Homeಮುಖಪುಟ8,000ಕ್ಕೂ ಹೆಚ್ಚು ಖಾತೆಗಳನ್ನು ನಿರ್ಬಂಧಿಸಲು ಕೇಳಿಕೊಂಡ ಮೋದಿ ಸರ್ಕಾರ: ಎಕ್ಸ್ ಆರೋಪ

8,000ಕ್ಕೂ ಹೆಚ್ಚು ಖಾತೆಗಳನ್ನು ನಿರ್ಬಂಧಿಸಲು ಕೇಳಿಕೊಂಡ ಮೋದಿ ಸರ್ಕಾರ: ಎಕ್ಸ್ ಆರೋಪ

ಬಿಜೆಪಿ ಸರ್ಕಾರದ ಈ ಕ್ರಮವನ್ನು "ಮುಕ್ತ ಅಭಿವ್ಯಕ್ತಿಯ ಮೂಲಭೂತ ಹಕ್ಕಿಗೆ ವಿರುದ್ಧ" ಎಂದು ಎಕ್ಸ್‌ ಟೀಕಿಸಿದೆ

- Advertisement -
- Advertisement -

ಸಾಮಾಜಿಕ ಜಾಲತಾಣ ಎಕ್ಸ್‌ (ಹಿಂದಿನ ಟ್ವಿಟರ್) ಕೇಂದ್ರ ಸರ್ಕಾರದಿಂದ 8,000ಕ್ಕೂ ಹೆಚ್ಚು ಖಾತೆಗಳನ್ನು ಭಾರತದಲ್ಲಿ ಬ್ಲಾಕ್ ಮಾಡುವಂತೆ ಆದೇಶವನ್ನು ಪಡೆದಿದೆ ಎಂದು ಮೇ 08ರ ಗುರುವಾರ ಹೇಳಿದೆ. ಈ ಆದೇಶದಲ್ಲಿ, ಅಂತರರಾಷ್ಟ್ರೀಯ ಸುದ್ದಿ ಸಂಸ್ಥೆಗಳು ಮತ್ತು ಪ್ರಮುಖ ಎಕ್ಸ್‌ ಬಳಕೆದಾರರ ಖಾತೆಗಳು ಒಳಗೊಂಡಿದೆ ಎಂದು ಎಕ್ಸ್‌ನ Global Government Affairs ತಂಡ ತಿಳಿಸಿದೆ.  8000ಕ್ಕೂ ಹೆಚ್ಚು

ಅದಾಗ್ಯೂ, ಬಿಜೆಪಿ ಸರ್ಕಾರದ ಈ ಕ್ರಮವನ್ನು “ಮುಕ್ತ ಅಭಿವ್ಯಕ್ತಿಯ ಮೂಲಭೂತ ಹಕ್ಕಿಗೆ ವಿರುದ್ಧ” ಎಂದು ಎಕ್ಸ್‌ ಟೀಕಿಸಿದ್ದು, ಅದಾಗ್ಯೂ, ಸರ್ಕಾರದ ಈ ಆದೇಶವನ್ನು ಪಾಲಿಸುವ ಪ್ರಕ್ರಿಯೆಯನ್ನು ತಾನು ಆರಂಭಿಸಿರುವುದಾಗಿ ಎಂದು ಹೇಳಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಎಕ್ಸ್‌ನ ಗ್ಲೋಬಲ್ ಗೌವರ್ನಮೆಂಟ್ ಅಫೈರ್ಸ್‌, “ಭಾರತ ಸರ್ಕಾರದ ಈ ಕಾರ್ಯನಿರ್ವಾಹಕ ಆದೇಶಗಳು ಭಾರಿ ದಂಡ ಮತ್ತು ಕಂಪನಿಯ ಸ್ಥಳೀಯ ಉದ್ಯೋಗಿಗಳಿಗೆ ಜೈಲು ಶಿಕ್ಷೆಯಂತಹ ಸಂಭಾವ್ಯ ದಂಡನೆಗಳನ್ನು ಒಳಗೊಂಡಿವೆ” ಎಂದು ಹೇಳಿದೆ.

ಅದಾಗ್ಯೂ, ಬ್ಲಾಕ್ ಮಾಡಲು ಹೇಳಲಾಗಿರುವ ಹೆಚ್ಚಿನ ಖಾತೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಯಾವ ಪೋಸ್ಟ್‌ಗಳು ಭಾರತದ ಸ್ಥಳೀಯ ಕಾನೂನುಗಳನ್ನು ಉಲ್ಲಂಘಿಸಿವೆ ಎಂಬುದರ ಬಗ್ಗೆ ಯಾವುದೇ ಸ್ಪಷ್ಟತೆ ಅಥವಾ ಪುರಾವೆಗಳನ್ನು ನೀಡಿಲ್ಲ ಎಂದು ಎಕ್ಸ್‌ ಆರೋಪಿಸಿದೆ. “ಗಣನೀಯ ಸಂಖ್ಯೆಯ ಖಾತೆಗಳಿಗೆ, ಬ್ಲಾಕ್ ಮಾಡಲು ಯಾವುದೇ ಸಾಕ್ಷ್ಯ ಅಥವಾ ಸಮರ್ಥನೆಯನ್ನು ನೀಡಲಾಗಿಲ್ಲ,” ಎಂದು ಎಕ್ಸ್‌ ಹೇಳಿದೆ.

ಅದಾಗ್ಯೂ, ಕೇಂದ್ರ ಸರ್ಕಾರದ ಈ ಆದೇಶಗಳನ್ನು ತಾನು ಒಪ್ಪುವುದಿಲ್ಲ ಎಂದು ಎಕ್ಸ್‌ ಸ್ಪಷ್ಟಪಡಿಸಿದೆ. ಸಂಪೂರ್ಣ ಖಾತೆಗಳನ್ನು ಬ್ಲಾಕ್ ಮಾಡುವುದು “ಅನಗತ್ಯ”ವಾಗಿದ್ದು, ಅದು “ಸೆನ್ಸಾರ್‌ಶಿಪ್‌ಗೆ ಸಮಾನ”ವಾಗಿರುವತ್ತದೆ, ಇದು ಈಗಿರುವ ಮತ್ತು ಭವಿಷ್ಯದ ವಿಷಯಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಎಕ್ಸ್‌ ಆತಂಕ ವ್ಯಕ್ತಪಡಿಸಿದೆ.

ಸರ್ಕಾರದ ಈ ಆದೇಶವು ಇದು ಮುಕ್ತ ಅಭಿವ್ಯಕ್ತಿಯ ಮೂಲಭೂತ ಹಕ್ಕಿಗೆ ಧಕ್ಕೆ ತರುತ್ತದೆ ಎಂದು ಹೇಳಿರುವ ಎಕ್ಸ್‌, ಆದಾಗ್ಯೂ, ಭಾರತದಲ್ಲಿ ಪ್ಲಾಟ್‌ಫಾರ್ಮ್ ಅನ್ನು ಲಭ್ಯವಾಗಿಡುವುದು ಭಾರತೀಯರಿಗೆ ಮಾಹಿತಿಯನ್ನು ಪಡೆಯಲು ಅತ್ಯಂತ ಮುಖ್ಯ ಎಂದು ಪರಿಗಣಿಸಿ, ಆದೇಶವನ್ನು ಪಾಲಿಸುವ ಕಠಿಣ ನಿರ್ಧಾರವನ್ನು ತೆಗೆದುಕೊಂಡಿದೆ.

ಎಕ್ಸ್‌ ಈ ಕಾರ್ಯನಿರ್ವಾಹಕ ಆದೇಶಗಳನ್ನು ಸಾರ್ವಜನಿಕಗೊಳಿಸುವುದು ಪಾರದರ್ಶಕತೆಗೆ ಅತ್ಯಗತ್ಯ ಎಂದು ಪರಿಗಣಿಸಿರುವುದಾಗಿ ಹೇಳಿದ್ದು, ಅದನ್ನು ಪ್ರಕಟಿಸದೆ ಇರುವುದು ಜವಾಬ್ದಾರಿಯನ್ನು ಕಡಿಮೆ ಮಾಡುತ್ತದೆ ಮತ್ತು ಅನಿಯಂತ್ರಿತ ನಿರ್ಧಾರ ತೆಗೆದುಕೊಳ್ಳುವಿಕೆಗೆ ಕಾರಣವಾಗಬಹುದು ಎಂದು ಎಕ್ಸ್‌ ಹೇಳಿದೆ. ಆದರೆ, ಕಾನೂನು ನಿರ್ಬಂಧಗಳಿಂದಾಗಿ ಈ ಆದೇಶಗಳನ್ನು ಪ್ರಕಟಿಸಲು ಸಾಧ್ಯವಾಗಿಲ್ಲ ಎಂದು ಅದು ಸ್ಪಷ್ಟಪಡಿಸಿದೆ.

ಅದಾಗ್ಯೂ, ಈ ಆದೇಶಗಳ ವಿರುದ್ಧ ತನ್ನ ಕಾನೂನು ಆಯ್ಕೆಗಳನ್ನು ತಾನು ಪರಿಶೀಲಿಸುತ್ತಿರುವುದಾಗಿ ಎಕ್ಸ್‌ ಹೇಳಿದ್ದು, ಭಾರತದ ಕಾನೂನುಗಳ ಪ್ರಕಾರ ಎಕ್ಸ್‌ಗೆ ಈ ಆದೇಶಗಳ ವಿರುದ್ಧ ನೇರವಾಗಿ ಕಾನೂನು ಸವಾಲು ಹಾಕುವ ಸಾಮರ್ಥ್ಯ ಸೀಮಿತವಾಗಿದೆ ಎಂದು ಅದು ಹೇಳಿದೆ. ಆದರೆ, ಈ ಆದೇಶದಿಂದ ತೊಂದರೆಗೆ ಒಳಗಾದ ಬಳಕೆದಾರರು ನ್ಯಾಯಾಲಯದ ಮೂಲಕ ಸೂಕ್ತ ಪರಿಹಾರವನ್ನು ಕೋರಲು ಅದು ಕೇಳಿಕೊಂಡಿದೆ. ಈ ಸಂಬಂಧ ಕೆಲವು ಕಾನೂನು ಸಹಾಯ ಸಂಸ್ಥೆಗಳಾದ iProbono India, National Legal Services Authority, Karnataka Legal Services Authority, ಮತ್ತು Supreme Court Legal Services ಗಳ ಸಂಪರ್ಕ ವಿವರಗಳನ್ನು ಎಕ್ಸ್‌ ಒದಗಿಸಿದೆ.

ಈ ನಡುವೆ, ಮಾನವ ಹಕ್ಕುಗಳು ಮತ್ತು ಅಲ್ಪಸಂಖ್ಯಾತರ ವಿಷಯಗಳ ಮೇಲೆ ಕೇಂದ್ರೀಕರಿಸುವ ಸುದ್ದಿ ಸಂಸ್ಥೆ Maktoob Media, ಇಂಡಿಯನ್ ಎಕ್ಸ್‌ಪ್ರೆಸ್‌ನ ಉಪ ಸಂಪಾದಕ, ಹಿರಿಯ ಪತ್ರಕರ್ತ ಮುಝಮಿಲ್ ಜಲೀಲ್, ಸುದ್ದಿ ವೆಬ್‌ಸೈಟ್ ಕಾಶ್ಮೀರಿಯತ್, ಅರ್ಪಿತ್ ಶರ್ಮಾ, ರಕ್ಷಣಾ ವಿಷಯಗಳ ಮ್ಯಾಗಝೀನ್ ಫೋರ್ಸ್, ಜಾಕ್ಸನ್ ಹಿನ್‌ಕಲ್, ಮಾರಿಯೋ ನೌಫಲ್‌ರಂತಹ ಪ್ರಮುಖ ಬಳಕೆದಾರರ ಖಾತೆಗಳು ಸಹ ಬ್ಲಾಕ್ ಆಗಿವೆ ಎಂದು ವರದಿಯಾಗಿದೆ.

ಕೇಂದ್ರ ಸರ್ಕಾರದ ಈ ಕ್ರಮದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಕೆಲವರು ಈ ಖಾತೆಗಳು ತಪ್ಪು ಮಾಹಿತಿ ಹರಡುತ್ತವೆ ಎಂದು ಸರ್ಕಾರದ ಕ್ರಮವನ್ನು ಸಮರ್ಥಿಸಿದರೆ, ಇತರರು ಇದನ್ನು ಮುಕ್ತ ಅಭಿವ್ಯಕ್ತಿ ಮತ್ತು ಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿ ಎಂದು ಟೀಕಿಸಿದ್ದಾರೆ.

2024ರಲ್ಲಿ ತನ್ನ ವಿರುದ್ಧ ನಡೆದ ಬೃಹತ್ ರೈತ ಪ್ರತಿಭಟನೆಯ ಸಂದರ್ಭದಲ್ಲಿ ಕೂಡಾ ಕೇಂದ್ರ ಸರ್ಕಾರ ಎಕ್ಸ್‌ನ ಹಲವು ಖಾತೆಗಳನ್ನು ಬ್ಲಾಕ್ ಮಾಡುವಂತೆ ಆದೇಶಿಸಿತ್ತು. ಈ ವೇಳೆ ಕೂಡಾ ಎಕ್ಸ್‌ ಈ ಆದೇಶವನ್ನು ಮುಕ್ತ ಅಭಿವ್ಯಕ್ತಿಗೆ ಧಕ್ಕೆ ಎಂದು ಟೀಕಿಸಿತ್ತು. 8000ಕ್ಕೂ ಹೆಚ್ಚು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ನಕ್ಸಲರು ನಡೆಸಿದ ನೆಲಬಾಂಬ್ ಸ್ಫೋಟಕ್ಕೆ 3 ಗ್ರೇಹೌಂಡ್ಸ್ ಕಮಾಂಡೋ ಪೊಲೀಸರ ಸಾವು

ನಕ್ಸಲರು ನಡೆಸಿದ ನೆಲಬಾಂಬ್ ಸ್ಫೋಟಕ್ಕೆ 3 ಗ್ರೇಹೌಂಡ್ಸ್ ಕಮಾಂಡೋ ಪೊಲೀಸರ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ಅಣತಿಯಂತೆ ಇರಾನ್ ಮೇಲೆ ಇಸ್ರೇಲ್ ದಾಳಿ : ಟೆಹ್ರಾನ್‌ನ ಹಲವೆಡೆ ಭಾರೀ ಸ್ಪೋಟ

ಇರಾನ್ ಮೇಲೆ ಇಸ್ರೇಲ್ ಶನಿವಾರ (ಫೆ.28) ವೈಮಾನಿಕ ದಾಳಿ ನಡೆಸಿರುವುದಾಗಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಯನ್ನು ಇಸ್ರೇಲ್ 'ಪೂರ್ವಭಾವಿ ದಾಳಿ' ಎಂದು ಕರೆದಿದೆ. ಇಂದು ಬೆಳಿಗ್ಗಿನ ಹೇಳಿಕೆಯೊಂದರಲ್ಲಿ, ಇಸ್ರೇಲ್ ರಕ್ಷಣಾ ಸಚಿವ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ನಟ ದಿಲೀಪ್, ಇತರರ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಕೇರಳ ಸರ್ಕಾರ

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪ್ರಕರಣದ...

‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ತೆರವು

'ದಿ ಕೇರಳ ಸ್ಟೋರಿ-2 : ಗೋಸ್ ಬಿಯಾಂಡ್' ಚಿತ್ರದ ಬಿಡುಗಡೆಗೆ ವಿಧಿಸಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೇರಳ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ (ಫೆ.27) ತೆರವುಗೊಳಿಸಿದೆ. 'ಕೋಮು ಸಾಮರಸ್ಯ ಕದಡುವ ಸಾಧ್ಯತೆ'ಯನ್ನು ಉಲ್ಲೇಖಿಸಿ ನ್ಯಾಯಮೂರ್ತಿ ಬೆಚು...

‘ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ; ಬಿಜೆಪಿ 10ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ’: ಕೇಜ್ರಿವಾಲ್ ಸವಾಲು

"ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ, ಬಿಜೆಪಿ ಹತ್ತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ" ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ....

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಚುನಾವಣೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಡೆಹಿಡಿದಿದೆ. ಭಾರತದ ಮುಖ್ಯ...

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...