Homeಮುಖಪುಟಕುಸ್ತಿಪಟುಗಳ ಪ್ರತಿಭಟನೆ: ಜೂ. 15ರೊಳಗೆ ತನಿಖೆ ಪೂರ್ಣಗೊಳಿಸುವ ಭರವಸೆ ನೀಡಿದ ಕೇಂದ್ರ; ಪ್ರತಿಭಟನೆ ಇನ್ನೂ ಮುಗಿದಿಲ್ಲ...

ಕುಸ್ತಿಪಟುಗಳ ಪ್ರತಿಭಟನೆ: ಜೂ. 15ರೊಳಗೆ ತನಿಖೆ ಪೂರ್ಣಗೊಳಿಸುವ ಭರವಸೆ ನೀಡಿದ ಕೇಂದ್ರ; ಪ್ರತಿಭಟನೆ ಇನ್ನೂ ಮುಗಿದಿಲ್ಲ ಎಂದ ಸಾಕ್ಷಿ ಮಲಿಕ್

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ, ಬಿಜೆಪಿಯ ಸಂಸದರೂ ಆಗಿರುವ ಬ್ರಿಜ್‌ಭೂಷಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕುಸ್ತಿಪಟುಗಳು ಸೇರಿದಂತೆ, ರೈತ ಸಂಘಟನೆಗಳು ರಾಜಕೀಯ ಮುಖಂಡರು ಕಳೆದ ಒಂದು ತಿಂಗಳಿಗಿಂತ ಹೆಚ್ಚು ದಿನಗಳ ಕಾಲ ಪ್ರತಿಭಟನೆ ನಡೆಸುತ್ತಿದ್ದಾರೆ. ಇದೀಗ ಕೇಂದ್ರ ಸರ್ಕಾರ ಈ ಪ್ರಕರಣದ ತನಿಖೆಯನ್ನು ಮುಕ್ತಾಯಗೊಳಿಸಲು ಜೂನ್ 15 ರವರೆಗೆ ಸಮಯ ಕೇಳಿದೆ, ಆದರೆ ಕುಸ್ತಿಪಟುಗಳ ಪ್ರತಿಭಟನೆ ಇನ್ನೂ ಮುಗಿದಿಲ್ಲ ಎಂದು ಕುಸ್ತಿಪಟು ಸಾಕ್ಷಿ ಮಲಿಕ್ ಬುಧವಾರ ಹೇಳಿದ್ದಾರೆ.

ಬುಧವಾರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರನ್ನು ಸಹ ಕುಸ್ತಿಪಟುಗಳು ಭೇಟಿ ಮಾಡಿದ ಬಳಿಕ ಸಾಕ್ಷಿ ಮಲಿಕ್ ಮಾತನಾಡಿದ್ದು, ”ಜೂನ್ 15 ರೊಳಗೆ ಪೊಲೀಸರು ತನಿಖೆಯನ್ನು ಪೂರ್ಣಗೊಳಿಸುವವರೆಗೆ ನಮ್ಮ ಪ್ರತಿಭಟನೆಯನ್ನು ಅಮಾನತುಗೊಳಿಸುವಂತೆ ನಮಗೆ ಕೇಳಲಾಗಿದೆ” ಎಂದು ಹೇಳಿದರು.

ಮತ್ತೋರ್ವ ಕುಸ್ತಿಪಟು ಬಜರಂಗ್ ಪುನಿಯಾ ಮಾತನಾಡಿ, ”ನಾವು ಕೆಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದೇವೆ. ಜೂನ್ 15 ರೊಳಗೆ ಪೊಲೀಸ್ ತನಿಖೆಯನ್ನು ಪೂರ್ಣಗೊಳಿಸಬೇಕು ಮತ್ತು ಅಲ್ಲಿಯವರೆಗೆ ಪ್ರತಿಭಟನೆ ನಡೆಸದಂತೆ ಸಚಿವರು ನಮಗೆ ಮನವಿ ಮಾಡಿದ್ದಾರೆ. ಮಹಿಳಾ ಕುಸ್ತಿಪಟುಗಳ ಭದ್ರತೆಯನ್ನು ನೋಡಿಕೊಳ್ಳಲಾಗುವುದು” ಎಂದು ಅವರು ಹೇಳಿದರು.

”ಕುಸ್ತಿಪಟುಗಳ ವಿರುದ್ಧದ ಎಲ್ಲಾ ಎಫ್‌ಐಆರ್‌ಗಳನ್ನು ಹಿಂಪಡೆಯಬೇಕು ಎಂದು ನಾವು ಮನವಿ ಮಾಡಿದ್ದೇವೆ ಮತ್ತು ಅವರು ಅದಕ್ಕೆ ಒಪ್ಪಿದ್ದಾರೆ. ಜೂನ್ 15 ರೊಳಗೆ ಯಾವುದೇ ಕ್ರಮ ಕೈಗೊಳ್ಳದಿದ್ದರೆ, ನಾವು ನಮ್ಮ ಪ್ರತಿಭಟನೆಯನ್ನು ಮುಂದುವರಿಸುತ್ತೇವೆ” ಎಂದು ಪುನಿಯಾ ಹೇಳಿದರು.

ಮತ್ತೊಂದೆಡೆ ಸಭೆ ಬಳಿಕ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅನುರಾಗ್ ಠಾಕೂರ್ ”ನಾನು ಕುಸ್ತಿಪಟುಗಳೊಂದಿಗೆ ಸುದೀರ್ಘ 6 ಗಂಟೆಗಳ ಕಾಲ ಚರ್ಚಿಸಿದ್ದೇನೆ. ಜೂನ್ 15 ರೊಳಗೆ ತನಿಖೆಯನ್ನು ಪೂರ್ಣಗೊಳಿಸಿ ಆರೋಪಪಟ್ಟಿ ಸಲ್ಲಿಸಲಾಗುವುದು ಎಂದು ನಾವು ಕುಸ್ತಿಪಟುಗಳಿಗೆ ಭರವಸೆ ನೀಡಿದ್ದೇವೆ. ಜೂನ್ 30 ರೊಳಗೆ WFI ಚುನಾವಣೆ ನಡೆಯಲಿದೆ” ಎಂದು ತಿಳಿಸಿದರು.

”ಕುಸ್ತಿ ಫೆಡರೇಶನ್‌ನ ಆಂತರಿಕ ದೂರು ಸಮಿತಿಯನ್ನು ಮಹಿಳೆಯ ನೇತೃತ್ವದಲ್ಲಿ ರಚಿಸಲಾಗುವುದು. ಕುಸ್ತಿಪಟುಗಳ ವಿರುದ್ಧದ ಎಲ್ಲ ಎಫ್‌ಐಆರ್‌ಗಳನ್ನು ಹಿಂಪಡೆಯಬೇಕು. 3 ಅವಧಿ ಪೂರೈಸಿರುವ ಬ್ರಿಜ್ ಭೂಷಣ್ ಸಿಂಗ್ ಮತ್ತು ಅವರ ಸಹಚರರನ್ನು ಮರು ಆಯ್ಕೆ ಮಾಡಬಾರದು ಎಂದು ಕುಸ್ತಿಪಟುಗಳು ವಿನಂತಿಸಿದ್ದಾರೆ. ಜೂನ್ 15 ರ ಮೊದಲು ಕುಸ್ತಿಪಟುಗಳು ಯಾವುದೇ ಪ್ರತಿಭಟನೆ ನಡೆಸುವುದಿಲ್ಲ” ಎಂದು ಸಚಿವರು ಹೇಳಿದರು.

ಕುಸ್ತಿಪಟುಗಳು ಶನಿವಾರ ರಾತ್ರಿ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಬಳಿಕ ಬುಧವಾರ ಠಾಕೂರ್ ಅವರೊಂದಿಗಿನ ಸಭೆ ನಡೆಸಿದರು.

ಶನಿವಾರ ತಡ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಮಾಡಿದ ಬಳಿಕ ಕ್ರೀಡಾಪಟುಗಳು ಮಾಧ್ಯಮದವರೊಂದಿಗೆ ಯಾವುದೇ ಮಾತುಗಳನ್ನಾಡಲಿಲ್ಲ. ಸೋಮವಾರ ಪ್ರತಿಭಟನಾ ನಿರತ ಕುಸ್ತಿಪಟುಗಳಾದ ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್ ಭಾರತೀಯ ರೈಲ್ವೇಯಲ್ಲಿ ತಮ್ಮ OSD ಸೇವೆಗಳನ್ನು ಪುನರಾರಂಭಿಸಿದರು. ಇದು ಹಲವು ಊಹಾಪೋಹಗಳಿಗೆ ಕಾರಣವಾಯಿತು. ಸರ್ಕಾರದೊಂದಿಗೆ ಕ್ರೀಡಾಪಟುಗಳೊಂದಿಗೆ ಡೀಲ್ ಮಾಡಿಕೊಂಡಿದ್ದಾರೆ ಎನ್ನುವ ಮಾಧ್ಯಮವರದಿಗಳು ಪ್ರಸಾರಗೊಂಡವು.

ಇದನ್ನೂ ಓದಿ: ಕ್ರೀಡಾ ಸಚಿವ ಠಾಕೂರ್ ಎದುರು ಮಹಿಳಾ ಮುಖ್ಯಸ್ಥರ ನೇಮಕ ಸೇರಿದಂತೆ ಐದು ಬೇಡಿಕೆಗಳನ್ನಿಟ್ಟ ಕುಸ್ತಿಪಟುಗಳು

ಮಂಗಳವಾರ ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಕುಸ್ತಿಪಟು ಬಜರಂಗ್ ಪುನಿಯಾ ಅವರು ಎಲ್ಲ ಊಹಾಪೋಹಳಿಗೆ ತೆರೆ ಎಳೆದಿದ್ದಾರೆ. ”ಅಮಿತ್ ಶಾ ಅವರೊಂದಿಗೆ ಕುಸ್ತಿಪಟುಗಳು ಯಾವುದೇ ಹೊಂದಾಣಿಕೆ ಅಥವಾ ಡೀಲ್ ಮಾಡಿಕೊಂಡಿಲ್ಲ ಮತ್ತು ಪ್ರತಿಭಟನೆಗಳು ಮುಂದುವರಿಯುತ್ತವೆ” ಎಂದು ಹೇಳಿದ್ದಾರೆ.

ಗೃಹ ಸಚಿವ ಅಮಿತ್ ಶಾ ಅವರನ್ನು ಶನಿವಾರ ತಡರಾತ್ರಿ ಭೇಟಿಯಾದ ಬಗ್ಗೆ ಮಾತನಾಡದಂತೆ ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ಭಾರತ ಸರ್ಕಾರದಿಂದ ಕೇಳಲಾಗಿದೆ ಎಂದು ಪುನಿಯಾ ಹೇಳಿದ್ದಾರೆ.

ಬ್ರಿಜ್ ಭೂಷಣ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿರುವವರಲ್ಲಿ ಅಪ್ರಾಪ್ತ ವಯಸ್ಕಳು ತನ್ನ ದೂರನ್ನು ಹಿಂಪಡೆದಿದ್ದಾರೆ ಎಂಬ ವರದಿಗಳನ್ನು ಮಾಧ್ಯಮಗಳಲ್ಲಿ ಬಿತ್ತರಿಸಲಾಯಿತು. ಈ ಬಗ್ಗೆ ಮಾತನಾಡಿದ ಪುನಿಯಾ, ”ಪೋಸ್ಕೋ ಕಾಯ್ದೆಯಡಿ ಬ್ರಿಜ್ ಭೂಷಣ್ ವಿರುದ್ದ ಪ್ರಕರಣ ದಾಖಲಿಸಿರುವ ಸಂತ್ರಸ್ತೆಯ ತಂದೆ ಮತ್ತು ಆ ಬಾಲಕಿ, ದೂರನ್ನು ಹಿಂಪಡೆದಿಲ್ಲ, ಆದರೆ ಬ್ರಿಜ್ ಭೂಷಣ್ ವಿರುದ್ಧ ನ್ಯಾಯಾಲಯಕ್ಕೆ ಸಂಬಂಧಿತ ವಿವರಗಳೊಂದಿಗೆ ಹೊಸದಾಗಿ ಸಲ್ಲಿಸಿದ್ದಾಳೆ” ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರತಿಭಟನಾ ನಿರತ ಕುಸ್ತಿಪಟುಗಳಾದ ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್ ಭಾರತೀಯ ರೈಲ್ವೇಯಲ್ಲಿ ತಮ್ಮ OSD ಸೇವೆಗಳನ್ನು ಪುನರಾರಂಭಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ”ನಾವು ಎಲ್ಲವನ್ನೂ ಪಣಕ್ಕಿಟ್ಟಿದ್ದೇವೆ ಮತ್ತು ನಮ್ಮ ಆಂದೋಲನದಲ್ಲಿ ಒಂದು ಅಡಚಣೆಯಾದರೆ ನಮ್ಮ ಸರ್ಕಾರಿ ಉದ್ಯೋಗಗಳನ್ನು ತ್ಯಜಿಸಲು ಸಿದ್ಧರಿದ್ದೇವೆ. ಇದು ದೊಡ್ಡ ವಿಷಯವಲ್ಲ” ಎಂದು ಅವರು ಹೇಳಿದರು.

”ಇದು ಗೌರವ ಮತ್ತು ಘನತೆಗಾಗಿ ಹೋರಾಟವಾಗಿದೆ. ನಾವು ವದಂತಿಗಳಿಗೆ ಹೆದರುವುದಿಲ್ಲ, ಅಥವಾ ರೈಲ್ವೇ ಉದ್ಯೋಗವನ್ನು ಕಳೆದುಕೊಳ್ಳುತ್ತೇವೆ. ಯಾರಾದರೂ ನಮ್ಮ ಮೇಲೆ ಒತ್ತಡ ಹೇರಿದರೆ ನಾವು ಕೆಲಸವನ್ನು ತೊರೆಯುತ್ತೇವೆ” ಎಂದು ಪುನಿಯಾ ಸುದ್ದಿವಾಹಿನಿಗೆ ತಿಳಿಸಿದ್ದಾರೆ.

”ಬಿಜೆಪಿ ಸಂಸದ ಬ್ರಿಜ್ ಭೂಷಣ್ ವಿರುದ್ಧದ ದೂರಿನ ಬಗ್ಗೆ ಕೇಂದ್ರ ಗೃಹ ಸಚಿವರೊಂದಿಗೆ ಯಾವುದೇ ಡೀಲ್ ಮಾಡಿಕೊಂಡಿಲ್ಲ” ಎಂದು ಪುನಿಯಾ ಎನ್‌ಡಿಟಿವಿಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...