Homeಮುಖಪುಟಬಿಜೆಪಿ ಪಕ್ಷದ ಚುನಾವಣಾ ಚಿಹ್ನೆಯನ್ನು ಬರೆಯಿರಿ. ಮಣಿಪುರ ಪ್ರಶ್ನೆಪತ್ರಿಕೆಗೆ ವ್ಯಾಪಕ ವಿರೋಧ

ಬಿಜೆಪಿ ಪಕ್ಷದ ಚುನಾವಣಾ ಚಿಹ್ನೆಯನ್ನು ಬರೆಯಿರಿ. ಮಣಿಪುರ ಪ್ರಶ್ನೆಪತ್ರಿಕೆಗೆ ವ್ಯಾಪಕ ವಿರೋಧ

- Advertisement -
- Advertisement -

ಬಿಜೆಪಿ ಪಕ್ಷದ ಚುನಾವಣಾ ಚಿಹ್ನೆಯನ್ನು ಬರೆಯಿರಿ, ರಾಷ್ಟ್ರ ನಿರ್ಮಾಣದಲ್ಲಿ ನೆಹರೂರವರ ನಾಲ್ಕು ಮಿತಿಗಳನ್ನು ಹೆಸರಿಸಿ? ಈ ಪ್ರಶ್ನೆಗಳು ಬಿಜೆಪಿ ಅಥವಾ ಆರ್‌ಎಸ್‌ಎಸ್‌ ವರ್ಕಶಾಪ್‌ನಲ್ಲಿ ಕೇಳಿಬಂದವು ಅಲ್ಲ. ಬದಲಿಗೆ ಮಣಿಪುರದ ದ್ವಿತೀಯ ಪಿಯುಸಿ ಪೊಲಿಟಿಕಲ್ ಸೈನ್ಸ್‌ ಪ್ರಶ್ನೆಪತ್ರಿಕೆಯಲ್ಲಿರುವವು ಎಂದರೆ ನೀವು ನಂಬಲೇಬೇಕು.

ಹೌದು ಹೀಗೊಂದು ದೊಡ್ಡ ರಾದ್ಧಾಂತ ಮಣಿಪುರ ರಾಜ್ಯದಲ್ಲಿ ಉದ್ಭವಿಸಿದೆ. ಅಲ್ಲಿನ ದ್ವಿತೀಯ ಪಿ.ಯು.ಸಿಯ ಪ್ರಶ್ನೆ ಪತ್ರಿಕೆಯೊಂದು ಸಾಮಾಜಿಕ ತಾಲತಾಣದಲ್ಲಿ ವೈರಲ್‌ ಆಗಿದ್ದು, ಅಲ್ಲಿನ ಹಲವು ಪ್ರಶ್ನೆಗಳು ನೆಹರೂವನ್ನು ತೆಗಳಲು, ಬಿಜೆಪಿಯನ್ನು ಹೊಗಳಲು ಬಳಕೆಯಾಗಿದ್ದು ಎಲ್ಲರ ಕೆಂಗಣ್ಣಿಗೆ ಗುರಿಯಾಗಿವೆ.

ಪ್ರಾದೇಶಿಕ ಅಸ್ಮಿತೆಯು ರಾಷ್ಟ್ರದ ಏಕತೆಗೆ ಹೇಗೆ ಸವಾಲಾಗಬಹುದು ವಿವರಿಸಿ ಎಂಬಂತಹ ಪ್ರಶ್ನೆಗಳು ಪ್ರಶ್ನೆ ಪತ್ರಿಕೆಯಲ್ಲಿ ತೂರಿಕೊಂಡ ಕಾರಣ ಇದು ಪಕ್ಕಾ ರಾಜಕೀಯ ಉದ್ದೇಶದಿಂದ ರಚಿಸಲಾಗಿದೆ ಎಂಬ ಆರೋಪ ದೊಡ್ಡ ಮಟ್ಟದಲ್ಲಿ ಕೇಳಿಬಂದಿದೆ.

ದಿ ಟೈಮ್ಸ್‌ ಆಫ್‌ ಇಂಡಿಯಾ ಪತ್ರಿಕೆಯು ಈ ಕುರಿತು ಮಣಿಪುರದ ಹಲವು ವಿರೋಧ ಪಕ್ಷದ ಮುಖಂಡರ ಅಭಿಪ್ರಾಯಗಳನ್ನು ಸಂಗ್ರಹಿಸಿ ವರದಿ ಪ್ರಕಟಿಸಿದೆ. ಅದರಂತೆ, “ಅಂತಹ ಪ್ರಶ್ನೆಗಳು ವಿದ್ಯಾರ್ಥಿಗಳಲ್ಲಿ ಒಂದು ನಿರ್ದಿಷ್ಟ ರೀತಿಯ ರಾಜಕೀಯ ಮನಸ್ಥಿತಿಯನ್ನು ಹುಟ್ಟುಹಾಕುವ ಪ್ರಯತ್ನವಾಗಿವೆ” ಎಂದು ಕಾಂಗ್ರೆಸ್ ಶಾಸಕ ಮತ್ತು ಮಣಿಪುರ ಪಿಸಿಸಿ ವಕ್ತಾರ ಖಾಯ್ ಜಾಯ್ಕಿಶನ್ ಆರೋಪಿಸಿದ್ದಾರೆ.

ಶಿಕ್ಷಣವನ್ನು ರಾಜಕೀಯಗೊಳಿಸುವ ಕ್ರಿಯೆ: ಕಾಂಗ್ರೆಸ್ ನಾಯಕ

ಕೌನ್ಸಿಲ್ ಆಫ್ ಹೈಯರ್ ಸೆಕೆಂಡರಿ ಎಜುಕೇಶನ್ ಮಣಿಪುರ (ಕೋಹೆಸ್ಸೆಮ್) ಅಧ್ಯಕ್ಷ ಎಲ್ ಮಹೇಂದ್ರ ಸಿಂಗ್ ಅವರು “ಈ ವಿಷಯದ ಬಗ್ಗೆ ಪರೀಕ್ಷಾ ನಿಯಂತ್ರಕರೊಂದಿಗೆ ಮಾತನಾಡಿದ್ದೇನೆ ಮತ್ತು ಪ್ರಶ್ನೆಗಳನ್ನು ‘ಪಾರ್ಟಿ ಸಿಸ್ಟಮ್ ಇನ್ ಇಂಡಿಯಾ’ ಅಧ್ಯಾಯದಿಂದ ಹೊಂದಿಸಲಾಗಿದೆ ಎಂದು ತಿಳಿಸಲಾಯಿತು, ಇದು ಒಂದು ಶಿಕ್ಷಣವನ್ನು ರಾಜಕೀಯಗೊಳಿಸುವ ಕ್ರಿಯೆ” ಎಂದು ಹೇಳಿದ್ದಾರೆ.

ಸಿಪಿಐ ರಾಷ್ಟ್ರೀಯ ಕಾರ್ಯನಿರ್ವಾಹಕ ಸದಸ್ಯ ಮತ್ತು ಮಾಜಿ ಶಾಸಕ ಮೊಯಿರಾಂಗ್ಥೆಮ್ ನಾರಾ, “ಅಂತಹ ಪ್ರಶ್ನೆಗಳನ್ನು ಹೊಂದಿಸುವ ವಿಧಾನವು ರಾಜಕೀಯ ಸಂಬಂಧವನ್ನು ಮಾತ್ರ ಸೂಚಿಸುತ್ತದೆ” ಎಂದು ಹೇಳಿದ್ದಾರೆ.

ಇನ್ನು ಬಹಳಷ್ಟು ಜನ ತಮ್ಮ ರಾಜಕೀಯ ಅಜೆಂಡಾವನ್ನು ಮಕ್ಕಳ ಮೇಲೆ ಹೇರಲು ಶಿಕ್ಷಣ ವ್ಯವಸ್ಥೆಯನ್ನು ಬಳಸಿಕೊಳ್ಳುವುದು ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಸರಿಯಾದುದ್ದಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆದಾಗ್ಯೂ, ಮಣಿಪುರ ಬಿಜೆಪಿ ಘಟಕದ ಪ್ರಧಾನ ಕಾರ್ಯದರ್ಶಿ ಎನ್ ನಿಂಬಸ್ ಸಿಂಗ್, “ರಾಷ್ಟ್ರ ನಿರ್ಮಾಣದಲ್ಲಿ ನೆಹರುರವರ ನಾಲ್ಕು ಮಿತಿಗಳನ್ನು ಹೆಸರಿಸಿ? ಎಂಬುದು ಅವರು ದೇಶದ ಮೊದಲ ಪ್ರಧಾನ ಮಂತ್ರಿಯಾಗಿದ್ದರಿಂದ ಸಂಬಂಧಿತ ಪ್ರಶ್ನೆಯಾಗಿದೆ. ಭಾರತವನ್ನು ನಿರ್ಮಿಸುವಲ್ಲಿ ನೆಹರೂ ಪಾತ್ರವಹಿಸಿದ್ದರಿಂದ, ಅವರ ನಾಯಕತ್ವದಲ್ಲಿ ವ್ಯವಸ್ಥೆಯಲ್ಲಿ ಸಕಾರಾತ್ಮಕ ಮತ್ತು ನಕರಾತ್ಮಕ ಅಂಶಗಳು ಇದ್ದಿರಬಹುದು” ಎಂದು ಸಮರ್ಥಿಸಿಕೊಂಡಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...