Homeಕರ್ನಾಟಕಚಂದ್ರಯಾನ-2: ತಪ್ಪನ್ನು ತಿದ್ದಿಕೊಳ್ಳದೇ ಅಹಂಕಾರ ಮೆರೆದ ವಿಜಯವಾಣಿ: ಸಾಮಾಜಿಕ ಜಾಲತಾಣದಲ್ಲಿ ಖಂಡನೆ

ಚಂದ್ರಯಾನ-2: ತಪ್ಪನ್ನು ತಿದ್ದಿಕೊಳ್ಳದೇ ಅಹಂಕಾರ ಮೆರೆದ ವಿಜಯವಾಣಿ: ಸಾಮಾಜಿಕ ಜಾಲತಾಣದಲ್ಲಿ ಖಂಡನೆ

"ಡಿಯರ್ ಮೀಡಿಯಾ, ನಿಮ್ಮ ನಿನ್ನೆಯ ತಪ್ಪಿಗಾದರೂ ಕ್ಷಮೆ ಇದೆ; ಈವತ್ತಿನ ಅಹಂಕಾರ ಪ್ರದರ್ಶನಕ್ಕೆ ಖಂಡಿತಾ ಕ್ಷಮೆ ಇಲ್ಲ."

- Advertisement -
- Advertisement -

ಚಂದ್ರಯಾನ-2 ಅನ್ನು ಉಡಾವಣೆಗೂ ಮುನ್ನವೇ ನಭಕ್ಕೆ ನೆಗೆದ ಬಾಹುಬಲಿ ಎಂದು ಮುದ್ರಿಸಿ ಪ್ರಮಾದ ಎಸಗಿದ್ದ ವಿಜಯವಾಣಿ ಪತ್ರಿಕೆ ಕ್ಷಮೆ ಕೇಳುವ ನೆಪದಲ್ಲಿ ಮತ್ತೆ ಅಹಂಕಾರ ಮೆರೆದಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಖಂಡನೆಯಾಗಿದೆ.

ತಾಂತ್ರಿಕ ಸಮಸ್ಯೆಗಳ ಕಾರಣಗಳಿಂದಾಗಿ ಚಂದ್ರಯಾನವನ್ನು ಇಸ್ರೋ ಮುಂದೂಡಿತ್ತು. ಆದರೆ ಮುಂಚೆಯೇ ಚಂದ್ರಯಾಣ ಉಡಾವಣೆಯಾಯಿತು, ರಾಷ್ಟ್ರಪತಿ ಶುಭಹಾರೈಸಿದರು ಎಂದು ಪತ್ರಿಕೆ ಧಾವಂತದಲ್ಲಿ ಮುದ್ರಿಸಿತ್ತು. ಆ ಕುರಿತು ಇಂದು ನೋವಾಗಿದೆ ಎಂದು 17 ಸಾಲುಗಳುಳ್ಳ ಸುದ್ದಿ ಪ್ರಕಟಿಸಿರುವ ವಿಜಯವಾಣಿ ಪತ್ರಿಕೆ ಅಲ್ಲಿಯೂ ನೇರವಾಗಿ ತಪ್ಪಾಗಿದೆ ಎಂದು ಹೇಳುವ ಬದಲು ಸುತ್ತಿ ಬಳಸಿ ಕೊನೆಯಲ್ಲಿ ಓದುಗರಿಗಾದ ಅನಾನುಕೂಲಕ್ಕೆ ವಿಷಾದಿಸುತ್ತೇವೆ ಎಂದು ಸಂಪಾದಕನ ಹೆಸರಿನಲ್ಲಿ ಪ್ರಕಟಿಸುವ ಮೂಲಕ ಅಹಂಕಾರ ಮೆರೆದಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎರಡು ಸಾಲಿನಲ್ಲಿ ಹೇಳಬಹುದಾದನ್ನು ಅಷ್ಟು ಸಾಲುಗಳಲ್ಲಿ ಹೇಳಿದ ಉದ್ದೇಶವೇ ಮತ್ತೆ ಕನ್ ಫ್ಯೂಸ್ ಮಾಡುವುದು, ಆ ಮೂಲಕ ತಮ್ಮದೇನೂ ತಪ್ಪಿಲ್ಲ ಎಂಬ ಪರೋಕ್ಷ ವಾದ. ವಿಷಾದ ವಿನಯದ ಕುರುಹೂ ಇಲ್ಲ ಎಂದು ಶ್ರೀನಿವಾಸ ಕಾರ್ಕಳರವರು ಫೇಸ್ ಬುಕ್ ನಲ್ಲಿ ಬರೆದಿದ್ದಾರೆ. ಇವರ ಕುಲಗೆಟ್ಟು ಹೋದ ಈ ಧಂದೆ(ಉದ್ಯಮ)ಯನ್ನು ಆಗಾಗ ‘ಜಾರತನ’ ಎಂದು ನಾನು ಬರೀತಿದ್ದಾಗ ಸ್ವಲ್ಪ ಅಳುಕು ಉಂಟಾಗುತ್ತಿತ್ತು. ಈಗ ಯಾವ ಅಳುಕಿಲ್ಲದೇ ಹೇಳ್ತೇನೆ ಎಂದು ಅಬು ಅಸ್ಮರವರು ಪ್ರತಿಕ್ರಿಯಿಸಿದ್ದಾರೆ.

ಇಂಥ ಕಲಗಚ್ಚು ಪತ್ರಿಕೆಯಲ್ಲಿ ಪ್ರಾಮಾಣಿಕ ಕ್ಷಮಾಪಣೆ ಬಯಸುವುದು ಚಂದ್ರನಲ್ಲಿ ಜೀವಿಗಳಿವೆ ಎಂದು ಹೇಳಿದಷ್ಟೇ ಅಭಾಸ ಎಂದು ಗೋವಿಂದರಾಜ ಬೈಚಗುಪ್ಪೆಯವರು ವ್ಯಂಗ್ಯವಾಡಿದ್ದಾರೆ.

“ಡಿಯರ್ ಮೀಡಿಯಾ, ನಿಮ್ಮ ನಿನ್ನೆಯ ತಪ್ಪಿಗಾದರೂ ಕ್ಷಮೆ ಇದೆ; ಈವತ್ತಿನ ಅಹಂಕಾರ ಪ್ರದರ್ಶನಕ್ಕೆ ಖಂಡಿತಾ ಕ್ಷಮೆ ಇಲ್ಲ. ನಾವು ನಮ್ಮ ಕೆಲಸ ಶಿಸ್ತಿನಿಂದ ಮಾಡಿದ್ದೇವೆ. ಇಸ್ರೋದವರು ತಪ್ಪು ಮಾಡಿದರೆ ನಾವು ಹೊಣೆ ಅಲ್ಲ ಎಂಬ ಧ್ವನಿಯ ನಿಮ್ಮ ಈವತ್ತಿನ ಪ್ರಕಟಣೆ ನಿಮ್ಮ ಬಗ್ಗೆ, ನಿಮ್ಮ ಪತ್ರಿಕೋದ್ಯಮದ ಬಗ್ಗೆ ಹಾಗೂ ಕನ್ನಡ ಪತ್ರಿಕೋದ್ಯಮ ಸಾಗುತ್ತಿರುವ ಹಾದಿಯ ಬಗ್ಗೆ ತುಂಬಾ ಸೂಚನೆಗಳನ್ನು ನೀಡುತ್ತಿದೆ. ಸುದ್ದಿಮನೆಯಲ್ಲಿ ತಪ್ಪುಗಳು ಸ್ವಾಭಾವಿಕ. ಸ್ವಲ್ಪ ಎಚ್ಚರ ಮತ್ತು ನಾವು ಮಾಡುತ್ತಿರುವುದು ಏನೆಂಬ ಕಲ್ಪನೆ ಇದ್ದಿದ್ದರೆ, ಕ್ಷಮೆಯಲ್ಲಿ ವಿನಯ ತಾನಾಗಿ ವ್ಯಕ್ತಗೊಳ್ಳುತ್ತದೆ. ಕಲಿತದ್ದು ಜಾಸ್ತಿ ಆದಾಗ ಹೀಗೇ..” ಎಂದು ರಾಜರಾಮ ತಲ್ಲೂರ್ ರವರು ಬರೆದಿದ್ದಾರೆ.

ಶ್ರೀಹರಿಕೋಟಾದಲ್ಲಿ ತಾಂತ್ರಿಕ ಕಾರಣಗಳಿಂದ ಉಡಾವಣೆಗೆ 56 ನಿಮಿಷ ಮುಂಚಿತವಾಗಿ ರದ್ದು ಮಾಡಲ್ಪಟ್ಟ ಚಂದ್ರಯಾನ -2 ಕೊನೆಗೆ ಯಶಸ್ವಿಯಾಗಿ ಬೆಂಗಳೂರಿನ ಚಾಮರಾಜಪೇಟೆಯ ವಿಜಯವಾಣಿ ಕಚೇರಿ ಒಳಗಿಂದ ಹಾರಿಸಲ್ಪಟ್ಟಿರುವುದು ತಿಳಿದು ಬಂದಿದೆ….. ಈ ಸುಸಂದರ್ಭದಲ್ಲಿ ಮಾನ್ಯ ವಿಜಯ ಸಂಕೇಶ್ವರ ಅವರು ಉಪಸ್ಥಿತರಿದ್ದು ಈ ಯಶಸ್ವಿ ಚಂದ್ರಯಾನ್ -2 ಉಡಾವಣೆಯನ್ನು ನೆರವೇರಿಸಿಕೊಟ್ಟರು ಎಂದು ಬಲ್ಲ ಮೂಲಗಳು ತಿಳಿಸಿವೆ…. ಎಂದು ಪತ್ರಕರ್ತರಾದ ಹರ್ಷಕುಮಾರ್ ಕುಗ್ವೆಯವರು ವ್ಯಂಗ್ಯವಾಡಿದ್ದಾರೆ.

ವಿಜಯವಾಣಿ ಪೇಪರ್ ಓದುವವರಿಗೆ, ಅದನ್ನು ಮನೆಗೆ ಹಾಕಿಸುವವರಿಗೆ – ನೆನ್ನೆ ಚಂದ್ರಯಾನ ನೌಕೆ ಯಶಸ್ವಿ ಉಡ್ಡಯನದ ಸುಳ್ಳು ಸುದ್ದಿ ಮುಖಪುಟದಲ್ಲಿ ಓದಿ ‘ಈ ಪೇಪರ್ ಹಾಕಿಸಿ ಬೆಂಬಲ ಕೊಡ್ತಾ ಇರೋದಕ್ಕೆ ನಮ್ ಮೆಟ್ ತಗಂಡು ನಾವೇ ಹೋಡ್ಕೊಬೇಕು’ ಅನ್ನಿಸಲಿಲ್ವಾ? ಎಂದು ಬರೆಯುವ ಮೂಲಕ ಗರುವೇ ಹೆಜ್ಜಾಜಿಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಇದು ಯಾವ ಪತ್ರಿಕೆ ? ಇವರಿಗಿಂತ ನಮ್ಮ ರಂಗಣ್ಣ ಸರೇ Better.. ನಿನ್ನೆ ನೇರವಾಗಿ ಚಂದ್ರನ ಮೇಲೆ ನಿಂತು ವರದಿ ಮಾಡಿದ್ರು..” ಎಂದು ರಾಘವೇಂದ್ರ ಗೋಪಾಡಿಯವರು ಕಿಚಾಯಿಸಿದ್ದಾರೆ.

“ಯಾವ ಮೀಡಿಯಾವು ಯಾವಾಗ ತಾನು ಪ್ರಕಟಿಸುವ ಸುದ್ದಿಯನ್ನು ಮಾರಿದ ಆದಾಯವನ್ನಷ್ಟೇ ನೆಚ್ಚಿ ಬದುಕುವುದು ಬಿಡುತ್ತಾ ಬಂದಿತೋ ಆಗಲೇ ಈ ಅಹಂಕಾರದ ನಶೆಯೂ ಏರುತ್ತಾ ಹೋಯಿತು.” ಎಂದು ಬರಹಗಾರ್ತಿ ಕಾದಂಬಿನಿ ರಾವಿಯವರು ಬರೆದಿದ್ದಾರೆ.

ಇನ್ನು ವಿಜಯವಾಣಿ ಪತ್ರಿಕೆಯ ಸಿಬ್ಬಿಂದಿಯೊಬ್ಬರು “ನಾವೇನು ಕಾಲದರ್ಶಕರಲ್ಲ, ಮುಂದಿನದನ್ನು ಮೊದಲೆ ತಿಳಿದು ಬರೆಯಲು, ತಾಂತ್ರಿಕ ದೋಷ ಇದೆ ಎಂದು, ನಿಗದಿತ ಸಮಯಕ್ಕೆ ಉಡಾವನೆ ಮಾಡಲು ಆಗುವುದಿಲ್ಲ ಎಂದು ಅಲ್ಲಿರುವವರಿಗೇನೇ ಗೊತ್ತಿಲ್ಲದಿರುವಾಗ ಇನ್ನು ನಮಗೇನು ಗೊತ್ತಾಗ್ವೇಕು. ಇಸ್ರೋ ಮೇಲಿನ ನಂಬಿಕೆ, ವಿಶ್ವಾಸದಿಂದ ನಿಗದಿತ ಸಮಯಕ್ಕೆ ಉಡಾವಣೆ ಆಗಲಿದೆ ಎಂದು ಬರೆದಿದ್ದೇವೆ” ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ.

ಇದಕ್ಕೆ ತೀಷ್ಣವಾಗಿ ಪ್ರತಿಕ್ರಿಯಿಸಿರುವ ಹಿರಿಯ ಪತ್ರಕರ್ತರು ಮತ್ತು ಪ್ರಸಿದ್ದ ಕಾರ್ಟೂನಿಷ್ಟ್ ಆದ ಪಂಜು ಗಂಗೊಳ್ಳಿಯವರು “ಒಂದು ಘಟನೆ ನಡೆದ ನಂತರವಷ್ಟೇ ಅದು ಸುದ್ದಿ ಅಂತಾಗುತ್ತದೆ. ಒಂದು ವೇಳೆ ೨.೫೫ ಕ್ಕೆ ನಿಗದಿಯಾಗಿದ್ದ ಚಂದ್ರಯಾನ ಯಶಸ್ವಿಯಾಗಿ ಉಡಾವಣೆಯಾಗಿದ್ದರೂ ಬೆಳಗ್ಗಿನ ಎರಡು ಗಂಟೆಗಳೊಳಗೆ ಮುದ್ರಣಗೊಂಡು ಹೊರ ಬರುವ ಪತ್ರಿಕೆಯಲ್ಲಿ ಅದು ಸುದ್ದಿಯಾಗಿ ಬರುವುದೂ ಉಡಾಫೆಯಾಗುತ್ತದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...