Homeಮುಖಪುಟಸಮಸ್ಯೆ ಬಗೆಹರಿವವರೆಗೂ ಏಷ್ಯನ್ ಗೇಮ್ಸ್‌ನಲ್ಲಿ ಕುಸ್ತಿಪಟುಗಳು ಪಾಲ್ಗೊಳ್ಳುವುದಿಲ್ಲ: ಸಾಕ್ಷಿ ಮಲ್ಲಿಕ್

ಸಮಸ್ಯೆ ಬಗೆಹರಿವವರೆಗೂ ಏಷ್ಯನ್ ಗೇಮ್ಸ್‌ನಲ್ಲಿ ಕುಸ್ತಿಪಟುಗಳು ಪಾಲ್ಗೊಳ್ಳುವುದಿಲ್ಲ: ಸಾಕ್ಷಿ ಮಲ್ಲಿಕ್

- Advertisement -
- Advertisement -

“ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು, ಲೈಂಗಿಕ ಕಿರುಕುಳ ಪ್ರಕರಣ ಬಗೆಹರಿಯುವವರೆಗೂ ಮುಂಬರುವ ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸುವುದಿಲ್ಲ” ಎಂದು ಒಲಿಂಪಿಕ್ ಪದಕ ವಿಜೇತೆ ಸಾಕ್ಷಿ ಮಲಿಕ್ ಶನಿವಾರ ಹೇಳಿರುವುದಾಗಿ ‘ದಿ ಹಿಂದೂ’ ವರದಿ ಮಾಡಿದೆ.

ಹರಿಯಾಣದ ಸೋನಿಪತ್‌ನಲ್ಲಿ ಕುಸ್ತಿಪಟುಗಳು ವಿವಿಧ ಖಾಪ್ ನಾಯಕರೊಂದಿಗೆ ಶನಿವಾರ ಮಹಾಪಂಚಾಯತ್ ಆಯೋಜಿಸಿದ ನಂತರ ಈ ಹೇಳಿಕೆ ಹೊರಬಿದ್ದಿದೆ.

ಓರ್ವ ಅಪ್ರಾಪ್ತ ಕುಸ್ತಿಪಟು ಸೇರಿದಂತೆ ಏಳು ಮಂದಿ ಕುಸ್ತಿಗಳಿಗೆ ಬಿಜೆಪಿ ಸಂಸದ ಬ್ರಿಜ್‌ ಭೂಷಣ್ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಎರಡು ಪ್ರಕರಣ ದಾಖಲಾಗಿದೆ. ಬ್ರಿಜ್ ಭೂಷಣ್‌ನ ಬಂಧನಕ್ಕಾಗಿ ಕುಸ್ತಿಪಟುಗಳು ಪಟ್ಟು ಹಿಡಿದಿದ್ದಾರೆ.

“ದೂರನ್ನು ಹಿಂಪಡೆದು ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ಬ್ರಿಜ್ ಭೂಷಣ್‌ ಸಿಂಗ್ ನಮ್ಮ ಮೇಲೆ ಒತ್ತಡ ಹೇರುತ್ತಿದ್ದಾರೆ” ಎಂದು ಅವರು ಆರೋಪಿಸಿರುವುದಾಗಿ ‘ಹಿಂದೂಸ್ತಾನ್ ಟೈಮ್ಸ್’ ವರದಿ ತಿಳಿಸಿದೆ.

“ಬ್ರಿಜ್ ಭೂಷಣ್‌ ಪೊಲೀಸ್ ಕಸ್ಟಡಿಯಲ್ಲಿದ್ದಿದ್ದರೆ, ಆತ ಒತ್ತಡ ಹೇರಲು ಸಾಧ್ಯವಿಲ್ಲ” ಎಂದು ಸಾಕ್ಷಿ ಮಲ್ಲಿಕ್‌ ತಿಳಿಸಿದ್ದಾರೆ. “ಇಲ್ಲದಿದ್ದರೆ, ಸಂತ್ರಸ್ತರು ಒಬ್ಬೊಬ್ಬರಾಗಿಯೇ ಹೊರಹೋಗುತ್ತಾರೆ. ಆತ ಒಳಹೋಗುವವರೆಗೂ ಭಯದ ವಾತಾವರಣ ಉಳಿದಿರುತ್ತದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಬ್ರಿಜ್ ಭೂಷಣ್‌ ಕಿರುಕುಳ ನೀಡಿದ ವೇಳೆ ಕಿರಿಯ ಕುಸ್ತಿಪಟು ಅಪ್ರಾಪ್ತಳಾಗಿರಲಿಲ್ಲ ಎಂದು ಹೇಳಿಕೆಯನ್ನು ನೀಡುವಂತೆ ಅಪ್ರಾಪ್ತ ಕುಸ್ತಿಪಟುವಿನ ತಂದೆಗೆ ಒತ್ತಡ ಹೇರಲಾಗಿತ್ತು ಎಂದು ಒಲಿಂಪಿಕ್ ಪದಕ ವಿಜೇತೆ ದೂರಿದ್ದಾರೆ.

ಕಳೆದ ವಾರ ಅಪ್ರಾಪ್ತ ಬಾಲಕಿಯ ತಂದೆ ‘ದಿ ಹಿಂದೂ’ಗೆ ಪ್ರತಿಕ್ರಿಯಿಸಿ, “ನನ್ನ ಕುಟುಂಬ, ಮಗಳ ಬಗ್ಗೆ ಹೆದರಿ ಹೇಳಿಕೆ ಬದಲಿಸಲಾಗಿತ್ತು” ಎಂದು ತಿಳಿಸಿದ್ದರು.

ಒಲಿಂಪಿಕ್ ಪದಕ ವಿಜೇತ ಬಜರಂಗ್ ಪೂನಿಯಾ ಶನಿವಾರ ಪ್ರತಿಕ್ರಿಯಿಸಿ, “ಕುಸ್ತಿಪಟುವಿಗೆ ಏನಾದರೂ ತೊಂದರೆಯಾಗಿದ್ದರೆ, ಆಕೆಯ ವಯಸ್ಸು ಎಷ್ಟೇ ಇದ್ದರೂ ಬ್ರಿಜ್‌ ಭೂಷಣ್ ಅವರನ್ನು ಶಿಕ್ಷಿಸಬೇಕು” ಎಂದಿದ್ದಾರೆ.

ಇದನ್ನೂ ಓದಿರಿ: ‘ಫೋಟೋ ತೆಗೆಸಿಕೊಳ್ಳುವಾಗ ಬ್ರಿಜ್‌ಭೂಷಣ್ ನಿತಂಬ ಸ್ಪರ್ಶಿಸಿದ್ದ’: ಕುಸ್ತಿಪಟುವಿನ ಆರೋಪ ದೃಢೀಕರಿಸಿದ ಅಂತಾರಾಷ್ಟ್ರೀಯ ರೆಫರಿ

“ನಾವು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರನ್ನು ಭೇಟಿ ಮಾಡಿದ್ದೇವೆ. ನಮ್ಮ ಬೇಡಿಕೆಗಳನ್ನು ಪರಿಗಣಿಸುವುದಾಗಿ ಸರಕಾರ ಭರವಸೆ ನೀಡಿದೆ. ಅಗತ್ಯವಿದ್ದರೆ, ಜೂನ್ 15ರ ನಂತರ ನಾವು ಪ್ರತಿಭಟನೆ ಮಾಡುತ್ತೇವೆ. ನಾವು ನಮ್ಮ ಪ್ರತಿಭಟನೆಯನ್ನು ಪ್ರಾರಂಭಿಸಿದ ನಂತರ ಯಾವುದೇ ಕುಸ್ತಿಪಟುಗಳು ತಮ್ಮ ಸರ್ಕಾರಿ ಸೇವೆಗಳನ್ನು ಪುನರಾರಂಭಿಸುವುದಿಲ್ಲ. ನಾವು ನಮ್ಮ ಪ್ರತಿಭಟನೆಯನ್ನು ಪುನರಾರಂಭಿಸದಿದ್ದರೆ, ಎಲ್ಲಾ ಕುಸ್ತಿಪಟುಗಳು ತಮ್ಮ ಸರ್ಕಾರಿ ಉದ್ಯೋಗಗಳಿಗೆ ಮರಳುತ್ತಾರೆ” ಎಂದು ಸ್ಪಷ್ಟಪಡಿಸಿದ್ದಾರೆ.

ಕೆಲವು ದಿನಗಳ ಹಿಂದೆ ಪ್ರತಿಭಟನಾಕಾರರನ್ನು ಭೇಟಿ ಮಾಡಿದ ನಂತರ ಪ್ರತಿಕ್ರಿಯಿಸಿರುವ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್‌, “ಜೂನ್ 15ರೊಳಗೆ ಪೊಲೀಸ್ ತನಿಖೆಯನ್ನು ಪೂರ್ಣಗೊಳಿಸಲಾಗುವುದು. ಆರೋಪಪಟ್ಟಿ ಸಲ್ಲಿಸಲಾಗುವುದು” ಎಂದು ತಿಳಿಸಿದ್ದಾರೆ.

ಬ್ರಿಜ್ ಭೂಷಣ್‌ ವಿರುದ್ಧದ ಆರೋಪಗಳಿಗೆ ಪುರಾವೆಯಾಗಿ ಫೋಟೋಗಳು, ಆಡಿಯೋ ಮತ್ತು ವಿಡಿಯೋಗಳನ್ನು ನೀಡುವಂತೆ ದೆಹಲಿ ಪೊಲೀಸರು ಇಬ್ಬರು ಮಹಿಳಾ ಕುಸ್ತಿಪಟುಗಳಿಗೆ ಕಳೆದ ವಾರ ಸೂಚಿಸಿದ್ದರು.

“ಉಸಿರಾಟವನ್ನು ಪರೀಕ್ಷಿಸುವ ನೆಪದಲ್ಲಿ ಬ್ರಿಜ್ ಭೂಷಣ್‌ ನಮ್ಮ ಎದೆಯನ್ನು ಮುಟ್ಟಿ, ಹೊಟ್ಟೆಗೆ ಕೈ ಹಾಕಿದ್ದರು” ಎಂದು ಇಬ್ಬರು ಅಥ್ಲೀಟ್‌ಗಳು ಆರೋಪಿಸಿದ್ದಾರೆ. ಪುರಾವೆ ನೀಡುವಂತೆ ಜೂನ್ 5 ರಂದು ಪೊಲೀಸರು ಇಬ್ಬರು ಕುಸ್ತಿಪಟುಗಳಿಗೆ ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...