Homeಮುಖಪುಟಸಮಸ್ಯೆ ಬಗೆಹರಿವವರೆಗೂ ಏಷ್ಯನ್ ಗೇಮ್ಸ್‌ನಲ್ಲಿ ಕುಸ್ತಿಪಟುಗಳು ಪಾಲ್ಗೊಳ್ಳುವುದಿಲ್ಲ: ಸಾಕ್ಷಿ ಮಲ್ಲಿಕ್

ಸಮಸ್ಯೆ ಬಗೆಹರಿವವರೆಗೂ ಏಷ್ಯನ್ ಗೇಮ್ಸ್‌ನಲ್ಲಿ ಕುಸ್ತಿಪಟುಗಳು ಪಾಲ್ಗೊಳ್ಳುವುದಿಲ್ಲ: ಸಾಕ್ಷಿ ಮಲ್ಲಿಕ್

- Advertisement -
- Advertisement -

“ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು, ಲೈಂಗಿಕ ಕಿರುಕುಳ ಪ್ರಕರಣ ಬಗೆಹರಿಯುವವರೆಗೂ ಮುಂಬರುವ ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸುವುದಿಲ್ಲ” ಎಂದು ಒಲಿಂಪಿಕ್ ಪದಕ ವಿಜೇತೆ ಸಾಕ್ಷಿ ಮಲಿಕ್ ಶನಿವಾರ ಹೇಳಿರುವುದಾಗಿ ‘ದಿ ಹಿಂದೂ’ ವರದಿ ಮಾಡಿದೆ.

ಹರಿಯಾಣದ ಸೋನಿಪತ್‌ನಲ್ಲಿ ಕುಸ್ತಿಪಟುಗಳು ವಿವಿಧ ಖಾಪ್ ನಾಯಕರೊಂದಿಗೆ ಶನಿವಾರ ಮಹಾಪಂಚಾಯತ್ ಆಯೋಜಿಸಿದ ನಂತರ ಈ ಹೇಳಿಕೆ ಹೊರಬಿದ್ದಿದೆ.

ಓರ್ವ ಅಪ್ರಾಪ್ತ ಕುಸ್ತಿಪಟು ಸೇರಿದಂತೆ ಏಳು ಮಂದಿ ಕುಸ್ತಿಗಳಿಗೆ ಬಿಜೆಪಿ ಸಂಸದ ಬ್ರಿಜ್‌ ಭೂಷಣ್ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಎರಡು ಪ್ರಕರಣ ದಾಖಲಾಗಿದೆ. ಬ್ರಿಜ್ ಭೂಷಣ್‌ನ ಬಂಧನಕ್ಕಾಗಿ ಕುಸ್ತಿಪಟುಗಳು ಪಟ್ಟು ಹಿಡಿದಿದ್ದಾರೆ.

“ದೂರನ್ನು ಹಿಂಪಡೆದು ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ಬ್ರಿಜ್ ಭೂಷಣ್‌ ಸಿಂಗ್ ನಮ್ಮ ಮೇಲೆ ಒತ್ತಡ ಹೇರುತ್ತಿದ್ದಾರೆ” ಎಂದು ಅವರು ಆರೋಪಿಸಿರುವುದಾಗಿ ‘ಹಿಂದೂಸ್ತಾನ್ ಟೈಮ್ಸ್’ ವರದಿ ತಿಳಿಸಿದೆ.

“ಬ್ರಿಜ್ ಭೂಷಣ್‌ ಪೊಲೀಸ್ ಕಸ್ಟಡಿಯಲ್ಲಿದ್ದಿದ್ದರೆ, ಆತ ಒತ್ತಡ ಹೇರಲು ಸಾಧ್ಯವಿಲ್ಲ” ಎಂದು ಸಾಕ್ಷಿ ಮಲ್ಲಿಕ್‌ ತಿಳಿಸಿದ್ದಾರೆ. “ಇಲ್ಲದಿದ್ದರೆ, ಸಂತ್ರಸ್ತರು ಒಬ್ಬೊಬ್ಬರಾಗಿಯೇ ಹೊರಹೋಗುತ್ತಾರೆ. ಆತ ಒಳಹೋಗುವವರೆಗೂ ಭಯದ ವಾತಾವರಣ ಉಳಿದಿರುತ್ತದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಬ್ರಿಜ್ ಭೂಷಣ್‌ ಕಿರುಕುಳ ನೀಡಿದ ವೇಳೆ ಕಿರಿಯ ಕುಸ್ತಿಪಟು ಅಪ್ರಾಪ್ತಳಾಗಿರಲಿಲ್ಲ ಎಂದು ಹೇಳಿಕೆಯನ್ನು ನೀಡುವಂತೆ ಅಪ್ರಾಪ್ತ ಕುಸ್ತಿಪಟುವಿನ ತಂದೆಗೆ ಒತ್ತಡ ಹೇರಲಾಗಿತ್ತು ಎಂದು ಒಲಿಂಪಿಕ್ ಪದಕ ವಿಜೇತೆ ದೂರಿದ್ದಾರೆ.

ಕಳೆದ ವಾರ ಅಪ್ರಾಪ್ತ ಬಾಲಕಿಯ ತಂದೆ ‘ದಿ ಹಿಂದೂ’ಗೆ ಪ್ರತಿಕ್ರಿಯಿಸಿ, “ನನ್ನ ಕುಟುಂಬ, ಮಗಳ ಬಗ್ಗೆ ಹೆದರಿ ಹೇಳಿಕೆ ಬದಲಿಸಲಾಗಿತ್ತು” ಎಂದು ತಿಳಿಸಿದ್ದರು.

ಒಲಿಂಪಿಕ್ ಪದಕ ವಿಜೇತ ಬಜರಂಗ್ ಪೂನಿಯಾ ಶನಿವಾರ ಪ್ರತಿಕ್ರಿಯಿಸಿ, “ಕುಸ್ತಿಪಟುವಿಗೆ ಏನಾದರೂ ತೊಂದರೆಯಾಗಿದ್ದರೆ, ಆಕೆಯ ವಯಸ್ಸು ಎಷ್ಟೇ ಇದ್ದರೂ ಬ್ರಿಜ್‌ ಭೂಷಣ್ ಅವರನ್ನು ಶಿಕ್ಷಿಸಬೇಕು” ಎಂದಿದ್ದಾರೆ.

ಇದನ್ನೂ ಓದಿರಿ: ‘ಫೋಟೋ ತೆಗೆಸಿಕೊಳ್ಳುವಾಗ ಬ್ರಿಜ್‌ಭೂಷಣ್ ನಿತಂಬ ಸ್ಪರ್ಶಿಸಿದ್ದ’: ಕುಸ್ತಿಪಟುವಿನ ಆರೋಪ ದೃಢೀಕರಿಸಿದ ಅಂತಾರಾಷ್ಟ್ರೀಯ ರೆಫರಿ

“ನಾವು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರನ್ನು ಭೇಟಿ ಮಾಡಿದ್ದೇವೆ. ನಮ್ಮ ಬೇಡಿಕೆಗಳನ್ನು ಪರಿಗಣಿಸುವುದಾಗಿ ಸರಕಾರ ಭರವಸೆ ನೀಡಿದೆ. ಅಗತ್ಯವಿದ್ದರೆ, ಜೂನ್ 15ರ ನಂತರ ನಾವು ಪ್ರತಿಭಟನೆ ಮಾಡುತ್ತೇವೆ. ನಾವು ನಮ್ಮ ಪ್ರತಿಭಟನೆಯನ್ನು ಪ್ರಾರಂಭಿಸಿದ ನಂತರ ಯಾವುದೇ ಕುಸ್ತಿಪಟುಗಳು ತಮ್ಮ ಸರ್ಕಾರಿ ಸೇವೆಗಳನ್ನು ಪುನರಾರಂಭಿಸುವುದಿಲ್ಲ. ನಾವು ನಮ್ಮ ಪ್ರತಿಭಟನೆಯನ್ನು ಪುನರಾರಂಭಿಸದಿದ್ದರೆ, ಎಲ್ಲಾ ಕುಸ್ತಿಪಟುಗಳು ತಮ್ಮ ಸರ್ಕಾರಿ ಉದ್ಯೋಗಗಳಿಗೆ ಮರಳುತ್ತಾರೆ” ಎಂದು ಸ್ಪಷ್ಟಪಡಿಸಿದ್ದಾರೆ.

ಕೆಲವು ದಿನಗಳ ಹಿಂದೆ ಪ್ರತಿಭಟನಾಕಾರರನ್ನು ಭೇಟಿ ಮಾಡಿದ ನಂತರ ಪ್ರತಿಕ್ರಿಯಿಸಿರುವ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್‌, “ಜೂನ್ 15ರೊಳಗೆ ಪೊಲೀಸ್ ತನಿಖೆಯನ್ನು ಪೂರ್ಣಗೊಳಿಸಲಾಗುವುದು. ಆರೋಪಪಟ್ಟಿ ಸಲ್ಲಿಸಲಾಗುವುದು” ಎಂದು ತಿಳಿಸಿದ್ದಾರೆ.

ಬ್ರಿಜ್ ಭೂಷಣ್‌ ವಿರುದ್ಧದ ಆರೋಪಗಳಿಗೆ ಪುರಾವೆಯಾಗಿ ಫೋಟೋಗಳು, ಆಡಿಯೋ ಮತ್ತು ವಿಡಿಯೋಗಳನ್ನು ನೀಡುವಂತೆ ದೆಹಲಿ ಪೊಲೀಸರು ಇಬ್ಬರು ಮಹಿಳಾ ಕುಸ್ತಿಪಟುಗಳಿಗೆ ಕಳೆದ ವಾರ ಸೂಚಿಸಿದ್ದರು.

“ಉಸಿರಾಟವನ್ನು ಪರೀಕ್ಷಿಸುವ ನೆಪದಲ್ಲಿ ಬ್ರಿಜ್ ಭೂಷಣ್‌ ನಮ್ಮ ಎದೆಯನ್ನು ಮುಟ್ಟಿ, ಹೊಟ್ಟೆಗೆ ಕೈ ಹಾಕಿದ್ದರು” ಎಂದು ಇಬ್ಬರು ಅಥ್ಲೀಟ್‌ಗಳು ಆರೋಪಿಸಿದ್ದಾರೆ. ಪುರಾವೆ ನೀಡುವಂತೆ ಜೂನ್ 5 ರಂದು ಪೊಲೀಸರು ಇಬ್ಬರು ಕುಸ್ತಿಪಟುಗಳಿಗೆ ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...