Homeಮುಖಪುಟಕೇಂದ್ರದ 'ಸಹಯೋಗ್' ಪೋರ್ಟಲ್ ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ : ಮೇಲ್ಮನವಿ ಸಲ್ಲಿಸುವುದಾಗಿ ತಿಳಿಸಿದ ಎಕ್ಸ್ ಕಾರ್ಪ್

ಕೇಂದ್ರದ ‘ಸಹಯೋಗ್’ ಪೋರ್ಟಲ್ ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ : ಮೇಲ್ಮನವಿ ಸಲ್ಲಿಸುವುದಾಗಿ ತಿಳಿಸಿದ ಎಕ್ಸ್ ಕಾರ್ಪ್

- Advertisement -
- Advertisement -

ಕೇಂದ್ರದ ‘ಸಹಯೋಗ್’ ಪೋರ್ಟಲ್ ವಿರುದ್ದ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿರುವ ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ದ ಮೇಲ್ಮನವಿ ಸಲ್ಲಿಸುವುದಾಗಿ ಸಾಮಾಜಿಕ ಜಾಲತಾಣ ಎಕ್ಸ್‌ ಕಾರ್ಪ್ ಹೇಳಿದೆ.

ಹೈಕೋರ್ಟ್ ಆದೇಶವನ್ನು ಒಪ್ಪುವುದಿಲ್ಲ ಎಂದು ಗೌರಯುತವಾಗಿ ಹೇಳುತ್ತಿದ್ದೇವೆ. ಇದರ ವಿರುದ್ದ ಮೇಲ್ಮನವಿಯ ಸಲ್ಲಿಸುತ್ತೇವೆ ಎಂದು ಎಕ್ಸ್‌ ಕಂಪನಿಯ ಗ್ಲೋಬಲ್ ಅಫೇರ್ಸ್ ವಿಭಾಗ ಸೋಮವಾರ ತಿಳಿಸಿದೆ.

ಕಳೆದ ವರ್ಷ ಕೇಂದ್ರ ಸರ್ಕಾರ ‘ಸಹಯೋಗ್’ ಪೋರ್ಟಲ್ ಪರಿಚಯಿಸಿದ ನಂತರ ವಾಕ್ ಸ್ವಾತಂತ್ರ್ಯ ಮತ್ತು ಪಾರದರ್ಶಕತೆಯ ಬಗ್ಗೆ ಕಳವಳ ವ್ಯಕ್ತಪಡಿಸಿ ಮೈಕ್ರೋ-ಬ್ಲಾಗಿಂಗ್ ಸೈಟ್ ಎಕ್ಸ್ ಮತ್ತು 92 ಮಾಧ್ಯಮ ಸಂಸ್ಥೆಗಳ ಸಮೂಹವಾದ ಡಿಜಿಪಬ್ ಸಲ್ಲಿಸಿದ್ದ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ ಬುಧವಾರ (ಸೆ.24) ವಜಾಗೊಳಿಸಿತ್ತು.

ಜುಲೈ 29ರಂದು ಕಾಯ್ದರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಪ್ರಕಟಿಸಿದ್ದು, “ನಮ್ಮ ಸಮಾಜದ ಬೆಳವಣಿಗೆಯ ಇತಿಹಾಸ ನೋಡಿದರೆ, ಒಂದು ವಿಷಯ ಸ್ಪಷ್ಟವಾಗಿ ಗೊತ್ತಾಗುತ್ತದೆ. ಮಾಹಿತಿ ಮತ್ತು ಸಂವಹನ, ಅದು ಎಷ್ಟೇ ವೇಗವಾಗಿ ಹರಡಿದರೂ, ಅದನ್ನು ಎಂದಿಗೂ ಸಂಪೂರ್ಣ ಸ್ವತಂತ್ರವಾಗಿ ಬಿಡಲಾಗಿಲ್ಲ. ಯಾವಾಗಲೂ ಅದರ ಮೇಲೆ ಕೆಲವು ನಿಯಮಗಳು ಮತ್ತು ನಿಯಂತ್ರಣಗಳು ಇದ್ದೇ ಇವೆ” ಎಂದು ಹೇಳಿದ್ದರು.

ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆಯು (ಮೈಟಿ) ಪೊಲೀಸರನ್ನೂ ಒಳಗೊಂಡಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಸಂಸ್ಥೆಗಳಿಗೆ ಸೆಕ್ಷನ್‌ 69A ಮೀರಿ ಸೆಕ್ಷನ್‌ 79(3)(b) ಅಡಿ ಮಾಹಿತಿ ನಿರ್ಬಂಧಿಸಲು ನಿರ್ದೇಶಿಸಿದೆ ಎಂದು ಎಕ್ಸ್‌ ಆರೋಪಿಸಿತ್ತು. ಅಲ್ಲದೇ, ನಿರ್ಬಂಧ ಆದೇಶ ಮಾಡಲು ಸಿದ್ಧ ಮಾದರಿಯನ್ನೂ ಮೈಟಿಯು ನೀಡಿದೆ. ಇದು ಸುಪ್ರೀಂ ಕೋರ್ಟ್‌ ಆದೇಶ ಉಲ್ಲಂಘನೆ ಎಂದು ಎಕ್ಸ್‌ ಆಕ್ಷೇಪಿಸಿತ್ತು.

ಎಕ್ಸ್ ಕಂಪನಿಯು ಕರ್ನಾಟಕ ಹೈಕೋರ್ಟ್ ತೀರ್ಪು ಬಾಂಬೆ ಹೈಕೋರ್ಟ್ ತೀರ್ಪಿಗೆ ವಿರುದ್ಧವಾಗಿದೆ ಎಂದು ಹೇಳಿದೆ. ಬಾಂಬೆ ಹೈಕೋರ್ಟ್ ಈ ಹಿಂದೆ ಕೇಂದ್ರ ಸರ್ಕಾರ ಸ್ಥಾಪಿಸಿದ್ದ ‘ಫ್ಯಾಕ್ಟ್ ಚೆಕ್ ಯೂನಿಟ್’ ಅನ್ನು ರದ್ದುಗೊಳಿಸಿತ್ತು.

ವಿದೇಶಿ ಕಂಪನಿಯೊಂದು ಭಾರತದ ಸಂವಿಧಾನದ ಆರ್ಟಿಕಲ್ 19(1)(a) ಅಡಿ ವಾಕ್ ಮತ್ತು ಅಭಿವ್ಯಕ್ತಿಯ ಸ್ವಾತಂತ್ರ್ಯ ಪಡೆಯಲು ಸಾಧ್ಯವಿಲ್ಲ ಎಂಬ ಕರ್ನಾಟಕ ಹೈಕೋರ್ಟ್ ಅಭಿಪ್ರಾಯವನ್ನು ಎಕ್ಸ್ ಒಪ್ಪಿಕೊಂಡಿಲ್ಲ.

ಹೈಕೋರ್ಟ್ ಸಂವಿಧಾನದ 19 ನೇ ವಿಧಿಯಡಿ ವಿದೇಶಿ ಕಂಪನಿಗಳು ಮೂಲಭೂತ ವಾಕ್ ಸ್ವಾತಂತ್ರ್ಯದ ಹಕ್ಕನ್ನು ಚಲಾಯಿಸಲು ಸಾಧ್ಯವಿಲ್ಲ ಎಂದಿದೆ.

ಆ ರೀತಿಯ ಹಕ್ಕುಗಳು ಭಾರತದ ನಾಗರಿಕರಿಗೆ ಮಾತ್ರ ಮೀಸಲಾಗಿದ್ದುಎಕ್ಸ್ ಕಾರ್ಪ್ ರೀತಿಯ ಮಧ್ಯಸ್ಥ ಸಂಸ್ಥೆಗಳು ದೇಶದಲ್ಲಿ ಕಾರ್ಯನಿರ್ವಹಿಸಲು ಬಯಸಿದರೆ ಕಾನೂನು ಪಾಲಿಸಬೇಕು ಎಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ತೀರ್ಪು ನೀಡಿದ್ದಾರೆ.

ಮಾಹಿತಿ ತಂತ್ರಜ್ಞಾನ ಕಾಯ್ದೆ, 2000ರ ಸೆಕ್ಷನ್ 79(3)(ಬಿ) ಅಡಿಯಲ್ಲಿ ಮಾಹಿತಿ ನಿರ್ಬಂಧಿಸುವ ಆದೇಶಗಳನ್ನು ಹೊರಡಿಸಲು ಸಹಯೋಗ್ ಪೋರ್ಟಲ್ ಅನುವು ಮಾಡಿಕೊಡುತ್ತದೆ, ಇದರಿಂದಾಗಿ ಐಟಿ ಕಾಯ್ದೆಯ ಸೆಕ್ಷನ್ 69ಎ ಮತ್ತು ಶ್ರೇಯಾ ಸಿಂಘಾಲ್ ಪ್ರಕರಣದಲ್ಲಿ ನೀಡಿದ ತೀರ್ಪಿನಂತೆ ಕಡ್ಡಾಯಗೊಳಿಸಲಾದ ಮಾರ್ಗಸೂಚಿ ಪಾಲಿಸಲು ಅಡ್ಡಿಯಾಗುತ್ತದೆ ಎಂದು ವಾದಿಸಿ ಎಕ್ಸ್ ಕಾರ್ಪ್ ನ್ಯಾಯಾಲಯದ ಮೆಟ್ಟಿಲೇರಿತ್ತು.

ನವದೆಹಲಿ ರೈಲು ನಿಲ್ದಾಣದಲ್ಲಿ ನಡೆದ ಕಾಲ್ತುಳಿತದ ಬಗ್ಗೆ ಪ್ರಕಟವಾದ ಟ್ವೀಟ್‌ಗಳನ್ನು ತೆಗೆಯುವಂತೆ ರೈಲ್ವೆ ಸಚಿವಾಲಯ ನೀಡಿದ್ದ ಆದೇಶ ಪ್ರಶ್ನಿಸಿ ಈ ಅರ್ಜಿ ಸಲ್ಲಿಸಲಾಗಿತ್ತು.

ಹೀಗಾಗಿ, ಸೆಕ್ಷನ್ 79(3)(b) ಮಾಹಿತಿ ನಿರ್ಬಂಧ ಆದೇಶ ಮಾಡಲು ಸರ್ಕಾರಕ್ಕೆ ಅವಕಾಶವಿಲ್ಲ. ಇದು ವಿಶೇಷವಾಗಿ ಸೆಕ್ಷನ್ 69Aರ ವ್ಯಾಪ್ತಿಗೆ ಒಳಪಡುತ್ತದೆ ಎಂದು ಆದೇಶಿಸಬೇಕು ಎಂದು ಎಕ್ಸ್ ಕೋರಿತ್ತು.

ತೀರ್ಪಿನ ಮೂಲಕ ನ್ಯಾಯಾಲಯ ನಿಸ್ಸಂದಿಗ್ಧವಾಗಿ 19ನೇ ವಿಧಿಯಡಿ ಒದಗಿಸಲಾದ ಹಕ್ಕುಗಳನ್ನು ವಿದೇಶಿಯರಿಗೆ ನೀಡಲಾಗದು ಎಂದಿದೆ. 19ನೇ ವಿಧಿಯ ಮೂಲಕ ದೇಶದ ಕಾನೂನನ್ನು ಪ್ರಶ್ನಿಸಲು ಯತ್ನಿಸುವುದನ್ನು ಸಹಿಸಲಾಗದು ಎಂದಿರುವ ತೀರ್ಪು, ಸಂವಿಧಾನದ 19(1)(ಎ) ವಿಧಿಯಡಿ ವಾಕ್ ಸ್ವಾತಂತ್ರ್ಯ ಸಮಂಜಸ ನಿರ್ಬಂಧಗಳಿಗೆ ಒಳಪಟ್ಟಿರುತ್ತದೆ ಎಂಬುದಾಗಿ ಪುನರುಚ್ಚರಿಸಿದೆ.

ಅಲ್ಲದೆ ಯಾವುದೇ ಮಾಧ್ಯಮ ಕಾನೂನು ವ್ಯಾಪ್ತಿಯಿಂದ ಹೊರಗೆ ಇರುವಂತಿಲ್ಲ ಎಂದು ತೀರ್ಪಿನಲ್ಲಿ ತಿಳಿಸಲಾಗಿದೆ.

ಸಾಮಾಜಿಕ ಮಾಧ್ಯಮಗಳ ನಿಯಂತ್ರಣ ಅಗತ್ಯ: ಕೇಂದ್ರದ ‘ಸಹಯೋಗ್‌ ಪೋರ್ಟಲ್‌’ ಪ್ರಶ್ನಿಸಿದ್ದ ಎಕ್ಸ್‌ ಕಾರ್ಪ್‌ ಅರ್ಜಿ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...