Homeಮುಖಪುಟಗೀತಾ ನಾಗಭೂಷಣ ತಮ್ಮ ಪುಸ್ತಕಗಳ ಜೊತೆ ಸದಾ ಜೀವಂತವಾಗಿ ಇರುತ್ತಾರೆ: ಶ್ರದ್ಧಾಂಜಲಿ

ಗೀತಾ ನಾಗಭೂಷಣ ತಮ್ಮ ಪುಸ್ತಕಗಳ ಜೊತೆ ಸದಾ ಜೀವಂತವಾಗಿ ಇರುತ್ತಾರೆ: ಶ್ರದ್ಧಾಂಜಲಿ

ನಮ್ಮಿಂದ ಅವರು ದೂರವಾಗಿರುವ ಈ ಸಂದರ್ಭದಲ್ಲಿ ಅವರ ಬಹುಮುಖ್ಯ ಕೃತಿಗಳು ಚರ್ಚೆಗೆ ಒಳಪಡಿಸುವುದೆ ಅವರಿಗೆ ನಾವು ಸಲ್ಲಿಸಬೇಕಾದ ನಿಜವಾದ ಗೌರವ ಆಗಿದೆ.

- Advertisement -
- Advertisement -

ನಾನಾಗ ಪಿಯುಸಿ ಓದುತ್ತಿದ್ದೆ. ಮುಂಜಾನೆ 8 ಗಂಟೆಗೆ ಕಾಲೇಜು ಇರುತ್ತಿದ್ದರಿಂದ ಬೇಗನೆ ಎದ್ದು ಹೊರಡಬೇಕಿತ್ತು. ಗೀತಾ ನಾಗಭೂಷಣ ಅವರ ಮನೆ ಮುಂದೆ ಹಾಯ್ದು ಹೋಗುತ್ತಿದ್ದೆವು. ಫಸ್ಟ್ ಪಿಯುಸಿ ಇದ್ದಾಗ ಇವರ್ಯಾರು ಅಂಬೋದು ನಮಗೆ ಗೊತ್ತಿರಲಿಲ್ಲ. ಟಿ.ವಿ ನೋಡುತ್ತಾ ಕುಳಿತುಕೊಂಡಿರುತ್ತಿದ್ದ ವಯಸ್ಸಾದ ಅಜ್ಜಿ ಈ ನಾಡಿನ ಬಹುದೊಡ್ಡ ಬರಹಗಾರ್ತಿ ಅಂತ ಗೊತ್ತಾಗಿದ್ದು, ಪಿಯುಸಿ ಮುಗಿಸುವ ಹೊತ್ತಿಗೆ. ಹೈಸ್ಕೂಲನಲ್ಲಿ ಪಠ್ಯಕ್ಕೆ ಇದ್ದ ಅವರ “ಅವ್ವ” ಕಥೆ ಓದಿದ ನೆನಪು . ಅವರಿಗೆ ಪರಿಚಯವಿಲ್ಲದ ನಾನು ಒಂದು ದಿನ ಅವರ ಮನೆಗೆ ಹೋಗಿ ಮೇಡಂ ಅವರಿಗೆ ನನ್ನ ಹೆಸರು, ಕಾಲೇಜು ಪರಿಚಯ ಮಾಡಿಸಿ “ನಿಮ್ಮ ಬುಕ್ಸ್ ಬೇಕಾಗಿತ್ತು ನಮ್ಮ ಕಾಲೇಜಿನ ಲೈಬ್ರರಿಗೆ ಫ್ರೀಯಾಗಿ ಕೊಡೋಕೆ ಸಾಧ್ಯನಾ?” ಅಂತ ಕೇಳಿದೆ. ಅವರು ತುಸು ಯೋಚಿಸಿ, “ನಿಮ್ಮ ಪ್ರಿನ್ಸಿಪಾಲರಿಂದ ಒಂದು ಲೆಟರ್ ತಗೊಂಡ ಬಾರಪ್ಪ ಕೊಡ್ತೀನಿ” ಅಂದ್ರು. ಮರುದಿನ ಲೆಟರ್ ಬರೆಸಿಕೊಂಡು ಹೋಗಿ ಅವರ ಕೈಗಿಟ್ಟೆ ಅವರು ಮರುಮಾತನಾಡದೆ ಮುಗುಳ್ನಗುತ್ತಲೆ ಪುಸ್ತಕದ ಹೊರೆ ಕೈಗಿಟ್ಟರು. ಅದು ಅವರ ಜೊತೆಗಿನ ನನ್ನ ಮೊದಲ ಭೇಟಿ.

ಮುಂದೆ ಅವರ ‘ಬದುಕು’ ಕಾದಂಬರಿ ಓದಿದೆ. ಆವಾಗ ಅರ್ಥ ಆಯ್ತು – ನಾ ಭೇಟಿ ಮಾಡಿದ್ದು, ನಮ್ಮ ಕಣ್ಣೆದುರೆ ಕೂರುತ್ತಿದ್ದ ಅಜ್ಜಿ ಅಸಾಮಾನ್ಯ ಬರಹಗಾರ್ತಿ ಅಂತ. ಆಮೇಲೆ ನನ್ನಲ್ಲಿ ಇದ್ದ ಬೃಹತ್ ಕಾದಂಬರಿ ‘ಬದುಕು’ ಹೊತ್ತುಕೊಂಡು ಹೋಗಿ, ಅವರಿಂದ ಆ ಪುಸ್ತಕದ ಮೇಲೆ ಆಟೋಗ್ರಾಫ್ ಹಾಕೊಂಡು ಬಂದೆ.

ನಮ್ಮಿಂದ ಅವರು ದೂರವಾಗಿರುವ ಈ ಸಂದರ್ಭದಲ್ಲಿ ಅವರ ಬಹುಮುಖ್ಯ ಕೃತಿಗಳು ಚರ್ಚೆಗೆ ಒಳಪಡಿಸುವುದೆ ಅವರಿಗೆ ನಾವು ಸಲ್ಲಿಸಬೇಕಾದ ನಿಜವಾದ ಗೌರವ ಆಗಿದೆ.

“ದಿನಕ್ಕೊಮ್ಮೆ ಹುಟ್ಟು ದಿನಕ್ಕೊಮ್ಮೆ ಸಾವು ಅನ್ನೋಹಂಗ ಸೂರ್ಯ ಚಂದ್ರಾಮರು ಹುಟ್ಟುತ್ತಿದ್ದರು…ಸಾಯುತ್ತಿದ್ದರು. ಹಿಂಗೇ ಹುಟ್ಟು ಸಾವುಗಳ ಕೈ ಹಿಡಿದುಕೊಂಡೇ ಮಂದಿಯ ಬದುಕು ಮುಂದೆ ಮುಂದೆ ನಡೆಯುತ್ತಿತ್ತು. ಎಲ್ಲಿಗೆ ಹೋಗಿ ತಲುಪಬೇಕು ಅನ್ನುವ ಗುರಿ ಗೊತ್ತಿರಲಿಲ್ಲವಾದರೂ ನಡೆಯುವುದೊಂದೇ ತನ್ನ ಗುರಿಯೆನ್ನುವಂತೆ ಹೊತ್ತು ನಡೆಯುತ್ತಲೇ ಇತ್ತು ತನ್ನದೇ ಗತಿಯಿಂದ !” ಬದುಕು (ಕಾದಂಬರಿ) – ಪುಟ ನಂ -517

‘ಬದುಕು’ ಕಾದಂಬರಿಯಲ್ಲಿ ಹೀಗೆ ಬರೆದಿರುವ ಗೀತಾ ನಾಗಭೂಷಣ ಅವರು ಸಾವಿನ ಕೈಹಿಡಿದು ಎಲ್ಲಿಗೋ ಹೋಗಿದ್ದಾರೆ. ಆದರೆ ಅವರು ನಮ್ಮ ಕೈಗಿತ್ತ ‘ಬದುಕು’ ಓದುವುದು, ಅದರೊಂದಿಗೆ ಸಂವಾದಿಸುವುದು ಈ ಹೊತ್ತಿನ ಜರೂರತ್ತು. ಸದಾ ಅವರು ಜಾತಿಯ ಶೋಷಣೆಗಳನ್ನು, ಸ್ತ್ರೀ ದೌರ್ಜನ್ಯಗಳನ್ನು ತಮ್ಮ ಬರಹದ ಮೂಲಕ ವಿರೋಧಿಸುತ್ತಲೇ ಬಂದಿದ್ದಾರೆ. ಉತ್ತರ ಕರ್ನಾಟಕದಲ್ಲಿ ಆಚರಣೆಯಲ್ಲಿರುವ ಅನಿಷ್ಟ ಪದ್ಧತಿಗಳಿಗೆ ತಮ್ಮ ಬರಹದ ಮೂಲಕ ಕನ್ನಡಿ ಹಿಡಿದು ಹೊರ ನಾಡಿಗೆ ಪರಿಚಯಿಸುವ ಕೆಲಸ ಸಹ ಮಾಡಿದ್ದಾರೆ. ಮುಖ್ಯವಾಗಿ ಅವರು ಬಳಸಿಕೊಂಡಿರುವ ನೆಲದ ಭಾಷೆ ನಮ್ಮೆಲ್ಲರಿಗೂ ನಿಜವಾಗಿಯೂ ಸ್ಪೂರ್ತಿ ಆಗಬೇಕಿದೆ.

ಕೆಲವು ತಿಂಗಳ ಕೆಳಗೆ ಆತ್ಮೀಯ ಗೆಳೆಯರೊಬ್ಬರು ಹೇಳಿದ ಕಾರಣಕ್ಕೆ ಒಂದಿಷ್ಟು ಪ್ರಶ್ನೆಗಳು ಬರೆದುಕೊಂಡು ಅವರ ಮನೆಗೆ ಒಂದು ಸಣ್ಣ ಸಂದರ್ಶನಕ್ಕಾಗಿ ಹೋಗಿದೆ. ” ಹೆಲ್ತ್ ಸರಿಯಲ್ಲ ಈಗ ಯಾವ ಇಂಟರ್ವ್ಯೂ ಸಹ ಕೊಡ್ತಿಲ್ಲಪ್ಪ” ಅಂದ್ರು. ಆವತ್ತು ತುಸು ಬೇಜಾರು ಮಾಡಿಕೊಂಡೆ ಹೊರ ಬಂದವನ ಕೈಯಲ್ಲಿನ ಪ್ರಶ್ನೆಗಳು ಪ್ರಶ್ನೆಗಳಾಗಿಯೇ ಉಳಿಸಿ ಹೋದ ಮೇಡಂ ಅವರು ತಮ್ಮ ಕಾದಂಬರಿಯಲ್ಲಿ ಒಂದುದು ಕಡೆ ಹೀಗೆ ಬರೆಯುತ್ತಾರೆ,
“ಹಣ್ಣೆಲಿ ಉದುರಿ ಹೊಸಾ ಎಲಿ ಚಿಗುರೊದು ಆ ಭಗವಂತ ಹಾಕಿದ ನೇಮದಾ. ಸತ್ತಾಗಿನ ದುಕ್ಕ, ಹಡದಾಗಿನ ಬ್ಯಾನಿ ನೆನಪಿಟ್ಟುಕೊಂಡರ ಈ ದುನಿಯಾದಾರೀನೇ ನಡೀತಿರಲಿಲ್ಲ”…. ಬದುಕು(ಕಾದಂಬರಿ) ಪುಟ ನಂ -428.

ಸದಾ ಹೊಸತನಕ್ಕೆ ತುಡಿಯುತ್ತಿದ್ದ ಅವರ ಬರಹ ನಮ್ಮೊಳಗೆ ಇನ್ನಷ್ಟು ಹೊಸ ಬೆಳಕಿಂಡಿಗಳು ತೆರೆದಿದೆ. ಒಬ್ಬ ಬರಹಗಾರ ಎಂದಿಗೂ ಸಾಯುವುದಿಲ್ಲ. ಪುಸ್ತಕಗಳ ಜೊತೆ ಸದಾ ಜೀವಂತವಾಗಿ ಉಸಿರಾಡುತ್ತಲೇ ಇರುತ್ತಾರೆ. ಓದುಗರೊಂದಿಗೆ ಮಾತಾಡುತ್ತಲೇ ಇರುತ್ತಾರೆ.


‘ಯುದ್ಧ ಮತ್ತು ಮಕ್ಕಳು’: ಪೋಷಕರು ಓದಬೇಕಾದ ಇಂದಿನ ಕಾಲಕ್ಕೂ ಪ್ರಸ್ತುತ ಕೃತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಗೀತಾ ನಾಗಭೂಷಣರ ‘ಬದುಕು’ ಕನ್ನಡದ ಅತ್ಯುತ್ತಮ ಕಾದಂಬರಿಗಳಲ್ಲಿ ಒಂದು, ಎಂಬುದು ನನ್ನ ಅಭಿಪ್ರಾಯ.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....