Homeಕರ್ನಾಟಕಚಂದ್ರಯಾನ-2: ತಪ್ಪನ್ನು ತಿದ್ದಿಕೊಳ್ಳದೇ ಅಹಂಕಾರ ಮೆರೆದ ವಿಜಯವಾಣಿ: ಸಾಮಾಜಿಕ ಜಾಲತಾಣದಲ್ಲಿ ಖಂಡನೆ

ಚಂದ್ರಯಾನ-2: ತಪ್ಪನ್ನು ತಿದ್ದಿಕೊಳ್ಳದೇ ಅಹಂಕಾರ ಮೆರೆದ ವಿಜಯವಾಣಿ: ಸಾಮಾಜಿಕ ಜಾಲತಾಣದಲ್ಲಿ ಖಂಡನೆ

"ಡಿಯರ್ ಮೀಡಿಯಾ, ನಿಮ್ಮ ನಿನ್ನೆಯ ತಪ್ಪಿಗಾದರೂ ಕ್ಷಮೆ ಇದೆ; ಈವತ್ತಿನ ಅಹಂಕಾರ ಪ್ರದರ್ಶನಕ್ಕೆ ಖಂಡಿತಾ ಕ್ಷಮೆ ಇಲ್ಲ."

- Advertisement -
- Advertisement -

ಚಂದ್ರಯಾನ-2 ಅನ್ನು ಉಡಾವಣೆಗೂ ಮುನ್ನವೇ ನಭಕ್ಕೆ ನೆಗೆದ ಬಾಹುಬಲಿ ಎಂದು ಮುದ್ರಿಸಿ ಪ್ರಮಾದ ಎಸಗಿದ್ದ ವಿಜಯವಾಣಿ ಪತ್ರಿಕೆ ಕ್ಷಮೆ ಕೇಳುವ ನೆಪದಲ್ಲಿ ಮತ್ತೆ ಅಹಂಕಾರ ಮೆರೆದಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಖಂಡನೆಯಾಗಿದೆ.

ತಾಂತ್ರಿಕ ಸಮಸ್ಯೆಗಳ ಕಾರಣಗಳಿಂದಾಗಿ ಚಂದ್ರಯಾನವನ್ನು ಇಸ್ರೋ ಮುಂದೂಡಿತ್ತು. ಆದರೆ ಮುಂಚೆಯೇ ಚಂದ್ರಯಾಣ ಉಡಾವಣೆಯಾಯಿತು, ರಾಷ್ಟ್ರಪತಿ ಶುಭಹಾರೈಸಿದರು ಎಂದು ಪತ್ರಿಕೆ ಧಾವಂತದಲ್ಲಿ ಮುದ್ರಿಸಿತ್ತು. ಆ ಕುರಿತು ಇಂದು ನೋವಾಗಿದೆ ಎಂದು 17 ಸಾಲುಗಳುಳ್ಳ ಸುದ್ದಿ ಪ್ರಕಟಿಸಿರುವ ವಿಜಯವಾಣಿ ಪತ್ರಿಕೆ ಅಲ್ಲಿಯೂ ನೇರವಾಗಿ ತಪ್ಪಾಗಿದೆ ಎಂದು ಹೇಳುವ ಬದಲು ಸುತ್ತಿ ಬಳಸಿ ಕೊನೆಯಲ್ಲಿ ಓದುಗರಿಗಾದ ಅನಾನುಕೂಲಕ್ಕೆ ವಿಷಾದಿಸುತ್ತೇವೆ ಎಂದು ಸಂಪಾದಕನ ಹೆಸರಿನಲ್ಲಿ ಪ್ರಕಟಿಸುವ ಮೂಲಕ ಅಹಂಕಾರ ಮೆರೆದಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎರಡು ಸಾಲಿನಲ್ಲಿ ಹೇಳಬಹುದಾದನ್ನು ಅಷ್ಟು ಸಾಲುಗಳಲ್ಲಿ ಹೇಳಿದ ಉದ್ದೇಶವೇ ಮತ್ತೆ ಕನ್ ಫ್ಯೂಸ್ ಮಾಡುವುದು, ಆ ಮೂಲಕ ತಮ್ಮದೇನೂ ತಪ್ಪಿಲ್ಲ ಎಂಬ ಪರೋಕ್ಷ ವಾದ. ವಿಷಾದ ವಿನಯದ ಕುರುಹೂ ಇಲ್ಲ ಎಂದು ಶ್ರೀನಿವಾಸ ಕಾರ್ಕಳರವರು ಫೇಸ್ ಬುಕ್ ನಲ್ಲಿ ಬರೆದಿದ್ದಾರೆ. ಇವರ ಕುಲಗೆಟ್ಟು ಹೋದ ಈ ಧಂದೆ(ಉದ್ಯಮ)ಯನ್ನು ಆಗಾಗ ‘ಜಾರತನ’ ಎಂದು ನಾನು ಬರೀತಿದ್ದಾಗ ಸ್ವಲ್ಪ ಅಳುಕು ಉಂಟಾಗುತ್ತಿತ್ತು. ಈಗ ಯಾವ ಅಳುಕಿಲ್ಲದೇ ಹೇಳ್ತೇನೆ ಎಂದು ಅಬು ಅಸ್ಮರವರು ಪ್ರತಿಕ್ರಿಯಿಸಿದ್ದಾರೆ.

ಇಂಥ ಕಲಗಚ್ಚು ಪತ್ರಿಕೆಯಲ್ಲಿ ಪ್ರಾಮಾಣಿಕ ಕ್ಷಮಾಪಣೆ ಬಯಸುವುದು ಚಂದ್ರನಲ್ಲಿ ಜೀವಿಗಳಿವೆ ಎಂದು ಹೇಳಿದಷ್ಟೇ ಅಭಾಸ ಎಂದು ಗೋವಿಂದರಾಜ ಬೈಚಗುಪ್ಪೆಯವರು ವ್ಯಂಗ್ಯವಾಡಿದ್ದಾರೆ.

“ಡಿಯರ್ ಮೀಡಿಯಾ, ನಿಮ್ಮ ನಿನ್ನೆಯ ತಪ್ಪಿಗಾದರೂ ಕ್ಷಮೆ ಇದೆ; ಈವತ್ತಿನ ಅಹಂಕಾರ ಪ್ರದರ್ಶನಕ್ಕೆ ಖಂಡಿತಾ ಕ್ಷಮೆ ಇಲ್ಲ. ನಾವು ನಮ್ಮ ಕೆಲಸ ಶಿಸ್ತಿನಿಂದ ಮಾಡಿದ್ದೇವೆ. ಇಸ್ರೋದವರು ತಪ್ಪು ಮಾಡಿದರೆ ನಾವು ಹೊಣೆ ಅಲ್ಲ ಎಂಬ ಧ್ವನಿಯ ನಿಮ್ಮ ಈವತ್ತಿನ ಪ್ರಕಟಣೆ ನಿಮ್ಮ ಬಗ್ಗೆ, ನಿಮ್ಮ ಪತ್ರಿಕೋದ್ಯಮದ ಬಗ್ಗೆ ಹಾಗೂ ಕನ್ನಡ ಪತ್ರಿಕೋದ್ಯಮ ಸಾಗುತ್ತಿರುವ ಹಾದಿಯ ಬಗ್ಗೆ ತುಂಬಾ ಸೂಚನೆಗಳನ್ನು ನೀಡುತ್ತಿದೆ. ಸುದ್ದಿಮನೆಯಲ್ಲಿ ತಪ್ಪುಗಳು ಸ್ವಾಭಾವಿಕ. ಸ್ವಲ್ಪ ಎಚ್ಚರ ಮತ್ತು ನಾವು ಮಾಡುತ್ತಿರುವುದು ಏನೆಂಬ ಕಲ್ಪನೆ ಇದ್ದಿದ್ದರೆ, ಕ್ಷಮೆಯಲ್ಲಿ ವಿನಯ ತಾನಾಗಿ ವ್ಯಕ್ತಗೊಳ್ಳುತ್ತದೆ. ಕಲಿತದ್ದು ಜಾಸ್ತಿ ಆದಾಗ ಹೀಗೇ..” ಎಂದು ರಾಜರಾಮ ತಲ್ಲೂರ್ ರವರು ಬರೆದಿದ್ದಾರೆ.

ಶ್ರೀಹರಿಕೋಟಾದಲ್ಲಿ ತಾಂತ್ರಿಕ ಕಾರಣಗಳಿಂದ ಉಡಾವಣೆಗೆ 56 ನಿಮಿಷ ಮುಂಚಿತವಾಗಿ ರದ್ದು ಮಾಡಲ್ಪಟ್ಟ ಚಂದ್ರಯಾನ -2 ಕೊನೆಗೆ ಯಶಸ್ವಿಯಾಗಿ ಬೆಂಗಳೂರಿನ ಚಾಮರಾಜಪೇಟೆಯ ವಿಜಯವಾಣಿ ಕಚೇರಿ ಒಳಗಿಂದ ಹಾರಿಸಲ್ಪಟ್ಟಿರುವುದು ತಿಳಿದು ಬಂದಿದೆ….. ಈ ಸುಸಂದರ್ಭದಲ್ಲಿ ಮಾನ್ಯ ವಿಜಯ ಸಂಕೇಶ್ವರ ಅವರು ಉಪಸ್ಥಿತರಿದ್ದು ಈ ಯಶಸ್ವಿ ಚಂದ್ರಯಾನ್ -2 ಉಡಾವಣೆಯನ್ನು ನೆರವೇರಿಸಿಕೊಟ್ಟರು ಎಂದು ಬಲ್ಲ ಮೂಲಗಳು ತಿಳಿಸಿವೆ…. ಎಂದು ಪತ್ರಕರ್ತರಾದ ಹರ್ಷಕುಮಾರ್ ಕುಗ್ವೆಯವರು ವ್ಯಂಗ್ಯವಾಡಿದ್ದಾರೆ.

ವಿಜಯವಾಣಿ ಪೇಪರ್ ಓದುವವರಿಗೆ, ಅದನ್ನು ಮನೆಗೆ ಹಾಕಿಸುವವರಿಗೆ – ನೆನ್ನೆ ಚಂದ್ರಯಾನ ನೌಕೆ ಯಶಸ್ವಿ ಉಡ್ಡಯನದ ಸುಳ್ಳು ಸುದ್ದಿ ಮುಖಪುಟದಲ್ಲಿ ಓದಿ ‘ಈ ಪೇಪರ್ ಹಾಕಿಸಿ ಬೆಂಬಲ ಕೊಡ್ತಾ ಇರೋದಕ್ಕೆ ನಮ್ ಮೆಟ್ ತಗಂಡು ನಾವೇ ಹೋಡ್ಕೊಬೇಕು’ ಅನ್ನಿಸಲಿಲ್ವಾ? ಎಂದು ಬರೆಯುವ ಮೂಲಕ ಗರುವೇ ಹೆಜ್ಜಾಜಿಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಇದು ಯಾವ ಪತ್ರಿಕೆ ? ಇವರಿಗಿಂತ ನಮ್ಮ ರಂಗಣ್ಣ ಸರೇ Better.. ನಿನ್ನೆ ನೇರವಾಗಿ ಚಂದ್ರನ ಮೇಲೆ ನಿಂತು ವರದಿ ಮಾಡಿದ್ರು..” ಎಂದು ರಾಘವೇಂದ್ರ ಗೋಪಾಡಿಯವರು ಕಿಚಾಯಿಸಿದ್ದಾರೆ.

“ಯಾವ ಮೀಡಿಯಾವು ಯಾವಾಗ ತಾನು ಪ್ರಕಟಿಸುವ ಸುದ್ದಿಯನ್ನು ಮಾರಿದ ಆದಾಯವನ್ನಷ್ಟೇ ನೆಚ್ಚಿ ಬದುಕುವುದು ಬಿಡುತ್ತಾ ಬಂದಿತೋ ಆಗಲೇ ಈ ಅಹಂಕಾರದ ನಶೆಯೂ ಏರುತ್ತಾ ಹೋಯಿತು.” ಎಂದು ಬರಹಗಾರ್ತಿ ಕಾದಂಬಿನಿ ರಾವಿಯವರು ಬರೆದಿದ್ದಾರೆ.

ಇನ್ನು ವಿಜಯವಾಣಿ ಪತ್ರಿಕೆಯ ಸಿಬ್ಬಿಂದಿಯೊಬ್ಬರು “ನಾವೇನು ಕಾಲದರ್ಶಕರಲ್ಲ, ಮುಂದಿನದನ್ನು ಮೊದಲೆ ತಿಳಿದು ಬರೆಯಲು, ತಾಂತ್ರಿಕ ದೋಷ ಇದೆ ಎಂದು, ನಿಗದಿತ ಸಮಯಕ್ಕೆ ಉಡಾವನೆ ಮಾಡಲು ಆಗುವುದಿಲ್ಲ ಎಂದು ಅಲ್ಲಿರುವವರಿಗೇನೇ ಗೊತ್ತಿಲ್ಲದಿರುವಾಗ ಇನ್ನು ನಮಗೇನು ಗೊತ್ತಾಗ್ವೇಕು. ಇಸ್ರೋ ಮೇಲಿನ ನಂಬಿಕೆ, ವಿಶ್ವಾಸದಿಂದ ನಿಗದಿತ ಸಮಯಕ್ಕೆ ಉಡಾವಣೆ ಆಗಲಿದೆ ಎಂದು ಬರೆದಿದ್ದೇವೆ” ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ.

ಇದಕ್ಕೆ ತೀಷ್ಣವಾಗಿ ಪ್ರತಿಕ್ರಿಯಿಸಿರುವ ಹಿರಿಯ ಪತ್ರಕರ್ತರು ಮತ್ತು ಪ್ರಸಿದ್ದ ಕಾರ್ಟೂನಿಷ್ಟ್ ಆದ ಪಂಜು ಗಂಗೊಳ್ಳಿಯವರು “ಒಂದು ಘಟನೆ ನಡೆದ ನಂತರವಷ್ಟೇ ಅದು ಸುದ್ದಿ ಅಂತಾಗುತ್ತದೆ. ಒಂದು ವೇಳೆ ೨.೫೫ ಕ್ಕೆ ನಿಗದಿಯಾಗಿದ್ದ ಚಂದ್ರಯಾನ ಯಶಸ್ವಿಯಾಗಿ ಉಡಾವಣೆಯಾಗಿದ್ದರೂ ಬೆಳಗ್ಗಿನ ಎರಡು ಗಂಟೆಗಳೊಳಗೆ ಮುದ್ರಣಗೊಂಡು ಹೊರ ಬರುವ ಪತ್ರಿಕೆಯಲ್ಲಿ ಅದು ಸುದ್ದಿಯಾಗಿ ಬರುವುದೂ ಉಡಾಫೆಯಾಗುತ್ತದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...