Homeಮುಖಪುಟಕೇಂದ್ರದ 'ಸಹಯೋಗ್' ಪೋರ್ಟಲ್ ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ : ಮೇಲ್ಮನವಿ ಸಲ್ಲಿಸುವುದಾಗಿ ತಿಳಿಸಿದ ಎಕ್ಸ್ ಕಾರ್ಪ್

ಕೇಂದ್ರದ ‘ಸಹಯೋಗ್’ ಪೋರ್ಟಲ್ ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ : ಮೇಲ್ಮನವಿ ಸಲ್ಲಿಸುವುದಾಗಿ ತಿಳಿಸಿದ ಎಕ್ಸ್ ಕಾರ್ಪ್

- Advertisement -
- Advertisement -

ಕೇಂದ್ರದ ‘ಸಹಯೋಗ್’ ಪೋರ್ಟಲ್ ವಿರುದ್ದ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿರುವ ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ದ ಮೇಲ್ಮನವಿ ಸಲ್ಲಿಸುವುದಾಗಿ ಸಾಮಾಜಿಕ ಜಾಲತಾಣ ಎಕ್ಸ್‌ ಕಾರ್ಪ್ ಹೇಳಿದೆ.

ಹೈಕೋರ್ಟ್ ಆದೇಶವನ್ನು ಒಪ್ಪುವುದಿಲ್ಲ ಎಂದು ಗೌರಯುತವಾಗಿ ಹೇಳುತ್ತಿದ್ದೇವೆ. ಇದರ ವಿರುದ್ದ ಮೇಲ್ಮನವಿಯ ಸಲ್ಲಿಸುತ್ತೇವೆ ಎಂದು ಎಕ್ಸ್‌ ಕಂಪನಿಯ ಗ್ಲೋಬಲ್ ಅಫೇರ್ಸ್ ವಿಭಾಗ ಸೋಮವಾರ ತಿಳಿಸಿದೆ.

ಕಳೆದ ವರ್ಷ ಕೇಂದ್ರ ಸರ್ಕಾರ ‘ಸಹಯೋಗ್’ ಪೋರ್ಟಲ್ ಪರಿಚಯಿಸಿದ ನಂತರ ವಾಕ್ ಸ್ವಾತಂತ್ರ್ಯ ಮತ್ತು ಪಾರದರ್ಶಕತೆಯ ಬಗ್ಗೆ ಕಳವಳ ವ್ಯಕ್ತಪಡಿಸಿ ಮೈಕ್ರೋ-ಬ್ಲಾಗಿಂಗ್ ಸೈಟ್ ಎಕ್ಸ್ ಮತ್ತು 92 ಮಾಧ್ಯಮ ಸಂಸ್ಥೆಗಳ ಸಮೂಹವಾದ ಡಿಜಿಪಬ್ ಸಲ್ಲಿಸಿದ್ದ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ ಬುಧವಾರ (ಸೆ.24) ವಜಾಗೊಳಿಸಿತ್ತು.

ಜುಲೈ 29ರಂದು ಕಾಯ್ದರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಪ್ರಕಟಿಸಿದ್ದು, “ನಮ್ಮ ಸಮಾಜದ ಬೆಳವಣಿಗೆಯ ಇತಿಹಾಸ ನೋಡಿದರೆ, ಒಂದು ವಿಷಯ ಸ್ಪಷ್ಟವಾಗಿ ಗೊತ್ತಾಗುತ್ತದೆ. ಮಾಹಿತಿ ಮತ್ತು ಸಂವಹನ, ಅದು ಎಷ್ಟೇ ವೇಗವಾಗಿ ಹರಡಿದರೂ, ಅದನ್ನು ಎಂದಿಗೂ ಸಂಪೂರ್ಣ ಸ್ವತಂತ್ರವಾಗಿ ಬಿಡಲಾಗಿಲ್ಲ. ಯಾವಾಗಲೂ ಅದರ ಮೇಲೆ ಕೆಲವು ನಿಯಮಗಳು ಮತ್ತು ನಿಯಂತ್ರಣಗಳು ಇದ್ದೇ ಇವೆ” ಎಂದು ಹೇಳಿದ್ದರು.

ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆಯು (ಮೈಟಿ) ಪೊಲೀಸರನ್ನೂ ಒಳಗೊಂಡಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಸಂಸ್ಥೆಗಳಿಗೆ ಸೆಕ್ಷನ್‌ 69A ಮೀರಿ ಸೆಕ್ಷನ್‌ 79(3)(b) ಅಡಿ ಮಾಹಿತಿ ನಿರ್ಬಂಧಿಸಲು ನಿರ್ದೇಶಿಸಿದೆ ಎಂದು ಎಕ್ಸ್‌ ಆರೋಪಿಸಿತ್ತು. ಅಲ್ಲದೇ, ನಿರ್ಬಂಧ ಆದೇಶ ಮಾಡಲು ಸಿದ್ಧ ಮಾದರಿಯನ್ನೂ ಮೈಟಿಯು ನೀಡಿದೆ. ಇದು ಸುಪ್ರೀಂ ಕೋರ್ಟ್‌ ಆದೇಶ ಉಲ್ಲಂಘನೆ ಎಂದು ಎಕ್ಸ್‌ ಆಕ್ಷೇಪಿಸಿತ್ತು.

ಎಕ್ಸ್ ಕಂಪನಿಯು ಕರ್ನಾಟಕ ಹೈಕೋರ್ಟ್ ತೀರ್ಪು ಬಾಂಬೆ ಹೈಕೋರ್ಟ್ ತೀರ್ಪಿಗೆ ವಿರುದ್ಧವಾಗಿದೆ ಎಂದು ಹೇಳಿದೆ. ಬಾಂಬೆ ಹೈಕೋರ್ಟ್ ಈ ಹಿಂದೆ ಕೇಂದ್ರ ಸರ್ಕಾರ ಸ್ಥಾಪಿಸಿದ್ದ ‘ಫ್ಯಾಕ್ಟ್ ಚೆಕ್ ಯೂನಿಟ್’ ಅನ್ನು ರದ್ದುಗೊಳಿಸಿತ್ತು.

ವಿದೇಶಿ ಕಂಪನಿಯೊಂದು ಭಾರತದ ಸಂವಿಧಾನದ ಆರ್ಟಿಕಲ್ 19(1)(a) ಅಡಿ ವಾಕ್ ಮತ್ತು ಅಭಿವ್ಯಕ್ತಿಯ ಸ್ವಾತಂತ್ರ್ಯ ಪಡೆಯಲು ಸಾಧ್ಯವಿಲ್ಲ ಎಂಬ ಕರ್ನಾಟಕ ಹೈಕೋರ್ಟ್ ಅಭಿಪ್ರಾಯವನ್ನು ಎಕ್ಸ್ ಒಪ್ಪಿಕೊಂಡಿಲ್ಲ.

ಹೈಕೋರ್ಟ್ ಸಂವಿಧಾನದ 19 ನೇ ವಿಧಿಯಡಿ ವಿದೇಶಿ ಕಂಪನಿಗಳು ಮೂಲಭೂತ ವಾಕ್ ಸ್ವಾತಂತ್ರ್ಯದ ಹಕ್ಕನ್ನು ಚಲಾಯಿಸಲು ಸಾಧ್ಯವಿಲ್ಲ ಎಂದಿದೆ.

ಆ ರೀತಿಯ ಹಕ್ಕುಗಳು ಭಾರತದ ನಾಗರಿಕರಿಗೆ ಮಾತ್ರ ಮೀಸಲಾಗಿದ್ದುಎಕ್ಸ್ ಕಾರ್ಪ್ ರೀತಿಯ ಮಧ್ಯಸ್ಥ ಸಂಸ್ಥೆಗಳು ದೇಶದಲ್ಲಿ ಕಾರ್ಯನಿರ್ವಹಿಸಲು ಬಯಸಿದರೆ ಕಾನೂನು ಪಾಲಿಸಬೇಕು ಎಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ತೀರ್ಪು ನೀಡಿದ್ದಾರೆ.

ಮಾಹಿತಿ ತಂತ್ರಜ್ಞಾನ ಕಾಯ್ದೆ, 2000ರ ಸೆಕ್ಷನ್ 79(3)(ಬಿ) ಅಡಿಯಲ್ಲಿ ಮಾಹಿತಿ ನಿರ್ಬಂಧಿಸುವ ಆದೇಶಗಳನ್ನು ಹೊರಡಿಸಲು ಸಹಯೋಗ್ ಪೋರ್ಟಲ್ ಅನುವು ಮಾಡಿಕೊಡುತ್ತದೆ, ಇದರಿಂದಾಗಿ ಐಟಿ ಕಾಯ್ದೆಯ ಸೆಕ್ಷನ್ 69ಎ ಮತ್ತು ಶ್ರೇಯಾ ಸಿಂಘಾಲ್ ಪ್ರಕರಣದಲ್ಲಿ ನೀಡಿದ ತೀರ್ಪಿನಂತೆ ಕಡ್ಡಾಯಗೊಳಿಸಲಾದ ಮಾರ್ಗಸೂಚಿ ಪಾಲಿಸಲು ಅಡ್ಡಿಯಾಗುತ್ತದೆ ಎಂದು ವಾದಿಸಿ ಎಕ್ಸ್ ಕಾರ್ಪ್ ನ್ಯಾಯಾಲಯದ ಮೆಟ್ಟಿಲೇರಿತ್ತು.

ನವದೆಹಲಿ ರೈಲು ನಿಲ್ದಾಣದಲ್ಲಿ ನಡೆದ ಕಾಲ್ತುಳಿತದ ಬಗ್ಗೆ ಪ್ರಕಟವಾದ ಟ್ವೀಟ್‌ಗಳನ್ನು ತೆಗೆಯುವಂತೆ ರೈಲ್ವೆ ಸಚಿವಾಲಯ ನೀಡಿದ್ದ ಆದೇಶ ಪ್ರಶ್ನಿಸಿ ಈ ಅರ್ಜಿ ಸಲ್ಲಿಸಲಾಗಿತ್ತು.

ಹೀಗಾಗಿ, ಸೆಕ್ಷನ್ 79(3)(b) ಮಾಹಿತಿ ನಿರ್ಬಂಧ ಆದೇಶ ಮಾಡಲು ಸರ್ಕಾರಕ್ಕೆ ಅವಕಾಶವಿಲ್ಲ. ಇದು ವಿಶೇಷವಾಗಿ ಸೆಕ್ಷನ್ 69Aರ ವ್ಯಾಪ್ತಿಗೆ ಒಳಪಡುತ್ತದೆ ಎಂದು ಆದೇಶಿಸಬೇಕು ಎಂದು ಎಕ್ಸ್ ಕೋರಿತ್ತು.

ತೀರ್ಪಿನ ಮೂಲಕ ನ್ಯಾಯಾಲಯ ನಿಸ್ಸಂದಿಗ್ಧವಾಗಿ 19ನೇ ವಿಧಿಯಡಿ ಒದಗಿಸಲಾದ ಹಕ್ಕುಗಳನ್ನು ವಿದೇಶಿಯರಿಗೆ ನೀಡಲಾಗದು ಎಂದಿದೆ. 19ನೇ ವಿಧಿಯ ಮೂಲಕ ದೇಶದ ಕಾನೂನನ್ನು ಪ್ರಶ್ನಿಸಲು ಯತ್ನಿಸುವುದನ್ನು ಸಹಿಸಲಾಗದು ಎಂದಿರುವ ತೀರ್ಪು, ಸಂವಿಧಾನದ 19(1)(ಎ) ವಿಧಿಯಡಿ ವಾಕ್ ಸ್ವಾತಂತ್ರ್ಯ ಸಮಂಜಸ ನಿರ್ಬಂಧಗಳಿಗೆ ಒಳಪಟ್ಟಿರುತ್ತದೆ ಎಂಬುದಾಗಿ ಪುನರುಚ್ಚರಿಸಿದೆ.

ಅಲ್ಲದೆ ಯಾವುದೇ ಮಾಧ್ಯಮ ಕಾನೂನು ವ್ಯಾಪ್ತಿಯಿಂದ ಹೊರಗೆ ಇರುವಂತಿಲ್ಲ ಎಂದು ತೀರ್ಪಿನಲ್ಲಿ ತಿಳಿಸಲಾಗಿದೆ.

ಸಾಮಾಜಿಕ ಮಾಧ್ಯಮಗಳ ನಿಯಂತ್ರಣ ಅಗತ್ಯ: ಕೇಂದ್ರದ ‘ಸಹಯೋಗ್‌ ಪೋರ್ಟಲ್‌’ ಪ್ರಶ್ನಿಸಿದ್ದ ಎಕ್ಸ್‌ ಕಾರ್ಪ್‌ ಅರ್ಜಿ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...