Homeಮುಖಪುಟಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

- Advertisement -
- Advertisement -

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ (ಡಬ್ಲ್ಯೂಎಫ್‌ಐ) 50 ಕೆಜಿ ವಿಭಾಗಕ್ಕೆ ಮಾತ್ರ ಭಾಗವಹಿಸುವ ತನ್ನ ಹಿಂದಿನ ನಿಲುವನ್ನು ಹಿಂತೆಗೆದುಕೊಂಡ ನಂತರ ಈ ಬೆಳವಣಿಗೆ ನಡೆದಿದೆ.

ಶನಿವಾರ ಬೆಳಿಗ್ಗೆ ಅಧಿಕೃತ ತೂಕದ ಸಮಯದಲ್ಲಿ ನಾಟಕೀಯ ಈ ಬೆಳವಣಿಗೆ ನಡೆದಿದೆ. ಪ್ಯಾರಿಸ್ ಒಲಿಂಪಿಕ್ಸ್ ಸೇರಿದಂತೆ ತನ್ನ ಕೊನೆಯ ನಾಲ್ಕು ಅಂತರರಾಷ್ಟ್ರೀಯ ಸ್ಪರ್ಧೆಗಳಲ್ಲಿ ಆ ತೂಕದ ವರ್ಗದಲ್ಲಿ ಭಾಗವಹಿಸುವಿಕೆಯನ್ನು ಉಲ್ಲೇಖಿಸಿ, ವಿನೇಶ್ ಅವರಿಗೆ 50 ಕೆಜಿ ವಿಭಾಗದಲ್ಲಿ ಮಾತ್ರ ಸ್ಪರ್ಧಿಸಲು ಅವಕಾಶ ನೀಡಲಾಗುವುದು ಎಂದು ತಿಳಿಸಲಾಯಿತು.

ಆದರೆ ವಿನೇಶ್‌ ಈ ನಿರ್ಧಾರವನ್ನು ತೀವ್ರವಾಗಿ ಆಕ್ಷೇಪಿಸಿದರು. ಫೆಡರೇಶನ್ ತನ್ನ ಆಯ್ಕೆಯ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶವನ್ನು ನಿರಾಕರಿಸುವ ಮೂಲಕ ತಾರತಮ್ಯ ಮಾಡಿದೆ ಎಂದು ಆರೋಪಿಸಿದರು.

ಡಬ್ಲ್ಯೂಎಫ್‌ಐ ಅಧ್ಯಕ್ಷ ಸಂಜಯ್ ಸಿಂಗ್ ಮಧ್ಯಪ್ರವೇಶಿಸಿಸಿದ್ದರಿಂದ ವಿನೇಶ್ ಅವರಿಗೆ 53 ಕೆಜಿ ಟ್ರಯಲ್ಸ್‌ಗೆ ಪ್ರವೇಶಿಸಲು ಅವಕಾಶ ನೀಡುವ ಮೊದಲು ಈ ವಿಚಾರ ಉಲ್ಬಣಗೊಂಡಿತು ಎಂದು ಮೂಲಗಳು ತಿಳಿಸಿವೆ.

“ಅವರು ಆರೋಪಗಳನ್ನು ಹೊರಿಸಿ ತನ್ನ ತೂಕ ತೆಗೆದುಕೊಳ್ಳುವಂತೆ ಅಧಿಕಾರಿಗಳನ್ನು ಕೇಳಿದ ನಂತರ ನಾವು ಆಕೆಗೆ ಅವಕಾಶ ನೀಡಿದ್ದೇವೆ” ಎಂದು ಡಬ್ಲ್ಯೂಎಫ್‌ಐ ಅಧ್ಯಕ್ಷ ಸಂಜಯ್ ಸಿಂಗ್ ತಿಳಿಸಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

“ನಾವು ಯಾರಿಗೂ ತಾರತಮ್ಯ ಮಾಡಲು ಬಯಸುವುದಿಲ್ಲ. ಅವರು ಯಾವ ವಿಭಾಗದಲ್ಲಿ ಸ್ಪರ್ಧಿಸಲು ಬಯಸುತ್ತಾರೆ ಎಂಬುದನ್ನು ತಿಳಿಸಲಿಲ್ಲ, ಆದರೂ ಆಕೆಗೆ ಅವಕಾಶ ನೀಡಲಾಗಿದೆ” ಎಂದು ಹೇಳಿದರು.

ಬಳಿಕ, ವಿನೇಶ್ ಅವರು 53.9 ಕೆಜಿ ತೂಕದೊಂದಿಗೆ 53 ಕೆಜಿ ಡ್ರಾದಲ್ಲಿ ಸ್ಥಾನ ಪಡೆದರು. ಈಗ ಆಕೆಯ, ಮತ್ತೊಬ್ಬ ಪ್ರತಿಸ್ಪರ್ಧಿ ಆಂಟಿಮ್ ಪಂಗಲ್ ಮತ್ತು ಮೀನಾಕ್ಷಿ ಗೋಯತ್ ನಡುವೆ ಕುತೂಹಲಕಾರಿ ಹೋರಾಟಕ್ಕೆ ಕಾರಣವಾಗಿದೆ.

ತಯಾರಿ ನಡೆಸುವಾಗ ಮಾಧ್ಯಮಗಳೊಂದಿಗೆ ಸಂಕ್ಷಿಪ್ತವಾಗಿ ಮಾತನಾಡಿದ ವಿನೇಶ್, “ನಾನು ಕನಿಷ್ಠ ಎರಡು ವರ್ಷಗಳಿಂದ ಇಲ್ಲಿದ್ದೇನೆ” ಎಂದು ಹೇಳಿದರು.

ಈ ಬೆಳವಣಿಗೆಯು ಡಬ್ಲ್ಯೂಎಫ್‌ಐಗೆ ಗಮನಾರ್ಹ ಹಿನ್ನಡೆಯಾಗಿದ್ದು, ವಿನೇಶ್ ಅವರನ್ನು 50 ಕೆಜಿ ವಿಭಾಗಕ್ಕೆ ಮಾತ್ರ ಪರಿಗಣಿಸಲಾಗುವುದು ಎಂದು ಹೇಳಿತ್ತು.

ವಿನೇಶ್‌ ಇತ್ತೀಚಿನ ಅಂತರರಾಷ್ಟ್ರೀಯ ಸ್ಪರ್ಧೆಗಳಲ್ಲಿ ಆ ವಿಭಾಗದಲ್ಲಿ ನಿರಂತರವಾಗಿ ಸ್ಪರ್ಧಿಸಿದ್ದಾರೆ. ಟ್ರಯಲ್ಸ್‌ಗಾಗಿ ವಿಭಾಗಗಳನ್ನು ಬದಲಾಯಿಸುವ ಬಗ್ಗೆ ಡಬ್ಲ್ಯೂಎಫ್‌ಐಗೆ ಔಪಚಾರಿಕವಾಗಿ ತಿಳಿಸಿಲ್ಲ ಎಂಬುದು ಫೆಡರೇಶನ್‌ನ ವಾದವಾಗಿತ್ತು.

ದೆಹಲಿ ಹೈಕೋರ್ಟ್ ವಿನೇಶ್ ಅವರನ್ನು “ಐಕಾನಿಕ್ ಆಟಗಾರ್ತಿ” ಎಂದು ಪರಿಗಣಿಸಲು ಮತ್ತು ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಭಾಗವಹಿಸಲು ಅವಕಾಶ ನೀಡುವಂತೆ ಡಬ್ಲ್ಯೂಎಫ್‌ಐಗೆ ನಿರ್ದೇಶನ ನೀಡಿದ ನಂತರ ಈ ವಿಷಯವು ಈಗಾಗಲೇ ಸಾಕಷ್ಟು ವಿವಾದವನ್ನು ಸೃಷ್ಟಿಸಿತ್ತು.

ವಿನೇಶ್ ತಮ್ಮ ವೃತ್ತಿಜೀವನದಲ್ಲಿ 53 ಕೆಜಿ ಸೇರಿದಂತೆ ಬಹು ತೂಕ ವಿಭಾಗಗಳಲ್ಲಿ ಸ್ಪರ್ಧಿಸಿದ್ದಾರೆ. ಆ ವಿಭಾಗದಲ್ಲಿ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ಉತ್ಸುಕರಾಗಿದ್ದರು. ಟ್ರಯಲ್ಸ್‌ನ ವಿಜೇತರು ಈ ವರ್ಷದ ಕೊನೆಯಲ್ಲಿ ಏಷ್ಯನ್ ಗೇಮ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಹಕ್ಕನ್ನು ಗಳಿಸುತ್ತಾರೆ.

ವಿನೇಶ್ ಅವರನ್ನು 53 ಕೆಜಿ ಡ್ರಾದಲ್ಲಿ ಸೇರಿಸಿಕೊಳ್ಳುವ ಡಬ್ಲ್ಯೂಎಫ್‌ಐ ನಿರ್ಧಾರವು ಗಂಟೆಗಳ ಅನಿಶ್ಚಿತತೆಯನ್ನು ಕೊನೆಗೊಳಿಸಿತು. ಭಾರತದ ಅತ್ಯಂತ ಪ್ರಸಿದ್ಧ ಮಹಿಳಾ ಕುಸ್ತಿಪಟುಗಳಲ್ಲಿ ಒಬ್ಬರು ಏಷ್ಯನ್ ಗೇಮ್ಸ್‌ನಲ್ಲಿ ಸ್ಥಾನ ಪಡೆಯುವ ಸ್ಪರ್ಧೆಯಲ್ಲಿ ಉಳಿಯುವಂತೆ ಖಚಿತಪಡಿಸಿತು.

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಹಿನ್ನಡೆ

ಪ್ಯಾರಿಸ್ ಒಲಿಂಪಿಕ್ಸ್ 2024ರಲ್ಲಿ ವಿನೇಶ್ ಫೋಗಟ್ ಅವರು ಮಹಿಳೆಯರ 50 ಕೆಜಿ ಫ್ರೀಸ್ಟೈಲ್ ಕುಸ್ತಿ ವಿಭಾಗದಲ್ಲಿ ಸ್ಪರ್ಧಿಸಿದ್ದರು. ತಮ್ಮ ಅಪ್ರತಿಮ ಪ್ರದರ್ಶನದ ಮೂಲಕ ವಿಶ್ವ ಚಾಂಪಿಯನ್ ಜಪಾನಿನ ಯುಯಿ ಸುಸಾಕಿ ಸೇರಿದಂತೆ ಬಲಿಷ್ಠ ಸ್ಪರ್ಧಿಗಳನ್ನು ಸೋಲಿಸಿ, ಒಲಿಂಪಿಕ್ಸ್ ಇತಿಹಾಸದಲ್ಲೇ ಕುಸ್ತಿ ವಿಭಾಗದಲ್ಲಿ ಫೈನಲ್ ತಲುಪಿದ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

ಆದರೆ, ಚಿನ್ನದ ಪದಕದ ಐತಿಹಾಸಿಕ ಪಂದ್ಯಕ್ಕೆ ಕೆಲವೇ ಗಂಟೆಗಳ ಮುನ್ನ ನಡೆದ ಕಡ್ಡಾಯ ತೂಕ ತಪಾಸಣೆಯಲ್ಲಿ ಅವರು ನಿಗದಿತ 50 ಕೆಜಿಗಿಂತ ಕೇವಲ 100 ಗ್ರಾಂ ಹೆಚ್ಚಿರುವುದು ಕಂಡುಬಂದಿತು. ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ (ಯುಡಬ್ಲ್ಯೂಡಬ್ಲ್ಯೂ) ನಿಯಮಗಳ ಪ್ರಕಾರ, ತೂಕದ ಮಿತಿಯನ್ನು ಮೀರಿದ್ದಕ್ಕಾಗಿ ಅವರನ್ನು ಸ್ಪರ್ಧೆಯಿಂದ ತಕ್ಷಣವೇ ಅನರ್ಹಗೊಳಿಸಲಾಯಿತು. ನಿಯಮಾವಳಿಗಳ ಪ್ರಕಾರ ಅವರಿಗೆ ಕೊನೆಯ ಸ್ಥಾನ ನೀಡಲಾಯಿತು.

ಈ ತೂಕವನ್ನು ಕಡಿಮೆ ಮಾಡಲು ವಿನೇಶ್ ಮತ್ತು ಅವರ ತರಬೇತುದಾರರ ತಂಡ ಇಡೀ ರಾತ್ರಿ ನೀರು, ಆಹಾರ ತ್ಯಜಿಸಿ, ತಲೆಗೂದಲನ್ನು ಕತ್ತರಿಸಿಕೊಳ್ಳುವ ಮೂಲಕ ತೀವ್ರ ಪ್ರಯತ್ನ ನಡೆಸಿದ್ದರು. ಆದರೂ ಕೇವಲ 100 ಗ್ರಾಂ ವ್ಯತ್ಯಾಸದಿಂದಾಗಿ ಅವರಿಗೆ ಖಚಿತವಾಗಿದ್ದ ಒಲಿಂಪಿಕ್ಸ್ ಪದಕ (ಕನಿಷ್ಠ ಬೆಳ್ಳಿ) ಕೈತಪ್ಪಿಹೋಯಿತು. ಈ ತೀವ್ರ ಆಘಾತದ ಬೆನ್ನಲ್ಲೇ ಅವರು ಕುಸ್ತಿ ಜೀವನಕ್ಕೆ ನಿವೃತ್ತಿ ಘೋಷಿಸಿದರು.

ರಾಜಕೀಯ ಪ್ರವೇಶ

ಒಲಿಂಪಿಕ್ಸ್‌ನಿಂದ ಭಾರತಕ್ಕೆ ಮರಳಿದ ನಂತರ ವಿನೇಶ್ ಅವರಿಗೆ ದೇಶಾದ್ಯಂತ ಭವ್ಯ ಸ್ವಾಗತ ದೊರೆಯಿತು. ಹರಿಯಾಣದ ಖಾಪ್ ಪಂಚಾಯತ್‌ಗಳು ಮತ್ತು ಸಾರ್ವಜನಿಕರು ಅವರನ್ನು ಬೆಂಬಲಿಸಿ ಗೌರವಿಸಿದರು. ಈ ಸಾಮಾಜಿಕ ಬೆಂಬಲದ ನಡುವೆ ಅವರು ತಮ್ಮ ಜೀವನದ ಹೊಸ ಅಧ್ಯಾಯವನ್ನು ಆರಂಭಿಸಿದರು.

ಸೆಪ್ಟೆಂಬರ್ 2024ರಲ್ಲಿ ವಿನೇಶ್ ಫೋಗಟ್ ಅವರು ತಮ್ಮ ರೈಲ್ವೆ ಇಲಾಖೆಯ ಉದ್ಯೋಗಕ್ಕೆ ರಾಜೀನಾಮೆ ನೀಡಿ, ಸಹ-ಕುಸ್ತಿಪಟು ಬಜರಂಗ್ ಪುನಿಯಾ ಅವರೊಂದಿಗೆ ಅಧಿಕೃತವಾಗಿ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ (ಐಎನ್‌ಸಿ) ಪಕ್ಷವನ್ನು ಸೇರಿದರು.

ಅಕ್ಟೋಬರ್ 2024ರಲ್ಲಿ ನಡೆದ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಅವರನ್ನು ಜಿಂದ್ ಜಿಲ್ಲೆಯ ಜುಲಾನಾ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸಿತು. ತಮ್ಮ ಮೊದಲ ಚುನಾವಣೆಯಲ್ಲೇ ವಿನೇಶ್ ಫೋಗಟ್ ಭರ್ಜರಿ ಜಯ ಸಾಧಿಸಿದರು. ಅವರು ಬಿಜೆಪಿಯ ಯೋಗೇಶ್ ಬೈರಾಗಿ ಅವರ ವಿರುದ್ಧ 6,015 ಮತಗಳ ಅಂತರದಿಂದ ಗೆಲುವು ಸಾಧಿಸಿ, ಜುಲಾನಾ ಕ್ಷೇತ್ರದ ಶಾಸಕಿಯಾಗಿ ಆಯ್ಕೆಯಾದರು. ವಿಶೇಷವೆಂದರೆ, ಕಾಂಗ್ರೆಸ್ ಪಕ್ಷವು ಈ ಕ್ಷೇತ್ರದಲ್ಲಿ ಬರೋಬ್ಬರಿ 19 ವರ್ಷಗಳ ನಂತರ (2005ರ ಬಳಿಕ) ಮೊದಲ ಬಾರಿಗೆ ವಿಜಯ ಪತಾಕೆ ಹಾರಿಸಿತ್ತು.

ಪ್ರಸ್ತುತ, ವಿನೇಶ್ ಫೋಗಟ್ ಅವರು ಹರಿಯಾಣ ವಿಧಾನಸಭೆಯ ಸಕ್ರಿಯ ಸದಸ್ಯೆಯಾಗಿದ್ದು, ಕ್ರೀಡಾಪಟುಗಳು ಮತ್ತು ಸಾಮಾನ್ಯ ಜನರ ಹಕ್ಕುಗಳಿಗಾಗಿ ರಾಜಕೀಯ ರಂಗದಲ್ಲಿ ತಮ್ಮ ಹೋರಾಟವನ್ನು ಮುಂದುವರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...