Homeಕರ್ನಾಟಕಚಂದ್ರಯಾನ-2: ತಪ್ಪನ್ನು ತಿದ್ದಿಕೊಳ್ಳದೇ ಅಹಂಕಾರ ಮೆರೆದ ವಿಜಯವಾಣಿ: ಸಾಮಾಜಿಕ ಜಾಲತಾಣದಲ್ಲಿ ಖಂಡನೆ

ಚಂದ್ರಯಾನ-2: ತಪ್ಪನ್ನು ತಿದ್ದಿಕೊಳ್ಳದೇ ಅಹಂಕಾರ ಮೆರೆದ ವಿಜಯವಾಣಿ: ಸಾಮಾಜಿಕ ಜಾಲತಾಣದಲ್ಲಿ ಖಂಡನೆ

"ಡಿಯರ್ ಮೀಡಿಯಾ, ನಿಮ್ಮ ನಿನ್ನೆಯ ತಪ್ಪಿಗಾದರೂ ಕ್ಷಮೆ ಇದೆ; ಈವತ್ತಿನ ಅಹಂಕಾರ ಪ್ರದರ್ಶನಕ್ಕೆ ಖಂಡಿತಾ ಕ್ಷಮೆ ಇಲ್ಲ."

- Advertisement -
- Advertisement -

ಚಂದ್ರಯಾನ-2 ಅನ್ನು ಉಡಾವಣೆಗೂ ಮುನ್ನವೇ ನಭಕ್ಕೆ ನೆಗೆದ ಬಾಹುಬಲಿ ಎಂದು ಮುದ್ರಿಸಿ ಪ್ರಮಾದ ಎಸಗಿದ್ದ ವಿಜಯವಾಣಿ ಪತ್ರಿಕೆ ಕ್ಷಮೆ ಕೇಳುವ ನೆಪದಲ್ಲಿ ಮತ್ತೆ ಅಹಂಕಾರ ಮೆರೆದಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಖಂಡನೆಯಾಗಿದೆ.

ತಾಂತ್ರಿಕ ಸಮಸ್ಯೆಗಳ ಕಾರಣಗಳಿಂದಾಗಿ ಚಂದ್ರಯಾನವನ್ನು ಇಸ್ರೋ ಮುಂದೂಡಿತ್ತು. ಆದರೆ ಮುಂಚೆಯೇ ಚಂದ್ರಯಾಣ ಉಡಾವಣೆಯಾಯಿತು, ರಾಷ್ಟ್ರಪತಿ ಶುಭಹಾರೈಸಿದರು ಎಂದು ಪತ್ರಿಕೆ ಧಾವಂತದಲ್ಲಿ ಮುದ್ರಿಸಿತ್ತು. ಆ ಕುರಿತು ಇಂದು ನೋವಾಗಿದೆ ಎಂದು 17 ಸಾಲುಗಳುಳ್ಳ ಸುದ್ದಿ ಪ್ರಕಟಿಸಿರುವ ವಿಜಯವಾಣಿ ಪತ್ರಿಕೆ ಅಲ್ಲಿಯೂ ನೇರವಾಗಿ ತಪ್ಪಾಗಿದೆ ಎಂದು ಹೇಳುವ ಬದಲು ಸುತ್ತಿ ಬಳಸಿ ಕೊನೆಯಲ್ಲಿ ಓದುಗರಿಗಾದ ಅನಾನುಕೂಲಕ್ಕೆ ವಿಷಾದಿಸುತ್ತೇವೆ ಎಂದು ಸಂಪಾದಕನ ಹೆಸರಿನಲ್ಲಿ ಪ್ರಕಟಿಸುವ ಮೂಲಕ ಅಹಂಕಾರ ಮೆರೆದಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎರಡು ಸಾಲಿನಲ್ಲಿ ಹೇಳಬಹುದಾದನ್ನು ಅಷ್ಟು ಸಾಲುಗಳಲ್ಲಿ ಹೇಳಿದ ಉದ್ದೇಶವೇ ಮತ್ತೆ ಕನ್ ಫ್ಯೂಸ್ ಮಾಡುವುದು, ಆ ಮೂಲಕ ತಮ್ಮದೇನೂ ತಪ್ಪಿಲ್ಲ ಎಂಬ ಪರೋಕ್ಷ ವಾದ. ವಿಷಾದ ವಿನಯದ ಕುರುಹೂ ಇಲ್ಲ ಎಂದು ಶ್ರೀನಿವಾಸ ಕಾರ್ಕಳರವರು ಫೇಸ್ ಬುಕ್ ನಲ್ಲಿ ಬರೆದಿದ್ದಾರೆ. ಇವರ ಕುಲಗೆಟ್ಟು ಹೋದ ಈ ಧಂದೆ(ಉದ್ಯಮ)ಯನ್ನು ಆಗಾಗ ‘ಜಾರತನ’ ಎಂದು ನಾನು ಬರೀತಿದ್ದಾಗ ಸ್ವಲ್ಪ ಅಳುಕು ಉಂಟಾಗುತ್ತಿತ್ತು. ಈಗ ಯಾವ ಅಳುಕಿಲ್ಲದೇ ಹೇಳ್ತೇನೆ ಎಂದು ಅಬು ಅಸ್ಮರವರು ಪ್ರತಿಕ್ರಿಯಿಸಿದ್ದಾರೆ.

ಇಂಥ ಕಲಗಚ್ಚು ಪತ್ರಿಕೆಯಲ್ಲಿ ಪ್ರಾಮಾಣಿಕ ಕ್ಷಮಾಪಣೆ ಬಯಸುವುದು ಚಂದ್ರನಲ್ಲಿ ಜೀವಿಗಳಿವೆ ಎಂದು ಹೇಳಿದಷ್ಟೇ ಅಭಾಸ ಎಂದು ಗೋವಿಂದರಾಜ ಬೈಚಗುಪ್ಪೆಯವರು ವ್ಯಂಗ್ಯವಾಡಿದ್ದಾರೆ.

“ಡಿಯರ್ ಮೀಡಿಯಾ, ನಿಮ್ಮ ನಿನ್ನೆಯ ತಪ್ಪಿಗಾದರೂ ಕ್ಷಮೆ ಇದೆ; ಈವತ್ತಿನ ಅಹಂಕಾರ ಪ್ರದರ್ಶನಕ್ಕೆ ಖಂಡಿತಾ ಕ್ಷಮೆ ಇಲ್ಲ. ನಾವು ನಮ್ಮ ಕೆಲಸ ಶಿಸ್ತಿನಿಂದ ಮಾಡಿದ್ದೇವೆ. ಇಸ್ರೋದವರು ತಪ್ಪು ಮಾಡಿದರೆ ನಾವು ಹೊಣೆ ಅಲ್ಲ ಎಂಬ ಧ್ವನಿಯ ನಿಮ್ಮ ಈವತ್ತಿನ ಪ್ರಕಟಣೆ ನಿಮ್ಮ ಬಗ್ಗೆ, ನಿಮ್ಮ ಪತ್ರಿಕೋದ್ಯಮದ ಬಗ್ಗೆ ಹಾಗೂ ಕನ್ನಡ ಪತ್ರಿಕೋದ್ಯಮ ಸಾಗುತ್ತಿರುವ ಹಾದಿಯ ಬಗ್ಗೆ ತುಂಬಾ ಸೂಚನೆಗಳನ್ನು ನೀಡುತ್ತಿದೆ. ಸುದ್ದಿಮನೆಯಲ್ಲಿ ತಪ್ಪುಗಳು ಸ್ವಾಭಾವಿಕ. ಸ್ವಲ್ಪ ಎಚ್ಚರ ಮತ್ತು ನಾವು ಮಾಡುತ್ತಿರುವುದು ಏನೆಂಬ ಕಲ್ಪನೆ ಇದ್ದಿದ್ದರೆ, ಕ್ಷಮೆಯಲ್ಲಿ ವಿನಯ ತಾನಾಗಿ ವ್ಯಕ್ತಗೊಳ್ಳುತ್ತದೆ. ಕಲಿತದ್ದು ಜಾಸ್ತಿ ಆದಾಗ ಹೀಗೇ..” ಎಂದು ರಾಜರಾಮ ತಲ್ಲೂರ್ ರವರು ಬರೆದಿದ್ದಾರೆ.

ಶ್ರೀಹರಿಕೋಟಾದಲ್ಲಿ ತಾಂತ್ರಿಕ ಕಾರಣಗಳಿಂದ ಉಡಾವಣೆಗೆ 56 ನಿಮಿಷ ಮುಂಚಿತವಾಗಿ ರದ್ದು ಮಾಡಲ್ಪಟ್ಟ ಚಂದ್ರಯಾನ -2 ಕೊನೆಗೆ ಯಶಸ್ವಿಯಾಗಿ ಬೆಂಗಳೂರಿನ ಚಾಮರಾಜಪೇಟೆಯ ವಿಜಯವಾಣಿ ಕಚೇರಿ ಒಳಗಿಂದ ಹಾರಿಸಲ್ಪಟ್ಟಿರುವುದು ತಿಳಿದು ಬಂದಿದೆ….. ಈ ಸುಸಂದರ್ಭದಲ್ಲಿ ಮಾನ್ಯ ವಿಜಯ ಸಂಕೇಶ್ವರ ಅವರು ಉಪಸ್ಥಿತರಿದ್ದು ಈ ಯಶಸ್ವಿ ಚಂದ್ರಯಾನ್ -2 ಉಡಾವಣೆಯನ್ನು ನೆರವೇರಿಸಿಕೊಟ್ಟರು ಎಂದು ಬಲ್ಲ ಮೂಲಗಳು ತಿಳಿಸಿವೆ…. ಎಂದು ಪತ್ರಕರ್ತರಾದ ಹರ್ಷಕುಮಾರ್ ಕುಗ್ವೆಯವರು ವ್ಯಂಗ್ಯವಾಡಿದ್ದಾರೆ.

ವಿಜಯವಾಣಿ ಪೇಪರ್ ಓದುವವರಿಗೆ, ಅದನ್ನು ಮನೆಗೆ ಹಾಕಿಸುವವರಿಗೆ – ನೆನ್ನೆ ಚಂದ್ರಯಾನ ನೌಕೆ ಯಶಸ್ವಿ ಉಡ್ಡಯನದ ಸುಳ್ಳು ಸುದ್ದಿ ಮುಖಪುಟದಲ್ಲಿ ಓದಿ ‘ಈ ಪೇಪರ್ ಹಾಕಿಸಿ ಬೆಂಬಲ ಕೊಡ್ತಾ ಇರೋದಕ್ಕೆ ನಮ್ ಮೆಟ್ ತಗಂಡು ನಾವೇ ಹೋಡ್ಕೊಬೇಕು’ ಅನ್ನಿಸಲಿಲ್ವಾ? ಎಂದು ಬರೆಯುವ ಮೂಲಕ ಗರುವೇ ಹೆಜ್ಜಾಜಿಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಇದು ಯಾವ ಪತ್ರಿಕೆ ? ಇವರಿಗಿಂತ ನಮ್ಮ ರಂಗಣ್ಣ ಸರೇ Better.. ನಿನ್ನೆ ನೇರವಾಗಿ ಚಂದ್ರನ ಮೇಲೆ ನಿಂತು ವರದಿ ಮಾಡಿದ್ರು..” ಎಂದು ರಾಘವೇಂದ್ರ ಗೋಪಾಡಿಯವರು ಕಿಚಾಯಿಸಿದ್ದಾರೆ.

“ಯಾವ ಮೀಡಿಯಾವು ಯಾವಾಗ ತಾನು ಪ್ರಕಟಿಸುವ ಸುದ್ದಿಯನ್ನು ಮಾರಿದ ಆದಾಯವನ್ನಷ್ಟೇ ನೆಚ್ಚಿ ಬದುಕುವುದು ಬಿಡುತ್ತಾ ಬಂದಿತೋ ಆಗಲೇ ಈ ಅಹಂಕಾರದ ನಶೆಯೂ ಏರುತ್ತಾ ಹೋಯಿತು.” ಎಂದು ಬರಹಗಾರ್ತಿ ಕಾದಂಬಿನಿ ರಾವಿಯವರು ಬರೆದಿದ್ದಾರೆ.

ಇನ್ನು ವಿಜಯವಾಣಿ ಪತ್ರಿಕೆಯ ಸಿಬ್ಬಿಂದಿಯೊಬ್ಬರು “ನಾವೇನು ಕಾಲದರ್ಶಕರಲ್ಲ, ಮುಂದಿನದನ್ನು ಮೊದಲೆ ತಿಳಿದು ಬರೆಯಲು, ತಾಂತ್ರಿಕ ದೋಷ ಇದೆ ಎಂದು, ನಿಗದಿತ ಸಮಯಕ್ಕೆ ಉಡಾವನೆ ಮಾಡಲು ಆಗುವುದಿಲ್ಲ ಎಂದು ಅಲ್ಲಿರುವವರಿಗೇನೇ ಗೊತ್ತಿಲ್ಲದಿರುವಾಗ ಇನ್ನು ನಮಗೇನು ಗೊತ್ತಾಗ್ವೇಕು. ಇಸ್ರೋ ಮೇಲಿನ ನಂಬಿಕೆ, ವಿಶ್ವಾಸದಿಂದ ನಿಗದಿತ ಸಮಯಕ್ಕೆ ಉಡಾವಣೆ ಆಗಲಿದೆ ಎಂದು ಬರೆದಿದ್ದೇವೆ” ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ.

ಇದಕ್ಕೆ ತೀಷ್ಣವಾಗಿ ಪ್ರತಿಕ್ರಿಯಿಸಿರುವ ಹಿರಿಯ ಪತ್ರಕರ್ತರು ಮತ್ತು ಪ್ರಸಿದ್ದ ಕಾರ್ಟೂನಿಷ್ಟ್ ಆದ ಪಂಜು ಗಂಗೊಳ್ಳಿಯವರು “ಒಂದು ಘಟನೆ ನಡೆದ ನಂತರವಷ್ಟೇ ಅದು ಸುದ್ದಿ ಅಂತಾಗುತ್ತದೆ. ಒಂದು ವೇಳೆ ೨.೫೫ ಕ್ಕೆ ನಿಗದಿಯಾಗಿದ್ದ ಚಂದ್ರಯಾನ ಯಶಸ್ವಿಯಾಗಿ ಉಡಾವಣೆಯಾಗಿದ್ದರೂ ಬೆಳಗ್ಗಿನ ಎರಡು ಗಂಟೆಗಳೊಳಗೆ ಮುದ್ರಣಗೊಂಡು ಹೊರ ಬರುವ ಪತ್ರಿಕೆಯಲ್ಲಿ ಅದು ಸುದ್ದಿಯಾಗಿ ಬರುವುದೂ ಉಡಾಫೆಯಾಗುತ್ತದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ನಡೆದ 2021 ರ "ಬಟ್ಟೆ ಚೀಲ ಹಗರಣ"ಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡುವಂತೆ...

‘ಯುದ್ಧ ಸೃಷ್ಟಿಸಿದ್ದು ನೀವೇ’: ಹಾರ್ಮುಜ್ ಅಡ್ಡಿಗೆ ಅಮೆರಿಕವನ್ನು ದೂಷಿಸಿದ ಚೀನಾ, ಟ್ರಂಪ್ ಅವರ ‘ಧೈರ್ಯದ ಕೊರತೆ’ ಹೇಳಿಕೆಗೆ ತಿರುಗೇಟು

ಚೀನಾ ಮತ್ತು ಜಪಾನ್‌ನಂತಹ ದೇಶಗಳು ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು "ಧೈರ್ಯ" ಹೊಂದಿಲ್ಲ ಎಂದು ಹೇಳಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳನ್ನು ಚೀನಾ ಬಲವಾಗಿ ವಿರೋಧಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಚೀನಾದ ವಿದೇಶಾಂಗ...

ಮೂರನೇ ಅತ್ಯಾಚಾರ ಪ್ರಕರಣ: ಸ್ವ-ಘೋಷಿತ ‘ದೇವಮಾನವ’ ಖರತ್‌ಗೆ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ನಾಸಿಕ್ ನ್ಯಾಯಾಲಯ

ನಾಸಿಕ್: ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿರುವ ಮೂರನೇ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರನ್ನು ಮಹಾರಾಷ್ಟ್ರದ ನಾಸಿಕ್ ನ್ಯಾಯಾಲಯ ಸೋಮವಾರ ಏಪ್ರಿಲ್...

‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ...

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...