Homeಮುಖಪುಟಹಳತು-ವಿವೇಕ; ರೈತ ಚಳವಳಿ ಎದುರಿಸಬೇಕಾಗಿರುವ ಸಮಸ್ಯೆಗಳು; ವಿಶ್ವ ವ್ಯಾಪಾರಿ ಸಂಸ್ಥೆ ಮತ್ತು ಹುನ್ನಾರಗಳು: ಭಾಗ-2

ಹಳತು-ವಿವೇಕ; ರೈತ ಚಳವಳಿ ಎದುರಿಸಬೇಕಾಗಿರುವ ಸಮಸ್ಯೆಗಳು; ವಿಶ್ವ ವ್ಯಾಪಾರಿ ಸಂಸ್ಥೆ ಮತ್ತು ಹುನ್ನಾರಗಳು: ಭಾಗ-2

- Advertisement -
- Advertisement -

ಮುಂದುವರಿದ ದೇಶಗಳ ಉತ್ಪಾದನೆ ಪ್ರಮಾಣ ಮತ್ತು ಸಬ್ಸಿಡಿ ಪ್ರಮಾಣ

1997ರ ವರದಿಯ ಪ್ರಕಾರ 2004ರೊಳಗಾಗಿ ಯುರೋಪು ಒಕ್ಕೂಟದ ರಾಷ್ಟ್ರಗಳ ಗೋಧಿ ಉತ್ಪಾದನೆ 27 ಮೆಟ್ರಿಕ್ ಟನ್‌ನಿಂದ 450 ಲಕ್ಷ ಮೆಟ್ರಿಕ್ ಟನ್‌ಗಳಿಗೇರಲಿದೆ. ಮತ್ತು ಒಟ್ಟು ಆಹಾರ ಧಾನ್ಯಗಳ ಉತ್ಪಾದನೆ 580 ಲಕ್ಷ ಮೆಟ್ರಿಕ್ ಟನ್‌ಗಳಿಗೇರಲಿದೆ. ಹಾಗೆಯೇ, ಅಮೆರಿಕದ ಪ್ರತಿ ಮೂರು ಎಕರೆಗಳಲ್ಲಿ ಒಂದು ಎಕರೆಯಲ್ಲಾಗುವ ಬೆಳೆ ರಫ್ತಿಗಾಗಿಯೇ ಮೀಸಲಾಗಿದೆ. ಹೀಗಾಗಿ, ಹೆಚ್ಚುತ್ತಿರುವ ಈ ಬೆಳೆಗಳಿಗೆ ಅವರು ಹೊಸ ಮಾರುಕಟ್ಟೆಗಳನ್ನು ಹುಡುಕಲೇಬೇಕಾಗಿದೆ.

ಈ ಹೆಚ್ಚುತ್ತಿರುವ ಬೆಳೆಗಳನ್ನು ಕಡಿಮೆ ಬೆಲೆಗಳಲ್ಲಿ ಮಾರಿ ನಮ್ಮಂತಹ ದೇಶಗಳ ಕೃಷಿ ಮಾರುಕಟ್ಟೆಯನ್ನು ಆಕ್ರಮಿಸಿಕೊಳ್ಳಲು ಈ ಮುಂದುವರಿದ ದೇಶಗಳು ಬಹಳ ದೊಡ್ಡ ಪ್ರಮಾಣದ ಹಣವನ್ನು ಕೃಷಿ ಸಹಾಯಧನವಾಗಿ ಖರ್ಚು ಮಾಡುತ್ತಿವೆ. “ಒಇಸಿಡಿ” (OECD) ಎಂದು ಕರೆಯಲ್ಪಡುವ ರಾಷ್ಟ್ರಗಳಾದ ಈ ದೇಶಗಳ ಒಟ್ಟು ಕೃಷಿ ಸಹಾಯಧನದ ಮೊತ್ತ 1995ರಲ್ಲಿ 1,82,000 ಕೋಟಿ ಡಾಲರ್ (ಅಥವಾ 80,00,000 ಕೋಟಿ ರೂಪಾಯಿ) ಗಳಿದ್ದದ್ದು, 1997ಕ್ಕೆ 2,80,000 ಕೋಟಿ ಡಾಲರ್ (ಅಥವಾ 2,23,20,000 ಕೋಟಿ ರೂಪಾಯಿ) ಗಳಿಗೇರಿತ್ತು. ಇದರಲ್ಲಿ ಯುರೋಪ್ ಒಕ್ಕೂಟ ಮತ್ತು ಆಮೆರಿಕ ದೇಶಗಳದೇ ದೊಡ್ಡ ಪಾಲು.

ಈ ಕಾರಣವೇ, ಈಗಾಗಲೇ ಈ ದೇಶಗಳ ಕೃಷಿ ಹೆಚ್ಚುವರಿಯೆಲ್ಲ ನಮ್ಮಂತಹ ದೇಶಗಳ ಮಾರುಕಟ್ಟೆಯೊಳಕ್ಕೆ ನುಗ್ಗಿ ನಾವು ಬೆಳೆದ ಬೆಳೆಗಳಿಗೆ ನ್ಯಾಯಬೆಲೆ ದೊರಕದ ಸ್ಥಿತಿ ನಿರ್ಮಾಣವಾಗುತ್ತಿರುವುದು.

ಜೊತೆಗೆ, ಆಗಿನ ಬಿಜೆಪಿ ಸರ್ಕಾರ, ಬೇರೆ ದೇಶಗಳ ಆಮದುಗಳಿಗೆ ಹಿಂದೆ ಇದ್ದ ಪ್ರಮಾಣದ ನಿಯಂತ್ರಣವನ್ನು ರದ್ದುಮಾಡಿದೆ. ಇದರಿಂದಾಗಿ ಹೊರದೇಶದಿಂದ ಕೃಷಿ ವಸ್ತುಗಳು ಯಾವುದೇ ಪ್ರಮಾಣದಲ್ಲಿ ಬೇಕಾದರೂ ನಮ್ಮ ಕೃಷಿ ಮಾರುಕಟ್ಟೆ ಪ್ರವೇಶ ಮಾಡಬಹುದು.

ನಮ್ಮ ದೇಶದ ರೈತರಿಗೆ ಹೊರದೇಶದ ಮಾರುಕಟ್ಟೆಗೆ ರಫ್ತು ಮಾಡಲು ಅವಕಾಶವಿದೆಯೇ?

ಮೇಲ್ಕಂಡ ಸಬ್ಸಿಡಿ ಮತ್ತು ಮಾರುಕಟ್ಟೆ ಕುತಂತ್ರದ ಜೊತೆಗೇ, ಈ ಮುಂದುವರಿದ ರಾಷ್ಟ್ರಗಳು ತಮ್ಮ ಮಾರುಕಟ್ಟೆಯನ್ನು ರಕ್ಷಿಸಿಕೊಳ್ಳುವ ಕುತಂತ್ರದ ನಿಯಮಗಳನ್ನು ಈ ವಿಶ್ವವ್ಯಾಪಾರಿ ಸಂಸ್ಥೆಯ ಒಪ್ಪಂದದೊಳಗೆ ಸೇರಿಸಿವೆ. ಇದನ್ನು “ಆರೋಗ್ಯ ನಿಯಮಗಳು” ಎಂದು ಕರೆಯಲಾಗಿದೆ. ತಮಗಿಚ್ಛೆ ಬಂದಂತೆ, ತಮ್ಮ ಮಾರುಕಟ್ಟೆಯನ್ನು ರಕ್ಷಿಸಿಕೊಳ್ಳಲು, ಯಾವುದೇ ದೇಶದ ಬೆಳೆಯನ್ನು ಮಾನವ ಅಥವಾ ಪ್ರಾಣಿಗಳ ಆರೋಗ್ಯಕ್ಕೆ ಯೋಗ್ಯವಲ್ಲವೆಂದು ತಿರಸ್ಕರಿಸಬಹುದಾದ ನಿಯಮ ಇದಾಗಿದೆ.

ಉದಾಹರಣೆಗೆ, ಈ ನಿಯಮಗಳು ಪೈಪೋಟಿಯಲ್ಲಿರುವ ಅಮೆರಿಕಾ ಮತ್ತು ಯುರೋಪ ದೇಶಗಳ ನಡುವೆಯೇ ಚಾಲ್ತಿಗೆ ಬಂದವು. ಹಾರ್ಮೋನುಗಳ ಮೂಲಕ ತಯಾರಾದ ಅಮೆರಿಕದ ದನದ ಮಾಂಸವನ್ನು ಮತ್ತು ಅಲ್ಲಿನ ವಂಶವಾಹಿ ವಿಕೃತ ಸೋಯಾ ಅವರೆಯನ್ನು ಯೂರೋಪು ಒಕ್ಕೂಟ ದೇಶಗಳು ಸಾರ್ವಜನಿಕ ಆರೋಗ್ಯ ಸುರಕ್ಷತೆಯ ಕಾರಣಕೊಟ್ಟು ನಿಷೇಧಿಸಿದ ಕಾರಣ, ಅಮೆರಿಕ ತನ್ನ ಸಬ್ಸಿಡಿಗಳನ್ನು ಹೆಚ್ಚಿಸುವ ಮೂಲಕ ಯೂರೋಪಿನ ಮಾರುಕಟ್ಟೆಯನ್ನೇ ನಾಶಮಾಡುವ ಬೆದರಿಕೆ ಹಾಕುವ ಮಟ್ಟಕ್ಕೆ ಬಂದಿದೆ. ಹೀಗಿರುವಾಗ, ನಮ್ಮ ದೇಶಗಳ ರಫ್ತಿನ ಗತಿಯೇನಾಗಬಹುದು ಎನ್ನುವುದು ಸ್ಪಷ್ಟ.

ನಮ್ಮ ದೇಶದ ರೈತರಿಗೆ ಒಕ್ಕಲುತನದಲ್ಲಾದರೂ ಸ್ವಾತಂತ್ರ್ಯ ಉಳಿಯುತ್ತದೆಯೇ?

1965ರಿಂದೀಚೆಗೆ, “ಅಧಿಕ ಇಳುವರಿ ಮಿಶ್ರತಳಿ”ಗಳ ಮೂಲಕ ಉತ್ಪಾದನೆ ಹೆಚ್ಚಿಸುವ ಮೂಲಕ ಆದಾಯ ಹೆಚ್ಚಿಸಿಕೊಳ್ಳುವ ಹುಚ್ಚಿನಿಂದಾಗಿ ಈಗಾಗಲೇ ನಾವು ಹಿಂದಿನಿಂದ ಕಾಪಾಡಿಕೊಂಡಿದ್ದ “ಬೀಜ ಸ್ವಾತಂತ್ರ್ಯ” ಮತ್ತು ಆ ಮೂಲಕ “ಒಕ್ಕಲುತನದ ಸ್ವಾತಂತ್ರ್ಯ”ವನ್ನು ಕಳೆದುಕೊಂಡಿದ್ದೇವೆ. ರೋಗಗಳೊಂದಿಗೆ ತಯಾರಿಸಿದ ಕಂಪೆನಿ ಬೀಜಗಳು ಮತ್ತು ಈ ರೋಗಗಳ ನಿವಾರಣೆಗೆ ಬೇಕಾದ ಕೀಟನಾಶಕ ರಸಾಯನಿಕಗಳಿಗೆ ಈಗಾಗಲೇ ಸಾಕಷ್ಟು ಗುಲಾಮರಾಗಿದ್ದೇವೆ. ಈ ನಡುವೆ, ನಮ್ಮ ದೇಶೀಯ ತಳಿಗಳನ್ನು ಬಿತ್ತದೆಯೇ ನೂರಾರು ತಳಿಗಳನ್ನು ಕಳೆದುಕೊಂಡಿದ್ದೇವೆ.

ಹೀಗಿದ್ದರೂ, ಈ ಮಿಶ್ರತಳಿಗಳನ್ನು ರೈತರು ಮತ್ತೆ ಬಿತ್ತುವ ಅವಕಾಶ ಇದ್ದದ್ದರ ಜೊತೆಗೆ ದೇಶೀಯ ತಳಿಗಳನ್ನು ಬಿತ್ತುವ ಸ್ವಾತಂತ್ರ್ಯವಾದರೂ ಇತ್ತು. ಈ ಅವಕಾಶಗಳಿಗೂ ಕೊಡಲಿ ಪೆಟ್ಟು ಹಾಕಿ ರೈತರನ್ನು ಸಂಪೂರ್ಣವಾಗಿ ಗುಲಾಮರನ್ನಾಗಿ ಮಾಡುವ ನಿಯಮಗಳೂ ಈ ವಿಶ್ವವಾಣಿಜ್ಯ ಸಂಸ್ಥೆ ನಿಯಮಗಳಲ್ಲಿ ಸೇರ್ಪಡೆಯಾಗಿವೆ. ಇವುಗಳನ್ನು “ಬೌದ್ಧಿಕ ಹಕ್ಕುಗಳ ನಿಯಮಗಳು” ಎಂದು ಕರೆಯಲಾಗಿದೆ.

ಇವುಗಳ ಪ್ರಕಾರ, ಇನ್ನು ಮುಂದೆ ಬೀಜದ ಕಂಪೆನಿಗಳು ತಾವು ತಯಾರಿಸಿದ ಬಿತ್ತನೆ ಬೀಜಗಳಿಗೆ ಬೌದ್ಧಿಕ ಹಕ್ಕು (ಪೇಟೆಂಟ್) ಪಡೆಯುತ್ತವೆ. ಇದರಿಂದಾಗಿ, ರೈತರು ಮತ್ತೆ ಈ ಬೀಜಗಳನ್ನು ಮುಂದಿನ ಬೆಳೆಗೆ ಬಳಸುವಂತಿಲ್ಲ. ಬಳಸಿದರೆ, ದಂಡ ತೆರಬೇಕಾಗುತ್ತದೆ. ಕಂಪೆನಿ ಬೀಜದ ಸೋಂಕು ರೈತರ ತಳಿಯ ಬೆಳೆಗಳಲ್ಲಿ ಕಂಡಾಗಲೂ ಕಂಪನಿಗಳು ದಂಡಹಾಕಿದ ನಿದರ್ಶನಗಳು ಈಗಾಗಲೇ ಬೇರೆ ದೇಶಗಳಲ್ಲಿ ನಡೆದಿವೆ. ಪ್ರತಿ ಬೆಳೆಗೂ ಕಂಪೆನಿ ಬೀಜಗಳಿಗೆ ಮೊರೆಹೋಗುವ ದುಃಸ್ಥಿತಿ ಬರುತ್ತದೆ.

ಜೊತೆಗೆ, ರೈತರ ತಳಿಗಳಿಂದ ಕಂಪೆನಿ ಬೀಜದ ಬೆಳೆಗಳಿಗೆ ಸೋಂಕು ತಗಲಬಾರದೆಂಬ ಕಾನೂನುಗಳು ಆಗಲಿವೆ. ರೈತರ ತಳಿಗಳನ್ನು ಈಗಾಗಲೇ ಜರ್ಮನಿಯಲ್ಲಿ ನಿಷೇಧಿಸಲಾಗಿದೆ. ರೈತರೇ ತಯಾರು ಮಾಡಿಕೊಂಡ ಬೀಜಗಳಿಗೆ ಫ್ರಾನ್ಸ್ ದೇಶದಲ್ಲಿ ತೆರಿಗೆ ಹಾಕಲಾಗಿದೆ.

ಇದಲ್ಲದೆ, ನಮ್ಮ ದೇಶೀಯ ತಳಿಗಳನ್ನೇ ಅಲ್ಪಸ್ವಲ್ಪ ಬದಲಾಯಿಸಿ ಪರಂಗಿ ಕಂಪೆನಿಗಳು ’ಪೇಟೆಂಟ್ ತೆಗೆದುಕೊಳ್ಳುತ್ತಿವೆ. ಈಗಾಗಲೇ, ಬಾಸುಮತಿ ಅಕ್ಕಿ, ಬೇವು, ಅರಿಸಿನ, ಬದನೆಕಾಯಿ, ಹಾಗಲಕಾಯಿ, ನೇರಳೆಹಣ್ಣು ಇತ್ಯಾದಿಗಳ ಮೇಲೆ ’ಪೇಟೆಂಟ್ ಪ್ರಯತ್ನ’ ನಡೆದಿದೆ. ಹೀಗೆಯೇ ಮುಂದುವರಿಯಲು ಬಿಟ್ಟರೆ ನಮ್ಮ ದೇಶೀಯ ತಳಿಗಳ ಮೇಲೆ ನಮಗೇ ಹಕ್ಕಿಲ್ಲದ ಪರಿಸ್ಥಿತಿ ಬರುತ್ತದೆ.

“ಜೈವಿಕ ತಂತ್ರಜ್ಞಾನ” (BIO-TECHNOLOGY) ಎಂಬ ದೊಡ್ಡ ಗಂಡಾಂತರ

ಮೇಲ್ಕಂಡ ಎಲ್ಲ ಕುತಂತ್ರಗಳಿಗಿಂತ ಘೋರ ಪರಿಣಾಮವುಳ್ಳ ಮತ್ತೊಂದು ಹೊಸ ತಂತ್ರಜ್ಞಾನವನ್ನು ನಮ್ಮಂತಹ ದೇಶದೊಳಕ್ಕೆ ತರುವ ದೊಡ್ಡ ಪ್ರಯತ್ನ ನಡೆದಿದೆ. ಇದನ್ನು “ಜೈವಿಕ ತಂತ್ರಜ್ಞಾನ” ಎನ್ನುತ್ತಾರೆ. ಎಂದರೆ, ಬೇರೆಬೇರೆ ಜಾತಿಯ ತಳಿಗಳ ವಂಶವಾಹಿಯನ್ನು ಬೆರೆಸಿ ಅಧಿಕ ಆಹಾರ ಉತ್ಪಾದನೆ ಮಾಡಬಹುದೆಂದು ಹೇಳಿಕೊಳ್ಳುವ ತಂತ್ರಜ್ಞಾನ. ಕೆಲವು ಬಾರಿ ಬೇರೆಬೇರೆ ಕುಲಗಳಿಗೆ ಸೇರಿದ ಸಸ್ಯಗಳ ವಂಶವಾಹಿಯ ಬೆರಕೆ ಮತ್ತು ಕೆಲವು ಬಾರಿ ಸಸ್ಯಗಳಿಗೆ ಪ್ರಾಣಿಗಳ ವಂಶವಾಹಿ ಬೆರೆಸುವ ತಂತ್ರಜ್ಞಾನ ಇದು. ಇವುಗಳನ್ನು “ಕುಲಾಂತರಿ” ಬೀಜಗಳೆಂದು ಕರೆಯುತ್ತಾರೆ.

ತಕ್ಷಣಕ್ಕೆ, ಬೀಜದ ಕಂಪೆನಿಗಳು ನಮ್ಮ ದೇಶದಲ್ಲಿ ಮಾರಾಟ ಮಾಡಲು ಪ್ರಯತ್ನಿಸುತ್ತಿರುವುದು ಎರಡು ಗುಣಗಳಿರುವ ಕುಲಾಂತರಿ ಬೀಜಗಳನ್ನು. ಅವುಗಳು 1) ಕೀಟ ನಿರೋಧಕ ತಳಿಗಳು ಮತ್ತು 2) ಕಳೆ ನಿರೋಧಕ ತಳಿಗಳು.

ಪ್ರೊ. ಎಂ ಡಿ ನಂಜುಂಡಸ್ವಾಮಿ

(ಇದು ಪ್ರೊ. ಎಂಡಿಎನ್ ಅವರ ಒಂದು ಹಳೆಯ ಲೇಖನದ ಎರಡನೇ ಭಾಗ. ಭಾರತದ ಕೃಷಿ ಸಮಸ್ಯೆಗಳಿಗೆ ಅಂತಾರಾಷ್ಟ್ರೀಯ ಒಪ್ಪಂದಗಳು ಹೇಗೆ ಕಾರಣವಾದವು ಮತ್ತು ಆ ಸಮಸ್ಯೆ ಇಂದಿಗೂ ಹೇಗೆ ಮುಂದುವರೆದಿದೆ ಎಂಬುದನ್ನು ಅರ್ಥಮಾಡಿಕೊಳ್ಳಲು ಸಹಕರಿಸುವ ಈ ಲೇಖನದ ಉಳಿದ ಭಾಗಗಳನ್ನು ಮುಂದಿನ ವಾರಗಳಲ್ಲಿ ಪ್ರಕಟಿಸಲಾಗುವುದು. ಮುಂದಿನ ವಾರ: ಜೈವಿಕ ತಂತ್ರಜ್ಞಾನದ ತಳಿಗಳಿಂದ ಆಗುವ ಹಾನಿ)


ಇದನ್ನೂ ಓದಿ: ರೈತ ಚಳವಳಿ ಎದುರಿಸಬೇಕಾಗಿರುವ ಸಮಸ್ಯೆಗಳು; ವಿಶ್ವ ವ್ಯಾಪಾರಿ ಸಂಸ್ಥೆ ಮತ್ತು ಹುನ್ನಾರಗಳು: ಭಾಗ-1

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿ, ಶಾ ವಿರುದ್ಧ ಘೋಷಣೆ ಆರೋಪ: ತನ್ನದೇ ವಿದ್ಯಾರ್ಥಿಗಳ ವಿರುದ್ಧ ಎಫ್ಐಆರ್ ದಾಖಲಿಸಲು ಮನವಿ ಮಾಡಿದ ಜೆಎನ್‌ಯು ಆಡಳಿತ ಮಂಡಳಿ

ಸೋಮವಾರ ರಾತ್ರಿ ವಿದ್ಯಾರ್ಥಿಗಳ ಗುಂಪೊಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಘೋಷಣೆಗಳನ್ನು ಕೂಗಿದ್ದು, ಆ ಘೋಷಣೆಗಳು "ಪ್ರಚೋದನಕಾರಿ, ಪ್ರಚೋದನಕಾರಿ ಮತ್ತು ಗೌರವಾನ್ವಿತ ಸುಪ್ರೀಂ ಕೋರ್ಟ್‌ನ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎಸ್‌ಐಟಿ ತನಿಖೆ ಪಕ್ಷಪಾತದಿಂದ ಕೂಡಿದೆ ಎಂಬ ವಿಪಕ್ಷಗಳ ಆರೋಪ ತಿರಸ್ಕರಿಸಿದ ಕೇರಳ ಹೈಕೋರ್ಟ್

ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದ ತನಿಖೆಯು ಪಕ್ಷಪಾತದಿಂದ ಕೂಡಿದೆ ಅಥವಾ ಸರ್ಕಾರದ ಒತ್ತಡದಲ್ಲಿದೆ ಎಂಬ ವಿರೋಧ ಪಕ್ಷದ ಆರೋಪಗಳನ್ನು ತಿರಸ್ಕರಿಸಿರುವ ಕೇರಳ ಹೈಕೋರ್ಟ್, ಪ್ರಸ್ತುತ ನಡೆಯುತ್ತಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ತನಿಖೆಯ...

ಆರ್‌ಎಸ್‌ಎಸ್ ಕುರಿತ ಹೇಳಿಕೆ: ಪ್ರಿಯಾಂಕ್ ಖರ್ಗೆ, ದಿನೇಶ್ ಗುಂಡೂರಾವ್, ನಲಪಾಡ್‌ಗೆ ಕೋರ್ಟ್ ನೋಟಿಸ್

ಬೆಂಗಳೂರು: ಆರ್‌ಎಸ್‌ಎಸ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಾನನಷ್ಟ ಮೊಕದ್ದಮೆಯಲ್ಲಿ ಸಚಿವರಾದ ಪ್ರಿಯಾಂಕ್ ಖರ್ಗೆ, ದಿನೇಶ್ ಗುಂಡೂರಾವ್ ಮತ್ತು ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಅವರಿಗೆ ಸಂಸದ/ಶಾಸಕರ...

‘ನಾನು ಹಿಂದೂ ಅಲ್ಲ, ಮನುಷ್ಯ’: ಎಸ್‌ಪಿ ನಾಯಕ ಶಿವರಾಜ್ ಸಿಂಗ್ ಯಾದವ್ ಹೇಳಿಕೆ ತಿರುಚಿ ವಿವಾದ ಸೃಷ್ಟಿಸಿದ ಬಿಜೆಪಿ ಬೆಂಬಲಿಗರು

ಸಮಾಜವಾದಿ ಪಕ್ಷದ ನಾಯಕ, ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಆಪ್ತ ಸಹಾಯಕ ಹಾಗೂ ಉತ್ತರ ಪ್ರದೇಶದ ಫಿರೋಜಾಬಾದ್‌ನ ಸಮಾಜವಾದಿ ಪಕ್ಷದ ಜಿಲ್ಲಾಧ್ಯಕ್ಷ ಶಿವರಾಜ್ ಸಿಂಗ್ ಯಾದವ್ ‘ನಾನು ಹಿಂದೂ ಅಲ್ಲ, ನಾನು...

ಛತ್ತೀಸ್‌ಗಢ : ಎಂಟು ಮಂದಿ ಬಂಗಾಳಿ ಮುಸ್ಲಿಂ ವಲಸೆ ಕಾರ್ಮಿಕರ ಮೇಲೆ ಬಜರಂಗದಳ ಕಾರ್ಯಕರ್ತರಿಂದ ಹಲ್ಲೆ; ವರದಿ

ಛತ್ತೀಸ್‌ಗಢದ ರಾಯ್‌ಪುರದಲ್ಲಿ ಭಾನುವಾರ (ಜ.4) ಬಜರಂಗದಳ ಕಾರ್ಯಕರ್ತರು ಎಂಟು ಮಂದಿ ಬಂಗಾಳಿ ಮಾತನಾಡುವ ಮುಸ್ಲಿಂ ವಲಸೆ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ್ದು, ಒಬ್ಬ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ರಾಯ್‌ಪುರ ಜಿಲ್ಲೆಯ ಕಟೋವಾಲಿ...

‘ಉಮರ್ ಮತ್ತು ಶಾರ್ಜಿಲ್ ಜಾಮೀನು ನಿರಾಕರಣೆ’: ಶಾಸಕಾಂಗ, ನ್ಯಾಯಾಂಗದ ಕಾರ್ಯವೈಖರಿಯಲ್ಲಿನ ವೈರುಧ್ಯಗಳಿಗೆ ಉದಾಹರಣೆ: ಶ್ರೀಪಾದ್ ಭಟ್

ಇಂಡಿಯನ್ ಎಕ್ಸ್ಪ್ರೆಸ್ ನಲ್ಲಿನ ವರದಿಯ ಪ್ರಕಾರ ಈ ಪ್ರಕರಣದ ವಿಚಾರಣೆಯಲ್ಲಿರುವ ಮುಖ್ಯ ಪ್ರಶ್ನೆ: ಬಂಧನವಾಗಿ ಐದು ವರ್ಷಗಳಾದರೂ ಸಹ ಇನ್ನೂ ವಿಚಾರಣೆ ಆರಂಭವಾಗಿಲ್ಲ. ದೀರ್ಘಕಾಲದ ಜೈಲುವಾಸವನ್ನು ಭಯೋತ್ಪಾದಕ ವಿರೋಧಿ ಕಾನೂನಿನ ಅಡಿಯಲ್ಲಿ ಸಮರ್ಥಿಸಬಹುದೇ?...

ಉತ್ತರ ಪ್ರದೇಶ SIR : ಮತದಾರರ ಪಟ್ಟಿಯಿಂದ 2.89 ಕೋಟಿ ಹೆಸರು ಡಿಲೀಟ್

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐರ್‌) ಬಳಿಕ ಸುಮಾರು 2.89 ಕೋಟಿ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಉತ್ತರ ಪ್ರದೇಶದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ನವದೀಪ್ ರಿನ್ವಾ...

ಕರೂರ್ ಕಾಲ್ತುಳಿತ ಪ್ರಕರಣ: ಟಿವಿಕೆ ನಾಯಕ ವಿಜಯ್‌ಗೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ನೋಟಿಸ್

ಕರೂರ್ ಕಾಲ್ತುಳಿತ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಟಿವಿಕೆ ನಾಯಕ ವಿಜಯ್ ಅವರಿಗೆ ಸಿಬಿಐ ನೋಟಿಸ್ ಜಾರಿ ಮಾಡಿದೆ ಎಂದು ಪಿಟಿಐ ಮಂಗಳವಾರ ವರದಿ ಮಾಡಿದೆ. ಸೆಪ್ಟೆಂಬರ್ 27 ರಂದು ನಟ-ರಾಜಕಾರಣಿ ವಿಜಯ್ ಅವರ ತಮಿಳಗ...

ಲಂಡನ್‌ನಲ್ಲಿ ಪ್ಯಾಲೆಸ್ತೀನ್ ರಾಯಭಾರ ಕಚೇರಿ ಉದ್ಘಾಟನೆ : ‘ಐತಿಹಾಸಿಕ ಕ್ಷಣ’ ಎಂದ ರಾಯಭಾರಿ ಹುಸಾಮ್ ಝೊಮ್ಲೋಟ್

ಲಂಡನ್‌ನಲ್ಲಿ ಪ್ಯಾಲೆಸ್ತೀನ್ ದೇಶದ ರಾಯಭಾರಿ ಕಚೇರಿ ಅಧಿಕೃತವಾಗಿ ಉದ್ಘಾಟನೆಯಾಗಿದ್ದು, ಯುಕೆಯ ಪ್ಯಾಲೆಸ್ತೀನ್‌ ರಾಯಭಾರಿ ಇದನ್ನು 'ಐತಿಹಾಸಿಕ ಕ್ಷಣ' ಎಂದು ಬಣ್ಣಿಸಿದ್ದಾರೆ. ಸೋಮವಾರ (ಜ.5) ಪಶ್ಚಿಮ ಲಂಡನ್‌ನ ಹ್ಯಾಮರ್‌ಸ್ಮಿತ್‌ನಲ್ಲಿ ನಡೆದ ರಾಯಭಾರ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ...

ಬಾಂಗ್ಲಾದೇಶದಲ್ಲಿ ಹಿಂದೂ ಉದ್ಯಮಿ ಮತ್ತು ಪತ್ರಕರ್ತನಾಗಿದ್ದ ರಾಣಾ ಪ್ರತಾಪ್ ಬೈರಾಗಿ ತಲೆಗೆ ಗುಂಡಿಕ್ಕಿ ಹತ್ಯೆ 

ಬಾಂಗ್ಲಾದೇಶದ ಜೆಸ್ಸೋರ್ ಜಿಲ್ಲೆಯಲ್ಲಿ ಸೋಮವಾರ 38 ವರ್ಷದ ರಾಣಾ ಪ್ರತಾಪ್ ಬೈರಾಗಿ ಅವರ ತಲೆಗೆ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ ಎಂದು ಹಲವು ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿದೆ.  ಬೈರಾಗಿ ಒಬ್ಬ ಹಿಂದೂ ಉದ್ಯಮಿ ಮತ್ತು...