” ಎಂದು ಹೇಳಿದ್ದಾರೆ.

ಗೃಹ ಸಚಿವ ಅಮಿತ್ ಶಾ ಅವರನ್ನು ಶನಿವಾರ ತಡರಾತ್ರಿ ಭೇಟಿಯಾದ ಬಗ್ಗೆ ಮಾತನಾಡದಂತೆ ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ಭಾರತ ಸರ್ಕಾರದಿಂದ ಕೇಳಲಾಗಿದೆ ಎಂದು ಪುನಿಯಾ ಹೇಳಿದ್ದಾರೆ.

ಬ್ರಿಜ್ ಭೂಷಣ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿರುವವರಲ್ಲಿ ಅಪ್ರಾಪ್ತ ವಯಸ್ಕಳು ತನ್ನ ದೂರನ್ನು ಹಿಂಪಡೆದಿದ್ದಾರೆ ಎಂಬ ವರದಿಗಳನ್ನು ಮಾಧ್ಯಮಗಳಲ್ಲಿ ಬಿತ್ತರಿಸಲಾಯಿತು. ಈ ಬಗ್ಗೆ ಮಾತನಾಡಿದ ಪುನಿಯಾ, ”ಪೋಸ್ಕೋ ಕಾಯ್ದೆಯಡಿ ಬ್ರಿಜ್ ಭೂಷಣ್ ವಿರುದ್ದ ಪ್ರಕರಣ ದಾಖಲಿಸಿರುವ ಸಂತ್ರಸ್ತೆಯ ತಂದೆ ಮತ್ತು ಆ ಬಾಲಕಿ, ದೂರನ್ನು ಹಿಂಪಡೆದಿಲ್ಲ, ಆದರೆ ಬ್ರಿಜ್ ಭೂಷಣ್ ವಿರುದ್ಧ ನ್ಯಾಯಾಲಯಕ್ಕೆ ಸಂಬಂಧಿತ ವಿವರಗಳೊಂದಿಗೆ ಹೊಸದಾಗಿ ಸಲ್ಲಿಸಿದ್ದಾಳೆ” ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರತಿಭಟನಾ ನಿರತ ಕುಸ್ತಿಪಟುಗಳಾದ ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್ ಭಾರತೀಯ ರೈಲ್ವೇಯಲ್ಲಿ ತಮ್ಮ OSD ಸೇವೆಗಳನ್ನು ಪುನರಾರಂಭಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ”ನಾವು ಎಲ್ಲವನ್ನೂ ಪಣಕ್ಕಿಟ್ಟಿದ್ದೇವೆ ಮತ್ತು ನಮ್ಮ ಆಂದೋಲನದಲ್ಲಿ ಒಂದು ಅಡಚಣೆಯಾದರೆ ನಮ್ಮ ಸರ್ಕಾರಿ ಉದ್ಯೋಗಗಳನ್ನು ತ್ಯಜಿಸಲು ಸಿದ್ಧರಿದ್ದೇವೆ. ಇದು ದೊಡ್ಡ ವಿಷಯವಲ್ಲ” ಎಂದು ಅವರು ಹೇಳಿದರು.

”ಇದು ಗೌರವ ಮತ್ತು ಘನತೆಗಾಗಿ ಹೋರಾಟವಾಗಿದೆ. ನಾವು ವದಂತಿಗಳಿಗೆ ಹೆದರುವುದಿಲ್ಲ, ಅಥವಾ ರೈಲ್ವೇ ಉದ್ಯೋಗವನ್ನು ಕಳೆದುಕೊಳ್ಳುತ್ತೇವೆ. ಯಾರಾದರೂ ನಮ್ಮ ಮೇಲೆ ಒತ್ತಡ ಹೇರಿದರೆ ನಾವು ಕೆಲಸವನ್ನು ತೊರೆಯುತ್ತೇವೆ” ಎಂದು ಪುನಿಯಾ ಸುದ್ದಿವಾಹಿನಿಗೆ ತಿಳಿಸಿದ್ದಾರೆ.

”ಬಿಜೆಪಿ ಸಂಸದ ಬ್ರಿಜ್ ಭೂಷಣ್ ವಿರುದ್ಧದ ದೂರಿನ ಬಗ್ಗೆ ಕೇಂದ್ರ ಗೃಹ ಸಚಿವರೊಂದಿಗೆ ಯಾವುದೇ ಡೀಲ್ ಮಾಡಿಕೊಂಡಿಲ್ಲ” ಎಂದು ಪುನಿಯಾ ಎನ್‌ಡಿಟಿವಿಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...