Homeಮುಖಪುಟಗೀತಾ ನಾಗಭೂಷಣ ತಮ್ಮ ಪುಸ್ತಕಗಳ ಜೊತೆ ಸದಾ ಜೀವಂತವಾಗಿ ಇರುತ್ತಾರೆ: ಶ್ರದ್ಧಾಂಜಲಿ

ಗೀತಾ ನಾಗಭೂಷಣ ತಮ್ಮ ಪುಸ್ತಕಗಳ ಜೊತೆ ಸದಾ ಜೀವಂತವಾಗಿ ಇರುತ್ತಾರೆ: ಶ್ರದ್ಧಾಂಜಲಿ

ನಮ್ಮಿಂದ ಅವರು ದೂರವಾಗಿರುವ ಈ ಸಂದರ್ಭದಲ್ಲಿ ಅವರ ಬಹುಮುಖ್ಯ ಕೃತಿಗಳು ಚರ್ಚೆಗೆ ಒಳಪಡಿಸುವುದೆ ಅವರಿಗೆ ನಾವು ಸಲ್ಲಿಸಬೇಕಾದ ನಿಜವಾದ ಗೌರವ ಆಗಿದೆ.

- Advertisement -
- Advertisement -

ನಾನಾಗ ಪಿಯುಸಿ ಓದುತ್ತಿದ್ದೆ. ಮುಂಜಾನೆ 8 ಗಂಟೆಗೆ ಕಾಲೇಜು ಇರುತ್ತಿದ್ದರಿಂದ ಬೇಗನೆ ಎದ್ದು ಹೊರಡಬೇಕಿತ್ತು. ಗೀತಾ ನಾಗಭೂಷಣ ಅವರ ಮನೆ ಮುಂದೆ ಹಾಯ್ದು ಹೋಗುತ್ತಿದ್ದೆವು. ಫಸ್ಟ್ ಪಿಯುಸಿ ಇದ್ದಾಗ ಇವರ್ಯಾರು ಅಂಬೋದು ನಮಗೆ ಗೊತ್ತಿರಲಿಲ್ಲ. ಟಿ.ವಿ ನೋಡುತ್ತಾ ಕುಳಿತುಕೊಂಡಿರುತ್ತಿದ್ದ ವಯಸ್ಸಾದ ಅಜ್ಜಿ ಈ ನಾಡಿನ ಬಹುದೊಡ್ಡ ಬರಹಗಾರ್ತಿ ಅಂತ ಗೊತ್ತಾಗಿದ್ದು, ಪಿಯುಸಿ ಮುಗಿಸುವ ಹೊತ್ತಿಗೆ. ಹೈಸ್ಕೂಲನಲ್ಲಿ ಪಠ್ಯಕ್ಕೆ ಇದ್ದ ಅವರ “ಅವ್ವ” ಕಥೆ ಓದಿದ ನೆನಪು . ಅವರಿಗೆ ಪರಿಚಯವಿಲ್ಲದ ನಾನು ಒಂದು ದಿನ ಅವರ ಮನೆಗೆ ಹೋಗಿ ಮೇಡಂ ಅವರಿಗೆ ನನ್ನ ಹೆಸರು, ಕಾಲೇಜು ಪರಿಚಯ ಮಾಡಿಸಿ “ನಿಮ್ಮ ಬುಕ್ಸ್ ಬೇಕಾಗಿತ್ತು ನಮ್ಮ ಕಾಲೇಜಿನ ಲೈಬ್ರರಿಗೆ ಫ್ರೀಯಾಗಿ ಕೊಡೋಕೆ ಸಾಧ್ಯನಾ?” ಅಂತ ಕೇಳಿದೆ. ಅವರು ತುಸು ಯೋಚಿಸಿ, “ನಿಮ್ಮ ಪ್ರಿನ್ಸಿಪಾಲರಿಂದ ಒಂದು ಲೆಟರ್ ತಗೊಂಡ ಬಾರಪ್ಪ ಕೊಡ್ತೀನಿ” ಅಂದ್ರು. ಮರುದಿನ ಲೆಟರ್ ಬರೆಸಿಕೊಂಡು ಹೋಗಿ ಅವರ ಕೈಗಿಟ್ಟೆ ಅವರು ಮರುಮಾತನಾಡದೆ ಮುಗುಳ್ನಗುತ್ತಲೆ ಪುಸ್ತಕದ ಹೊರೆ ಕೈಗಿಟ್ಟರು. ಅದು ಅವರ ಜೊತೆಗಿನ ನನ್ನ ಮೊದಲ ಭೇಟಿ.

ಮುಂದೆ ಅವರ ‘ಬದುಕು’ ಕಾದಂಬರಿ ಓದಿದೆ. ಆವಾಗ ಅರ್ಥ ಆಯ್ತು – ನಾ ಭೇಟಿ ಮಾಡಿದ್ದು, ನಮ್ಮ ಕಣ್ಣೆದುರೆ ಕೂರುತ್ತಿದ್ದ ಅಜ್ಜಿ ಅಸಾಮಾನ್ಯ ಬರಹಗಾರ್ತಿ ಅಂತ. ಆಮೇಲೆ ನನ್ನಲ್ಲಿ ಇದ್ದ ಬೃಹತ್ ಕಾದಂಬರಿ ‘ಬದುಕು’ ಹೊತ್ತುಕೊಂಡು ಹೋಗಿ, ಅವರಿಂದ ಆ ಪುಸ್ತಕದ ಮೇಲೆ ಆಟೋಗ್ರಾಫ್ ಹಾಕೊಂಡು ಬಂದೆ.

ನಮ್ಮಿಂದ ಅವರು ದೂರವಾಗಿರುವ ಈ ಸಂದರ್ಭದಲ್ಲಿ ಅವರ ಬಹುಮುಖ್ಯ ಕೃತಿಗಳು ಚರ್ಚೆಗೆ ಒಳಪಡಿಸುವುದೆ ಅವರಿಗೆ ನಾವು ಸಲ್ಲಿಸಬೇಕಾದ ನಿಜವಾದ ಗೌರವ ಆಗಿದೆ.

“ದಿನಕ್ಕೊಮ್ಮೆ ಹುಟ್ಟು ದಿನಕ್ಕೊಮ್ಮೆ ಸಾವು ಅನ್ನೋಹಂಗ ಸೂರ್ಯ ಚಂದ್ರಾಮರು ಹುಟ್ಟುತ್ತಿದ್ದರು…ಸಾಯುತ್ತಿದ್ದರು. ಹಿಂಗೇ ಹುಟ್ಟು ಸಾವುಗಳ ಕೈ ಹಿಡಿದುಕೊಂಡೇ ಮಂದಿಯ ಬದುಕು ಮುಂದೆ ಮುಂದೆ ನಡೆಯುತ್ತಿತ್ತು. ಎಲ್ಲಿಗೆ ಹೋಗಿ ತಲುಪಬೇಕು ಅನ್ನುವ ಗುರಿ ಗೊತ್ತಿರಲಿಲ್ಲವಾದರೂ ನಡೆಯುವುದೊಂದೇ ತನ್ನ ಗುರಿಯೆನ್ನುವಂತೆ ಹೊತ್ತು ನಡೆಯುತ್ತಲೇ ಇತ್ತು ತನ್ನದೇ ಗತಿಯಿಂದ !” ಬದುಕು (ಕಾದಂಬರಿ) – ಪುಟ ನಂ -517

‘ಬದುಕು’ ಕಾದಂಬರಿಯಲ್ಲಿ ಹೀಗೆ ಬರೆದಿರುವ ಗೀತಾ ನಾಗಭೂಷಣ ಅವರು ಸಾವಿನ ಕೈಹಿಡಿದು ಎಲ್ಲಿಗೋ ಹೋಗಿದ್ದಾರೆ. ಆದರೆ ಅವರು ನಮ್ಮ ಕೈಗಿತ್ತ ‘ಬದುಕು’ ಓದುವುದು, ಅದರೊಂದಿಗೆ ಸಂವಾದಿಸುವುದು ಈ ಹೊತ್ತಿನ ಜರೂರತ್ತು. ಸದಾ ಅವರು ಜಾತಿಯ ಶೋಷಣೆಗಳನ್ನು, ಸ್ತ್ರೀ ದೌರ್ಜನ್ಯಗಳನ್ನು ತಮ್ಮ ಬರಹದ ಮೂಲಕ ವಿರೋಧಿಸುತ್ತಲೇ ಬಂದಿದ್ದಾರೆ. ಉತ್ತರ ಕರ್ನಾಟಕದಲ್ಲಿ ಆಚರಣೆಯಲ್ಲಿರುವ ಅನಿಷ್ಟ ಪದ್ಧತಿಗಳಿಗೆ ತಮ್ಮ ಬರಹದ ಮೂಲಕ ಕನ್ನಡಿ ಹಿಡಿದು ಹೊರ ನಾಡಿಗೆ ಪರಿಚಯಿಸುವ ಕೆಲಸ ಸಹ ಮಾಡಿದ್ದಾರೆ. ಮುಖ್ಯವಾಗಿ ಅವರು ಬಳಸಿಕೊಂಡಿರುವ ನೆಲದ ಭಾಷೆ ನಮ್ಮೆಲ್ಲರಿಗೂ ನಿಜವಾಗಿಯೂ ಸ್ಪೂರ್ತಿ ಆಗಬೇಕಿದೆ.

ಕೆಲವು ತಿಂಗಳ ಕೆಳಗೆ ಆತ್ಮೀಯ ಗೆಳೆಯರೊಬ್ಬರು ಹೇಳಿದ ಕಾರಣಕ್ಕೆ ಒಂದಿಷ್ಟು ಪ್ರಶ್ನೆಗಳು ಬರೆದುಕೊಂಡು ಅವರ ಮನೆಗೆ ಒಂದು ಸಣ್ಣ ಸಂದರ್ಶನಕ್ಕಾಗಿ ಹೋಗಿದೆ. ” ಹೆಲ್ತ್ ಸರಿಯಲ್ಲ ಈಗ ಯಾವ ಇಂಟರ್ವ್ಯೂ ಸಹ ಕೊಡ್ತಿಲ್ಲಪ್ಪ” ಅಂದ್ರು. ಆವತ್ತು ತುಸು ಬೇಜಾರು ಮಾಡಿಕೊಂಡೆ ಹೊರ ಬಂದವನ ಕೈಯಲ್ಲಿನ ಪ್ರಶ್ನೆಗಳು ಪ್ರಶ್ನೆಗಳಾಗಿಯೇ ಉಳಿಸಿ ಹೋದ ಮೇಡಂ ಅವರು ತಮ್ಮ ಕಾದಂಬರಿಯಲ್ಲಿ ಒಂದುದು ಕಡೆ ಹೀಗೆ ಬರೆಯುತ್ತಾರೆ,
“ಹಣ್ಣೆಲಿ ಉದುರಿ ಹೊಸಾ ಎಲಿ ಚಿಗುರೊದು ಆ ಭಗವಂತ ಹಾಕಿದ ನೇಮದಾ. ಸತ್ತಾಗಿನ ದುಕ್ಕ, ಹಡದಾಗಿನ ಬ್ಯಾನಿ ನೆನಪಿಟ್ಟುಕೊಂಡರ ಈ ದುನಿಯಾದಾರೀನೇ ನಡೀತಿರಲಿಲ್ಲ”…. ಬದುಕು(ಕಾದಂಬರಿ) ಪುಟ ನಂ -428.

ಸದಾ ಹೊಸತನಕ್ಕೆ ತುಡಿಯುತ್ತಿದ್ದ ಅವರ ಬರಹ ನಮ್ಮೊಳಗೆ ಇನ್ನಷ್ಟು ಹೊಸ ಬೆಳಕಿಂಡಿಗಳು ತೆರೆದಿದೆ. ಒಬ್ಬ ಬರಹಗಾರ ಎಂದಿಗೂ ಸಾಯುವುದಿಲ್ಲ. ಪುಸ್ತಕಗಳ ಜೊತೆ ಸದಾ ಜೀವಂತವಾಗಿ ಉಸಿರಾಡುತ್ತಲೇ ಇರುತ್ತಾರೆ. ಓದುಗರೊಂದಿಗೆ ಮಾತಾಡುತ್ತಲೇ ಇರುತ್ತಾರೆ.


‘ಯುದ್ಧ ಮತ್ತು ಮಕ್ಕಳು’: ಪೋಷಕರು ಓದಬೇಕಾದ ಇಂದಿನ ಕಾಲಕ್ಕೂ ಪ್ರಸ್ತುತ ಕೃತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಗೀತಾ ನಾಗಭೂಷಣರ ‘ಬದುಕು’ ಕನ್ನಡದ ಅತ್ಯುತ್ತಮ ಕಾದಂಬರಿಗಳಲ್ಲಿ ಒಂದು, ಎಂಬುದು ನನ್ನ ಅಭಿಪ್ರಾಯ.

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...