Homeಮುಖಪುಟಗೀತಾ ನಾಗಭೂಷಣ ತಮ್ಮ ಪುಸ್ತಕಗಳ ಜೊತೆ ಸದಾ ಜೀವಂತವಾಗಿ ಇರುತ್ತಾರೆ: ಶ್ರದ್ಧಾಂಜಲಿ

ಗೀತಾ ನಾಗಭೂಷಣ ತಮ್ಮ ಪುಸ್ತಕಗಳ ಜೊತೆ ಸದಾ ಜೀವಂತವಾಗಿ ಇರುತ್ತಾರೆ: ಶ್ರದ್ಧಾಂಜಲಿ

ನಮ್ಮಿಂದ ಅವರು ದೂರವಾಗಿರುವ ಈ ಸಂದರ್ಭದಲ್ಲಿ ಅವರ ಬಹುಮುಖ್ಯ ಕೃತಿಗಳು ಚರ್ಚೆಗೆ ಒಳಪಡಿಸುವುದೆ ಅವರಿಗೆ ನಾವು ಸಲ್ಲಿಸಬೇಕಾದ ನಿಜವಾದ ಗೌರವ ಆಗಿದೆ.

- Advertisement -
- Advertisement -

ನಾನಾಗ ಪಿಯುಸಿ ಓದುತ್ತಿದ್ದೆ. ಮುಂಜಾನೆ 8 ಗಂಟೆಗೆ ಕಾಲೇಜು ಇರುತ್ತಿದ್ದರಿಂದ ಬೇಗನೆ ಎದ್ದು ಹೊರಡಬೇಕಿತ್ತು. ಗೀತಾ ನಾಗಭೂಷಣ ಅವರ ಮನೆ ಮುಂದೆ ಹಾಯ್ದು ಹೋಗುತ್ತಿದ್ದೆವು. ಫಸ್ಟ್ ಪಿಯುಸಿ ಇದ್ದಾಗ ಇವರ್ಯಾರು ಅಂಬೋದು ನಮಗೆ ಗೊತ್ತಿರಲಿಲ್ಲ. ಟಿ.ವಿ ನೋಡುತ್ತಾ ಕುಳಿತುಕೊಂಡಿರುತ್ತಿದ್ದ ವಯಸ್ಸಾದ ಅಜ್ಜಿ ಈ ನಾಡಿನ ಬಹುದೊಡ್ಡ ಬರಹಗಾರ್ತಿ ಅಂತ ಗೊತ್ತಾಗಿದ್ದು, ಪಿಯುಸಿ ಮುಗಿಸುವ ಹೊತ್ತಿಗೆ. ಹೈಸ್ಕೂಲನಲ್ಲಿ ಪಠ್ಯಕ್ಕೆ ಇದ್ದ ಅವರ “ಅವ್ವ” ಕಥೆ ಓದಿದ ನೆನಪು . ಅವರಿಗೆ ಪರಿಚಯವಿಲ್ಲದ ನಾನು ಒಂದು ದಿನ ಅವರ ಮನೆಗೆ ಹೋಗಿ ಮೇಡಂ ಅವರಿಗೆ ನನ್ನ ಹೆಸರು, ಕಾಲೇಜು ಪರಿಚಯ ಮಾಡಿಸಿ “ನಿಮ್ಮ ಬುಕ್ಸ್ ಬೇಕಾಗಿತ್ತು ನಮ್ಮ ಕಾಲೇಜಿನ ಲೈಬ್ರರಿಗೆ ಫ್ರೀಯಾಗಿ ಕೊಡೋಕೆ ಸಾಧ್ಯನಾ?” ಅಂತ ಕೇಳಿದೆ. ಅವರು ತುಸು ಯೋಚಿಸಿ, “ನಿಮ್ಮ ಪ್ರಿನ್ಸಿಪಾಲರಿಂದ ಒಂದು ಲೆಟರ್ ತಗೊಂಡ ಬಾರಪ್ಪ ಕೊಡ್ತೀನಿ” ಅಂದ್ರು. ಮರುದಿನ ಲೆಟರ್ ಬರೆಸಿಕೊಂಡು ಹೋಗಿ ಅವರ ಕೈಗಿಟ್ಟೆ ಅವರು ಮರುಮಾತನಾಡದೆ ಮುಗುಳ್ನಗುತ್ತಲೆ ಪುಸ್ತಕದ ಹೊರೆ ಕೈಗಿಟ್ಟರು. ಅದು ಅವರ ಜೊತೆಗಿನ ನನ್ನ ಮೊದಲ ಭೇಟಿ.

ಮುಂದೆ ಅವರ ‘ಬದುಕು’ ಕಾದಂಬರಿ ಓದಿದೆ. ಆವಾಗ ಅರ್ಥ ಆಯ್ತು – ನಾ ಭೇಟಿ ಮಾಡಿದ್ದು, ನಮ್ಮ ಕಣ್ಣೆದುರೆ ಕೂರುತ್ತಿದ್ದ ಅಜ್ಜಿ ಅಸಾಮಾನ್ಯ ಬರಹಗಾರ್ತಿ ಅಂತ. ಆಮೇಲೆ ನನ್ನಲ್ಲಿ ಇದ್ದ ಬೃಹತ್ ಕಾದಂಬರಿ ‘ಬದುಕು’ ಹೊತ್ತುಕೊಂಡು ಹೋಗಿ, ಅವರಿಂದ ಆ ಪುಸ್ತಕದ ಮೇಲೆ ಆಟೋಗ್ರಾಫ್ ಹಾಕೊಂಡು ಬಂದೆ.

ನಮ್ಮಿಂದ ಅವರು ದೂರವಾಗಿರುವ ಈ ಸಂದರ್ಭದಲ್ಲಿ ಅವರ ಬಹುಮುಖ್ಯ ಕೃತಿಗಳು ಚರ್ಚೆಗೆ ಒಳಪಡಿಸುವುದೆ ಅವರಿಗೆ ನಾವು ಸಲ್ಲಿಸಬೇಕಾದ ನಿಜವಾದ ಗೌರವ ಆಗಿದೆ.

“ದಿನಕ್ಕೊಮ್ಮೆ ಹುಟ್ಟು ದಿನಕ್ಕೊಮ್ಮೆ ಸಾವು ಅನ್ನೋಹಂಗ ಸೂರ್ಯ ಚಂದ್ರಾಮರು ಹುಟ್ಟುತ್ತಿದ್ದರು…ಸಾಯುತ್ತಿದ್ದರು. ಹಿಂಗೇ ಹುಟ್ಟು ಸಾವುಗಳ ಕೈ ಹಿಡಿದುಕೊಂಡೇ ಮಂದಿಯ ಬದುಕು ಮುಂದೆ ಮುಂದೆ ನಡೆಯುತ್ತಿತ್ತು. ಎಲ್ಲಿಗೆ ಹೋಗಿ ತಲುಪಬೇಕು ಅನ್ನುವ ಗುರಿ ಗೊತ್ತಿರಲಿಲ್ಲವಾದರೂ ನಡೆಯುವುದೊಂದೇ ತನ್ನ ಗುರಿಯೆನ್ನುವಂತೆ ಹೊತ್ತು ನಡೆಯುತ್ತಲೇ ಇತ್ತು ತನ್ನದೇ ಗತಿಯಿಂದ !” ಬದುಕು (ಕಾದಂಬರಿ) – ಪುಟ ನಂ -517

‘ಬದುಕು’ ಕಾದಂಬರಿಯಲ್ಲಿ ಹೀಗೆ ಬರೆದಿರುವ ಗೀತಾ ನಾಗಭೂಷಣ ಅವರು ಸಾವಿನ ಕೈಹಿಡಿದು ಎಲ್ಲಿಗೋ ಹೋಗಿದ್ದಾರೆ. ಆದರೆ ಅವರು ನಮ್ಮ ಕೈಗಿತ್ತ ‘ಬದುಕು’ ಓದುವುದು, ಅದರೊಂದಿಗೆ ಸಂವಾದಿಸುವುದು ಈ ಹೊತ್ತಿನ ಜರೂರತ್ತು. ಸದಾ ಅವರು ಜಾತಿಯ ಶೋಷಣೆಗಳನ್ನು, ಸ್ತ್ರೀ ದೌರ್ಜನ್ಯಗಳನ್ನು ತಮ್ಮ ಬರಹದ ಮೂಲಕ ವಿರೋಧಿಸುತ್ತಲೇ ಬಂದಿದ್ದಾರೆ. ಉತ್ತರ ಕರ್ನಾಟಕದಲ್ಲಿ ಆಚರಣೆಯಲ್ಲಿರುವ ಅನಿಷ್ಟ ಪದ್ಧತಿಗಳಿಗೆ ತಮ್ಮ ಬರಹದ ಮೂಲಕ ಕನ್ನಡಿ ಹಿಡಿದು ಹೊರ ನಾಡಿಗೆ ಪರಿಚಯಿಸುವ ಕೆಲಸ ಸಹ ಮಾಡಿದ್ದಾರೆ. ಮುಖ್ಯವಾಗಿ ಅವರು ಬಳಸಿಕೊಂಡಿರುವ ನೆಲದ ಭಾಷೆ ನಮ್ಮೆಲ್ಲರಿಗೂ ನಿಜವಾಗಿಯೂ ಸ್ಪೂರ್ತಿ ಆಗಬೇಕಿದೆ.

ಕೆಲವು ತಿಂಗಳ ಕೆಳಗೆ ಆತ್ಮೀಯ ಗೆಳೆಯರೊಬ್ಬರು ಹೇಳಿದ ಕಾರಣಕ್ಕೆ ಒಂದಿಷ್ಟು ಪ್ರಶ್ನೆಗಳು ಬರೆದುಕೊಂಡು ಅವರ ಮನೆಗೆ ಒಂದು ಸಣ್ಣ ಸಂದರ್ಶನಕ್ಕಾಗಿ ಹೋಗಿದೆ. ” ಹೆಲ್ತ್ ಸರಿಯಲ್ಲ ಈಗ ಯಾವ ಇಂಟರ್ವ್ಯೂ ಸಹ ಕೊಡ್ತಿಲ್ಲಪ್ಪ” ಅಂದ್ರು. ಆವತ್ತು ತುಸು ಬೇಜಾರು ಮಾಡಿಕೊಂಡೆ ಹೊರ ಬಂದವನ ಕೈಯಲ್ಲಿನ ಪ್ರಶ್ನೆಗಳು ಪ್ರಶ್ನೆಗಳಾಗಿಯೇ ಉಳಿಸಿ ಹೋದ ಮೇಡಂ ಅವರು ತಮ್ಮ ಕಾದಂಬರಿಯಲ್ಲಿ ಒಂದುದು ಕಡೆ ಹೀಗೆ ಬರೆಯುತ್ತಾರೆ,
“ಹಣ್ಣೆಲಿ ಉದುರಿ ಹೊಸಾ ಎಲಿ ಚಿಗುರೊದು ಆ ಭಗವಂತ ಹಾಕಿದ ನೇಮದಾ. ಸತ್ತಾಗಿನ ದುಕ್ಕ, ಹಡದಾಗಿನ ಬ್ಯಾನಿ ನೆನಪಿಟ್ಟುಕೊಂಡರ ಈ ದುನಿಯಾದಾರೀನೇ ನಡೀತಿರಲಿಲ್ಲ”…. ಬದುಕು(ಕಾದಂಬರಿ) ಪುಟ ನಂ -428.

ಸದಾ ಹೊಸತನಕ್ಕೆ ತುಡಿಯುತ್ತಿದ್ದ ಅವರ ಬರಹ ನಮ್ಮೊಳಗೆ ಇನ್ನಷ್ಟು ಹೊಸ ಬೆಳಕಿಂಡಿಗಳು ತೆರೆದಿದೆ. ಒಬ್ಬ ಬರಹಗಾರ ಎಂದಿಗೂ ಸಾಯುವುದಿಲ್ಲ. ಪುಸ್ತಕಗಳ ಜೊತೆ ಸದಾ ಜೀವಂತವಾಗಿ ಉಸಿರಾಡುತ್ತಲೇ ಇರುತ್ತಾರೆ. ಓದುಗರೊಂದಿಗೆ ಮಾತಾಡುತ್ತಲೇ ಇರುತ್ತಾರೆ.


‘ಯುದ್ಧ ಮತ್ತು ಮಕ್ಕಳು’: ಪೋಷಕರು ಓದಬೇಕಾದ ಇಂದಿನ ಕಾಲಕ್ಕೂ ಪ್ರಸ್ತುತ ಕೃತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಗೀತಾ ನಾಗಭೂಷಣರ ‘ಬದುಕು’ ಕನ್ನಡದ ಅತ್ಯುತ್ತಮ ಕಾದಂಬರಿಗಳಲ್ಲಿ ಒಂದು, ಎಂಬುದು ನನ್ನ ಅಭಿಪ್ರಾಯ.

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...