Homeಕರ್ನಾಟಕಚಂದ್ರಯಾನ-2: ತಪ್ಪನ್ನು ತಿದ್ದಿಕೊಳ್ಳದೇ ಅಹಂಕಾರ ಮೆರೆದ ವಿಜಯವಾಣಿ: ಸಾಮಾಜಿಕ ಜಾಲತಾಣದಲ್ಲಿ ಖಂಡನೆ

ಚಂದ್ರಯಾನ-2: ತಪ್ಪನ್ನು ತಿದ್ದಿಕೊಳ್ಳದೇ ಅಹಂಕಾರ ಮೆರೆದ ವಿಜಯವಾಣಿ: ಸಾಮಾಜಿಕ ಜಾಲತಾಣದಲ್ಲಿ ಖಂಡನೆ

"ಡಿಯರ್ ಮೀಡಿಯಾ, ನಿಮ್ಮ ನಿನ್ನೆಯ ತಪ್ಪಿಗಾದರೂ ಕ್ಷಮೆ ಇದೆ; ಈವತ್ತಿನ ಅಹಂಕಾರ ಪ್ರದರ್ಶನಕ್ಕೆ ಖಂಡಿತಾ ಕ್ಷಮೆ ಇಲ್ಲ."

- Advertisement -
- Advertisement -

ಚಂದ್ರಯಾನ-2 ಅನ್ನು ಉಡಾವಣೆಗೂ ಮುನ್ನವೇ ನಭಕ್ಕೆ ನೆಗೆದ ಬಾಹುಬಲಿ ಎಂದು ಮುದ್ರಿಸಿ ಪ್ರಮಾದ ಎಸಗಿದ್ದ ವಿಜಯವಾಣಿ ಪತ್ರಿಕೆ ಕ್ಷಮೆ ಕೇಳುವ ನೆಪದಲ್ಲಿ ಮತ್ತೆ ಅಹಂಕಾರ ಮೆರೆದಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಖಂಡನೆಯಾಗಿದೆ.

ತಾಂತ್ರಿಕ ಸಮಸ್ಯೆಗಳ ಕಾರಣಗಳಿಂದಾಗಿ ಚಂದ್ರಯಾನವನ್ನು ಇಸ್ರೋ ಮುಂದೂಡಿತ್ತು. ಆದರೆ ಮುಂಚೆಯೇ ಚಂದ್ರಯಾಣ ಉಡಾವಣೆಯಾಯಿತು, ರಾಷ್ಟ್ರಪತಿ ಶುಭಹಾರೈಸಿದರು ಎಂದು ಪತ್ರಿಕೆ ಧಾವಂತದಲ್ಲಿ ಮುದ್ರಿಸಿತ್ತು. ಆ ಕುರಿತು ಇಂದು ನೋವಾಗಿದೆ ಎಂದು 17 ಸಾಲುಗಳುಳ್ಳ ಸುದ್ದಿ ಪ್ರಕಟಿಸಿರುವ ವಿಜಯವಾಣಿ ಪತ್ರಿಕೆ ಅಲ್ಲಿಯೂ ನೇರವಾಗಿ ತಪ್ಪಾಗಿದೆ ಎಂದು ಹೇಳುವ ಬದಲು ಸುತ್ತಿ ಬಳಸಿ ಕೊನೆಯಲ್ಲಿ ಓದುಗರಿಗಾದ ಅನಾನುಕೂಲಕ್ಕೆ ವಿಷಾದಿಸುತ್ತೇವೆ ಎಂದು ಸಂಪಾದಕನ ಹೆಸರಿನಲ್ಲಿ ಪ್ರಕಟಿಸುವ ಮೂಲಕ ಅಹಂಕಾರ ಮೆರೆದಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎರಡು ಸಾಲಿನಲ್ಲಿ ಹೇಳಬಹುದಾದನ್ನು ಅಷ್ಟು ಸಾಲುಗಳಲ್ಲಿ ಹೇಳಿದ ಉದ್ದೇಶವೇ ಮತ್ತೆ ಕನ್ ಫ್ಯೂಸ್ ಮಾಡುವುದು, ಆ ಮೂಲಕ ತಮ್ಮದೇನೂ ತಪ್ಪಿಲ್ಲ ಎಂಬ ಪರೋಕ್ಷ ವಾದ. ವಿಷಾದ ವಿನಯದ ಕುರುಹೂ ಇಲ್ಲ ಎಂದು ಶ್ರೀನಿವಾಸ ಕಾರ್ಕಳರವರು ಫೇಸ್ ಬುಕ್ ನಲ್ಲಿ ಬರೆದಿದ್ದಾರೆ. ಇವರ ಕುಲಗೆಟ್ಟು ಹೋದ ಈ ಧಂದೆ(ಉದ್ಯಮ)ಯನ್ನು ಆಗಾಗ ‘ಜಾರತನ’ ಎಂದು ನಾನು ಬರೀತಿದ್ದಾಗ ಸ್ವಲ್ಪ ಅಳುಕು ಉಂಟಾಗುತ್ತಿತ್ತು. ಈಗ ಯಾವ ಅಳುಕಿಲ್ಲದೇ ಹೇಳ್ತೇನೆ ಎಂದು ಅಬು ಅಸ್ಮರವರು ಪ್ರತಿಕ್ರಿಯಿಸಿದ್ದಾರೆ.

ಇಂಥ ಕಲಗಚ್ಚು ಪತ್ರಿಕೆಯಲ್ಲಿ ಪ್ರಾಮಾಣಿಕ ಕ್ಷಮಾಪಣೆ ಬಯಸುವುದು ಚಂದ್ರನಲ್ಲಿ ಜೀವಿಗಳಿವೆ ಎಂದು ಹೇಳಿದಷ್ಟೇ ಅಭಾಸ ಎಂದು ಗೋವಿಂದರಾಜ ಬೈಚಗುಪ್ಪೆಯವರು ವ್ಯಂಗ್ಯವಾಡಿದ್ದಾರೆ.

“ಡಿಯರ್ ಮೀಡಿಯಾ, ನಿಮ್ಮ ನಿನ್ನೆಯ ತಪ್ಪಿಗಾದರೂ ಕ್ಷಮೆ ಇದೆ; ಈವತ್ತಿನ ಅಹಂಕಾರ ಪ್ರದರ್ಶನಕ್ಕೆ ಖಂಡಿತಾ ಕ್ಷಮೆ ಇಲ್ಲ. ನಾವು ನಮ್ಮ ಕೆಲಸ ಶಿಸ್ತಿನಿಂದ ಮಾಡಿದ್ದೇವೆ. ಇಸ್ರೋದವರು ತಪ್ಪು ಮಾಡಿದರೆ ನಾವು ಹೊಣೆ ಅಲ್ಲ ಎಂಬ ಧ್ವನಿಯ ನಿಮ್ಮ ಈವತ್ತಿನ ಪ್ರಕಟಣೆ ನಿಮ್ಮ ಬಗ್ಗೆ, ನಿಮ್ಮ ಪತ್ರಿಕೋದ್ಯಮದ ಬಗ್ಗೆ ಹಾಗೂ ಕನ್ನಡ ಪತ್ರಿಕೋದ್ಯಮ ಸಾಗುತ್ತಿರುವ ಹಾದಿಯ ಬಗ್ಗೆ ತುಂಬಾ ಸೂಚನೆಗಳನ್ನು ನೀಡುತ್ತಿದೆ. ಸುದ್ದಿಮನೆಯಲ್ಲಿ ತಪ್ಪುಗಳು ಸ್ವಾಭಾವಿಕ. ಸ್ವಲ್ಪ ಎಚ್ಚರ ಮತ್ತು ನಾವು ಮಾಡುತ್ತಿರುವುದು ಏನೆಂಬ ಕಲ್ಪನೆ ಇದ್ದಿದ್ದರೆ, ಕ್ಷಮೆಯಲ್ಲಿ ವಿನಯ ತಾನಾಗಿ ವ್ಯಕ್ತಗೊಳ್ಳುತ್ತದೆ. ಕಲಿತದ್ದು ಜಾಸ್ತಿ ಆದಾಗ ಹೀಗೇ..” ಎಂದು ರಾಜರಾಮ ತಲ್ಲೂರ್ ರವರು ಬರೆದಿದ್ದಾರೆ.

ಶ್ರೀಹರಿಕೋಟಾದಲ್ಲಿ ತಾಂತ್ರಿಕ ಕಾರಣಗಳಿಂದ ಉಡಾವಣೆಗೆ 56 ನಿಮಿಷ ಮುಂಚಿತವಾಗಿ ರದ್ದು ಮಾಡಲ್ಪಟ್ಟ ಚಂದ್ರಯಾನ -2 ಕೊನೆಗೆ ಯಶಸ್ವಿಯಾಗಿ ಬೆಂಗಳೂರಿನ ಚಾಮರಾಜಪೇಟೆಯ ವಿಜಯವಾಣಿ ಕಚೇರಿ ಒಳಗಿಂದ ಹಾರಿಸಲ್ಪಟ್ಟಿರುವುದು ತಿಳಿದು ಬಂದಿದೆ….. ಈ ಸುಸಂದರ್ಭದಲ್ಲಿ ಮಾನ್ಯ ವಿಜಯ ಸಂಕೇಶ್ವರ ಅವರು ಉಪಸ್ಥಿತರಿದ್ದು ಈ ಯಶಸ್ವಿ ಚಂದ್ರಯಾನ್ -2 ಉಡಾವಣೆಯನ್ನು ನೆರವೇರಿಸಿಕೊಟ್ಟರು ಎಂದು ಬಲ್ಲ ಮೂಲಗಳು ತಿಳಿಸಿವೆ…. ಎಂದು ಪತ್ರಕರ್ತರಾದ ಹರ್ಷಕುಮಾರ್ ಕುಗ್ವೆಯವರು ವ್ಯಂಗ್ಯವಾಡಿದ್ದಾರೆ.

ವಿಜಯವಾಣಿ ಪೇಪರ್ ಓದುವವರಿಗೆ, ಅದನ್ನು ಮನೆಗೆ ಹಾಕಿಸುವವರಿಗೆ – ನೆನ್ನೆ ಚಂದ್ರಯಾನ ನೌಕೆ ಯಶಸ್ವಿ ಉಡ್ಡಯನದ ಸುಳ್ಳು ಸುದ್ದಿ ಮುಖಪುಟದಲ್ಲಿ ಓದಿ ‘ಈ ಪೇಪರ್ ಹಾಕಿಸಿ ಬೆಂಬಲ ಕೊಡ್ತಾ ಇರೋದಕ್ಕೆ ನಮ್ ಮೆಟ್ ತಗಂಡು ನಾವೇ ಹೋಡ್ಕೊಬೇಕು’ ಅನ್ನಿಸಲಿಲ್ವಾ? ಎಂದು ಬರೆಯುವ ಮೂಲಕ ಗರುವೇ ಹೆಜ್ಜಾಜಿಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಇದು ಯಾವ ಪತ್ರಿಕೆ ? ಇವರಿಗಿಂತ ನಮ್ಮ ರಂಗಣ್ಣ ಸರೇ Better.. ನಿನ್ನೆ ನೇರವಾಗಿ ಚಂದ್ರನ ಮೇಲೆ ನಿಂತು ವರದಿ ಮಾಡಿದ್ರು..” ಎಂದು ರಾಘವೇಂದ್ರ ಗೋಪಾಡಿಯವರು ಕಿಚಾಯಿಸಿದ್ದಾರೆ.

“ಯಾವ ಮೀಡಿಯಾವು ಯಾವಾಗ ತಾನು ಪ್ರಕಟಿಸುವ ಸುದ್ದಿಯನ್ನು ಮಾರಿದ ಆದಾಯವನ್ನಷ್ಟೇ ನೆಚ್ಚಿ ಬದುಕುವುದು ಬಿಡುತ್ತಾ ಬಂದಿತೋ ಆಗಲೇ ಈ ಅಹಂಕಾರದ ನಶೆಯೂ ಏರುತ್ತಾ ಹೋಯಿತು.” ಎಂದು ಬರಹಗಾರ್ತಿ ಕಾದಂಬಿನಿ ರಾವಿಯವರು ಬರೆದಿದ್ದಾರೆ.

ಇನ್ನು ವಿಜಯವಾಣಿ ಪತ್ರಿಕೆಯ ಸಿಬ್ಬಿಂದಿಯೊಬ್ಬರು “ನಾವೇನು ಕಾಲದರ್ಶಕರಲ್ಲ, ಮುಂದಿನದನ್ನು ಮೊದಲೆ ತಿಳಿದು ಬರೆಯಲು, ತಾಂತ್ರಿಕ ದೋಷ ಇದೆ ಎಂದು, ನಿಗದಿತ ಸಮಯಕ್ಕೆ ಉಡಾವನೆ ಮಾಡಲು ಆಗುವುದಿಲ್ಲ ಎಂದು ಅಲ್ಲಿರುವವರಿಗೇನೇ ಗೊತ್ತಿಲ್ಲದಿರುವಾಗ ಇನ್ನು ನಮಗೇನು ಗೊತ್ತಾಗ್ವೇಕು. ಇಸ್ರೋ ಮೇಲಿನ ನಂಬಿಕೆ, ವಿಶ್ವಾಸದಿಂದ ನಿಗದಿತ ಸಮಯಕ್ಕೆ ಉಡಾವಣೆ ಆಗಲಿದೆ ಎಂದು ಬರೆದಿದ್ದೇವೆ” ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ.

ಇದಕ್ಕೆ ತೀಷ್ಣವಾಗಿ ಪ್ರತಿಕ್ರಿಯಿಸಿರುವ ಹಿರಿಯ ಪತ್ರಕರ್ತರು ಮತ್ತು ಪ್ರಸಿದ್ದ ಕಾರ್ಟೂನಿಷ್ಟ್ ಆದ ಪಂಜು ಗಂಗೊಳ್ಳಿಯವರು “ಒಂದು ಘಟನೆ ನಡೆದ ನಂತರವಷ್ಟೇ ಅದು ಸುದ್ದಿ ಅಂತಾಗುತ್ತದೆ. ಒಂದು ವೇಳೆ ೨.೫೫ ಕ್ಕೆ ನಿಗದಿಯಾಗಿದ್ದ ಚಂದ್ರಯಾನ ಯಶಸ್ವಿಯಾಗಿ ಉಡಾವಣೆಯಾಗಿದ್ದರೂ ಬೆಳಗ್ಗಿನ ಎರಡು ಗಂಟೆಗಳೊಳಗೆ ಮುದ್ರಣಗೊಂಡು ಹೊರ ಬರುವ ಪತ್ರಿಕೆಯಲ್ಲಿ ಅದು ಸುದ್ದಿಯಾಗಿ ಬರುವುದೂ ಉಡಾಫೆಯಾಗುತ್ತದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...