Homeಮುಖಪುಟ'ಸಂವಿಧಾನ, ಏಕತಾ ಸಮಾವೇಶ'ಕ್ಕೆ ಕರ್ನಾಟಕ ಸರಕಾರ ಆಹ್ವಾನಿಸಿದ್ದ UK ಪ್ರಾಧ್ಯಾಪಕಿಗೆ ಭಾರತಕ್ಕೆ ಪ್ರವೇಶ ನಿರಾಕರಣೆ

‘ಸಂವಿಧಾನ, ಏಕತಾ ಸಮಾವೇಶ’ಕ್ಕೆ ಕರ್ನಾಟಕ ಸರಕಾರ ಆಹ್ವಾನಿಸಿದ್ದ UK ಪ್ರಾಧ್ಯಾಪಕಿಗೆ ಭಾರತಕ್ಕೆ ಪ್ರವೇಶ ನಿರಾಕರಣೆ

- Advertisement -
- Advertisement -

‘ಸಂವಿಧಾನ ಮತ್ತು ರಾಷ್ಟ್ರೀಯ ಏಕತಾ ಸಮಾವೇಶ’ದಲ್ಲಿ ಮಾತನಾಡಲು ಕರ್ನಾಟಕ ಸರ್ಕಾರದಿಂದ ಆಹ್ವಾನಿತರಾಗಿದ್ದ ಯುಕೆಯಲ್ಲಿನ ಭಾರತೀಯ ಮೂಲದ ಪ್ರಾಧ್ಯಾಪಕಿ ನಿತಾಶಾ ಕೌಲ್ ಅವರು ಬೆಂಗಳೂರಿನಲ್ಲಿ ಬಂದಿಳಿದ ನಂತರ ನನಗೆ ಭಾರತಕ್ಕೆ ಪ್ರವೇಶ ನಿರಾಕರಿಸಲಾಗಿದ್ದು, ವಿಮಾನ ನಿಲ್ದಾಣದಿಂದ  ವಾಪಾಸ್ಸು ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಪ್ರಾಧ್ಯಾಪಕಿ ನಿತಾಶಾ ಕೌಲ್, ಈ ಹಿಂದೆ ಆರೆಸ್ಸೆಸ್‌ ವಿರುದ್ಧ ತಾನು ಮಾತನಾಡಿದ್ದಕ್ಕೆ ತನಗೆ ಪ್ರವೇಶ ನಿರಾಕರಿಸಲಾಗಿದೆ. ಪ್ರಜಾಸತ್ತಾತ್ಮಕ ಮತ್ತು ಸಾಂವಿಧಾನಿಕ ಮೌಲ್ಯಗಳ ಬಗ್ಗೆ ಮಾತನಾಡಿದ್ದಕ್ಕಾಗಿ ಭಾರತಕ್ಕೆ ಪ್ರವೇಶವನ್ನು ನಿರಾಕರಿಸಲಾಗಿದೆ. ಕರ್ನಾಟಕ ಸರ್ಕಾರದಿಂದ ಗೌರವಾನ್ವಿತ ಪ್ರತಿನಿಧಿಯಾಗಿ ನನ್ನನ್ನು ಸಮ್ಮೇಳನಕ್ಕೆ ಆಹ್ವಾನಿಸಲಾಗಿತ್ತು. ಆದರೆ ಕೇಂದ್ರ ಸರಕಾರವು ನನಗೆ ಪ್ರವೇಶವನ್ನು ನಿರಾಕರಿಸಿದೆ. ನನ್ನ ಎಲ್ಲಾ ದಾಖಲೆಗಳು ಮಾನ್ಯ ಮತ್ತು ಪ್ರಸ್ತುತವಾಗಿದೆ, ಆದರೂ ಪ್ರವೇಶ ನಿರಾಕರಿಸಲಾಗಿದೆ ಎಂದು ಯುಕೆಯ ವೆಸ್ಟ್‌ಮಿನಿಸ್ಟರ್ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿರುವ ನಿತಾಶಾ ಕೌಲ್ ಅವರು ಟ್ವೀಟ್‌ನಲ್ಲಿ ಬರೆದಿದ್ದಾರೆ.

ಅಧಿಕಾರಿಗಳು ದೆಹಲಿಯಿಂದ ಆದೇಶವಿದೆ ಎಂದು ಹೇಳಿದ್ದನ್ನು ಹೊರತುಪಡಿಸಿ ಯಾವುದೇ ನಿರ್ದಿಷ್ಟ ಕಾರಣವನ್ನು ನೀಡಿಲ್ಲ. ನನ್ನ ಪ್ರಯಾಣಕ್ಕೆ ಕರ್ನಾಟಕ ಸರಕಾರ ವ್ಯವಸ್ಥೆ ಮಾಡಿತ್ತು ಮತ್ತು ನನ್ನ ಬಳಿ ಅಧಿಕೃತ ಪತ್ರವಿತ್ತು. ನನಗೆ ಪ್ರವೇಶ ನಿರಾಕರಿಸಲಾಗಿದೆ ಎಂದು ದೆಹಲಿಯಿಂದ ನನಗೆ ಯಾವುದೇ ಸೂಚನೆ ಅಥವಾ ಮಾಹಿತಿಯನ್ನು ಮುಂಚಿತವಾಗಿ ನೀಡಿಲ್ಲ ಎಂದು ಕೌಲ್ ಹೇಳಿಕೊಂಡಿದ್ದಾರೆ.

ನಾನು ಲಂಡನ್‌ನಿಂದ ಬೆಂಗಳೂರಿಗೆ ಬರಲು ವಿಮಾನದಲ್ಲಿ 12 ಗಂಟೆಗಳನ್ನು ಕಳೆದಿದ್ದೇನೆ, ಹಲವಾರು ಗಂಟೆಗಳ ಕಾಲ ಅವರು ನನ್ನನ್ನು ಅಲ್ಲಿ-ಇಲ್ಲಿ ಕರೆದೊಯ್ದರು, ಪ್ರಕ್ರಿಯೆಯ ಕುರಿತು ಯಾವುದೇ ಮಾಹಿತಿಯನ್ನು ಒದಗಿಸಲಿಲ್ಲ, ನಂತರ 24 ಗಂಟೆಗಳ ಕಾಲ ಹೋಲ್ಡಿಂಗ್ ಸೆಲ್‌ನಲ್ಲಿ ತನಗೆ ಆಹಾರ ಮತ್ತು ನೀರಿನ ವ್ಯವಸ್ಥೆ ಮಾಡಿಲ್ಲ ಮತ್ತು ವಿಮಾನ ನಿಲ್ದಾಣಕ್ಕೆ ಡಜನ್‌ಗಟ್ಟಲೆ ಕರೆಗಳನ್ನು ಮಾಡಿದರೂ ಒಂದು ದಿಂಬು ಮತ್ತು ಹೊದಿಕೆಯಂತಹ ಮೂಲಭೂತ ಸೌಲಭ್ಯಗಳನ್ನು ನಿರಾಕರಿಸಲಾಗಿದೆ ಎಂದು ಅವರು ಹೇಳಿದ್ದಾರೆ. ನಿತಾಶಾ ಕೌಲ್ ಬೆಂಗಳೂರಿಗೆ ಬಂದಿಳಿದ 24 ಗಂಟೆಯ ನಂತರ, ಬ್ರಿಟಿಷ್ ಏರ್‌ವೇಸ್ ವಿಮಾನದ ಮೂಲಕ ಅವರನ್ನು ಲಂಡನ್‌ಗೆ ವಾಪಸ್‌ ಕಳುಹಿಸಲಾಗಿದೆ.

ಬಲಪಂಥೀಯ ಹಿಂದುತ್ವ ಟ್ರೋಲ್ಸ್‌ ವರ್ಷಗಳಿಂದ ನನಗೆ ಜೀವ ಬೆದರಿಕೆ, ಅತ್ಯಾಚಾರ, ನಿಷೇಧ ಇತ್ಯಾದಿ ಬೆದರಿಕೆ ಹಾಕಿದೆ. ಈ ಹಿಂದೆ, ನಾನು ಯುಕೆಯಲ್ಲಿ ವಾಸಿಸುತ್ತಿದ್ದರೂ ಮತ್ತು ನನ್ನ ಕೆಲಸಕ್ಕೆ ಯಾವುದೇ ಸಂಬಂಧವಿಲ್ಲದಿದ್ದರೂ ಸಹ ಅಧಿಕಾರಿಗಳು ನನ್ನ ವಯಸ್ಸಾದ ಅಸ್ವಸ್ಥ ತಾಯಿ ವಾಸಿಸುತ್ತಿರುವ ಕಾಶ್ಮೀರದ ಮನೆಗೆ ಬೆದರಿಸಲು ಪೊಲೀಸರನ್ನು ಕಳುಹಿಸಿದ್ದಾರೆ. ಅವರು ನಿವೃತ್ತ ಹಿಂದಿ ಶಿಕ್ಷಕಿ ಮತ್ತು ನನ್ನ ಏಕೈಕ ಬದುಕುಳಿದ ಪೋಷಕರು ಎಂದು ನಿತಾಶಾ ಕೌಲ್ ಟ್ವೀಟ್ ಮಾಡಿದ್ದಾರೆ.

ಜಮ್ಮು- ಕಾಶ್ಮೀರದಲ್ಲಿನ 370ನೇ ವಿಧಿ ರದ್ದುಗೊಂಡ ನಂತರ ಕಾಶ್ಮೀರದಲ್ಲಿನ ಮಾನವ ಹಕ್ಕುಗಳ ಉಲ್ಲಂಘನೆಯ ಕುರಿತು 2019ರಲ್ಲಿ ನಿತಾಶಾ ಕೌಲ್ ಅಮೆರಿಕಾದ ವಿದೇಶಾಂಗ ವ್ಯವಹಾರಗಳ ಸದನ ಸಮಿತಿಯೆದುರು ಸಾಕ್ಷ್ಯವನ್ನು ಹೇಳಿದ್ದರು.

ಇದನ್ನು ಓದಿ: ಭಾರತ್ ಜೋಡೋ ನ್ಯಾಯ ಯಾತ್ರೆ; ಪ್ರಜಾಪ್ರಭುತ್ವ-ಸಂವಿಧಾನ ಉಳಿಸುವುದೇ ನಮ್ಮೆಲ್ಲರ ದೊಡ್ಡ ಸವಾಲು: ಅಖಿಲೇಶ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...