Homeಮುಖಪುಟಬಿಜೆಪಿ ಪಕ್ಷದ ಚುನಾವಣಾ ಚಿಹ್ನೆಯನ್ನು ಬರೆಯಿರಿ. ಮಣಿಪುರ ಪ್ರಶ್ನೆಪತ್ರಿಕೆಗೆ ವ್ಯಾಪಕ ವಿರೋಧ

ಬಿಜೆಪಿ ಪಕ್ಷದ ಚುನಾವಣಾ ಚಿಹ್ನೆಯನ್ನು ಬರೆಯಿರಿ. ಮಣಿಪುರ ಪ್ರಶ್ನೆಪತ್ರಿಕೆಗೆ ವ್ಯಾಪಕ ವಿರೋಧ

- Advertisement -
- Advertisement -

ಬಿಜೆಪಿ ಪಕ್ಷದ ಚುನಾವಣಾ ಚಿಹ್ನೆಯನ್ನು ಬರೆಯಿರಿ, ರಾಷ್ಟ್ರ ನಿರ್ಮಾಣದಲ್ಲಿ ನೆಹರೂರವರ ನಾಲ್ಕು ಮಿತಿಗಳನ್ನು ಹೆಸರಿಸಿ? ಈ ಪ್ರಶ್ನೆಗಳು ಬಿಜೆಪಿ ಅಥವಾ ಆರ್‌ಎಸ್‌ಎಸ್‌ ವರ್ಕಶಾಪ್‌ನಲ್ಲಿ ಕೇಳಿಬಂದವು ಅಲ್ಲ. ಬದಲಿಗೆ ಮಣಿಪುರದ ದ್ವಿತೀಯ ಪಿಯುಸಿ ಪೊಲಿಟಿಕಲ್ ಸೈನ್ಸ್‌ ಪ್ರಶ್ನೆಪತ್ರಿಕೆಯಲ್ಲಿರುವವು ಎಂದರೆ ನೀವು ನಂಬಲೇಬೇಕು.

ಹೌದು ಹೀಗೊಂದು ದೊಡ್ಡ ರಾದ್ಧಾಂತ ಮಣಿಪುರ ರಾಜ್ಯದಲ್ಲಿ ಉದ್ಭವಿಸಿದೆ. ಅಲ್ಲಿನ ದ್ವಿತೀಯ ಪಿ.ಯು.ಸಿಯ ಪ್ರಶ್ನೆ ಪತ್ರಿಕೆಯೊಂದು ಸಾಮಾಜಿಕ ತಾಲತಾಣದಲ್ಲಿ ವೈರಲ್‌ ಆಗಿದ್ದು, ಅಲ್ಲಿನ ಹಲವು ಪ್ರಶ್ನೆಗಳು ನೆಹರೂವನ್ನು ತೆಗಳಲು, ಬಿಜೆಪಿಯನ್ನು ಹೊಗಳಲು ಬಳಕೆಯಾಗಿದ್ದು ಎಲ್ಲರ ಕೆಂಗಣ್ಣಿಗೆ ಗುರಿಯಾಗಿವೆ.

ಪ್ರಾದೇಶಿಕ ಅಸ್ಮಿತೆಯು ರಾಷ್ಟ್ರದ ಏಕತೆಗೆ ಹೇಗೆ ಸವಾಲಾಗಬಹುದು ವಿವರಿಸಿ ಎಂಬಂತಹ ಪ್ರಶ್ನೆಗಳು ಪ್ರಶ್ನೆ ಪತ್ರಿಕೆಯಲ್ಲಿ ತೂರಿಕೊಂಡ ಕಾರಣ ಇದು ಪಕ್ಕಾ ರಾಜಕೀಯ ಉದ್ದೇಶದಿಂದ ರಚಿಸಲಾಗಿದೆ ಎಂಬ ಆರೋಪ ದೊಡ್ಡ ಮಟ್ಟದಲ್ಲಿ ಕೇಳಿಬಂದಿದೆ.

ದಿ ಟೈಮ್ಸ್‌ ಆಫ್‌ ಇಂಡಿಯಾ ಪತ್ರಿಕೆಯು ಈ ಕುರಿತು ಮಣಿಪುರದ ಹಲವು ವಿರೋಧ ಪಕ್ಷದ ಮುಖಂಡರ ಅಭಿಪ್ರಾಯಗಳನ್ನು ಸಂಗ್ರಹಿಸಿ ವರದಿ ಪ್ರಕಟಿಸಿದೆ. ಅದರಂತೆ, “ಅಂತಹ ಪ್ರಶ್ನೆಗಳು ವಿದ್ಯಾರ್ಥಿಗಳಲ್ಲಿ ಒಂದು ನಿರ್ದಿಷ್ಟ ರೀತಿಯ ರಾಜಕೀಯ ಮನಸ್ಥಿತಿಯನ್ನು ಹುಟ್ಟುಹಾಕುವ ಪ್ರಯತ್ನವಾಗಿವೆ” ಎಂದು ಕಾಂಗ್ರೆಸ್ ಶಾಸಕ ಮತ್ತು ಮಣಿಪುರ ಪಿಸಿಸಿ ವಕ್ತಾರ ಖಾಯ್ ಜಾಯ್ಕಿಶನ್ ಆರೋಪಿಸಿದ್ದಾರೆ.

ಶಿಕ್ಷಣವನ್ನು ರಾಜಕೀಯಗೊಳಿಸುವ ಕ್ರಿಯೆ: ಕಾಂಗ್ರೆಸ್ ನಾಯಕ

ಕೌನ್ಸಿಲ್ ಆಫ್ ಹೈಯರ್ ಸೆಕೆಂಡರಿ ಎಜುಕೇಶನ್ ಮಣಿಪುರ (ಕೋಹೆಸ್ಸೆಮ್) ಅಧ್ಯಕ್ಷ ಎಲ್ ಮಹೇಂದ್ರ ಸಿಂಗ್ ಅವರು “ಈ ವಿಷಯದ ಬಗ್ಗೆ ಪರೀಕ್ಷಾ ನಿಯಂತ್ರಕರೊಂದಿಗೆ ಮಾತನಾಡಿದ್ದೇನೆ ಮತ್ತು ಪ್ರಶ್ನೆಗಳನ್ನು ‘ಪಾರ್ಟಿ ಸಿಸ್ಟಮ್ ಇನ್ ಇಂಡಿಯಾ’ ಅಧ್ಯಾಯದಿಂದ ಹೊಂದಿಸಲಾಗಿದೆ ಎಂದು ತಿಳಿಸಲಾಯಿತು, ಇದು ಒಂದು ಶಿಕ್ಷಣವನ್ನು ರಾಜಕೀಯಗೊಳಿಸುವ ಕ್ರಿಯೆ” ಎಂದು ಹೇಳಿದ್ದಾರೆ.

ಸಿಪಿಐ ರಾಷ್ಟ್ರೀಯ ಕಾರ್ಯನಿರ್ವಾಹಕ ಸದಸ್ಯ ಮತ್ತು ಮಾಜಿ ಶಾಸಕ ಮೊಯಿರಾಂಗ್ಥೆಮ್ ನಾರಾ, “ಅಂತಹ ಪ್ರಶ್ನೆಗಳನ್ನು ಹೊಂದಿಸುವ ವಿಧಾನವು ರಾಜಕೀಯ ಸಂಬಂಧವನ್ನು ಮಾತ್ರ ಸೂಚಿಸುತ್ತದೆ” ಎಂದು ಹೇಳಿದ್ದಾರೆ.

ಇನ್ನು ಬಹಳಷ್ಟು ಜನ ತಮ್ಮ ರಾಜಕೀಯ ಅಜೆಂಡಾವನ್ನು ಮಕ್ಕಳ ಮೇಲೆ ಹೇರಲು ಶಿಕ್ಷಣ ವ್ಯವಸ್ಥೆಯನ್ನು ಬಳಸಿಕೊಳ್ಳುವುದು ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಸರಿಯಾದುದ್ದಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆದಾಗ್ಯೂ, ಮಣಿಪುರ ಬಿಜೆಪಿ ಘಟಕದ ಪ್ರಧಾನ ಕಾರ್ಯದರ್ಶಿ ಎನ್ ನಿಂಬಸ್ ಸಿಂಗ್, “ರಾಷ್ಟ್ರ ನಿರ್ಮಾಣದಲ್ಲಿ ನೆಹರುರವರ ನಾಲ್ಕು ಮಿತಿಗಳನ್ನು ಹೆಸರಿಸಿ? ಎಂಬುದು ಅವರು ದೇಶದ ಮೊದಲ ಪ್ರಧಾನ ಮಂತ್ರಿಯಾಗಿದ್ದರಿಂದ ಸಂಬಂಧಿತ ಪ್ರಶ್ನೆಯಾಗಿದೆ. ಭಾರತವನ್ನು ನಿರ್ಮಿಸುವಲ್ಲಿ ನೆಹರೂ ಪಾತ್ರವಹಿಸಿದ್ದರಿಂದ, ಅವರ ನಾಯಕತ್ವದಲ್ಲಿ ವ್ಯವಸ್ಥೆಯಲ್ಲಿ ಸಕಾರಾತ್ಮಕ ಮತ್ತು ನಕರಾತ್ಮಕ ಅಂಶಗಳು ಇದ್ದಿರಬಹುದು” ಎಂದು ಸಮರ್ಥಿಸಿಕೊಂಡಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...