Homeಮುಖಪುಟಲೈಂಗಿಕ ಕಿರುಕುಳ ಆರೋಪಿ ಬ್ರಿಜ್ ಭೂಷಣ್ ಮನೆಯಲ್ಲೇ ಕುಸ್ತಿ ಒಕ್ಕೂಟದ ಕಚೇರಿ : ವಿವಾದದ ಬಳಿಕ...

ಲೈಂಗಿಕ ಕಿರುಕುಳ ಆರೋಪಿ ಬ್ರಿಜ್ ಭೂಷಣ್ ಮನೆಯಲ್ಲೇ ಕುಸ್ತಿ ಒಕ್ಕೂಟದ ಕಚೇರಿ : ವಿವಾದದ ಬಳಿಕ ಸ್ಥಳಾಂತರಕ್ಕೆ ನಿರ್ಧಾರ

- Advertisement -
- Advertisement -

ಕೇಂದ್ರ ಕ್ರೀಡಾ ಸಚಿವಾಲಯದಿಂದ ಅಮಾನತುಗೊಂಡಿರುವ ಭಾರತೀಯ ಕುಸ್ತಿ ಒಕ್ಕೂಟವು, ಮುಂದಿನ ತಿಂಗಳ ಆರಂಭದಲ್ಲಿ ದೆಹಲಿಯ ಕನ್ನಾಟ್ ಪ್ರದೇಶಕ್ಕೆ ತನ್ನ ಕಚೇರಿಯನ್ನು ಸ್ಥಳಾಂತರಿಸುವುದಾಗಿ ತಿಳಿಸಿದೆ.

ಕುಸ್ತಿ ಪಟುಗಳ ಮೇಲಿನ ಲೈಂಗಿಕ ಕಿರುಕುಳದ ಆರೋಪಿ, ರಾಷ್ಟ್ರೀಯ ಕುಸ್ತಿ ಒಕ್ಕೂಟದ ಮಾಜಿ ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ 21, ಅಶೋಕ ರಸ್ತೆಯಲ್ಲಿರುವ ಮನೆಯಿಂದಲೇ ಕಚೇರಿ ಕಾರ್ಯ ನಿರ್ವಹಿಸುತ್ತಿದೆ ಎಂದು ವರದಿಯಾದ ಬಳಿಕ ಸ್ಥಳಾಂತರಕ್ಕೆ ನಿರ್ಧರಿಸಲಾಗಿದೆ.

ಬ್ರಿಜ್ ಭೂಷಣ್ ಸಿಂಗ್ ಮನೆಯಿಂದಲೇ ಕಚೇರಿ ಕಾರ್ಯನಿರ್ವಹಿಸುತ್ತಿದೆ ಎಂಬುವುದನ್ನು ಕುಸ್ತಿ ಒಕ್ಕೂಟದ ಅಧಿಕಾರಿಯೊಬ್ಬರು ಒಪ್ಪಿಕೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಬ್ರಿಜ್ ಭೂಷಣ್ ಸಿಂಗ್ ಮನೆಯಿಂದಲೇ ಕುಸ್ತಿ ಒಕ್ಕೂಟದ ಕಚೇರಿ ಕಾರ್ಯ ನಿರ್ವಹಿಸುತ್ತಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಶನಿವಾರ (ಜ.25) ವರದಿ ಮಾಡಿತ್ತು. ಆ ಬಳಿಕ ಅದು ದೇಶದಾದ್ಯಂತ ದೊಡ್ಡ ಮಟ್ಟದಲ್ಲಿ ಸುದ್ದಿಯಾಯಿತು.

ರಾಷ್ಟ್ರೀಯ ಕುಸ್ತಿ ಒಕ್ಕೂಟದ ಮಾಜಿ ಅಧ್ಯಕ್ಷರಾಗಿರುವ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ವಿರುದ್ದ, ಮಹಿಳಾ ಕುಸ್ತಿ ಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಅರೋಪವಿದೆ. 2023ರಲ್ಲಿ ದೇಶದ ಪ್ರಮುಖ ಕುಸ್ತಿಪಟುಗಳು ಬ್ರಿಜ್ ಭೂಷಣ್ ವಿರುದ್ದ ಬೀದಿಗಳಿದು ಪ್ರತಿಭಟಿಸಿದ್ದರು.

ಹಲವಾರು ಮಹಿಳಾ ಕುಸ್ತಿಪಟುಗಳ ದೂರುಗಳ ಆಧಾರದ ಮೇಲೆ ಸಿಂಗ್ ವಿರುದ್ಧ ಆರೋಪಗಳನ್ನು ರೂಪಿಸಲು ದೆಹಲಿ ನ್ಯಾಯಾಲಯವು ಮೇ 10, 2024 ರಂದು ಆದೇಶಿಸಿದೆ. ಡಿಸೆಂಬರ್ 2023ರಲ್ಲಿ ಕುಸ್ತಿ ಫೆಡರೇಶನ್ ಅನ್ನು ಕೇಂದ್ರ ಕ್ರೀಡಾ ಸಚಿವಾಲಯ ಅಮಾನತುಗೊಳಿಸಿದೆ.

ಪ್ರಸ್ತುತ ಒಕ್ಕೂಟದ ಮುಖ್ಯಸ್ಥರಾಗಿರುವ ಸಂಜಯ್ ಸಿಂಗ್, ಹರಿ ನಗರದಲ್ಲಿ ಕಚೇರಿ ನಿರ್ವಹಿಸುತ್ತಿದ್ದು, ಫೆಬ್ರವರಿ 2ರ ಬಸಂತ್ ಪಂಚಮಿಯಂದು ಕನ್ನಾಟ್ ಪ್ರದೇಶಕ್ಕೆ ಸ್ಥಳಾಂತರಿಸಲು ಯೋಜಿಸುತ್ತಿರುವುದಾಗಿ ಹೇಳಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ಗಂಭೀರ ಆರೋಪಗಳನ್ನು ಹೊತ್ತು ಹುದ್ದೆಯಿಂದ ಕೆಳಗಿಳಿದ ಬಳಿಕವೂ ಬ್ರಿಜ್ ಭೂಷಣ್ ಸಿಂಗ್ ಕುಸ್ತಿ ಒಕ್ಕೂಟದ ಮೇಲೆ ತನ್ನ ಹಿಡಿತ ಸಾಧಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ” “ನಾನು ಬಹಳ ಸಮಯದಿಂದ ಕುಸ್ತಿಯಲ್ಲಿ ತೊಡಗಿಸಿಕೊಂಡಿದ್ದೇನೆ. ಕುಸ್ತಿಪಟುಗಳು ಮತ್ತು ಈ ಕ್ರೀಡೆಗೆ ಸಂಬಂಧಿಸಿದ ಜನರು 21, ಅಶೋಕ ರಸ್ತೆಗೆ ಬರುತ್ತಿದ್ದಾರೆ. ಕ್ರೀಡಾಪಟುಗಳನ್ನು ಭೇಟಿ ಮಾಡಲು ನನಗೆ ಯಾವುದೇ ನಿರ್ಬಂಧವಿಲ್ಲ” ಎಂದಿದ್ದಾರೆ.

ಅಯೋಧ್ಯೆ ರಾಮ ಮಂದಿರ ನಿರ್ಮಾಣದ ಹಿಂದೆಯಿದ್ದ ಹಲವರಿಗೆ ‘ಪದ್ಮ ಪ್ರಶಸ್ತಿ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....