Homeಮುಖಪುಟ'ಸಂವಿಧಾನ, ಏಕತಾ ಸಮಾವೇಶ'ಕ್ಕೆ ಕರ್ನಾಟಕ ಸರಕಾರ ಆಹ್ವಾನಿಸಿದ್ದ UK ಪ್ರಾಧ್ಯಾಪಕಿಗೆ ಭಾರತಕ್ಕೆ ಪ್ರವೇಶ ನಿರಾಕರಣೆ

‘ಸಂವಿಧಾನ, ಏಕತಾ ಸಮಾವೇಶ’ಕ್ಕೆ ಕರ್ನಾಟಕ ಸರಕಾರ ಆಹ್ವಾನಿಸಿದ್ದ UK ಪ್ರಾಧ್ಯಾಪಕಿಗೆ ಭಾರತಕ್ಕೆ ಪ್ರವೇಶ ನಿರಾಕರಣೆ

- Advertisement -
- Advertisement -

‘ಸಂವಿಧಾನ ಮತ್ತು ರಾಷ್ಟ್ರೀಯ ಏಕತಾ ಸಮಾವೇಶ’ದಲ್ಲಿ ಮಾತನಾಡಲು ಕರ್ನಾಟಕ ಸರ್ಕಾರದಿಂದ ಆಹ್ವಾನಿತರಾಗಿದ್ದ ಯುಕೆಯಲ್ಲಿನ ಭಾರತೀಯ ಮೂಲದ ಪ್ರಾಧ್ಯಾಪಕಿ ನಿತಾಶಾ ಕೌಲ್ ಅವರು ಬೆಂಗಳೂರಿನಲ್ಲಿ ಬಂದಿಳಿದ ನಂತರ ನನಗೆ ಭಾರತಕ್ಕೆ ಪ್ರವೇಶ ನಿರಾಕರಿಸಲಾಗಿದ್ದು, ವಿಮಾನ ನಿಲ್ದಾಣದಿಂದ  ವಾಪಾಸ್ಸು ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಪ್ರಾಧ್ಯಾಪಕಿ ನಿತಾಶಾ ಕೌಲ್, ಈ ಹಿಂದೆ ಆರೆಸ್ಸೆಸ್‌ ವಿರುದ್ಧ ತಾನು ಮಾತನಾಡಿದ್ದಕ್ಕೆ ತನಗೆ ಪ್ರವೇಶ ನಿರಾಕರಿಸಲಾಗಿದೆ. ಪ್ರಜಾಸತ್ತಾತ್ಮಕ ಮತ್ತು ಸಾಂವಿಧಾನಿಕ ಮೌಲ್ಯಗಳ ಬಗ್ಗೆ ಮಾತನಾಡಿದ್ದಕ್ಕಾಗಿ ಭಾರತಕ್ಕೆ ಪ್ರವೇಶವನ್ನು ನಿರಾಕರಿಸಲಾಗಿದೆ. ಕರ್ನಾಟಕ ಸರ್ಕಾರದಿಂದ ಗೌರವಾನ್ವಿತ ಪ್ರತಿನಿಧಿಯಾಗಿ ನನ್ನನ್ನು ಸಮ್ಮೇಳನಕ್ಕೆ ಆಹ್ವಾನಿಸಲಾಗಿತ್ತು. ಆದರೆ ಕೇಂದ್ರ ಸರಕಾರವು ನನಗೆ ಪ್ರವೇಶವನ್ನು ನಿರಾಕರಿಸಿದೆ. ನನ್ನ ಎಲ್ಲಾ ದಾಖಲೆಗಳು ಮಾನ್ಯ ಮತ್ತು ಪ್ರಸ್ತುತವಾಗಿದೆ, ಆದರೂ ಪ್ರವೇಶ ನಿರಾಕರಿಸಲಾಗಿದೆ ಎಂದು ಯುಕೆಯ ವೆಸ್ಟ್‌ಮಿನಿಸ್ಟರ್ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿರುವ ನಿತಾಶಾ ಕೌಲ್ ಅವರು ಟ್ವೀಟ್‌ನಲ್ಲಿ ಬರೆದಿದ್ದಾರೆ.

ಅಧಿಕಾರಿಗಳು ದೆಹಲಿಯಿಂದ ಆದೇಶವಿದೆ ಎಂದು ಹೇಳಿದ್ದನ್ನು ಹೊರತುಪಡಿಸಿ ಯಾವುದೇ ನಿರ್ದಿಷ್ಟ ಕಾರಣವನ್ನು ನೀಡಿಲ್ಲ. ನನ್ನ ಪ್ರಯಾಣಕ್ಕೆ ಕರ್ನಾಟಕ ಸರಕಾರ ವ್ಯವಸ್ಥೆ ಮಾಡಿತ್ತು ಮತ್ತು ನನ್ನ ಬಳಿ ಅಧಿಕೃತ ಪತ್ರವಿತ್ತು. ನನಗೆ ಪ್ರವೇಶ ನಿರಾಕರಿಸಲಾಗಿದೆ ಎಂದು ದೆಹಲಿಯಿಂದ ನನಗೆ ಯಾವುದೇ ಸೂಚನೆ ಅಥವಾ ಮಾಹಿತಿಯನ್ನು ಮುಂಚಿತವಾಗಿ ನೀಡಿಲ್ಲ ಎಂದು ಕೌಲ್ ಹೇಳಿಕೊಂಡಿದ್ದಾರೆ.

ನಾನು ಲಂಡನ್‌ನಿಂದ ಬೆಂಗಳೂರಿಗೆ ಬರಲು ವಿಮಾನದಲ್ಲಿ 12 ಗಂಟೆಗಳನ್ನು ಕಳೆದಿದ್ದೇನೆ, ಹಲವಾರು ಗಂಟೆಗಳ ಕಾಲ ಅವರು ನನ್ನನ್ನು ಅಲ್ಲಿ-ಇಲ್ಲಿ ಕರೆದೊಯ್ದರು, ಪ್ರಕ್ರಿಯೆಯ ಕುರಿತು ಯಾವುದೇ ಮಾಹಿತಿಯನ್ನು ಒದಗಿಸಲಿಲ್ಲ, ನಂತರ 24 ಗಂಟೆಗಳ ಕಾಲ ಹೋಲ್ಡಿಂಗ್ ಸೆಲ್‌ನಲ್ಲಿ ತನಗೆ ಆಹಾರ ಮತ್ತು ನೀರಿನ ವ್ಯವಸ್ಥೆ ಮಾಡಿಲ್ಲ ಮತ್ತು ವಿಮಾನ ನಿಲ್ದಾಣಕ್ಕೆ ಡಜನ್‌ಗಟ್ಟಲೆ ಕರೆಗಳನ್ನು ಮಾಡಿದರೂ ಒಂದು ದಿಂಬು ಮತ್ತು ಹೊದಿಕೆಯಂತಹ ಮೂಲಭೂತ ಸೌಲಭ್ಯಗಳನ್ನು ನಿರಾಕರಿಸಲಾಗಿದೆ ಎಂದು ಅವರು ಹೇಳಿದ್ದಾರೆ. ನಿತಾಶಾ ಕೌಲ್ ಬೆಂಗಳೂರಿಗೆ ಬಂದಿಳಿದ 24 ಗಂಟೆಯ ನಂತರ, ಬ್ರಿಟಿಷ್ ಏರ್‌ವೇಸ್ ವಿಮಾನದ ಮೂಲಕ ಅವರನ್ನು ಲಂಡನ್‌ಗೆ ವಾಪಸ್‌ ಕಳುಹಿಸಲಾಗಿದೆ.

ಬಲಪಂಥೀಯ ಹಿಂದುತ್ವ ಟ್ರೋಲ್ಸ್‌ ವರ್ಷಗಳಿಂದ ನನಗೆ ಜೀವ ಬೆದರಿಕೆ, ಅತ್ಯಾಚಾರ, ನಿಷೇಧ ಇತ್ಯಾದಿ ಬೆದರಿಕೆ ಹಾಕಿದೆ. ಈ ಹಿಂದೆ, ನಾನು ಯುಕೆಯಲ್ಲಿ ವಾಸಿಸುತ್ತಿದ್ದರೂ ಮತ್ತು ನನ್ನ ಕೆಲಸಕ್ಕೆ ಯಾವುದೇ ಸಂಬಂಧವಿಲ್ಲದಿದ್ದರೂ ಸಹ ಅಧಿಕಾರಿಗಳು ನನ್ನ ವಯಸ್ಸಾದ ಅಸ್ವಸ್ಥ ತಾಯಿ ವಾಸಿಸುತ್ತಿರುವ ಕಾಶ್ಮೀರದ ಮನೆಗೆ ಬೆದರಿಸಲು ಪೊಲೀಸರನ್ನು ಕಳುಹಿಸಿದ್ದಾರೆ. ಅವರು ನಿವೃತ್ತ ಹಿಂದಿ ಶಿಕ್ಷಕಿ ಮತ್ತು ನನ್ನ ಏಕೈಕ ಬದುಕುಳಿದ ಪೋಷಕರು ಎಂದು ನಿತಾಶಾ ಕೌಲ್ ಟ್ವೀಟ್ ಮಾಡಿದ್ದಾರೆ.

ಜಮ್ಮು- ಕಾಶ್ಮೀರದಲ್ಲಿನ 370ನೇ ವಿಧಿ ರದ್ದುಗೊಂಡ ನಂತರ ಕಾಶ್ಮೀರದಲ್ಲಿನ ಮಾನವ ಹಕ್ಕುಗಳ ಉಲ್ಲಂಘನೆಯ ಕುರಿತು 2019ರಲ್ಲಿ ನಿತಾಶಾ ಕೌಲ್ ಅಮೆರಿಕಾದ ವಿದೇಶಾಂಗ ವ್ಯವಹಾರಗಳ ಸದನ ಸಮಿತಿಯೆದುರು ಸಾಕ್ಷ್ಯವನ್ನು ಹೇಳಿದ್ದರು.

ಇದನ್ನು ಓದಿ: ಭಾರತ್ ಜೋಡೋ ನ್ಯಾಯ ಯಾತ್ರೆ; ಪ್ರಜಾಪ್ರಭುತ್ವ-ಸಂವಿಧಾನ ಉಳಿಸುವುದೇ ನಮ್ಮೆಲ್ಲರ ದೊಡ್ಡ ಸವಾಲು: ಅಖಿಲೇಶ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...