Homeಕರ್ನಾಟಕಚಂದ್ರಯಾನ-2: ತಪ್ಪನ್ನು ತಿದ್ದಿಕೊಳ್ಳದೇ ಅಹಂಕಾರ ಮೆರೆದ ವಿಜಯವಾಣಿ: ಸಾಮಾಜಿಕ ಜಾಲತಾಣದಲ್ಲಿ ಖಂಡನೆ

ಚಂದ್ರಯಾನ-2: ತಪ್ಪನ್ನು ತಿದ್ದಿಕೊಳ್ಳದೇ ಅಹಂಕಾರ ಮೆರೆದ ವಿಜಯವಾಣಿ: ಸಾಮಾಜಿಕ ಜಾಲತಾಣದಲ್ಲಿ ಖಂಡನೆ

"ಡಿಯರ್ ಮೀಡಿಯಾ, ನಿಮ್ಮ ನಿನ್ನೆಯ ತಪ್ಪಿಗಾದರೂ ಕ್ಷಮೆ ಇದೆ; ಈವತ್ತಿನ ಅಹಂಕಾರ ಪ್ರದರ್ಶನಕ್ಕೆ ಖಂಡಿತಾ ಕ್ಷಮೆ ಇಲ್ಲ."

- Advertisement -
- Advertisement -

ಚಂದ್ರಯಾನ-2 ಅನ್ನು ಉಡಾವಣೆಗೂ ಮುನ್ನವೇ ನಭಕ್ಕೆ ನೆಗೆದ ಬಾಹುಬಲಿ ಎಂದು ಮುದ್ರಿಸಿ ಪ್ರಮಾದ ಎಸಗಿದ್ದ ವಿಜಯವಾಣಿ ಪತ್ರಿಕೆ ಕ್ಷಮೆ ಕೇಳುವ ನೆಪದಲ್ಲಿ ಮತ್ತೆ ಅಹಂಕಾರ ಮೆರೆದಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಖಂಡನೆಯಾಗಿದೆ.

ತಾಂತ್ರಿಕ ಸಮಸ್ಯೆಗಳ ಕಾರಣಗಳಿಂದಾಗಿ ಚಂದ್ರಯಾನವನ್ನು ಇಸ್ರೋ ಮುಂದೂಡಿತ್ತು. ಆದರೆ ಮುಂಚೆಯೇ ಚಂದ್ರಯಾಣ ಉಡಾವಣೆಯಾಯಿತು, ರಾಷ್ಟ್ರಪತಿ ಶುಭಹಾರೈಸಿದರು ಎಂದು ಪತ್ರಿಕೆ ಧಾವಂತದಲ್ಲಿ ಮುದ್ರಿಸಿತ್ತು. ಆ ಕುರಿತು ಇಂದು ನೋವಾಗಿದೆ ಎಂದು 17 ಸಾಲುಗಳುಳ್ಳ ಸುದ್ದಿ ಪ್ರಕಟಿಸಿರುವ ವಿಜಯವಾಣಿ ಪತ್ರಿಕೆ ಅಲ್ಲಿಯೂ ನೇರವಾಗಿ ತಪ್ಪಾಗಿದೆ ಎಂದು ಹೇಳುವ ಬದಲು ಸುತ್ತಿ ಬಳಸಿ ಕೊನೆಯಲ್ಲಿ ಓದುಗರಿಗಾದ ಅನಾನುಕೂಲಕ್ಕೆ ವಿಷಾದಿಸುತ್ತೇವೆ ಎಂದು ಸಂಪಾದಕನ ಹೆಸರಿನಲ್ಲಿ ಪ್ರಕಟಿಸುವ ಮೂಲಕ ಅಹಂಕಾರ ಮೆರೆದಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎರಡು ಸಾಲಿನಲ್ಲಿ ಹೇಳಬಹುದಾದನ್ನು ಅಷ್ಟು ಸಾಲುಗಳಲ್ಲಿ ಹೇಳಿದ ಉದ್ದೇಶವೇ ಮತ್ತೆ ಕನ್ ಫ್ಯೂಸ್ ಮಾಡುವುದು, ಆ ಮೂಲಕ ತಮ್ಮದೇನೂ ತಪ್ಪಿಲ್ಲ ಎಂಬ ಪರೋಕ್ಷ ವಾದ. ವಿಷಾದ ವಿನಯದ ಕುರುಹೂ ಇಲ್ಲ ಎಂದು ಶ್ರೀನಿವಾಸ ಕಾರ್ಕಳರವರು ಫೇಸ್ ಬುಕ್ ನಲ್ಲಿ ಬರೆದಿದ್ದಾರೆ. ಇವರ ಕುಲಗೆಟ್ಟು ಹೋದ ಈ ಧಂದೆ(ಉದ್ಯಮ)ಯನ್ನು ಆಗಾಗ ‘ಜಾರತನ’ ಎಂದು ನಾನು ಬರೀತಿದ್ದಾಗ ಸ್ವಲ್ಪ ಅಳುಕು ಉಂಟಾಗುತ್ತಿತ್ತು. ಈಗ ಯಾವ ಅಳುಕಿಲ್ಲದೇ ಹೇಳ್ತೇನೆ ಎಂದು ಅಬು ಅಸ್ಮರವರು ಪ್ರತಿಕ್ರಿಯಿಸಿದ್ದಾರೆ.

ಇಂಥ ಕಲಗಚ್ಚು ಪತ್ರಿಕೆಯಲ್ಲಿ ಪ್ರಾಮಾಣಿಕ ಕ್ಷಮಾಪಣೆ ಬಯಸುವುದು ಚಂದ್ರನಲ್ಲಿ ಜೀವಿಗಳಿವೆ ಎಂದು ಹೇಳಿದಷ್ಟೇ ಅಭಾಸ ಎಂದು ಗೋವಿಂದರಾಜ ಬೈಚಗುಪ್ಪೆಯವರು ವ್ಯಂಗ್ಯವಾಡಿದ್ದಾರೆ.

“ಡಿಯರ್ ಮೀಡಿಯಾ, ನಿಮ್ಮ ನಿನ್ನೆಯ ತಪ್ಪಿಗಾದರೂ ಕ್ಷಮೆ ಇದೆ; ಈವತ್ತಿನ ಅಹಂಕಾರ ಪ್ರದರ್ಶನಕ್ಕೆ ಖಂಡಿತಾ ಕ್ಷಮೆ ಇಲ್ಲ. ನಾವು ನಮ್ಮ ಕೆಲಸ ಶಿಸ್ತಿನಿಂದ ಮಾಡಿದ್ದೇವೆ. ಇಸ್ರೋದವರು ತಪ್ಪು ಮಾಡಿದರೆ ನಾವು ಹೊಣೆ ಅಲ್ಲ ಎಂಬ ಧ್ವನಿಯ ನಿಮ್ಮ ಈವತ್ತಿನ ಪ್ರಕಟಣೆ ನಿಮ್ಮ ಬಗ್ಗೆ, ನಿಮ್ಮ ಪತ್ರಿಕೋದ್ಯಮದ ಬಗ್ಗೆ ಹಾಗೂ ಕನ್ನಡ ಪತ್ರಿಕೋದ್ಯಮ ಸಾಗುತ್ತಿರುವ ಹಾದಿಯ ಬಗ್ಗೆ ತುಂಬಾ ಸೂಚನೆಗಳನ್ನು ನೀಡುತ್ತಿದೆ. ಸುದ್ದಿಮನೆಯಲ್ಲಿ ತಪ್ಪುಗಳು ಸ್ವಾಭಾವಿಕ. ಸ್ವಲ್ಪ ಎಚ್ಚರ ಮತ್ತು ನಾವು ಮಾಡುತ್ತಿರುವುದು ಏನೆಂಬ ಕಲ್ಪನೆ ಇದ್ದಿದ್ದರೆ, ಕ್ಷಮೆಯಲ್ಲಿ ವಿನಯ ತಾನಾಗಿ ವ್ಯಕ್ತಗೊಳ್ಳುತ್ತದೆ. ಕಲಿತದ್ದು ಜಾಸ್ತಿ ಆದಾಗ ಹೀಗೇ..” ಎಂದು ರಾಜರಾಮ ತಲ್ಲೂರ್ ರವರು ಬರೆದಿದ್ದಾರೆ.

ಶ್ರೀಹರಿಕೋಟಾದಲ್ಲಿ ತಾಂತ್ರಿಕ ಕಾರಣಗಳಿಂದ ಉಡಾವಣೆಗೆ 56 ನಿಮಿಷ ಮುಂಚಿತವಾಗಿ ರದ್ದು ಮಾಡಲ್ಪಟ್ಟ ಚಂದ್ರಯಾನ -2 ಕೊನೆಗೆ ಯಶಸ್ವಿಯಾಗಿ ಬೆಂಗಳೂರಿನ ಚಾಮರಾಜಪೇಟೆಯ ವಿಜಯವಾಣಿ ಕಚೇರಿ ಒಳಗಿಂದ ಹಾರಿಸಲ್ಪಟ್ಟಿರುವುದು ತಿಳಿದು ಬಂದಿದೆ….. ಈ ಸುಸಂದರ್ಭದಲ್ಲಿ ಮಾನ್ಯ ವಿಜಯ ಸಂಕೇಶ್ವರ ಅವರು ಉಪಸ್ಥಿತರಿದ್ದು ಈ ಯಶಸ್ವಿ ಚಂದ್ರಯಾನ್ -2 ಉಡಾವಣೆಯನ್ನು ನೆರವೇರಿಸಿಕೊಟ್ಟರು ಎಂದು ಬಲ್ಲ ಮೂಲಗಳು ತಿಳಿಸಿವೆ…. ಎಂದು ಪತ್ರಕರ್ತರಾದ ಹರ್ಷಕುಮಾರ್ ಕುಗ್ವೆಯವರು ವ್ಯಂಗ್ಯವಾಡಿದ್ದಾರೆ.

ವಿಜಯವಾಣಿ ಪೇಪರ್ ಓದುವವರಿಗೆ, ಅದನ್ನು ಮನೆಗೆ ಹಾಕಿಸುವವರಿಗೆ – ನೆನ್ನೆ ಚಂದ್ರಯಾನ ನೌಕೆ ಯಶಸ್ವಿ ಉಡ್ಡಯನದ ಸುಳ್ಳು ಸುದ್ದಿ ಮುಖಪುಟದಲ್ಲಿ ಓದಿ ‘ಈ ಪೇಪರ್ ಹಾಕಿಸಿ ಬೆಂಬಲ ಕೊಡ್ತಾ ಇರೋದಕ್ಕೆ ನಮ್ ಮೆಟ್ ತಗಂಡು ನಾವೇ ಹೋಡ್ಕೊಬೇಕು’ ಅನ್ನಿಸಲಿಲ್ವಾ? ಎಂದು ಬರೆಯುವ ಮೂಲಕ ಗರುವೇ ಹೆಜ್ಜಾಜಿಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಇದು ಯಾವ ಪತ್ರಿಕೆ ? ಇವರಿಗಿಂತ ನಮ್ಮ ರಂಗಣ್ಣ ಸರೇ Better.. ನಿನ್ನೆ ನೇರವಾಗಿ ಚಂದ್ರನ ಮೇಲೆ ನಿಂತು ವರದಿ ಮಾಡಿದ್ರು..” ಎಂದು ರಾಘವೇಂದ್ರ ಗೋಪಾಡಿಯವರು ಕಿಚಾಯಿಸಿದ್ದಾರೆ.

“ಯಾವ ಮೀಡಿಯಾವು ಯಾವಾಗ ತಾನು ಪ್ರಕಟಿಸುವ ಸುದ್ದಿಯನ್ನು ಮಾರಿದ ಆದಾಯವನ್ನಷ್ಟೇ ನೆಚ್ಚಿ ಬದುಕುವುದು ಬಿಡುತ್ತಾ ಬಂದಿತೋ ಆಗಲೇ ಈ ಅಹಂಕಾರದ ನಶೆಯೂ ಏರುತ್ತಾ ಹೋಯಿತು.” ಎಂದು ಬರಹಗಾರ್ತಿ ಕಾದಂಬಿನಿ ರಾವಿಯವರು ಬರೆದಿದ್ದಾರೆ.

ಇನ್ನು ವಿಜಯವಾಣಿ ಪತ್ರಿಕೆಯ ಸಿಬ್ಬಿಂದಿಯೊಬ್ಬರು “ನಾವೇನು ಕಾಲದರ್ಶಕರಲ್ಲ, ಮುಂದಿನದನ್ನು ಮೊದಲೆ ತಿಳಿದು ಬರೆಯಲು, ತಾಂತ್ರಿಕ ದೋಷ ಇದೆ ಎಂದು, ನಿಗದಿತ ಸಮಯಕ್ಕೆ ಉಡಾವನೆ ಮಾಡಲು ಆಗುವುದಿಲ್ಲ ಎಂದು ಅಲ್ಲಿರುವವರಿಗೇನೇ ಗೊತ್ತಿಲ್ಲದಿರುವಾಗ ಇನ್ನು ನಮಗೇನು ಗೊತ್ತಾಗ್ವೇಕು. ಇಸ್ರೋ ಮೇಲಿನ ನಂಬಿಕೆ, ವಿಶ್ವಾಸದಿಂದ ನಿಗದಿತ ಸಮಯಕ್ಕೆ ಉಡಾವಣೆ ಆಗಲಿದೆ ಎಂದು ಬರೆದಿದ್ದೇವೆ” ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ.

ಇದಕ್ಕೆ ತೀಷ್ಣವಾಗಿ ಪ್ರತಿಕ್ರಿಯಿಸಿರುವ ಹಿರಿಯ ಪತ್ರಕರ್ತರು ಮತ್ತು ಪ್ರಸಿದ್ದ ಕಾರ್ಟೂನಿಷ್ಟ್ ಆದ ಪಂಜು ಗಂಗೊಳ್ಳಿಯವರು “ಒಂದು ಘಟನೆ ನಡೆದ ನಂತರವಷ್ಟೇ ಅದು ಸುದ್ದಿ ಅಂತಾಗುತ್ತದೆ. ಒಂದು ವೇಳೆ ೨.೫೫ ಕ್ಕೆ ನಿಗದಿಯಾಗಿದ್ದ ಚಂದ್ರಯಾನ ಯಶಸ್ವಿಯಾಗಿ ಉಡಾವಣೆಯಾಗಿದ್ದರೂ ಬೆಳಗ್ಗಿನ ಎರಡು ಗಂಟೆಗಳೊಳಗೆ ಮುದ್ರಣಗೊಂಡು ಹೊರ ಬರುವ ಪತ್ರಿಕೆಯಲ್ಲಿ ಅದು ಸುದ್ದಿಯಾಗಿ ಬರುವುದೂ ಉಡಾಫೆಯಾಗುತ್ತದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...