Homeಮುಖಪುಟ’ಜಾತ್ಯಾತೀತರು’ ಎಂದ ದಲಿತ ಕುಟುಂಬಕ್ಕೆ ಜಾತಿ ಪ್ರಮಾಣಪತ್ರ ನಿರಾಕರಣೆ!

’ಜಾತ್ಯಾತೀತರು’ ಎಂದ ದಲಿತ ಕುಟುಂಬಕ್ಕೆ ಜಾತಿ ಪ್ರಮಾಣಪತ್ರ ನಿರಾಕರಣೆ!

“ನಾವು ಪುಲಯ ಸಮುದಾಯದಲ್ಲಿ ಜನಿಸಿದ್ದೇವೆ ಆದರೆ ನಾವು ಯಾವುದೇ ಧರ್ಮವನ್ನು ಅನುಸರಿಸುವುದಿಲ್ಲ. ನಮ್ಮನ್ನು ನಾವು ಜಾತ್ಯತೀತರೆಂದೆ ಪರಿಗಣಿಸುತ್ತೇವೆ. ನಾವು ಯಾವುದೇ ಧರ್ಮವನ್ನು ಅನುಸರಿಸದಿದ್ದರೆ ನಮ್ಮ ದಲಿತ ಸ್ಥಾನಮಾನವು ಹೇಗೆ ಮಾಯವಾಗುತ್ತದೆ..? ಎಂದು ಕುಟುಂಬ ಪ್ರಶ್ನಿಸುತ್ತದೆ.

- Advertisement -
- Advertisement -

ಜಾತಿ ಪ್ರಮಾಣಪತ್ರ ಅರ್ಜಿಯಲ್ಲಿ ಧರ್ಮದ ಸ್ಥಳದಲ್ಲಿ ಜಾತ್ಯಾತೀತ ಎಂದು ಬರೆದ ಕೇರಳದ ದಲಿತ ಕುಟುಂಬಕ್ಕೆ ಜಾತಿ ಪ್ರಮಾಣ ಪತ್ರ ನಿರಾಕರಿಸಲಾಗಿದೆ. ಯಾವುದೇ ಧರ್ಮವನ್ನು ನಂಬದ ಅಥವಾ ಅನುಸರಿಸದ ಕಾರಣ ಇವರಿಗೆ ಜಾತಿ ಪ್ರಮಾಣಪತ್ರ ನಿರಾಕರಿಸಿದ ತಾಲೂಕು ಅಧಿಕಾರಿಯ ವಿರುದ್ಧ ಅವರು ಪ್ರತಿಭಟನೆ ನಡೆಸುತ್ತಿದ್ದಾರೆ.

ಕೇರಳದ ಪಥನಂತಿಟ್ಟ ಜಿಲ್ಲೆಯ ರಾನ್ನಿಯಲ್ಲಿರುವ ತಾಲ್ಲೂಕು ಕಚೇರಿಯ ಹೊರಗೆ ಅಜ್ಜ-ಅಜ್ಜಿಯರು ಮತ್ತು ಮಕ್ಕಳು ಸೇರಿದಂತೆ ದಲಿತ ಕುಟುಂಬವೊಂದು ಸೆ.28ರಿಂದ ತಾಲ್ಲೂಕು ಕಚೇರಿಯ ಮುಂದೆ ಧರಣಿ ನಡೆಸುತ್ತಿದೆ. ’ನಾನು ವಿದ್ಯಾಭ್ಯಾಸ ಮಾಡಲು ಬಯಸುತ್ತೇನೆ. ಧರ್ಮದ ಹೆಸರಿನಲ್ಲಿ ತಹಶೀಲ್ದಾರ್ ನಮಗೆ ಜಾತಿ ಪ್ರಮಾಣಪತ್ರವನ್ನು ನಿರಾಕರಿಸಿದ್ದಾರೆ. ನಮಗೆ ನ್ಯಾಯ ನೀಡಿ” ಎಂಬ ಫಲಕಗಳನ್ನು ಹಿಡಿದು ಧರಣಿ ನಡೆಸುತ್ತಿದ್ದಾರೆ.

ವಡಸ್ಸೆರಿಕಾ ಗ್ರಾಮದ ಪಿ.ಕೇಶವದೇವು ಪುಲಯ ಸಮುದಾಯಕ್ಕೆ ಸೇರಿದವರಾಗಿದ್ದು, ಕೇರಳದಲ್ಲಿ ಪರಿಶಿಷ್ಟ ಜಾತಿ ಎಂದು ವರ್ಗೀಕರಿಸಲಾಗಿದೆ. ಅವರ ಕುಟುಂಬದ ಹೆಣ್ಣುಮಕ್ಕಳು ಮತ್ತು ಮೊಮ್ಮಕ್ಕಳು ಸೇರಿದಂತೆ ಎಲ್ಲರೂ ಯಾವುದೇ ಧರ್ಮವನ್ನು ಆಚರಿಸುವುದಿಲ್ಲ ಮತ್ತು ತಮ್ಮನ್ನು ಜಾತ್ಯತೀತರು ಎಂದು ಕರೆದುಕೊಳ್ಳುತ್ತಾರೆ.

ಇದನ್ನೂ ಓದಿ: ದಲಿತ ಚಳವಳಿಯಲ್ಲಿ ಯುವ ನಾಯಕತ್ವ ಅರಳುವ ಸಮಯ

ಇತ್ತೀಚೆಗೆ, ಕೇಶವದೇವು ತಮ್ಮ ಮೊಮ್ಮಗಳಿಗೆ ಶೈಕ್ಷಣಿಕ ಉದ್ದೇಶಗಳಿಗಾಗಿ ಜಾತಿ ಪ್ರಮಾಣಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದರು, ಆದರೆ ಅರ್ಜಿದಾರರು ಧರ್ಮವನ್ನು ‘ಜಾತ್ಯತೀತ’ ಎಂದು ಉಲ್ಲೇಖಿಸಿರುವುದರಿಂದ ಪ್ರಮಾಣಪತ್ರವನ್ನು ನೀಡಲು ಸಾಧ್ಯವಿಲ್ಲ ಎಂದು ರಾನ್ನಿಯ ತಹಶೀಲ್ದಾರ್ ಅರ್ಜಿ ತಿರಸ್ಕರಿಸಿದರು.

ನಾವು ಯಾವುದೇ ಧರ್ಮವನ್ನು ಅನುಸರಿಸದ ಕಾರಣ ನಮಗೆ ಜಾತಿ ಪ್ರಮಾಣಪತ್ರವನ್ನು ಹೇಗೆ ನಿರಾಕರಿಸುತ್ತಾರೆ ಎಂದು ಪ್ರಶ್ನಿಸಿ ಕೇಶವದೇವು ಕುಟುಂಬ ಪ್ರತಿಭಟನೆ ನಡೆಸುತ್ತಿದೆ. ಜಾತಿ ಪ್ರಮಾಣಪತ್ರ ಸಲ್ಲಿಸದಿದ್ದರೇ  ಮೊಮ್ಮಕ್ಕಳ ಪದವಿ ಕೋರ್ಸ್ ಪ್ರವೇಶ ರದ್ದುಗೊಳಿಸುತ್ತಾರೆ ಎಂಬ ಆತಂಕವನ್ನು ಕುಟುಂಬ ಸದಸ್ಯರು ಹೊರಹಾಕಿದ್ದಾರೆ. ಅಧಿಕಾರಿಗಳು ಬೇಗನೆ ಮಧ್ಯಪ್ರವೇಶಿಸುತ್ತಾರೆ ಎಂಬ ಭರವಸೆಯಿಂದ ಇಡೀ ಕುಟುಂಬ ಪ್ರತಿಭಟನೆಯನ್ನು ಕೈಗೊಂಡಿದೆ.

“ನಾವು ಪುಲಯ ಸಮುದಾಯದಲ್ಲಿ ಜನಿಸಿದ್ದೇವೆ ಆದರೆ ನಾವು ಯಾವುದೇ ಧರ್ಮವನ್ನು ಅನುಸರಿಸುವುದಿಲ್ಲ. ನಮ್ಮನ್ನು ನಾವು ಜಾತ್ಯತೀತರೆಂದೆ ಪರಿಗಣಿಸುತ್ತೇವೆ. ಆದರೆ ನಾವು ಯಾವುದೇ ಧರ್ಮವನ್ನು ಅನುಸರಿಸದಿದ್ದರೆ ನಮ್ಮ ದಲಿತ ಸ್ಥಾನಮಾನವು ಹೇಗೆ ಮಾಯವಾಗುತ್ತದೆ..? ಸಮಾಜದಲ್ಲಿ ದಲಿತರು ಎದುರಿಸುತ್ತಿರುವ ತಾರತಮ್ಯವೂ ಹೋಗುವುದಿಲ್ಲ. ಹಾಗಾಗಿ ನಮ್ಮ ಪರಿಶಿಷ್ಟ ಜಾತಿ ಸ್ಥಾನಮಾನವನ್ನು ಏಕೆ ನಿರಾಕರಿಸಲಾಗಿದೆ..? ” ಎಂದು ಕೇಶವದೇವು ಪ್ರಶ್ನಿಸುತ್ತಾರೆ.

ಇದನ್ನೂ ಓದಿ: ಚಂದ್ರಶೇಖರ್ ಆಜಾದ್: ಮತ್ತೊಬ್ಬ ದಲಿತ ಸೂರ್ಯನ ಉದಯ

ತನ್ನ ಮೊಮ್ಮಕ್ಕಳಿಗೆ ನೀಡಲಾದ 10 ನೇ ತರಗತಿ ಪ್ರಮಾಣಪತ್ರದಲ್ಲಿ ಅವರ ಧರ್ಮ ಮತ್ತು ಜಾತಿಯನ್ನು “ಜಾತ್ಯತೀತ ಮತ್ತು ಪುಲಯ” ಎಂದು ಉಲ್ಲೇಖಿಸಲಾಗಿದೆ. “ಇದು ರಾಜ್ಯ ಸರ್ಕಾರ ನೀಡಿದ ಎಸ್‌ಎಸ್‌ಎಲ್‌ಸಿ ಪ್ರಮಾಣಪತ್ರ. ಈಗ ಯಾಕೆ ನಮಗೆ ಜಾತಿ ಪ್ರಮಾಣಪತ್ರ ನಿರಾಕರಿಸಲಾಗುತ್ತಿದೆ? ” ಕೇಶವದೇವು ಕೇಳುತ್ತಾರೆ.

2015ರಲ್ಲಿ ಇದೇ ರೀತಿಯ ಸಮಸ್ಯೆಯಾದಾಗ ಈ ಕುಟುಂಬವು ರಾಜ್ಯ ಮಾನವ ಹಕ್ಕುಗಳ ಆಯೋಗವನ್ನು ಸಂಪರ್ಕಿಸಿ ಅನುಕೂಲಕರ ಆದೇಶವನ್ನು ಪಡೆದುಕೊಂಡಿತು, ಅದು ಅವರಿಗೆ ಜಾತಿ ಪ್ರಮಾಣಪತ್ರವನ್ನು ನೀಡಬೇಕು ಎಂದು ಹೇಳಿ, ಧರ್ಮಕ್ಕೆ ಸೂಚಿಸಲಾದ ಅಂಕಣದಲ್ಲಿ ‘Nil’ ಎಂದು ಬರೆಯಲು ಸೂಚಿಸಿತ್ತು. “ನಾವು ಈ ಆದೇಶವನ್ನು ತಹಶೀಲ್ದಾರ್‌ಗೆ ತೋರಿಸಿದರೂ, ಅವರು ನಮಗೆ ಪ್ರಮಾಣಪತ್ರಗಳನ್ನು ನೀಡಲು ನಿರಾಕರಿಸುತ್ತಿದ್ದಾರೆ” ಎಂದು ಕುಟುಂಬ ಆರೋಪಿಸಿದೆ.

ರಾನ್ನಿ ತಹಶೀಲ್ದಾರ್ ನವೀನ್ ಬಾಬು ’ಅರ್ಜಿಯನ್ನು ಮಾಜಿ ತಹಶೀಲ್ದಾರ್ ಅವರು ತಿರಸ್ಕರಿಸಿದ್ದಾರೆ. ಆದರೆ ಇದನ್ನು ಕಾನೂನಿನ ಪ್ರಕಾರ ತಿರಸ್ಕರಿಸಲಾಗಿದೆ. ಸಂವಿಧಾನದ ಪ್ರಕಾರ, ಅವರು ಹಿಂದೂ ಧರ್ಮ, ಬೌದ್ಧಧರ್ಮ ಅಥವಾ ಸಿಖ್ ಧರ್ಮವನ್ನು ಅನುಸರಿಸಿದರೆ ಮಾತ್ರ ದಲಿತ ಅಥವಾ ಪರಿಶಿಷ್ಟ ಜಾತಿ ಸ್ಥಾನಮಾನವನ್ನು ಪಡೆಯಬಹುದು” ಎಂದು ಹೇಳಿದ್ದಾರೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಇದನ್ನೂ ಓದಿ: ದಲಿತ ಹೆಣ್ಣುಮಕ್ಕಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ, ಅತ್ಯಾಚಾರದ ಈ ಅಂಕಿ-ಅಂಶಗಳನ್ನು ನೋಡಿ: ನೀವೇ ಪ್ರಶ್ನಿಸಿಕೊಳ್ಳಿ

ಇಂತಹ ಪ್ರಕರಣಗಳಿಗೆ ಯಾಕೆ ಪದೇ ಪದೇ ಸಮಸ್ಯೆಗಳು ಉಂಟಾಗುತ್ತವೆ ಎಂಬುದಕ್ಕೆ ಕಾನೂನಿನ ಅಸ್ಪಷ್ಟತೆಯೇ ಕಾರಣವಾಗಿದೆ.

2010 ರಲ್ಲಿ, ಕೇರಳ ಸರ್ಕಾರವು ಜಾರಿಗೆ ತಂದಿರುವ ಆದೇಶ (396/10 / ಪಿಎ)ದ ಪ್ರಕಾರ ’ಸಾರ್ವಜನಿಕ ಸೇವಾ ಆಯೋಗದ ಅರ್ಜಿಗಳು, ಎಸ್‌ಎಸ್‌ಎಲ್‌ಸಿ ಪ್ರಮಾಣಪತ್ರ, ಅನುದಾನಿತ ಅಥವಾ ಸರ್ಕಾರಿ ಸಂಸ್ಥೆಗಳಿಗೆ ಅರ್ಜಿ ಸಲ್ಲಿಸುವಾಗ ಒಬ್ಬ ವ್ಯಕ್ತಿಯು ಧರ್ಮ ಮತ್ತು ಜಾತಿಯನ್ನು ಬರೆಯಲು ಆಯ್ಕೆಮಾಡಬಹುದು ಅಥವಾ ಆಯ್ಕೆ ಮಾಡದಿರಬಹುದು’. “ಒಬ್ಬ ವ್ಯಕ್ತಿ ಧರ್ಮ ಮತ್ತು ಜಾತಿಯನ್ನು ಉಲ್ಲೇಖಿಸದಿದ್ದರೆ, ಅವರು ಧರ್ಮ ಮತ್ತು ಜಾತಿಯ ಭತ್ಯೆಗಳಿಗೆ ಅರ್ಹರಲ್ಲ” ಎಂದು ಅದು ಹೇಳುತ್ತದೆ.

ಆದರೆ ಧರ್ಮವನ್ನು ಬಿಟ್ಟು ಬರಿ ಜಾತಿಯನ್ನು ಮಾತ್ರ ಉಲ್ಲೇಖಿಸಲು ನಿರ್ಧರಿಸಿದರೆ ಏನು ಮಾಡಬೇಕೆಂದು ಆದೇಶದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿಲ್ಲ. ವಿಶೇಷವೆಂದರೆ, ಈ ಆದೇಶ ಹೊರಡಿಸಿದ ನಂತರವೂ ಕೇಶವದೇವು ಕುಟುಂಬವು ಕಳೆದ ವರ್ಷಗಳಲ್ಲಿ ಅನೇಕ ಸಂದರ್ಭಗಳಲ್ಲಿ ಜಾತಿ ಪ್ರಮಾಣಪತ್ರಗಳನ್ನು ಪಡೆದುಕೊಂಡಿದೆ.

“ನಾನು ಪಥನಂತಿಟ್ಟ ಜಿಲ್ಲಾಧಿಕಾರಿಗೆ ದೂರು ನೀಡಿದ್ದೇನೆ ಮತ್ತು ಅಧಿಕಾರಿಗಳು ಆದೇಶವನ್ನು ಅಧ್ಯಯನ ಮಾಡಿ, ನಮಗೆ ಜಾತಿ ಪ್ರಮಾಣಪತ್ರವನ್ನು ನೀಡಬಹುದೇ ಇಲ್ಲವೇ ಎಂಬುದನ್ನು ತಿಳಿಸುತ್ತೇವೆ ಎಂದು ನಮಗೆ ತಿಳಿಸುತ್ತೇವೆ ಎಂದು ಹೇಳಿದ್ದಾರೆ. ನಮ್ಮ ಹಕ್ಕುಗಳನ್ನು ಪಡೆಯುವವರೆಗೆ ನಾವು ಪ್ರತಿಭಟನೆಯನ್ನು ಮುಂದುವರಿಸಲಿದ್ದೇವೆ ”ಎಂದು ದಲಿತ ಕುಟುಂಬ ತಿಳಿಸಿದೆ.


ಇದನ್ನೂ ಓದಿ: ದಲಿತ ಹೆಣ್ಣುಮಕ್ಕಳ ಮೇಲಿನ ಅತ್ಯಾಚಾರ, ಕೊಲೆ: ರಾಜ್ಯದಲ್ಲಿ ಸಿಡಿದೆದ್ದ ಆಕ್ರೋಶ -ತೀವ್ರಗೊಂಡ ಸರಣಿ ಪ್ರತಿಭಟನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...