Homeಮುಖಪುಟಹಳತು-ವಿವೇಕ; ರೈತ ಚಳವಳಿ ಎದುರಿಸಬೇಕಾಗಿರುವ ಸಮಸ್ಯೆಗಳು; ವಿಶ್ವ ವ್ಯಾಪಾರಿ ಸಂಸ್ಥೆ ಮತ್ತು ಹುನ್ನಾರಗಳು: ಭಾಗ-2

ಹಳತು-ವಿವೇಕ; ರೈತ ಚಳವಳಿ ಎದುರಿಸಬೇಕಾಗಿರುವ ಸಮಸ್ಯೆಗಳು; ವಿಶ್ವ ವ್ಯಾಪಾರಿ ಸಂಸ್ಥೆ ಮತ್ತು ಹುನ್ನಾರಗಳು: ಭಾಗ-2

- Advertisement -
- Advertisement -

ಮುಂದುವರಿದ ದೇಶಗಳ ಉತ್ಪಾದನೆ ಪ್ರಮಾಣ ಮತ್ತು ಸಬ್ಸಿಡಿ ಪ್ರಮಾಣ

1997ರ ವರದಿಯ ಪ್ರಕಾರ 2004ರೊಳಗಾಗಿ ಯುರೋಪು ಒಕ್ಕೂಟದ ರಾಷ್ಟ್ರಗಳ ಗೋಧಿ ಉತ್ಪಾದನೆ 27 ಮೆಟ್ರಿಕ್ ಟನ್‌ನಿಂದ 450 ಲಕ್ಷ ಮೆಟ್ರಿಕ್ ಟನ್‌ಗಳಿಗೇರಲಿದೆ. ಮತ್ತು ಒಟ್ಟು ಆಹಾರ ಧಾನ್ಯಗಳ ಉತ್ಪಾದನೆ 580 ಲಕ್ಷ ಮೆಟ್ರಿಕ್ ಟನ್‌ಗಳಿಗೇರಲಿದೆ. ಹಾಗೆಯೇ, ಅಮೆರಿಕದ ಪ್ರತಿ ಮೂರು ಎಕರೆಗಳಲ್ಲಿ ಒಂದು ಎಕರೆಯಲ್ಲಾಗುವ ಬೆಳೆ ರಫ್ತಿಗಾಗಿಯೇ ಮೀಸಲಾಗಿದೆ. ಹೀಗಾಗಿ, ಹೆಚ್ಚುತ್ತಿರುವ ಈ ಬೆಳೆಗಳಿಗೆ ಅವರು ಹೊಸ ಮಾರುಕಟ್ಟೆಗಳನ್ನು ಹುಡುಕಲೇಬೇಕಾಗಿದೆ.

ಈ ಹೆಚ್ಚುತ್ತಿರುವ ಬೆಳೆಗಳನ್ನು ಕಡಿಮೆ ಬೆಲೆಗಳಲ್ಲಿ ಮಾರಿ ನಮ್ಮಂತಹ ದೇಶಗಳ ಕೃಷಿ ಮಾರುಕಟ್ಟೆಯನ್ನು ಆಕ್ರಮಿಸಿಕೊಳ್ಳಲು ಈ ಮುಂದುವರಿದ ದೇಶಗಳು ಬಹಳ ದೊಡ್ಡ ಪ್ರಮಾಣದ ಹಣವನ್ನು ಕೃಷಿ ಸಹಾಯಧನವಾಗಿ ಖರ್ಚು ಮಾಡುತ್ತಿವೆ. “ಒಇಸಿಡಿ” (OECD) ಎಂದು ಕರೆಯಲ್ಪಡುವ ರಾಷ್ಟ್ರಗಳಾದ ಈ ದೇಶಗಳ ಒಟ್ಟು ಕೃಷಿ ಸಹಾಯಧನದ ಮೊತ್ತ 1995ರಲ್ಲಿ 1,82,000 ಕೋಟಿ ಡಾಲರ್ (ಅಥವಾ 80,00,000 ಕೋಟಿ ರೂಪಾಯಿ) ಗಳಿದ್ದದ್ದು, 1997ಕ್ಕೆ 2,80,000 ಕೋಟಿ ಡಾಲರ್ (ಅಥವಾ 2,23,20,000 ಕೋಟಿ ರೂಪಾಯಿ) ಗಳಿಗೇರಿತ್ತು. ಇದರಲ್ಲಿ ಯುರೋಪ್ ಒಕ್ಕೂಟ ಮತ್ತು ಆಮೆರಿಕ ದೇಶಗಳದೇ ದೊಡ್ಡ ಪಾಲು.

ಈ ಕಾರಣವೇ, ಈಗಾಗಲೇ ಈ ದೇಶಗಳ ಕೃಷಿ ಹೆಚ್ಚುವರಿಯೆಲ್ಲ ನಮ್ಮಂತಹ ದೇಶಗಳ ಮಾರುಕಟ್ಟೆಯೊಳಕ್ಕೆ ನುಗ್ಗಿ ನಾವು ಬೆಳೆದ ಬೆಳೆಗಳಿಗೆ ನ್ಯಾಯಬೆಲೆ ದೊರಕದ ಸ್ಥಿತಿ ನಿರ್ಮಾಣವಾಗುತ್ತಿರುವುದು.

ಜೊತೆಗೆ, ಆಗಿನ ಬಿಜೆಪಿ ಸರ್ಕಾರ, ಬೇರೆ ದೇಶಗಳ ಆಮದುಗಳಿಗೆ ಹಿಂದೆ ಇದ್ದ ಪ್ರಮಾಣದ ನಿಯಂತ್ರಣವನ್ನು ರದ್ದುಮಾಡಿದೆ. ಇದರಿಂದಾಗಿ ಹೊರದೇಶದಿಂದ ಕೃಷಿ ವಸ್ತುಗಳು ಯಾವುದೇ ಪ್ರಮಾಣದಲ್ಲಿ ಬೇಕಾದರೂ ನಮ್ಮ ಕೃಷಿ ಮಾರುಕಟ್ಟೆ ಪ್ರವೇಶ ಮಾಡಬಹುದು.

ನಮ್ಮ ದೇಶದ ರೈತರಿಗೆ ಹೊರದೇಶದ ಮಾರುಕಟ್ಟೆಗೆ ರಫ್ತು ಮಾಡಲು ಅವಕಾಶವಿದೆಯೇ?

ಮೇಲ್ಕಂಡ ಸಬ್ಸಿಡಿ ಮತ್ತು ಮಾರುಕಟ್ಟೆ ಕುತಂತ್ರದ ಜೊತೆಗೇ, ಈ ಮುಂದುವರಿದ ರಾಷ್ಟ್ರಗಳು ತಮ್ಮ ಮಾರುಕಟ್ಟೆಯನ್ನು ರಕ್ಷಿಸಿಕೊಳ್ಳುವ ಕುತಂತ್ರದ ನಿಯಮಗಳನ್ನು ಈ ವಿಶ್ವವ್ಯಾಪಾರಿ ಸಂಸ್ಥೆಯ ಒಪ್ಪಂದದೊಳಗೆ ಸೇರಿಸಿವೆ. ಇದನ್ನು “ಆರೋಗ್ಯ ನಿಯಮಗಳು” ಎಂದು ಕರೆಯಲಾಗಿದೆ. ತಮಗಿಚ್ಛೆ ಬಂದಂತೆ, ತಮ್ಮ ಮಾರುಕಟ್ಟೆಯನ್ನು ರಕ್ಷಿಸಿಕೊಳ್ಳಲು, ಯಾವುದೇ ದೇಶದ ಬೆಳೆಯನ್ನು ಮಾನವ ಅಥವಾ ಪ್ರಾಣಿಗಳ ಆರೋಗ್ಯಕ್ಕೆ ಯೋಗ್ಯವಲ್ಲವೆಂದು ತಿರಸ್ಕರಿಸಬಹುದಾದ ನಿಯಮ ಇದಾಗಿದೆ.

ಉದಾಹರಣೆಗೆ, ಈ ನಿಯಮಗಳು ಪೈಪೋಟಿಯಲ್ಲಿರುವ ಅಮೆರಿಕಾ ಮತ್ತು ಯುರೋಪ ದೇಶಗಳ ನಡುವೆಯೇ ಚಾಲ್ತಿಗೆ ಬಂದವು. ಹಾರ್ಮೋನುಗಳ ಮೂಲಕ ತಯಾರಾದ ಅಮೆರಿಕದ ದನದ ಮಾಂಸವನ್ನು ಮತ್ತು ಅಲ್ಲಿನ ವಂಶವಾಹಿ ವಿಕೃತ ಸೋಯಾ ಅವರೆಯನ್ನು ಯೂರೋಪು ಒಕ್ಕೂಟ ದೇಶಗಳು ಸಾರ್ವಜನಿಕ ಆರೋಗ್ಯ ಸುರಕ್ಷತೆಯ ಕಾರಣಕೊಟ್ಟು ನಿಷೇಧಿಸಿದ ಕಾರಣ, ಅಮೆರಿಕ ತನ್ನ ಸಬ್ಸಿಡಿಗಳನ್ನು ಹೆಚ್ಚಿಸುವ ಮೂಲಕ ಯೂರೋಪಿನ ಮಾರುಕಟ್ಟೆಯನ್ನೇ ನಾಶಮಾಡುವ ಬೆದರಿಕೆ ಹಾಕುವ ಮಟ್ಟಕ್ಕೆ ಬಂದಿದೆ. ಹೀಗಿರುವಾಗ, ನಮ್ಮ ದೇಶಗಳ ರಫ್ತಿನ ಗತಿಯೇನಾಗಬಹುದು ಎನ್ನುವುದು ಸ್ಪಷ್ಟ.

ನಮ್ಮ ದೇಶದ ರೈತರಿಗೆ ಒಕ್ಕಲುತನದಲ್ಲಾದರೂ ಸ್ವಾತಂತ್ರ್ಯ ಉಳಿಯುತ್ತದೆಯೇ?

1965ರಿಂದೀಚೆಗೆ, “ಅಧಿಕ ಇಳುವರಿ ಮಿಶ್ರತಳಿ”ಗಳ ಮೂಲಕ ಉತ್ಪಾದನೆ ಹೆಚ್ಚಿಸುವ ಮೂಲಕ ಆದಾಯ ಹೆಚ್ಚಿಸಿಕೊಳ್ಳುವ ಹುಚ್ಚಿನಿಂದಾಗಿ ಈಗಾಗಲೇ ನಾವು ಹಿಂದಿನಿಂದ ಕಾಪಾಡಿಕೊಂಡಿದ್ದ “ಬೀಜ ಸ್ವಾತಂತ್ರ್ಯ” ಮತ್ತು ಆ ಮೂಲಕ “ಒಕ್ಕಲುತನದ ಸ್ವಾತಂತ್ರ್ಯ”ವನ್ನು ಕಳೆದುಕೊಂಡಿದ್ದೇವೆ. ರೋಗಗಳೊಂದಿಗೆ ತಯಾರಿಸಿದ ಕಂಪೆನಿ ಬೀಜಗಳು ಮತ್ತು ಈ ರೋಗಗಳ ನಿವಾರಣೆಗೆ ಬೇಕಾದ ಕೀಟನಾಶಕ ರಸಾಯನಿಕಗಳಿಗೆ ಈಗಾಗಲೇ ಸಾಕಷ್ಟು ಗುಲಾಮರಾಗಿದ್ದೇವೆ. ಈ ನಡುವೆ, ನಮ್ಮ ದೇಶೀಯ ತಳಿಗಳನ್ನು ಬಿತ್ತದೆಯೇ ನೂರಾರು ತಳಿಗಳನ್ನು ಕಳೆದುಕೊಂಡಿದ್ದೇವೆ.

ಹೀಗಿದ್ದರೂ, ಈ ಮಿಶ್ರತಳಿಗಳನ್ನು ರೈತರು ಮತ್ತೆ ಬಿತ್ತುವ ಅವಕಾಶ ಇದ್ದದ್ದರ ಜೊತೆಗೆ ದೇಶೀಯ ತಳಿಗಳನ್ನು ಬಿತ್ತುವ ಸ್ವಾತಂತ್ರ್ಯವಾದರೂ ಇತ್ತು. ಈ ಅವಕಾಶಗಳಿಗೂ ಕೊಡಲಿ ಪೆಟ್ಟು ಹಾಕಿ ರೈತರನ್ನು ಸಂಪೂರ್ಣವಾಗಿ ಗುಲಾಮರನ್ನಾಗಿ ಮಾಡುವ ನಿಯಮಗಳೂ ಈ ವಿಶ್ವವಾಣಿಜ್ಯ ಸಂಸ್ಥೆ ನಿಯಮಗಳಲ್ಲಿ ಸೇರ್ಪಡೆಯಾಗಿವೆ. ಇವುಗಳನ್ನು “ಬೌದ್ಧಿಕ ಹಕ್ಕುಗಳ ನಿಯಮಗಳು” ಎಂದು ಕರೆಯಲಾಗಿದೆ.

ಇವುಗಳ ಪ್ರಕಾರ, ಇನ್ನು ಮುಂದೆ ಬೀಜದ ಕಂಪೆನಿಗಳು ತಾವು ತಯಾರಿಸಿದ ಬಿತ್ತನೆ ಬೀಜಗಳಿಗೆ ಬೌದ್ಧಿಕ ಹಕ್ಕು (ಪೇಟೆಂಟ್) ಪಡೆಯುತ್ತವೆ. ಇದರಿಂದಾಗಿ, ರೈತರು ಮತ್ತೆ ಈ ಬೀಜಗಳನ್ನು ಮುಂದಿನ ಬೆಳೆಗೆ ಬಳಸುವಂತಿಲ್ಲ. ಬಳಸಿದರೆ, ದಂಡ ತೆರಬೇಕಾಗುತ್ತದೆ. ಕಂಪೆನಿ ಬೀಜದ ಸೋಂಕು ರೈತರ ತಳಿಯ ಬೆಳೆಗಳಲ್ಲಿ ಕಂಡಾಗಲೂ ಕಂಪನಿಗಳು ದಂಡಹಾಕಿದ ನಿದರ್ಶನಗಳು ಈಗಾಗಲೇ ಬೇರೆ ದೇಶಗಳಲ್ಲಿ ನಡೆದಿವೆ. ಪ್ರತಿ ಬೆಳೆಗೂ ಕಂಪೆನಿ ಬೀಜಗಳಿಗೆ ಮೊರೆಹೋಗುವ ದುಃಸ್ಥಿತಿ ಬರುತ್ತದೆ.

ಜೊತೆಗೆ, ರೈತರ ತಳಿಗಳಿಂದ ಕಂಪೆನಿ ಬೀಜದ ಬೆಳೆಗಳಿಗೆ ಸೋಂಕು ತಗಲಬಾರದೆಂಬ ಕಾನೂನುಗಳು ಆಗಲಿವೆ. ರೈತರ ತಳಿಗಳನ್ನು ಈಗಾಗಲೇ ಜರ್ಮನಿಯಲ್ಲಿ ನಿಷೇಧಿಸಲಾಗಿದೆ. ರೈತರೇ ತಯಾರು ಮಾಡಿಕೊಂಡ ಬೀಜಗಳಿಗೆ ಫ್ರಾನ್ಸ್ ದೇಶದಲ್ಲಿ ತೆರಿಗೆ ಹಾಕಲಾಗಿದೆ.

ಇದಲ್ಲದೆ, ನಮ್ಮ ದೇಶೀಯ ತಳಿಗಳನ್ನೇ ಅಲ್ಪಸ್ವಲ್ಪ ಬದಲಾಯಿಸಿ ಪರಂಗಿ ಕಂಪೆನಿಗಳು ’ಪೇಟೆಂಟ್ ತೆಗೆದುಕೊಳ್ಳುತ್ತಿವೆ. ಈಗಾಗಲೇ, ಬಾಸುಮತಿ ಅಕ್ಕಿ, ಬೇವು, ಅರಿಸಿನ, ಬದನೆಕಾಯಿ, ಹಾಗಲಕಾಯಿ, ನೇರಳೆಹಣ್ಣು ಇತ್ಯಾದಿಗಳ ಮೇಲೆ ’ಪೇಟೆಂಟ್ ಪ್ರಯತ್ನ’ ನಡೆದಿದೆ. ಹೀಗೆಯೇ ಮುಂದುವರಿಯಲು ಬಿಟ್ಟರೆ ನಮ್ಮ ದೇಶೀಯ ತಳಿಗಳ ಮೇಲೆ ನಮಗೇ ಹಕ್ಕಿಲ್ಲದ ಪರಿಸ್ಥಿತಿ ಬರುತ್ತದೆ.

“ಜೈವಿಕ ತಂತ್ರಜ್ಞಾನ” (BIO-TECHNOLOGY) ಎಂಬ ದೊಡ್ಡ ಗಂಡಾಂತರ

ಮೇಲ್ಕಂಡ ಎಲ್ಲ ಕುತಂತ್ರಗಳಿಗಿಂತ ಘೋರ ಪರಿಣಾಮವುಳ್ಳ ಮತ್ತೊಂದು ಹೊಸ ತಂತ್ರಜ್ಞಾನವನ್ನು ನಮ್ಮಂತಹ ದೇಶದೊಳಕ್ಕೆ ತರುವ ದೊಡ್ಡ ಪ್ರಯತ್ನ ನಡೆದಿದೆ. ಇದನ್ನು “ಜೈವಿಕ ತಂತ್ರಜ್ಞಾನ” ಎನ್ನುತ್ತಾರೆ. ಎಂದರೆ, ಬೇರೆಬೇರೆ ಜಾತಿಯ ತಳಿಗಳ ವಂಶವಾಹಿಯನ್ನು ಬೆರೆಸಿ ಅಧಿಕ ಆಹಾರ ಉತ್ಪಾದನೆ ಮಾಡಬಹುದೆಂದು ಹೇಳಿಕೊಳ್ಳುವ ತಂತ್ರಜ್ಞಾನ. ಕೆಲವು ಬಾರಿ ಬೇರೆಬೇರೆ ಕುಲಗಳಿಗೆ ಸೇರಿದ ಸಸ್ಯಗಳ ವಂಶವಾಹಿಯ ಬೆರಕೆ ಮತ್ತು ಕೆಲವು ಬಾರಿ ಸಸ್ಯಗಳಿಗೆ ಪ್ರಾಣಿಗಳ ವಂಶವಾಹಿ ಬೆರೆಸುವ ತಂತ್ರಜ್ಞಾನ ಇದು. ಇವುಗಳನ್ನು “ಕುಲಾಂತರಿ” ಬೀಜಗಳೆಂದು ಕರೆಯುತ್ತಾರೆ.

ತಕ್ಷಣಕ್ಕೆ, ಬೀಜದ ಕಂಪೆನಿಗಳು ನಮ್ಮ ದೇಶದಲ್ಲಿ ಮಾರಾಟ ಮಾಡಲು ಪ್ರಯತ್ನಿಸುತ್ತಿರುವುದು ಎರಡು ಗುಣಗಳಿರುವ ಕುಲಾಂತರಿ ಬೀಜಗಳನ್ನು. ಅವುಗಳು 1) ಕೀಟ ನಿರೋಧಕ ತಳಿಗಳು ಮತ್ತು 2) ಕಳೆ ನಿರೋಧಕ ತಳಿಗಳು.

ಪ್ರೊ. ಎಂ ಡಿ ನಂಜುಂಡಸ್ವಾಮಿ

(ಇದು ಪ್ರೊ. ಎಂಡಿಎನ್ ಅವರ ಒಂದು ಹಳೆಯ ಲೇಖನದ ಎರಡನೇ ಭಾಗ. ಭಾರತದ ಕೃಷಿ ಸಮಸ್ಯೆಗಳಿಗೆ ಅಂತಾರಾಷ್ಟ್ರೀಯ ಒಪ್ಪಂದಗಳು ಹೇಗೆ ಕಾರಣವಾದವು ಮತ್ತು ಆ ಸಮಸ್ಯೆ ಇಂದಿಗೂ ಹೇಗೆ ಮುಂದುವರೆದಿದೆ ಎಂಬುದನ್ನು ಅರ್ಥಮಾಡಿಕೊಳ್ಳಲು ಸಹಕರಿಸುವ ಈ ಲೇಖನದ ಉಳಿದ ಭಾಗಗಳನ್ನು ಮುಂದಿನ ವಾರಗಳಲ್ಲಿ ಪ್ರಕಟಿಸಲಾಗುವುದು. ಮುಂದಿನ ವಾರ: ಜೈವಿಕ ತಂತ್ರಜ್ಞಾನದ ತಳಿಗಳಿಂದ ಆಗುವ ಹಾನಿ)


ಇದನ್ನೂ ಓದಿ: ರೈತ ಚಳವಳಿ ಎದುರಿಸಬೇಕಾಗಿರುವ ಸಮಸ್ಯೆಗಳು; ವಿಶ್ವ ವ್ಯಾಪಾರಿ ಸಂಸ್ಥೆ ಮತ್ತು ಹುನ್ನಾರಗಳು: ಭಾಗ-1

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...