Homeಮುಖಪುಟಗೀತಾ ನಾಗಭೂಷಣ ತಮ್ಮ ಪುಸ್ತಕಗಳ ಜೊತೆ ಸದಾ ಜೀವಂತವಾಗಿ ಇರುತ್ತಾರೆ: ಶ್ರದ್ಧಾಂಜಲಿ

ಗೀತಾ ನಾಗಭೂಷಣ ತಮ್ಮ ಪುಸ್ತಕಗಳ ಜೊತೆ ಸದಾ ಜೀವಂತವಾಗಿ ಇರುತ್ತಾರೆ: ಶ್ರದ್ಧಾಂಜಲಿ

ನಮ್ಮಿಂದ ಅವರು ದೂರವಾಗಿರುವ ಈ ಸಂದರ್ಭದಲ್ಲಿ ಅವರ ಬಹುಮುಖ್ಯ ಕೃತಿಗಳು ಚರ್ಚೆಗೆ ಒಳಪಡಿಸುವುದೆ ಅವರಿಗೆ ನಾವು ಸಲ್ಲಿಸಬೇಕಾದ ನಿಜವಾದ ಗೌರವ ಆಗಿದೆ.

- Advertisement -
- Advertisement -

ನಾನಾಗ ಪಿಯುಸಿ ಓದುತ್ತಿದ್ದೆ. ಮುಂಜಾನೆ 8 ಗಂಟೆಗೆ ಕಾಲೇಜು ಇರುತ್ತಿದ್ದರಿಂದ ಬೇಗನೆ ಎದ್ದು ಹೊರಡಬೇಕಿತ್ತು. ಗೀತಾ ನಾಗಭೂಷಣ ಅವರ ಮನೆ ಮುಂದೆ ಹಾಯ್ದು ಹೋಗುತ್ತಿದ್ದೆವು. ಫಸ್ಟ್ ಪಿಯುಸಿ ಇದ್ದಾಗ ಇವರ್ಯಾರು ಅಂಬೋದು ನಮಗೆ ಗೊತ್ತಿರಲಿಲ್ಲ. ಟಿ.ವಿ ನೋಡುತ್ತಾ ಕುಳಿತುಕೊಂಡಿರುತ್ತಿದ್ದ ವಯಸ್ಸಾದ ಅಜ್ಜಿ ಈ ನಾಡಿನ ಬಹುದೊಡ್ಡ ಬರಹಗಾರ್ತಿ ಅಂತ ಗೊತ್ತಾಗಿದ್ದು, ಪಿಯುಸಿ ಮುಗಿಸುವ ಹೊತ್ತಿಗೆ. ಹೈಸ್ಕೂಲನಲ್ಲಿ ಪಠ್ಯಕ್ಕೆ ಇದ್ದ ಅವರ “ಅವ್ವ” ಕಥೆ ಓದಿದ ನೆನಪು . ಅವರಿಗೆ ಪರಿಚಯವಿಲ್ಲದ ನಾನು ಒಂದು ದಿನ ಅವರ ಮನೆಗೆ ಹೋಗಿ ಮೇಡಂ ಅವರಿಗೆ ನನ್ನ ಹೆಸರು, ಕಾಲೇಜು ಪರಿಚಯ ಮಾಡಿಸಿ “ನಿಮ್ಮ ಬುಕ್ಸ್ ಬೇಕಾಗಿತ್ತು ನಮ್ಮ ಕಾಲೇಜಿನ ಲೈಬ್ರರಿಗೆ ಫ್ರೀಯಾಗಿ ಕೊಡೋಕೆ ಸಾಧ್ಯನಾ?” ಅಂತ ಕೇಳಿದೆ. ಅವರು ತುಸು ಯೋಚಿಸಿ, “ನಿಮ್ಮ ಪ್ರಿನ್ಸಿಪಾಲರಿಂದ ಒಂದು ಲೆಟರ್ ತಗೊಂಡ ಬಾರಪ್ಪ ಕೊಡ್ತೀನಿ” ಅಂದ್ರು. ಮರುದಿನ ಲೆಟರ್ ಬರೆಸಿಕೊಂಡು ಹೋಗಿ ಅವರ ಕೈಗಿಟ್ಟೆ ಅವರು ಮರುಮಾತನಾಡದೆ ಮುಗುಳ್ನಗುತ್ತಲೆ ಪುಸ್ತಕದ ಹೊರೆ ಕೈಗಿಟ್ಟರು. ಅದು ಅವರ ಜೊತೆಗಿನ ನನ್ನ ಮೊದಲ ಭೇಟಿ.

ಮುಂದೆ ಅವರ ‘ಬದುಕು’ ಕಾದಂಬರಿ ಓದಿದೆ. ಆವಾಗ ಅರ್ಥ ಆಯ್ತು – ನಾ ಭೇಟಿ ಮಾಡಿದ್ದು, ನಮ್ಮ ಕಣ್ಣೆದುರೆ ಕೂರುತ್ತಿದ್ದ ಅಜ್ಜಿ ಅಸಾಮಾನ್ಯ ಬರಹಗಾರ್ತಿ ಅಂತ. ಆಮೇಲೆ ನನ್ನಲ್ಲಿ ಇದ್ದ ಬೃಹತ್ ಕಾದಂಬರಿ ‘ಬದುಕು’ ಹೊತ್ತುಕೊಂಡು ಹೋಗಿ, ಅವರಿಂದ ಆ ಪುಸ್ತಕದ ಮೇಲೆ ಆಟೋಗ್ರಾಫ್ ಹಾಕೊಂಡು ಬಂದೆ.

ನಮ್ಮಿಂದ ಅವರು ದೂರವಾಗಿರುವ ಈ ಸಂದರ್ಭದಲ್ಲಿ ಅವರ ಬಹುಮುಖ್ಯ ಕೃತಿಗಳು ಚರ್ಚೆಗೆ ಒಳಪಡಿಸುವುದೆ ಅವರಿಗೆ ನಾವು ಸಲ್ಲಿಸಬೇಕಾದ ನಿಜವಾದ ಗೌರವ ಆಗಿದೆ.

“ದಿನಕ್ಕೊಮ್ಮೆ ಹುಟ್ಟು ದಿನಕ್ಕೊಮ್ಮೆ ಸಾವು ಅನ್ನೋಹಂಗ ಸೂರ್ಯ ಚಂದ್ರಾಮರು ಹುಟ್ಟುತ್ತಿದ್ದರು…ಸಾಯುತ್ತಿದ್ದರು. ಹಿಂಗೇ ಹುಟ್ಟು ಸಾವುಗಳ ಕೈ ಹಿಡಿದುಕೊಂಡೇ ಮಂದಿಯ ಬದುಕು ಮುಂದೆ ಮುಂದೆ ನಡೆಯುತ್ತಿತ್ತು. ಎಲ್ಲಿಗೆ ಹೋಗಿ ತಲುಪಬೇಕು ಅನ್ನುವ ಗುರಿ ಗೊತ್ತಿರಲಿಲ್ಲವಾದರೂ ನಡೆಯುವುದೊಂದೇ ತನ್ನ ಗುರಿಯೆನ್ನುವಂತೆ ಹೊತ್ತು ನಡೆಯುತ್ತಲೇ ಇತ್ತು ತನ್ನದೇ ಗತಿಯಿಂದ !” ಬದುಕು (ಕಾದಂಬರಿ) – ಪುಟ ನಂ -517

‘ಬದುಕು’ ಕಾದಂಬರಿಯಲ್ಲಿ ಹೀಗೆ ಬರೆದಿರುವ ಗೀತಾ ನಾಗಭೂಷಣ ಅವರು ಸಾವಿನ ಕೈಹಿಡಿದು ಎಲ್ಲಿಗೋ ಹೋಗಿದ್ದಾರೆ. ಆದರೆ ಅವರು ನಮ್ಮ ಕೈಗಿತ್ತ ‘ಬದುಕು’ ಓದುವುದು, ಅದರೊಂದಿಗೆ ಸಂವಾದಿಸುವುದು ಈ ಹೊತ್ತಿನ ಜರೂರತ್ತು. ಸದಾ ಅವರು ಜಾತಿಯ ಶೋಷಣೆಗಳನ್ನು, ಸ್ತ್ರೀ ದೌರ್ಜನ್ಯಗಳನ್ನು ತಮ್ಮ ಬರಹದ ಮೂಲಕ ವಿರೋಧಿಸುತ್ತಲೇ ಬಂದಿದ್ದಾರೆ. ಉತ್ತರ ಕರ್ನಾಟಕದಲ್ಲಿ ಆಚರಣೆಯಲ್ಲಿರುವ ಅನಿಷ್ಟ ಪದ್ಧತಿಗಳಿಗೆ ತಮ್ಮ ಬರಹದ ಮೂಲಕ ಕನ್ನಡಿ ಹಿಡಿದು ಹೊರ ನಾಡಿಗೆ ಪರಿಚಯಿಸುವ ಕೆಲಸ ಸಹ ಮಾಡಿದ್ದಾರೆ. ಮುಖ್ಯವಾಗಿ ಅವರು ಬಳಸಿಕೊಂಡಿರುವ ನೆಲದ ಭಾಷೆ ನಮ್ಮೆಲ್ಲರಿಗೂ ನಿಜವಾಗಿಯೂ ಸ್ಪೂರ್ತಿ ಆಗಬೇಕಿದೆ.

ಕೆಲವು ತಿಂಗಳ ಕೆಳಗೆ ಆತ್ಮೀಯ ಗೆಳೆಯರೊಬ್ಬರು ಹೇಳಿದ ಕಾರಣಕ್ಕೆ ಒಂದಿಷ್ಟು ಪ್ರಶ್ನೆಗಳು ಬರೆದುಕೊಂಡು ಅವರ ಮನೆಗೆ ಒಂದು ಸಣ್ಣ ಸಂದರ್ಶನಕ್ಕಾಗಿ ಹೋಗಿದೆ. ” ಹೆಲ್ತ್ ಸರಿಯಲ್ಲ ಈಗ ಯಾವ ಇಂಟರ್ವ್ಯೂ ಸಹ ಕೊಡ್ತಿಲ್ಲಪ್ಪ” ಅಂದ್ರು. ಆವತ್ತು ತುಸು ಬೇಜಾರು ಮಾಡಿಕೊಂಡೆ ಹೊರ ಬಂದವನ ಕೈಯಲ್ಲಿನ ಪ್ರಶ್ನೆಗಳು ಪ್ರಶ್ನೆಗಳಾಗಿಯೇ ಉಳಿಸಿ ಹೋದ ಮೇಡಂ ಅವರು ತಮ್ಮ ಕಾದಂಬರಿಯಲ್ಲಿ ಒಂದುದು ಕಡೆ ಹೀಗೆ ಬರೆಯುತ್ತಾರೆ,
“ಹಣ್ಣೆಲಿ ಉದುರಿ ಹೊಸಾ ಎಲಿ ಚಿಗುರೊದು ಆ ಭಗವಂತ ಹಾಕಿದ ನೇಮದಾ. ಸತ್ತಾಗಿನ ದುಕ್ಕ, ಹಡದಾಗಿನ ಬ್ಯಾನಿ ನೆನಪಿಟ್ಟುಕೊಂಡರ ಈ ದುನಿಯಾದಾರೀನೇ ನಡೀತಿರಲಿಲ್ಲ”…. ಬದುಕು(ಕಾದಂಬರಿ) ಪುಟ ನಂ -428.

ಸದಾ ಹೊಸತನಕ್ಕೆ ತುಡಿಯುತ್ತಿದ್ದ ಅವರ ಬರಹ ನಮ್ಮೊಳಗೆ ಇನ್ನಷ್ಟು ಹೊಸ ಬೆಳಕಿಂಡಿಗಳು ತೆರೆದಿದೆ. ಒಬ್ಬ ಬರಹಗಾರ ಎಂದಿಗೂ ಸಾಯುವುದಿಲ್ಲ. ಪುಸ್ತಕಗಳ ಜೊತೆ ಸದಾ ಜೀವಂತವಾಗಿ ಉಸಿರಾಡುತ್ತಲೇ ಇರುತ್ತಾರೆ. ಓದುಗರೊಂದಿಗೆ ಮಾತಾಡುತ್ತಲೇ ಇರುತ್ತಾರೆ.


‘ಯುದ್ಧ ಮತ್ತು ಮಕ್ಕಳು’: ಪೋಷಕರು ಓದಬೇಕಾದ ಇಂದಿನ ಕಾಲಕ್ಕೂ ಪ್ರಸ್ತುತ ಕೃತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಗೀತಾ ನಾಗಭೂಷಣರ ‘ಬದುಕು’ ಕನ್ನಡದ ಅತ್ಯುತ್ತಮ ಕಾದಂಬರಿಗಳಲ್ಲಿ ಒಂದು, ಎಂಬುದು ನನ್ನ ಅಭಿಪ್ರಾಯ.

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...