Homeಮುಖಪುಟ8,000ಕ್ಕೂ ಹೆಚ್ಚು ಖಾತೆಗಳನ್ನು ನಿರ್ಬಂಧಿಸಲು ಕೇಳಿಕೊಂಡ ಮೋದಿ ಸರ್ಕಾರ: ಎಕ್ಸ್ ಆರೋಪ

8,000ಕ್ಕೂ ಹೆಚ್ಚು ಖಾತೆಗಳನ್ನು ನಿರ್ಬಂಧಿಸಲು ಕೇಳಿಕೊಂಡ ಮೋದಿ ಸರ್ಕಾರ: ಎಕ್ಸ್ ಆರೋಪ

ಬಿಜೆಪಿ ಸರ್ಕಾರದ ಈ ಕ್ರಮವನ್ನು "ಮುಕ್ತ ಅಭಿವ್ಯಕ್ತಿಯ ಮೂಲಭೂತ ಹಕ್ಕಿಗೆ ವಿರುದ್ಧ" ಎಂದು ಎಕ್ಸ್‌ ಟೀಕಿಸಿದೆ

- Advertisement -
- Advertisement -

ಸಾಮಾಜಿಕ ಜಾಲತಾಣ ಎಕ್ಸ್‌ (ಹಿಂದಿನ ಟ್ವಿಟರ್) ಕೇಂದ್ರ ಸರ್ಕಾರದಿಂದ 8,000ಕ್ಕೂ ಹೆಚ್ಚು ಖಾತೆಗಳನ್ನು ಭಾರತದಲ್ಲಿ ಬ್ಲಾಕ್ ಮಾಡುವಂತೆ ಆದೇಶವನ್ನು ಪಡೆದಿದೆ ಎಂದು ಮೇ 08ರ ಗುರುವಾರ ಹೇಳಿದೆ. ಈ ಆದೇಶದಲ್ಲಿ, ಅಂತರರಾಷ್ಟ್ರೀಯ ಸುದ್ದಿ ಸಂಸ್ಥೆಗಳು ಮತ್ತು ಪ್ರಮುಖ ಎಕ್ಸ್‌ ಬಳಕೆದಾರರ ಖಾತೆಗಳು ಒಳಗೊಂಡಿದೆ ಎಂದು ಎಕ್ಸ್‌ನ Global Government Affairs ತಂಡ ತಿಳಿಸಿದೆ.  8000ಕ್ಕೂ ಹೆಚ್ಚು

ಅದಾಗ್ಯೂ, ಬಿಜೆಪಿ ಸರ್ಕಾರದ ಈ ಕ್ರಮವನ್ನು “ಮುಕ್ತ ಅಭಿವ್ಯಕ್ತಿಯ ಮೂಲಭೂತ ಹಕ್ಕಿಗೆ ವಿರುದ್ಧ” ಎಂದು ಎಕ್ಸ್‌ ಟೀಕಿಸಿದ್ದು, ಅದಾಗ್ಯೂ, ಸರ್ಕಾರದ ಈ ಆದೇಶವನ್ನು ಪಾಲಿಸುವ ಪ್ರಕ್ರಿಯೆಯನ್ನು ತಾನು ಆರಂಭಿಸಿರುವುದಾಗಿ ಎಂದು ಹೇಳಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಎಕ್ಸ್‌ನ ಗ್ಲೋಬಲ್ ಗೌವರ್ನಮೆಂಟ್ ಅಫೈರ್ಸ್‌, “ಭಾರತ ಸರ್ಕಾರದ ಈ ಕಾರ್ಯನಿರ್ವಾಹಕ ಆದೇಶಗಳು ಭಾರಿ ದಂಡ ಮತ್ತು ಕಂಪನಿಯ ಸ್ಥಳೀಯ ಉದ್ಯೋಗಿಗಳಿಗೆ ಜೈಲು ಶಿಕ್ಷೆಯಂತಹ ಸಂಭಾವ್ಯ ದಂಡನೆಗಳನ್ನು ಒಳಗೊಂಡಿವೆ” ಎಂದು ಹೇಳಿದೆ.

ಅದಾಗ್ಯೂ, ಬ್ಲಾಕ್ ಮಾಡಲು ಹೇಳಲಾಗಿರುವ ಹೆಚ್ಚಿನ ಖಾತೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಯಾವ ಪೋಸ್ಟ್‌ಗಳು ಭಾರತದ ಸ್ಥಳೀಯ ಕಾನೂನುಗಳನ್ನು ಉಲ್ಲಂಘಿಸಿವೆ ಎಂಬುದರ ಬಗ್ಗೆ ಯಾವುದೇ ಸ್ಪಷ್ಟತೆ ಅಥವಾ ಪುರಾವೆಗಳನ್ನು ನೀಡಿಲ್ಲ ಎಂದು ಎಕ್ಸ್‌ ಆರೋಪಿಸಿದೆ. “ಗಣನೀಯ ಸಂಖ್ಯೆಯ ಖಾತೆಗಳಿಗೆ, ಬ್ಲಾಕ್ ಮಾಡಲು ಯಾವುದೇ ಸಾಕ್ಷ್ಯ ಅಥವಾ ಸಮರ್ಥನೆಯನ್ನು ನೀಡಲಾಗಿಲ್ಲ,” ಎಂದು ಎಕ್ಸ್‌ ಹೇಳಿದೆ.

ಅದಾಗ್ಯೂ, ಕೇಂದ್ರ ಸರ್ಕಾರದ ಈ ಆದೇಶಗಳನ್ನು ತಾನು ಒಪ್ಪುವುದಿಲ್ಲ ಎಂದು ಎಕ್ಸ್‌ ಸ್ಪಷ್ಟಪಡಿಸಿದೆ. ಸಂಪೂರ್ಣ ಖಾತೆಗಳನ್ನು ಬ್ಲಾಕ್ ಮಾಡುವುದು “ಅನಗತ್ಯ”ವಾಗಿದ್ದು, ಅದು “ಸೆನ್ಸಾರ್‌ಶಿಪ್‌ಗೆ ಸಮಾನ”ವಾಗಿರುವತ್ತದೆ, ಇದು ಈಗಿರುವ ಮತ್ತು ಭವಿಷ್ಯದ ವಿಷಯಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಎಕ್ಸ್‌ ಆತಂಕ ವ್ಯಕ್ತಪಡಿಸಿದೆ.

ಸರ್ಕಾರದ ಈ ಆದೇಶವು ಇದು ಮುಕ್ತ ಅಭಿವ್ಯಕ್ತಿಯ ಮೂಲಭೂತ ಹಕ್ಕಿಗೆ ಧಕ್ಕೆ ತರುತ್ತದೆ ಎಂದು ಹೇಳಿರುವ ಎಕ್ಸ್‌, ಆದಾಗ್ಯೂ, ಭಾರತದಲ್ಲಿ ಪ್ಲಾಟ್‌ಫಾರ್ಮ್ ಅನ್ನು ಲಭ್ಯವಾಗಿಡುವುದು ಭಾರತೀಯರಿಗೆ ಮಾಹಿತಿಯನ್ನು ಪಡೆಯಲು ಅತ್ಯಂತ ಮುಖ್ಯ ಎಂದು ಪರಿಗಣಿಸಿ, ಆದೇಶವನ್ನು ಪಾಲಿಸುವ ಕಠಿಣ ನಿರ್ಧಾರವನ್ನು ತೆಗೆದುಕೊಂಡಿದೆ.

ಎಕ್ಸ್‌ ಈ ಕಾರ್ಯನಿರ್ವಾಹಕ ಆದೇಶಗಳನ್ನು ಸಾರ್ವಜನಿಕಗೊಳಿಸುವುದು ಪಾರದರ್ಶಕತೆಗೆ ಅತ್ಯಗತ್ಯ ಎಂದು ಪರಿಗಣಿಸಿರುವುದಾಗಿ ಹೇಳಿದ್ದು, ಅದನ್ನು ಪ್ರಕಟಿಸದೆ ಇರುವುದು ಜವಾಬ್ದಾರಿಯನ್ನು ಕಡಿಮೆ ಮಾಡುತ್ತದೆ ಮತ್ತು ಅನಿಯಂತ್ರಿತ ನಿರ್ಧಾರ ತೆಗೆದುಕೊಳ್ಳುವಿಕೆಗೆ ಕಾರಣವಾಗಬಹುದು ಎಂದು ಎಕ್ಸ್‌ ಹೇಳಿದೆ. ಆದರೆ, ಕಾನೂನು ನಿರ್ಬಂಧಗಳಿಂದಾಗಿ ಈ ಆದೇಶಗಳನ್ನು ಪ್ರಕಟಿಸಲು ಸಾಧ್ಯವಾಗಿಲ್ಲ ಎಂದು ಅದು ಸ್ಪಷ್ಟಪಡಿಸಿದೆ.

ಅದಾಗ್ಯೂ, ಈ ಆದೇಶಗಳ ವಿರುದ್ಧ ತನ್ನ ಕಾನೂನು ಆಯ್ಕೆಗಳನ್ನು ತಾನು ಪರಿಶೀಲಿಸುತ್ತಿರುವುದಾಗಿ ಎಕ್ಸ್‌ ಹೇಳಿದ್ದು, ಭಾರತದ ಕಾನೂನುಗಳ ಪ್ರಕಾರ ಎಕ್ಸ್‌ಗೆ ಈ ಆದೇಶಗಳ ವಿರುದ್ಧ ನೇರವಾಗಿ ಕಾನೂನು ಸವಾಲು ಹಾಕುವ ಸಾಮರ್ಥ್ಯ ಸೀಮಿತವಾಗಿದೆ ಎಂದು ಅದು ಹೇಳಿದೆ. ಆದರೆ, ಈ ಆದೇಶದಿಂದ ತೊಂದರೆಗೆ ಒಳಗಾದ ಬಳಕೆದಾರರು ನ್ಯಾಯಾಲಯದ ಮೂಲಕ ಸೂಕ್ತ ಪರಿಹಾರವನ್ನು ಕೋರಲು ಅದು ಕೇಳಿಕೊಂಡಿದೆ. ಈ ಸಂಬಂಧ ಕೆಲವು ಕಾನೂನು ಸಹಾಯ ಸಂಸ್ಥೆಗಳಾದ iProbono India, National Legal Services Authority, Karnataka Legal Services Authority, ಮತ್ತು Supreme Court Legal Services ಗಳ ಸಂಪರ್ಕ ವಿವರಗಳನ್ನು ಎಕ್ಸ್‌ ಒದಗಿಸಿದೆ.

ಈ ನಡುವೆ, ಮಾನವ ಹಕ್ಕುಗಳು ಮತ್ತು ಅಲ್ಪಸಂಖ್ಯಾತರ ವಿಷಯಗಳ ಮೇಲೆ ಕೇಂದ್ರೀಕರಿಸುವ ಸುದ್ದಿ ಸಂಸ್ಥೆ Maktoob Media, ಇಂಡಿಯನ್ ಎಕ್ಸ್‌ಪ್ರೆಸ್‌ನ ಉಪ ಸಂಪಾದಕ, ಹಿರಿಯ ಪತ್ರಕರ್ತ ಮುಝಮಿಲ್ ಜಲೀಲ್, ಸುದ್ದಿ ವೆಬ್‌ಸೈಟ್ ಕಾಶ್ಮೀರಿಯತ್, ಅರ್ಪಿತ್ ಶರ್ಮಾ, ರಕ್ಷಣಾ ವಿಷಯಗಳ ಮ್ಯಾಗಝೀನ್ ಫೋರ್ಸ್, ಜಾಕ್ಸನ್ ಹಿನ್‌ಕಲ್, ಮಾರಿಯೋ ನೌಫಲ್‌ರಂತಹ ಪ್ರಮುಖ ಬಳಕೆದಾರರ ಖಾತೆಗಳು ಸಹ ಬ್ಲಾಕ್ ಆಗಿವೆ ಎಂದು ವರದಿಯಾಗಿದೆ.

ಕೇಂದ್ರ ಸರ್ಕಾರದ ಈ ಕ್ರಮದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಕೆಲವರು ಈ ಖಾತೆಗಳು ತಪ್ಪು ಮಾಹಿತಿ ಹರಡುತ್ತವೆ ಎಂದು ಸರ್ಕಾರದ ಕ್ರಮವನ್ನು ಸಮರ್ಥಿಸಿದರೆ, ಇತರರು ಇದನ್ನು ಮುಕ್ತ ಅಭಿವ್ಯಕ್ತಿ ಮತ್ತು ಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿ ಎಂದು ಟೀಕಿಸಿದ್ದಾರೆ.

2024ರಲ್ಲಿ ತನ್ನ ವಿರುದ್ಧ ನಡೆದ ಬೃಹತ್ ರೈತ ಪ್ರತಿಭಟನೆಯ ಸಂದರ್ಭದಲ್ಲಿ ಕೂಡಾ ಕೇಂದ್ರ ಸರ್ಕಾರ ಎಕ್ಸ್‌ನ ಹಲವು ಖಾತೆಗಳನ್ನು ಬ್ಲಾಕ್ ಮಾಡುವಂತೆ ಆದೇಶಿಸಿತ್ತು. ಈ ವೇಳೆ ಕೂಡಾ ಎಕ್ಸ್‌ ಈ ಆದೇಶವನ್ನು ಮುಕ್ತ ಅಭಿವ್ಯಕ್ತಿಗೆ ಧಕ್ಕೆ ಎಂದು ಟೀಕಿಸಿತ್ತು. 8000ಕ್ಕೂ ಹೆಚ್ಚು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ನಕ್ಸಲರು ನಡೆಸಿದ ನೆಲಬಾಂಬ್ ಸ್ಫೋಟಕ್ಕೆ 3 ಗ್ರೇಹೌಂಡ್ಸ್ ಕಮಾಂಡೋ ಪೊಲೀಸರ ಸಾವು

ನಕ್ಸಲರು ನಡೆಸಿದ ನೆಲಬಾಂಬ್ ಸ್ಫೋಟಕ್ಕೆ 3 ಗ್ರೇಹೌಂಡ್ಸ್ ಕಮಾಂಡೋ ಪೊಲೀಸರ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...