Homeಮುಖಪುಟಬಿಜೆಪಿ ಪಕ್ಷದ ಚುನಾವಣಾ ಚಿಹ್ನೆಯನ್ನು ಬರೆಯಿರಿ. ಮಣಿಪುರ ಪ್ರಶ್ನೆಪತ್ರಿಕೆಗೆ ವ್ಯಾಪಕ ವಿರೋಧ

ಬಿಜೆಪಿ ಪಕ್ಷದ ಚುನಾವಣಾ ಚಿಹ್ನೆಯನ್ನು ಬರೆಯಿರಿ. ಮಣಿಪುರ ಪ್ರಶ್ನೆಪತ್ರಿಕೆಗೆ ವ್ಯಾಪಕ ವಿರೋಧ

- Advertisement -
- Advertisement -

ಬಿಜೆಪಿ ಪಕ್ಷದ ಚುನಾವಣಾ ಚಿಹ್ನೆಯನ್ನು ಬರೆಯಿರಿ, ರಾಷ್ಟ್ರ ನಿರ್ಮಾಣದಲ್ಲಿ ನೆಹರೂರವರ ನಾಲ್ಕು ಮಿತಿಗಳನ್ನು ಹೆಸರಿಸಿ? ಈ ಪ್ರಶ್ನೆಗಳು ಬಿಜೆಪಿ ಅಥವಾ ಆರ್‌ಎಸ್‌ಎಸ್‌ ವರ್ಕಶಾಪ್‌ನಲ್ಲಿ ಕೇಳಿಬಂದವು ಅಲ್ಲ. ಬದಲಿಗೆ ಮಣಿಪುರದ ದ್ವಿತೀಯ ಪಿಯುಸಿ ಪೊಲಿಟಿಕಲ್ ಸೈನ್ಸ್‌ ಪ್ರಶ್ನೆಪತ್ರಿಕೆಯಲ್ಲಿರುವವು ಎಂದರೆ ನೀವು ನಂಬಲೇಬೇಕು.

ಹೌದು ಹೀಗೊಂದು ದೊಡ್ಡ ರಾದ್ಧಾಂತ ಮಣಿಪುರ ರಾಜ್ಯದಲ್ಲಿ ಉದ್ಭವಿಸಿದೆ. ಅಲ್ಲಿನ ದ್ವಿತೀಯ ಪಿ.ಯು.ಸಿಯ ಪ್ರಶ್ನೆ ಪತ್ರಿಕೆಯೊಂದು ಸಾಮಾಜಿಕ ತಾಲತಾಣದಲ್ಲಿ ವೈರಲ್‌ ಆಗಿದ್ದು, ಅಲ್ಲಿನ ಹಲವು ಪ್ರಶ್ನೆಗಳು ನೆಹರೂವನ್ನು ತೆಗಳಲು, ಬಿಜೆಪಿಯನ್ನು ಹೊಗಳಲು ಬಳಕೆಯಾಗಿದ್ದು ಎಲ್ಲರ ಕೆಂಗಣ್ಣಿಗೆ ಗುರಿಯಾಗಿವೆ.

ಪ್ರಾದೇಶಿಕ ಅಸ್ಮಿತೆಯು ರಾಷ್ಟ್ರದ ಏಕತೆಗೆ ಹೇಗೆ ಸವಾಲಾಗಬಹುದು ವಿವರಿಸಿ ಎಂಬಂತಹ ಪ್ರಶ್ನೆಗಳು ಪ್ರಶ್ನೆ ಪತ್ರಿಕೆಯಲ್ಲಿ ತೂರಿಕೊಂಡ ಕಾರಣ ಇದು ಪಕ್ಕಾ ರಾಜಕೀಯ ಉದ್ದೇಶದಿಂದ ರಚಿಸಲಾಗಿದೆ ಎಂಬ ಆರೋಪ ದೊಡ್ಡ ಮಟ್ಟದಲ್ಲಿ ಕೇಳಿಬಂದಿದೆ.

ದಿ ಟೈಮ್ಸ್‌ ಆಫ್‌ ಇಂಡಿಯಾ ಪತ್ರಿಕೆಯು ಈ ಕುರಿತು ಮಣಿಪುರದ ಹಲವು ವಿರೋಧ ಪಕ್ಷದ ಮುಖಂಡರ ಅಭಿಪ್ರಾಯಗಳನ್ನು ಸಂಗ್ರಹಿಸಿ ವರದಿ ಪ್ರಕಟಿಸಿದೆ. ಅದರಂತೆ, “ಅಂತಹ ಪ್ರಶ್ನೆಗಳು ವಿದ್ಯಾರ್ಥಿಗಳಲ್ಲಿ ಒಂದು ನಿರ್ದಿಷ್ಟ ರೀತಿಯ ರಾಜಕೀಯ ಮನಸ್ಥಿತಿಯನ್ನು ಹುಟ್ಟುಹಾಕುವ ಪ್ರಯತ್ನವಾಗಿವೆ” ಎಂದು ಕಾಂಗ್ರೆಸ್ ಶಾಸಕ ಮತ್ತು ಮಣಿಪುರ ಪಿಸಿಸಿ ವಕ್ತಾರ ಖಾಯ್ ಜಾಯ್ಕಿಶನ್ ಆರೋಪಿಸಿದ್ದಾರೆ.

ಶಿಕ್ಷಣವನ್ನು ರಾಜಕೀಯಗೊಳಿಸುವ ಕ್ರಿಯೆ: ಕಾಂಗ್ರೆಸ್ ನಾಯಕ

ಕೌನ್ಸಿಲ್ ಆಫ್ ಹೈಯರ್ ಸೆಕೆಂಡರಿ ಎಜುಕೇಶನ್ ಮಣಿಪುರ (ಕೋಹೆಸ್ಸೆಮ್) ಅಧ್ಯಕ್ಷ ಎಲ್ ಮಹೇಂದ್ರ ಸಿಂಗ್ ಅವರು “ಈ ವಿಷಯದ ಬಗ್ಗೆ ಪರೀಕ್ಷಾ ನಿಯಂತ್ರಕರೊಂದಿಗೆ ಮಾತನಾಡಿದ್ದೇನೆ ಮತ್ತು ಪ್ರಶ್ನೆಗಳನ್ನು ‘ಪಾರ್ಟಿ ಸಿಸ್ಟಮ್ ಇನ್ ಇಂಡಿಯಾ’ ಅಧ್ಯಾಯದಿಂದ ಹೊಂದಿಸಲಾಗಿದೆ ಎಂದು ತಿಳಿಸಲಾಯಿತು, ಇದು ಒಂದು ಶಿಕ್ಷಣವನ್ನು ರಾಜಕೀಯಗೊಳಿಸುವ ಕ್ರಿಯೆ” ಎಂದು ಹೇಳಿದ್ದಾರೆ.

ಸಿಪಿಐ ರಾಷ್ಟ್ರೀಯ ಕಾರ್ಯನಿರ್ವಾಹಕ ಸದಸ್ಯ ಮತ್ತು ಮಾಜಿ ಶಾಸಕ ಮೊಯಿರಾಂಗ್ಥೆಮ್ ನಾರಾ, “ಅಂತಹ ಪ್ರಶ್ನೆಗಳನ್ನು ಹೊಂದಿಸುವ ವಿಧಾನವು ರಾಜಕೀಯ ಸಂಬಂಧವನ್ನು ಮಾತ್ರ ಸೂಚಿಸುತ್ತದೆ” ಎಂದು ಹೇಳಿದ್ದಾರೆ.

ಇನ್ನು ಬಹಳಷ್ಟು ಜನ ತಮ್ಮ ರಾಜಕೀಯ ಅಜೆಂಡಾವನ್ನು ಮಕ್ಕಳ ಮೇಲೆ ಹೇರಲು ಶಿಕ್ಷಣ ವ್ಯವಸ್ಥೆಯನ್ನು ಬಳಸಿಕೊಳ್ಳುವುದು ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಸರಿಯಾದುದ್ದಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆದಾಗ್ಯೂ, ಮಣಿಪುರ ಬಿಜೆಪಿ ಘಟಕದ ಪ್ರಧಾನ ಕಾರ್ಯದರ್ಶಿ ಎನ್ ನಿಂಬಸ್ ಸಿಂಗ್, “ರಾಷ್ಟ್ರ ನಿರ್ಮಾಣದಲ್ಲಿ ನೆಹರುರವರ ನಾಲ್ಕು ಮಿತಿಗಳನ್ನು ಹೆಸರಿಸಿ? ಎಂಬುದು ಅವರು ದೇಶದ ಮೊದಲ ಪ್ರಧಾನ ಮಂತ್ರಿಯಾಗಿದ್ದರಿಂದ ಸಂಬಂಧಿತ ಪ್ರಶ್ನೆಯಾಗಿದೆ. ಭಾರತವನ್ನು ನಿರ್ಮಿಸುವಲ್ಲಿ ನೆಹರೂ ಪಾತ್ರವಹಿಸಿದ್ದರಿಂದ, ಅವರ ನಾಯಕತ್ವದಲ್ಲಿ ವ್ಯವಸ್ಥೆಯಲ್ಲಿ ಸಕಾರಾತ್ಮಕ ಮತ್ತು ನಕರಾತ್ಮಕ ಅಂಶಗಳು ಇದ್ದಿರಬಹುದು” ಎಂದು ಸಮರ್ಥಿಸಿಕೊಂಡಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...