Homeಮುಖಪುಟಸಮಸ್ಯೆ ಬಗೆಹರಿವವರೆಗೂ ಏಷ್ಯನ್ ಗೇಮ್ಸ್‌ನಲ್ಲಿ ಕುಸ್ತಿಪಟುಗಳು ಪಾಲ್ಗೊಳ್ಳುವುದಿಲ್ಲ: ಸಾಕ್ಷಿ ಮಲ್ಲಿಕ್

ಸಮಸ್ಯೆ ಬಗೆಹರಿವವರೆಗೂ ಏಷ್ಯನ್ ಗೇಮ್ಸ್‌ನಲ್ಲಿ ಕುಸ್ತಿಪಟುಗಳು ಪಾಲ್ಗೊಳ್ಳುವುದಿಲ್ಲ: ಸಾಕ್ಷಿ ಮಲ್ಲಿಕ್

- Advertisement -
- Advertisement -

“ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು, ಲೈಂಗಿಕ ಕಿರುಕುಳ ಪ್ರಕರಣ ಬಗೆಹರಿಯುವವರೆಗೂ ಮುಂಬರುವ ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸುವುದಿಲ್ಲ” ಎಂದು ಒಲಿಂಪಿಕ್ ಪದಕ ವಿಜೇತೆ ಸಾಕ್ಷಿ ಮಲಿಕ್ ಶನಿವಾರ ಹೇಳಿರುವುದಾಗಿ ‘ದಿ ಹಿಂದೂ’ ವರದಿ ಮಾಡಿದೆ.

ಹರಿಯಾಣದ ಸೋನಿಪತ್‌ನಲ್ಲಿ ಕುಸ್ತಿಪಟುಗಳು ವಿವಿಧ ಖಾಪ್ ನಾಯಕರೊಂದಿಗೆ ಶನಿವಾರ ಮಹಾಪಂಚಾಯತ್ ಆಯೋಜಿಸಿದ ನಂತರ ಈ ಹೇಳಿಕೆ ಹೊರಬಿದ್ದಿದೆ.

ಓರ್ವ ಅಪ್ರಾಪ್ತ ಕುಸ್ತಿಪಟು ಸೇರಿದಂತೆ ಏಳು ಮಂದಿ ಕುಸ್ತಿಗಳಿಗೆ ಬಿಜೆಪಿ ಸಂಸದ ಬ್ರಿಜ್‌ ಭೂಷಣ್ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಎರಡು ಪ್ರಕರಣ ದಾಖಲಾಗಿದೆ. ಬ್ರಿಜ್ ಭೂಷಣ್‌ನ ಬಂಧನಕ್ಕಾಗಿ ಕುಸ್ತಿಪಟುಗಳು ಪಟ್ಟು ಹಿಡಿದಿದ್ದಾರೆ.

“ದೂರನ್ನು ಹಿಂಪಡೆದು ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ಬ್ರಿಜ್ ಭೂಷಣ್‌ ಸಿಂಗ್ ನಮ್ಮ ಮೇಲೆ ಒತ್ತಡ ಹೇರುತ್ತಿದ್ದಾರೆ” ಎಂದು ಅವರು ಆರೋಪಿಸಿರುವುದಾಗಿ ‘ಹಿಂದೂಸ್ತಾನ್ ಟೈಮ್ಸ್’ ವರದಿ ತಿಳಿಸಿದೆ.

“ಬ್ರಿಜ್ ಭೂಷಣ್‌ ಪೊಲೀಸ್ ಕಸ್ಟಡಿಯಲ್ಲಿದ್ದಿದ್ದರೆ, ಆತ ಒತ್ತಡ ಹೇರಲು ಸಾಧ್ಯವಿಲ್ಲ” ಎಂದು ಸಾಕ್ಷಿ ಮಲ್ಲಿಕ್‌ ತಿಳಿಸಿದ್ದಾರೆ. “ಇಲ್ಲದಿದ್ದರೆ, ಸಂತ್ರಸ್ತರು ಒಬ್ಬೊಬ್ಬರಾಗಿಯೇ ಹೊರಹೋಗುತ್ತಾರೆ. ಆತ ಒಳಹೋಗುವವರೆಗೂ ಭಯದ ವಾತಾವರಣ ಉಳಿದಿರುತ್ತದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಬ್ರಿಜ್ ಭೂಷಣ್‌ ಕಿರುಕುಳ ನೀಡಿದ ವೇಳೆ ಕಿರಿಯ ಕುಸ್ತಿಪಟು ಅಪ್ರಾಪ್ತಳಾಗಿರಲಿಲ್ಲ ಎಂದು ಹೇಳಿಕೆಯನ್ನು ನೀಡುವಂತೆ ಅಪ್ರಾಪ್ತ ಕುಸ್ತಿಪಟುವಿನ ತಂದೆಗೆ ಒತ್ತಡ ಹೇರಲಾಗಿತ್ತು ಎಂದು ಒಲಿಂಪಿಕ್ ಪದಕ ವಿಜೇತೆ ದೂರಿದ್ದಾರೆ.

ಕಳೆದ ವಾರ ಅಪ್ರಾಪ್ತ ಬಾಲಕಿಯ ತಂದೆ ‘ದಿ ಹಿಂದೂ’ಗೆ ಪ್ರತಿಕ್ರಿಯಿಸಿ, “ನನ್ನ ಕುಟುಂಬ, ಮಗಳ ಬಗ್ಗೆ ಹೆದರಿ ಹೇಳಿಕೆ ಬದಲಿಸಲಾಗಿತ್ತು” ಎಂದು ತಿಳಿಸಿದ್ದರು.

ಒಲಿಂಪಿಕ್ ಪದಕ ವಿಜೇತ ಬಜರಂಗ್ ಪೂನಿಯಾ ಶನಿವಾರ ಪ್ರತಿಕ್ರಿಯಿಸಿ, “ಕುಸ್ತಿಪಟುವಿಗೆ ಏನಾದರೂ ತೊಂದರೆಯಾಗಿದ್ದರೆ, ಆಕೆಯ ವಯಸ್ಸು ಎಷ್ಟೇ ಇದ್ದರೂ ಬ್ರಿಜ್‌ ಭೂಷಣ್ ಅವರನ್ನು ಶಿಕ್ಷಿಸಬೇಕು” ಎಂದಿದ್ದಾರೆ.

ಇದನ್ನೂ ಓದಿರಿ: ‘ಫೋಟೋ ತೆಗೆಸಿಕೊಳ್ಳುವಾಗ ಬ್ರಿಜ್‌ಭೂಷಣ್ ನಿತಂಬ ಸ್ಪರ್ಶಿಸಿದ್ದ’: ಕುಸ್ತಿಪಟುವಿನ ಆರೋಪ ದೃಢೀಕರಿಸಿದ ಅಂತಾರಾಷ್ಟ್ರೀಯ ರೆಫರಿ

“ನಾವು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರನ್ನು ಭೇಟಿ ಮಾಡಿದ್ದೇವೆ. ನಮ್ಮ ಬೇಡಿಕೆಗಳನ್ನು ಪರಿಗಣಿಸುವುದಾಗಿ ಸರಕಾರ ಭರವಸೆ ನೀಡಿದೆ. ಅಗತ್ಯವಿದ್ದರೆ, ಜೂನ್ 15ರ ನಂತರ ನಾವು ಪ್ರತಿಭಟನೆ ಮಾಡುತ್ತೇವೆ. ನಾವು ನಮ್ಮ ಪ್ರತಿಭಟನೆಯನ್ನು ಪ್ರಾರಂಭಿಸಿದ ನಂತರ ಯಾವುದೇ ಕುಸ್ತಿಪಟುಗಳು ತಮ್ಮ ಸರ್ಕಾರಿ ಸೇವೆಗಳನ್ನು ಪುನರಾರಂಭಿಸುವುದಿಲ್ಲ. ನಾವು ನಮ್ಮ ಪ್ರತಿಭಟನೆಯನ್ನು ಪುನರಾರಂಭಿಸದಿದ್ದರೆ, ಎಲ್ಲಾ ಕುಸ್ತಿಪಟುಗಳು ತಮ್ಮ ಸರ್ಕಾರಿ ಉದ್ಯೋಗಗಳಿಗೆ ಮರಳುತ್ತಾರೆ” ಎಂದು ಸ್ಪಷ್ಟಪಡಿಸಿದ್ದಾರೆ.

ಕೆಲವು ದಿನಗಳ ಹಿಂದೆ ಪ್ರತಿಭಟನಾಕಾರರನ್ನು ಭೇಟಿ ಮಾಡಿದ ನಂತರ ಪ್ರತಿಕ್ರಿಯಿಸಿರುವ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್‌, “ಜೂನ್ 15ರೊಳಗೆ ಪೊಲೀಸ್ ತನಿಖೆಯನ್ನು ಪೂರ್ಣಗೊಳಿಸಲಾಗುವುದು. ಆರೋಪಪಟ್ಟಿ ಸಲ್ಲಿಸಲಾಗುವುದು” ಎಂದು ತಿಳಿಸಿದ್ದಾರೆ.

ಬ್ರಿಜ್ ಭೂಷಣ್‌ ವಿರುದ್ಧದ ಆರೋಪಗಳಿಗೆ ಪುರಾವೆಯಾಗಿ ಫೋಟೋಗಳು, ಆಡಿಯೋ ಮತ್ತು ವಿಡಿಯೋಗಳನ್ನು ನೀಡುವಂತೆ ದೆಹಲಿ ಪೊಲೀಸರು ಇಬ್ಬರು ಮಹಿಳಾ ಕುಸ್ತಿಪಟುಗಳಿಗೆ ಕಳೆದ ವಾರ ಸೂಚಿಸಿದ್ದರು.

“ಉಸಿರಾಟವನ್ನು ಪರೀಕ್ಷಿಸುವ ನೆಪದಲ್ಲಿ ಬ್ರಿಜ್ ಭೂಷಣ್‌ ನಮ್ಮ ಎದೆಯನ್ನು ಮುಟ್ಟಿ, ಹೊಟ್ಟೆಗೆ ಕೈ ಹಾಕಿದ್ದರು” ಎಂದು ಇಬ್ಬರು ಅಥ್ಲೀಟ್‌ಗಳು ಆರೋಪಿಸಿದ್ದಾರೆ. ಪುರಾವೆ ನೀಡುವಂತೆ ಜೂನ್ 5 ರಂದು ಪೊಲೀಸರು ಇಬ್ಬರು ಕುಸ್ತಿಪಟುಗಳಿಗೆ ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...