Homeಮುಖಪುಟಬಿಜೆಪಿ ಪಕ್ಷದ ಚುನಾವಣಾ ಚಿಹ್ನೆಯನ್ನು ಬರೆಯಿರಿ. ಮಣಿಪುರ ಪ್ರಶ್ನೆಪತ್ರಿಕೆಗೆ ವ್ಯಾಪಕ ವಿರೋಧ

ಬಿಜೆಪಿ ಪಕ್ಷದ ಚುನಾವಣಾ ಚಿಹ್ನೆಯನ್ನು ಬರೆಯಿರಿ. ಮಣಿಪುರ ಪ್ರಶ್ನೆಪತ್ರಿಕೆಗೆ ವ್ಯಾಪಕ ವಿರೋಧ

- Advertisement -
- Advertisement -

ಬಿಜೆಪಿ ಪಕ್ಷದ ಚುನಾವಣಾ ಚಿಹ್ನೆಯನ್ನು ಬರೆಯಿರಿ, ರಾಷ್ಟ್ರ ನಿರ್ಮಾಣದಲ್ಲಿ ನೆಹರೂರವರ ನಾಲ್ಕು ಮಿತಿಗಳನ್ನು ಹೆಸರಿಸಿ? ಈ ಪ್ರಶ್ನೆಗಳು ಬಿಜೆಪಿ ಅಥವಾ ಆರ್‌ಎಸ್‌ಎಸ್‌ ವರ್ಕಶಾಪ್‌ನಲ್ಲಿ ಕೇಳಿಬಂದವು ಅಲ್ಲ. ಬದಲಿಗೆ ಮಣಿಪುರದ ದ್ವಿತೀಯ ಪಿಯುಸಿ ಪೊಲಿಟಿಕಲ್ ಸೈನ್ಸ್‌ ಪ್ರಶ್ನೆಪತ್ರಿಕೆಯಲ್ಲಿರುವವು ಎಂದರೆ ನೀವು ನಂಬಲೇಬೇಕು.

ಹೌದು ಹೀಗೊಂದು ದೊಡ್ಡ ರಾದ್ಧಾಂತ ಮಣಿಪುರ ರಾಜ್ಯದಲ್ಲಿ ಉದ್ಭವಿಸಿದೆ. ಅಲ್ಲಿನ ದ್ವಿತೀಯ ಪಿ.ಯು.ಸಿಯ ಪ್ರಶ್ನೆ ಪತ್ರಿಕೆಯೊಂದು ಸಾಮಾಜಿಕ ತಾಲತಾಣದಲ್ಲಿ ವೈರಲ್‌ ಆಗಿದ್ದು, ಅಲ್ಲಿನ ಹಲವು ಪ್ರಶ್ನೆಗಳು ನೆಹರೂವನ್ನು ತೆಗಳಲು, ಬಿಜೆಪಿಯನ್ನು ಹೊಗಳಲು ಬಳಕೆಯಾಗಿದ್ದು ಎಲ್ಲರ ಕೆಂಗಣ್ಣಿಗೆ ಗುರಿಯಾಗಿವೆ.

ಪ್ರಾದೇಶಿಕ ಅಸ್ಮಿತೆಯು ರಾಷ್ಟ್ರದ ಏಕತೆಗೆ ಹೇಗೆ ಸವಾಲಾಗಬಹುದು ವಿವರಿಸಿ ಎಂಬಂತಹ ಪ್ರಶ್ನೆಗಳು ಪ್ರಶ್ನೆ ಪತ್ರಿಕೆಯಲ್ಲಿ ತೂರಿಕೊಂಡ ಕಾರಣ ಇದು ಪಕ್ಕಾ ರಾಜಕೀಯ ಉದ್ದೇಶದಿಂದ ರಚಿಸಲಾಗಿದೆ ಎಂಬ ಆರೋಪ ದೊಡ್ಡ ಮಟ್ಟದಲ್ಲಿ ಕೇಳಿಬಂದಿದೆ.

ದಿ ಟೈಮ್ಸ್‌ ಆಫ್‌ ಇಂಡಿಯಾ ಪತ್ರಿಕೆಯು ಈ ಕುರಿತು ಮಣಿಪುರದ ಹಲವು ವಿರೋಧ ಪಕ್ಷದ ಮುಖಂಡರ ಅಭಿಪ್ರಾಯಗಳನ್ನು ಸಂಗ್ರಹಿಸಿ ವರದಿ ಪ್ರಕಟಿಸಿದೆ. ಅದರಂತೆ, “ಅಂತಹ ಪ್ರಶ್ನೆಗಳು ವಿದ್ಯಾರ್ಥಿಗಳಲ್ಲಿ ಒಂದು ನಿರ್ದಿಷ್ಟ ರೀತಿಯ ರಾಜಕೀಯ ಮನಸ್ಥಿತಿಯನ್ನು ಹುಟ್ಟುಹಾಕುವ ಪ್ರಯತ್ನವಾಗಿವೆ” ಎಂದು ಕಾಂಗ್ರೆಸ್ ಶಾಸಕ ಮತ್ತು ಮಣಿಪುರ ಪಿಸಿಸಿ ವಕ್ತಾರ ಖಾಯ್ ಜಾಯ್ಕಿಶನ್ ಆರೋಪಿಸಿದ್ದಾರೆ.

ಶಿಕ್ಷಣವನ್ನು ರಾಜಕೀಯಗೊಳಿಸುವ ಕ್ರಿಯೆ: ಕಾಂಗ್ರೆಸ್ ನಾಯಕ

ಕೌನ್ಸಿಲ್ ಆಫ್ ಹೈಯರ್ ಸೆಕೆಂಡರಿ ಎಜುಕೇಶನ್ ಮಣಿಪುರ (ಕೋಹೆಸ್ಸೆಮ್) ಅಧ್ಯಕ್ಷ ಎಲ್ ಮಹೇಂದ್ರ ಸಿಂಗ್ ಅವರು “ಈ ವಿಷಯದ ಬಗ್ಗೆ ಪರೀಕ್ಷಾ ನಿಯಂತ್ರಕರೊಂದಿಗೆ ಮಾತನಾಡಿದ್ದೇನೆ ಮತ್ತು ಪ್ರಶ್ನೆಗಳನ್ನು ‘ಪಾರ್ಟಿ ಸಿಸ್ಟಮ್ ಇನ್ ಇಂಡಿಯಾ’ ಅಧ್ಯಾಯದಿಂದ ಹೊಂದಿಸಲಾಗಿದೆ ಎಂದು ತಿಳಿಸಲಾಯಿತು, ಇದು ಒಂದು ಶಿಕ್ಷಣವನ್ನು ರಾಜಕೀಯಗೊಳಿಸುವ ಕ್ರಿಯೆ” ಎಂದು ಹೇಳಿದ್ದಾರೆ.

ಸಿಪಿಐ ರಾಷ್ಟ್ರೀಯ ಕಾರ್ಯನಿರ್ವಾಹಕ ಸದಸ್ಯ ಮತ್ತು ಮಾಜಿ ಶಾಸಕ ಮೊಯಿರಾಂಗ್ಥೆಮ್ ನಾರಾ, “ಅಂತಹ ಪ್ರಶ್ನೆಗಳನ್ನು ಹೊಂದಿಸುವ ವಿಧಾನವು ರಾಜಕೀಯ ಸಂಬಂಧವನ್ನು ಮಾತ್ರ ಸೂಚಿಸುತ್ತದೆ” ಎಂದು ಹೇಳಿದ್ದಾರೆ.

ಇನ್ನು ಬಹಳಷ್ಟು ಜನ ತಮ್ಮ ರಾಜಕೀಯ ಅಜೆಂಡಾವನ್ನು ಮಕ್ಕಳ ಮೇಲೆ ಹೇರಲು ಶಿಕ್ಷಣ ವ್ಯವಸ್ಥೆಯನ್ನು ಬಳಸಿಕೊಳ್ಳುವುದು ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಸರಿಯಾದುದ್ದಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆದಾಗ್ಯೂ, ಮಣಿಪುರ ಬಿಜೆಪಿ ಘಟಕದ ಪ್ರಧಾನ ಕಾರ್ಯದರ್ಶಿ ಎನ್ ನಿಂಬಸ್ ಸಿಂಗ್, “ರಾಷ್ಟ್ರ ನಿರ್ಮಾಣದಲ್ಲಿ ನೆಹರುರವರ ನಾಲ್ಕು ಮಿತಿಗಳನ್ನು ಹೆಸರಿಸಿ? ಎಂಬುದು ಅವರು ದೇಶದ ಮೊದಲ ಪ್ರಧಾನ ಮಂತ್ರಿಯಾಗಿದ್ದರಿಂದ ಸಂಬಂಧಿತ ಪ್ರಶ್ನೆಯಾಗಿದೆ. ಭಾರತವನ್ನು ನಿರ್ಮಿಸುವಲ್ಲಿ ನೆಹರೂ ಪಾತ್ರವಹಿಸಿದ್ದರಿಂದ, ಅವರ ನಾಯಕತ್ವದಲ್ಲಿ ವ್ಯವಸ್ಥೆಯಲ್ಲಿ ಸಕಾರಾತ್ಮಕ ಮತ್ತು ನಕರಾತ್ಮಕ ಅಂಶಗಳು ಇದ್ದಿರಬಹುದು” ಎಂದು ಸಮರ್ಥಿಸಿಕೊಂಡಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...