Homeಮುಖಪುಟಕೇಂದ್ರದ 'ಸಹಯೋಗ್' ಪೋರ್ಟಲ್ ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ : ಮೇಲ್ಮನವಿ ಸಲ್ಲಿಸುವುದಾಗಿ ತಿಳಿಸಿದ ಎಕ್ಸ್ ಕಾರ್ಪ್

ಕೇಂದ್ರದ ‘ಸಹಯೋಗ್’ ಪೋರ್ಟಲ್ ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ : ಮೇಲ್ಮನವಿ ಸಲ್ಲಿಸುವುದಾಗಿ ತಿಳಿಸಿದ ಎಕ್ಸ್ ಕಾರ್ಪ್

- Advertisement -
- Advertisement -

ಕೇಂದ್ರದ ‘ಸಹಯೋಗ್’ ಪೋರ್ಟಲ್ ವಿರುದ್ದ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿರುವ ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ದ ಮೇಲ್ಮನವಿ ಸಲ್ಲಿಸುವುದಾಗಿ ಸಾಮಾಜಿಕ ಜಾಲತಾಣ ಎಕ್ಸ್‌ ಕಾರ್ಪ್ ಹೇಳಿದೆ.

ಹೈಕೋರ್ಟ್ ಆದೇಶವನ್ನು ಒಪ್ಪುವುದಿಲ್ಲ ಎಂದು ಗೌರಯುತವಾಗಿ ಹೇಳುತ್ತಿದ್ದೇವೆ. ಇದರ ವಿರುದ್ದ ಮೇಲ್ಮನವಿಯ ಸಲ್ಲಿಸುತ್ತೇವೆ ಎಂದು ಎಕ್ಸ್‌ ಕಂಪನಿಯ ಗ್ಲೋಬಲ್ ಅಫೇರ್ಸ್ ವಿಭಾಗ ಸೋಮವಾರ ತಿಳಿಸಿದೆ.

ಕಳೆದ ವರ್ಷ ಕೇಂದ್ರ ಸರ್ಕಾರ ‘ಸಹಯೋಗ್’ ಪೋರ್ಟಲ್ ಪರಿಚಯಿಸಿದ ನಂತರ ವಾಕ್ ಸ್ವಾತಂತ್ರ್ಯ ಮತ್ತು ಪಾರದರ್ಶಕತೆಯ ಬಗ್ಗೆ ಕಳವಳ ವ್ಯಕ್ತಪಡಿಸಿ ಮೈಕ್ರೋ-ಬ್ಲಾಗಿಂಗ್ ಸೈಟ್ ಎಕ್ಸ್ ಮತ್ತು 92 ಮಾಧ್ಯಮ ಸಂಸ್ಥೆಗಳ ಸಮೂಹವಾದ ಡಿಜಿಪಬ್ ಸಲ್ಲಿಸಿದ್ದ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ ಬುಧವಾರ (ಸೆ.24) ವಜಾಗೊಳಿಸಿತ್ತು.

ಜುಲೈ 29ರಂದು ಕಾಯ್ದರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಪ್ರಕಟಿಸಿದ್ದು, “ನಮ್ಮ ಸಮಾಜದ ಬೆಳವಣಿಗೆಯ ಇತಿಹಾಸ ನೋಡಿದರೆ, ಒಂದು ವಿಷಯ ಸ್ಪಷ್ಟವಾಗಿ ಗೊತ್ತಾಗುತ್ತದೆ. ಮಾಹಿತಿ ಮತ್ತು ಸಂವಹನ, ಅದು ಎಷ್ಟೇ ವೇಗವಾಗಿ ಹರಡಿದರೂ, ಅದನ್ನು ಎಂದಿಗೂ ಸಂಪೂರ್ಣ ಸ್ವತಂತ್ರವಾಗಿ ಬಿಡಲಾಗಿಲ್ಲ. ಯಾವಾಗಲೂ ಅದರ ಮೇಲೆ ಕೆಲವು ನಿಯಮಗಳು ಮತ್ತು ನಿಯಂತ್ರಣಗಳು ಇದ್ದೇ ಇವೆ” ಎಂದು ಹೇಳಿದ್ದರು.

ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆಯು (ಮೈಟಿ) ಪೊಲೀಸರನ್ನೂ ಒಳಗೊಂಡಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಸಂಸ್ಥೆಗಳಿಗೆ ಸೆಕ್ಷನ್‌ 69A ಮೀರಿ ಸೆಕ್ಷನ್‌ 79(3)(b) ಅಡಿ ಮಾಹಿತಿ ನಿರ್ಬಂಧಿಸಲು ನಿರ್ದೇಶಿಸಿದೆ ಎಂದು ಎಕ್ಸ್‌ ಆರೋಪಿಸಿತ್ತು. ಅಲ್ಲದೇ, ನಿರ್ಬಂಧ ಆದೇಶ ಮಾಡಲು ಸಿದ್ಧ ಮಾದರಿಯನ್ನೂ ಮೈಟಿಯು ನೀಡಿದೆ. ಇದು ಸುಪ್ರೀಂ ಕೋರ್ಟ್‌ ಆದೇಶ ಉಲ್ಲಂಘನೆ ಎಂದು ಎಕ್ಸ್‌ ಆಕ್ಷೇಪಿಸಿತ್ತು.

ಎಕ್ಸ್ ಕಂಪನಿಯು ಕರ್ನಾಟಕ ಹೈಕೋರ್ಟ್ ತೀರ್ಪು ಬಾಂಬೆ ಹೈಕೋರ್ಟ್ ತೀರ್ಪಿಗೆ ವಿರುದ್ಧವಾಗಿದೆ ಎಂದು ಹೇಳಿದೆ. ಬಾಂಬೆ ಹೈಕೋರ್ಟ್ ಈ ಹಿಂದೆ ಕೇಂದ್ರ ಸರ್ಕಾರ ಸ್ಥಾಪಿಸಿದ್ದ ‘ಫ್ಯಾಕ್ಟ್ ಚೆಕ್ ಯೂನಿಟ್’ ಅನ್ನು ರದ್ದುಗೊಳಿಸಿತ್ತು.

ವಿದೇಶಿ ಕಂಪನಿಯೊಂದು ಭಾರತದ ಸಂವಿಧಾನದ ಆರ್ಟಿಕಲ್ 19(1)(a) ಅಡಿ ವಾಕ್ ಮತ್ತು ಅಭಿವ್ಯಕ್ತಿಯ ಸ್ವಾತಂತ್ರ್ಯ ಪಡೆಯಲು ಸಾಧ್ಯವಿಲ್ಲ ಎಂಬ ಕರ್ನಾಟಕ ಹೈಕೋರ್ಟ್ ಅಭಿಪ್ರಾಯವನ್ನು ಎಕ್ಸ್ ಒಪ್ಪಿಕೊಂಡಿಲ್ಲ.

ಹೈಕೋರ್ಟ್ ಸಂವಿಧಾನದ 19 ನೇ ವಿಧಿಯಡಿ ವಿದೇಶಿ ಕಂಪನಿಗಳು ಮೂಲಭೂತ ವಾಕ್ ಸ್ವಾತಂತ್ರ್ಯದ ಹಕ್ಕನ್ನು ಚಲಾಯಿಸಲು ಸಾಧ್ಯವಿಲ್ಲ ಎಂದಿದೆ.

ಆ ರೀತಿಯ ಹಕ್ಕುಗಳು ಭಾರತದ ನಾಗರಿಕರಿಗೆ ಮಾತ್ರ ಮೀಸಲಾಗಿದ್ದುಎಕ್ಸ್ ಕಾರ್ಪ್ ರೀತಿಯ ಮಧ್ಯಸ್ಥ ಸಂಸ್ಥೆಗಳು ದೇಶದಲ್ಲಿ ಕಾರ್ಯನಿರ್ವಹಿಸಲು ಬಯಸಿದರೆ ಕಾನೂನು ಪಾಲಿಸಬೇಕು ಎಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ತೀರ್ಪು ನೀಡಿದ್ದಾರೆ.

ಮಾಹಿತಿ ತಂತ್ರಜ್ಞಾನ ಕಾಯ್ದೆ, 2000ರ ಸೆಕ್ಷನ್ 79(3)(ಬಿ) ಅಡಿಯಲ್ಲಿ ಮಾಹಿತಿ ನಿರ್ಬಂಧಿಸುವ ಆದೇಶಗಳನ್ನು ಹೊರಡಿಸಲು ಸಹಯೋಗ್ ಪೋರ್ಟಲ್ ಅನುವು ಮಾಡಿಕೊಡುತ್ತದೆ, ಇದರಿಂದಾಗಿ ಐಟಿ ಕಾಯ್ದೆಯ ಸೆಕ್ಷನ್ 69ಎ ಮತ್ತು ಶ್ರೇಯಾ ಸಿಂಘಾಲ್ ಪ್ರಕರಣದಲ್ಲಿ ನೀಡಿದ ತೀರ್ಪಿನಂತೆ ಕಡ್ಡಾಯಗೊಳಿಸಲಾದ ಮಾರ್ಗಸೂಚಿ ಪಾಲಿಸಲು ಅಡ್ಡಿಯಾಗುತ್ತದೆ ಎಂದು ವಾದಿಸಿ ಎಕ್ಸ್ ಕಾರ್ಪ್ ನ್ಯಾಯಾಲಯದ ಮೆಟ್ಟಿಲೇರಿತ್ತು.

ನವದೆಹಲಿ ರೈಲು ನಿಲ್ದಾಣದಲ್ಲಿ ನಡೆದ ಕಾಲ್ತುಳಿತದ ಬಗ್ಗೆ ಪ್ರಕಟವಾದ ಟ್ವೀಟ್‌ಗಳನ್ನು ತೆಗೆಯುವಂತೆ ರೈಲ್ವೆ ಸಚಿವಾಲಯ ನೀಡಿದ್ದ ಆದೇಶ ಪ್ರಶ್ನಿಸಿ ಈ ಅರ್ಜಿ ಸಲ್ಲಿಸಲಾಗಿತ್ತು.

ಹೀಗಾಗಿ, ಸೆಕ್ಷನ್ 79(3)(b) ಮಾಹಿತಿ ನಿರ್ಬಂಧ ಆದೇಶ ಮಾಡಲು ಸರ್ಕಾರಕ್ಕೆ ಅವಕಾಶವಿಲ್ಲ. ಇದು ವಿಶೇಷವಾಗಿ ಸೆಕ್ಷನ್ 69Aರ ವ್ಯಾಪ್ತಿಗೆ ಒಳಪಡುತ್ತದೆ ಎಂದು ಆದೇಶಿಸಬೇಕು ಎಂದು ಎಕ್ಸ್ ಕೋರಿತ್ತು.

ತೀರ್ಪಿನ ಮೂಲಕ ನ್ಯಾಯಾಲಯ ನಿಸ್ಸಂದಿಗ್ಧವಾಗಿ 19ನೇ ವಿಧಿಯಡಿ ಒದಗಿಸಲಾದ ಹಕ್ಕುಗಳನ್ನು ವಿದೇಶಿಯರಿಗೆ ನೀಡಲಾಗದು ಎಂದಿದೆ. 19ನೇ ವಿಧಿಯ ಮೂಲಕ ದೇಶದ ಕಾನೂನನ್ನು ಪ್ರಶ್ನಿಸಲು ಯತ್ನಿಸುವುದನ್ನು ಸಹಿಸಲಾಗದು ಎಂದಿರುವ ತೀರ್ಪು, ಸಂವಿಧಾನದ 19(1)(ಎ) ವಿಧಿಯಡಿ ವಾಕ್ ಸ್ವಾತಂತ್ರ್ಯ ಸಮಂಜಸ ನಿರ್ಬಂಧಗಳಿಗೆ ಒಳಪಟ್ಟಿರುತ್ತದೆ ಎಂಬುದಾಗಿ ಪುನರುಚ್ಚರಿಸಿದೆ.

ಅಲ್ಲದೆ ಯಾವುದೇ ಮಾಧ್ಯಮ ಕಾನೂನು ವ್ಯಾಪ್ತಿಯಿಂದ ಹೊರಗೆ ಇರುವಂತಿಲ್ಲ ಎಂದು ತೀರ್ಪಿನಲ್ಲಿ ತಿಳಿಸಲಾಗಿದೆ.

ಸಾಮಾಜಿಕ ಮಾಧ್ಯಮಗಳ ನಿಯಂತ್ರಣ ಅಗತ್ಯ: ಕೇಂದ್ರದ ‘ಸಹಯೋಗ್‌ ಪೋರ್ಟಲ್‌’ ಪ್ರಶ್ನಿಸಿದ್ದ ಎಕ್ಸ್‌ ಕಾರ್ಪ್‌ ಅರ್ಜಿ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...