Homeಮುಖಪುಟ’ಜಾತ್ಯಾತೀತರು’ ಎಂದ ದಲಿತ ಕುಟುಂಬಕ್ಕೆ ಜಾತಿ ಪ್ರಮಾಣಪತ್ರ ನಿರಾಕರಣೆ!

’ಜಾತ್ಯಾತೀತರು’ ಎಂದ ದಲಿತ ಕುಟುಂಬಕ್ಕೆ ಜಾತಿ ಪ್ರಮಾಣಪತ್ರ ನಿರಾಕರಣೆ!

“ನಾವು ಪುಲಯ ಸಮುದಾಯದಲ್ಲಿ ಜನಿಸಿದ್ದೇವೆ ಆದರೆ ನಾವು ಯಾವುದೇ ಧರ್ಮವನ್ನು ಅನುಸರಿಸುವುದಿಲ್ಲ. ನಮ್ಮನ್ನು ನಾವು ಜಾತ್ಯತೀತರೆಂದೆ ಪರಿಗಣಿಸುತ್ತೇವೆ. ನಾವು ಯಾವುದೇ ಧರ್ಮವನ್ನು ಅನುಸರಿಸದಿದ್ದರೆ ನಮ್ಮ ದಲಿತ ಸ್ಥಾನಮಾನವು ಹೇಗೆ ಮಾಯವಾಗುತ್ತದೆ..? ಎಂದು ಕುಟುಂಬ ಪ್ರಶ್ನಿಸುತ್ತದೆ.

- Advertisement -
- Advertisement -

ಜಾತಿ ಪ್ರಮಾಣಪತ್ರ ಅರ್ಜಿಯಲ್ಲಿ ಧರ್ಮದ ಸ್ಥಳದಲ್ಲಿ ಜಾತ್ಯಾತೀತ ಎಂದು ಬರೆದ ಕೇರಳದ ದಲಿತ ಕುಟುಂಬಕ್ಕೆ ಜಾತಿ ಪ್ರಮಾಣ ಪತ್ರ ನಿರಾಕರಿಸಲಾಗಿದೆ. ಯಾವುದೇ ಧರ್ಮವನ್ನು ನಂಬದ ಅಥವಾ ಅನುಸರಿಸದ ಕಾರಣ ಇವರಿಗೆ ಜಾತಿ ಪ್ರಮಾಣಪತ್ರ ನಿರಾಕರಿಸಿದ ತಾಲೂಕು ಅಧಿಕಾರಿಯ ವಿರುದ್ಧ ಅವರು ಪ್ರತಿಭಟನೆ ನಡೆಸುತ್ತಿದ್ದಾರೆ.

ಕೇರಳದ ಪಥನಂತಿಟ್ಟ ಜಿಲ್ಲೆಯ ರಾನ್ನಿಯಲ್ಲಿರುವ ತಾಲ್ಲೂಕು ಕಚೇರಿಯ ಹೊರಗೆ ಅಜ್ಜ-ಅಜ್ಜಿಯರು ಮತ್ತು ಮಕ್ಕಳು ಸೇರಿದಂತೆ ದಲಿತ ಕುಟುಂಬವೊಂದು ಸೆ.28ರಿಂದ ತಾಲ್ಲೂಕು ಕಚೇರಿಯ ಮುಂದೆ ಧರಣಿ ನಡೆಸುತ್ತಿದೆ. ’ನಾನು ವಿದ್ಯಾಭ್ಯಾಸ ಮಾಡಲು ಬಯಸುತ್ತೇನೆ. ಧರ್ಮದ ಹೆಸರಿನಲ್ಲಿ ತಹಶೀಲ್ದಾರ್ ನಮಗೆ ಜಾತಿ ಪ್ರಮಾಣಪತ್ರವನ್ನು ನಿರಾಕರಿಸಿದ್ದಾರೆ. ನಮಗೆ ನ್ಯಾಯ ನೀಡಿ” ಎಂಬ ಫಲಕಗಳನ್ನು ಹಿಡಿದು ಧರಣಿ ನಡೆಸುತ್ತಿದ್ದಾರೆ.

ವಡಸ್ಸೆರಿಕಾ ಗ್ರಾಮದ ಪಿ.ಕೇಶವದೇವು ಪುಲಯ ಸಮುದಾಯಕ್ಕೆ ಸೇರಿದವರಾಗಿದ್ದು, ಕೇರಳದಲ್ಲಿ ಪರಿಶಿಷ್ಟ ಜಾತಿ ಎಂದು ವರ್ಗೀಕರಿಸಲಾಗಿದೆ. ಅವರ ಕುಟುಂಬದ ಹೆಣ್ಣುಮಕ್ಕಳು ಮತ್ತು ಮೊಮ್ಮಕ್ಕಳು ಸೇರಿದಂತೆ ಎಲ್ಲರೂ ಯಾವುದೇ ಧರ್ಮವನ್ನು ಆಚರಿಸುವುದಿಲ್ಲ ಮತ್ತು ತಮ್ಮನ್ನು ಜಾತ್ಯತೀತರು ಎಂದು ಕರೆದುಕೊಳ್ಳುತ್ತಾರೆ.

ಇದನ್ನೂ ಓದಿ: ದಲಿತ ಚಳವಳಿಯಲ್ಲಿ ಯುವ ನಾಯಕತ್ವ ಅರಳುವ ಸಮಯ

ಇತ್ತೀಚೆಗೆ, ಕೇಶವದೇವು ತಮ್ಮ ಮೊಮ್ಮಗಳಿಗೆ ಶೈಕ್ಷಣಿಕ ಉದ್ದೇಶಗಳಿಗಾಗಿ ಜಾತಿ ಪ್ರಮಾಣಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದರು, ಆದರೆ ಅರ್ಜಿದಾರರು ಧರ್ಮವನ್ನು ‘ಜಾತ್ಯತೀತ’ ಎಂದು ಉಲ್ಲೇಖಿಸಿರುವುದರಿಂದ ಪ್ರಮಾಣಪತ್ರವನ್ನು ನೀಡಲು ಸಾಧ್ಯವಿಲ್ಲ ಎಂದು ರಾನ್ನಿಯ ತಹಶೀಲ್ದಾರ್ ಅರ್ಜಿ ತಿರಸ್ಕರಿಸಿದರು.

ನಾವು ಯಾವುದೇ ಧರ್ಮವನ್ನು ಅನುಸರಿಸದ ಕಾರಣ ನಮಗೆ ಜಾತಿ ಪ್ರಮಾಣಪತ್ರವನ್ನು ಹೇಗೆ ನಿರಾಕರಿಸುತ್ತಾರೆ ಎಂದು ಪ್ರಶ್ನಿಸಿ ಕೇಶವದೇವು ಕುಟುಂಬ ಪ್ರತಿಭಟನೆ ನಡೆಸುತ್ತಿದೆ. ಜಾತಿ ಪ್ರಮಾಣಪತ್ರ ಸಲ್ಲಿಸದಿದ್ದರೇ  ಮೊಮ್ಮಕ್ಕಳ ಪದವಿ ಕೋರ್ಸ್ ಪ್ರವೇಶ ರದ್ದುಗೊಳಿಸುತ್ತಾರೆ ಎಂಬ ಆತಂಕವನ್ನು ಕುಟುಂಬ ಸದಸ್ಯರು ಹೊರಹಾಕಿದ್ದಾರೆ. ಅಧಿಕಾರಿಗಳು ಬೇಗನೆ ಮಧ್ಯಪ್ರವೇಶಿಸುತ್ತಾರೆ ಎಂಬ ಭರವಸೆಯಿಂದ ಇಡೀ ಕುಟುಂಬ ಪ್ರತಿಭಟನೆಯನ್ನು ಕೈಗೊಂಡಿದೆ.

“ನಾವು ಪುಲಯ ಸಮುದಾಯದಲ್ಲಿ ಜನಿಸಿದ್ದೇವೆ ಆದರೆ ನಾವು ಯಾವುದೇ ಧರ್ಮವನ್ನು ಅನುಸರಿಸುವುದಿಲ್ಲ. ನಮ್ಮನ್ನು ನಾವು ಜಾತ್ಯತೀತರೆಂದೆ ಪರಿಗಣಿಸುತ್ತೇವೆ. ಆದರೆ ನಾವು ಯಾವುದೇ ಧರ್ಮವನ್ನು ಅನುಸರಿಸದಿದ್ದರೆ ನಮ್ಮ ದಲಿತ ಸ್ಥಾನಮಾನವು ಹೇಗೆ ಮಾಯವಾಗುತ್ತದೆ..? ಸಮಾಜದಲ್ಲಿ ದಲಿತರು ಎದುರಿಸುತ್ತಿರುವ ತಾರತಮ್ಯವೂ ಹೋಗುವುದಿಲ್ಲ. ಹಾಗಾಗಿ ನಮ್ಮ ಪರಿಶಿಷ್ಟ ಜಾತಿ ಸ್ಥಾನಮಾನವನ್ನು ಏಕೆ ನಿರಾಕರಿಸಲಾಗಿದೆ..? ” ಎಂದು ಕೇಶವದೇವು ಪ್ರಶ್ನಿಸುತ್ತಾರೆ.

ಇದನ್ನೂ ಓದಿ: ಚಂದ್ರಶೇಖರ್ ಆಜಾದ್: ಮತ್ತೊಬ್ಬ ದಲಿತ ಸೂರ್ಯನ ಉದಯ

ತನ್ನ ಮೊಮ್ಮಕ್ಕಳಿಗೆ ನೀಡಲಾದ 10 ನೇ ತರಗತಿ ಪ್ರಮಾಣಪತ್ರದಲ್ಲಿ ಅವರ ಧರ್ಮ ಮತ್ತು ಜಾತಿಯನ್ನು “ಜಾತ್ಯತೀತ ಮತ್ತು ಪುಲಯ” ಎಂದು ಉಲ್ಲೇಖಿಸಲಾಗಿದೆ. “ಇದು ರಾಜ್ಯ ಸರ್ಕಾರ ನೀಡಿದ ಎಸ್‌ಎಸ್‌ಎಲ್‌ಸಿ ಪ್ರಮಾಣಪತ್ರ. ಈಗ ಯಾಕೆ ನಮಗೆ ಜಾತಿ ಪ್ರಮಾಣಪತ್ರ ನಿರಾಕರಿಸಲಾಗುತ್ತಿದೆ? ” ಕೇಶವದೇವು ಕೇಳುತ್ತಾರೆ.

2015ರಲ್ಲಿ ಇದೇ ರೀತಿಯ ಸಮಸ್ಯೆಯಾದಾಗ ಈ ಕುಟುಂಬವು ರಾಜ್ಯ ಮಾನವ ಹಕ್ಕುಗಳ ಆಯೋಗವನ್ನು ಸಂಪರ್ಕಿಸಿ ಅನುಕೂಲಕರ ಆದೇಶವನ್ನು ಪಡೆದುಕೊಂಡಿತು, ಅದು ಅವರಿಗೆ ಜಾತಿ ಪ್ರಮಾಣಪತ್ರವನ್ನು ನೀಡಬೇಕು ಎಂದು ಹೇಳಿ, ಧರ್ಮಕ್ಕೆ ಸೂಚಿಸಲಾದ ಅಂಕಣದಲ್ಲಿ ‘Nil’ ಎಂದು ಬರೆಯಲು ಸೂಚಿಸಿತ್ತು. “ನಾವು ಈ ಆದೇಶವನ್ನು ತಹಶೀಲ್ದಾರ್‌ಗೆ ತೋರಿಸಿದರೂ, ಅವರು ನಮಗೆ ಪ್ರಮಾಣಪತ್ರಗಳನ್ನು ನೀಡಲು ನಿರಾಕರಿಸುತ್ತಿದ್ದಾರೆ” ಎಂದು ಕುಟುಂಬ ಆರೋಪಿಸಿದೆ.

ರಾನ್ನಿ ತಹಶೀಲ್ದಾರ್ ನವೀನ್ ಬಾಬು ’ಅರ್ಜಿಯನ್ನು ಮಾಜಿ ತಹಶೀಲ್ದಾರ್ ಅವರು ತಿರಸ್ಕರಿಸಿದ್ದಾರೆ. ಆದರೆ ಇದನ್ನು ಕಾನೂನಿನ ಪ್ರಕಾರ ತಿರಸ್ಕರಿಸಲಾಗಿದೆ. ಸಂವಿಧಾನದ ಪ್ರಕಾರ, ಅವರು ಹಿಂದೂ ಧರ್ಮ, ಬೌದ್ಧಧರ್ಮ ಅಥವಾ ಸಿಖ್ ಧರ್ಮವನ್ನು ಅನುಸರಿಸಿದರೆ ಮಾತ್ರ ದಲಿತ ಅಥವಾ ಪರಿಶಿಷ್ಟ ಜಾತಿ ಸ್ಥಾನಮಾನವನ್ನು ಪಡೆಯಬಹುದು” ಎಂದು ಹೇಳಿದ್ದಾರೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಇದನ್ನೂ ಓದಿ: ದಲಿತ ಹೆಣ್ಣುಮಕ್ಕಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ, ಅತ್ಯಾಚಾರದ ಈ ಅಂಕಿ-ಅಂಶಗಳನ್ನು ನೋಡಿ: ನೀವೇ ಪ್ರಶ್ನಿಸಿಕೊಳ್ಳಿ

ಇಂತಹ ಪ್ರಕರಣಗಳಿಗೆ ಯಾಕೆ ಪದೇ ಪದೇ ಸಮಸ್ಯೆಗಳು ಉಂಟಾಗುತ್ತವೆ ಎಂಬುದಕ್ಕೆ ಕಾನೂನಿನ ಅಸ್ಪಷ್ಟತೆಯೇ ಕಾರಣವಾಗಿದೆ.

2010 ರಲ್ಲಿ, ಕೇರಳ ಸರ್ಕಾರವು ಜಾರಿಗೆ ತಂದಿರುವ ಆದೇಶ (396/10 / ಪಿಎ)ದ ಪ್ರಕಾರ ’ಸಾರ್ವಜನಿಕ ಸೇವಾ ಆಯೋಗದ ಅರ್ಜಿಗಳು, ಎಸ್‌ಎಸ್‌ಎಲ್‌ಸಿ ಪ್ರಮಾಣಪತ್ರ, ಅನುದಾನಿತ ಅಥವಾ ಸರ್ಕಾರಿ ಸಂಸ್ಥೆಗಳಿಗೆ ಅರ್ಜಿ ಸಲ್ಲಿಸುವಾಗ ಒಬ್ಬ ವ್ಯಕ್ತಿಯು ಧರ್ಮ ಮತ್ತು ಜಾತಿಯನ್ನು ಬರೆಯಲು ಆಯ್ಕೆಮಾಡಬಹುದು ಅಥವಾ ಆಯ್ಕೆ ಮಾಡದಿರಬಹುದು’. “ಒಬ್ಬ ವ್ಯಕ್ತಿ ಧರ್ಮ ಮತ್ತು ಜಾತಿಯನ್ನು ಉಲ್ಲೇಖಿಸದಿದ್ದರೆ, ಅವರು ಧರ್ಮ ಮತ್ತು ಜಾತಿಯ ಭತ್ಯೆಗಳಿಗೆ ಅರ್ಹರಲ್ಲ” ಎಂದು ಅದು ಹೇಳುತ್ತದೆ.

ಆದರೆ ಧರ್ಮವನ್ನು ಬಿಟ್ಟು ಬರಿ ಜಾತಿಯನ್ನು ಮಾತ್ರ ಉಲ್ಲೇಖಿಸಲು ನಿರ್ಧರಿಸಿದರೆ ಏನು ಮಾಡಬೇಕೆಂದು ಆದೇಶದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿಲ್ಲ. ವಿಶೇಷವೆಂದರೆ, ಈ ಆದೇಶ ಹೊರಡಿಸಿದ ನಂತರವೂ ಕೇಶವದೇವು ಕುಟುಂಬವು ಕಳೆದ ವರ್ಷಗಳಲ್ಲಿ ಅನೇಕ ಸಂದರ್ಭಗಳಲ್ಲಿ ಜಾತಿ ಪ್ರಮಾಣಪತ್ರಗಳನ್ನು ಪಡೆದುಕೊಂಡಿದೆ.

“ನಾನು ಪಥನಂತಿಟ್ಟ ಜಿಲ್ಲಾಧಿಕಾರಿಗೆ ದೂರು ನೀಡಿದ್ದೇನೆ ಮತ್ತು ಅಧಿಕಾರಿಗಳು ಆದೇಶವನ್ನು ಅಧ್ಯಯನ ಮಾಡಿ, ನಮಗೆ ಜಾತಿ ಪ್ರಮಾಣಪತ್ರವನ್ನು ನೀಡಬಹುದೇ ಇಲ್ಲವೇ ಎಂಬುದನ್ನು ತಿಳಿಸುತ್ತೇವೆ ಎಂದು ನಮಗೆ ತಿಳಿಸುತ್ತೇವೆ ಎಂದು ಹೇಳಿದ್ದಾರೆ. ನಮ್ಮ ಹಕ್ಕುಗಳನ್ನು ಪಡೆಯುವವರೆಗೆ ನಾವು ಪ್ರತಿಭಟನೆಯನ್ನು ಮುಂದುವರಿಸಲಿದ್ದೇವೆ ”ಎಂದು ದಲಿತ ಕುಟುಂಬ ತಿಳಿಸಿದೆ.


ಇದನ್ನೂ ಓದಿ: ದಲಿತ ಹೆಣ್ಣುಮಕ್ಕಳ ಮೇಲಿನ ಅತ್ಯಾಚಾರ, ಕೊಲೆ: ರಾಜ್ಯದಲ್ಲಿ ಸಿಡಿದೆದ್ದ ಆಕ್ರೋಶ -ತೀವ್ರಗೊಂಡ ಸರಣಿ ಪ್ರತಿಭಟನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...