Homeಮುಖಪುಟ8,000ಕ್ಕೂ ಹೆಚ್ಚು ಖಾತೆಗಳನ್ನು ನಿರ್ಬಂಧಿಸಲು ಕೇಳಿಕೊಂಡ ಮೋದಿ ಸರ್ಕಾರ: ಎಕ್ಸ್ ಆರೋಪ

8,000ಕ್ಕೂ ಹೆಚ್ಚು ಖಾತೆಗಳನ್ನು ನಿರ್ಬಂಧಿಸಲು ಕೇಳಿಕೊಂಡ ಮೋದಿ ಸರ್ಕಾರ: ಎಕ್ಸ್ ಆರೋಪ

ಬಿಜೆಪಿ ಸರ್ಕಾರದ ಈ ಕ್ರಮವನ್ನು "ಮುಕ್ತ ಅಭಿವ್ಯಕ್ತಿಯ ಮೂಲಭೂತ ಹಕ್ಕಿಗೆ ವಿರುದ್ಧ" ಎಂದು ಎಕ್ಸ್‌ ಟೀಕಿಸಿದೆ

- Advertisement -
- Advertisement -

ಸಾಮಾಜಿಕ ಜಾಲತಾಣ ಎಕ್ಸ್‌ (ಹಿಂದಿನ ಟ್ವಿಟರ್) ಕೇಂದ್ರ ಸರ್ಕಾರದಿಂದ 8,000ಕ್ಕೂ ಹೆಚ್ಚು ಖಾತೆಗಳನ್ನು ಭಾರತದಲ್ಲಿ ಬ್ಲಾಕ್ ಮಾಡುವಂತೆ ಆದೇಶವನ್ನು ಪಡೆದಿದೆ ಎಂದು ಮೇ 08ರ ಗುರುವಾರ ಹೇಳಿದೆ. ಈ ಆದೇಶದಲ್ಲಿ, ಅಂತರರಾಷ್ಟ್ರೀಯ ಸುದ್ದಿ ಸಂಸ್ಥೆಗಳು ಮತ್ತು ಪ್ರಮುಖ ಎಕ್ಸ್‌ ಬಳಕೆದಾರರ ಖಾತೆಗಳು ಒಳಗೊಂಡಿದೆ ಎಂದು ಎಕ್ಸ್‌ನ Global Government Affairs ತಂಡ ತಿಳಿಸಿದೆ.  8000ಕ್ಕೂ ಹೆಚ್ಚು

ಅದಾಗ್ಯೂ, ಬಿಜೆಪಿ ಸರ್ಕಾರದ ಈ ಕ್ರಮವನ್ನು “ಮುಕ್ತ ಅಭಿವ್ಯಕ್ತಿಯ ಮೂಲಭೂತ ಹಕ್ಕಿಗೆ ವಿರುದ್ಧ” ಎಂದು ಎಕ್ಸ್‌ ಟೀಕಿಸಿದ್ದು, ಅದಾಗ್ಯೂ, ಸರ್ಕಾರದ ಈ ಆದೇಶವನ್ನು ಪಾಲಿಸುವ ಪ್ರಕ್ರಿಯೆಯನ್ನು ತಾನು ಆರಂಭಿಸಿರುವುದಾಗಿ ಎಂದು ಹೇಳಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಎಕ್ಸ್‌ನ ಗ್ಲೋಬಲ್ ಗೌವರ್ನಮೆಂಟ್ ಅಫೈರ್ಸ್‌, “ಭಾರತ ಸರ್ಕಾರದ ಈ ಕಾರ್ಯನಿರ್ವಾಹಕ ಆದೇಶಗಳು ಭಾರಿ ದಂಡ ಮತ್ತು ಕಂಪನಿಯ ಸ್ಥಳೀಯ ಉದ್ಯೋಗಿಗಳಿಗೆ ಜೈಲು ಶಿಕ್ಷೆಯಂತಹ ಸಂಭಾವ್ಯ ದಂಡನೆಗಳನ್ನು ಒಳಗೊಂಡಿವೆ” ಎಂದು ಹೇಳಿದೆ.

ಅದಾಗ್ಯೂ, ಬ್ಲಾಕ್ ಮಾಡಲು ಹೇಳಲಾಗಿರುವ ಹೆಚ್ಚಿನ ಖಾತೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಯಾವ ಪೋಸ್ಟ್‌ಗಳು ಭಾರತದ ಸ್ಥಳೀಯ ಕಾನೂನುಗಳನ್ನು ಉಲ್ಲಂಘಿಸಿವೆ ಎಂಬುದರ ಬಗ್ಗೆ ಯಾವುದೇ ಸ್ಪಷ್ಟತೆ ಅಥವಾ ಪುರಾವೆಗಳನ್ನು ನೀಡಿಲ್ಲ ಎಂದು ಎಕ್ಸ್‌ ಆರೋಪಿಸಿದೆ. “ಗಣನೀಯ ಸಂಖ್ಯೆಯ ಖಾತೆಗಳಿಗೆ, ಬ್ಲಾಕ್ ಮಾಡಲು ಯಾವುದೇ ಸಾಕ್ಷ್ಯ ಅಥವಾ ಸಮರ್ಥನೆಯನ್ನು ನೀಡಲಾಗಿಲ್ಲ,” ಎಂದು ಎಕ್ಸ್‌ ಹೇಳಿದೆ.

ಅದಾಗ್ಯೂ, ಕೇಂದ್ರ ಸರ್ಕಾರದ ಈ ಆದೇಶಗಳನ್ನು ತಾನು ಒಪ್ಪುವುದಿಲ್ಲ ಎಂದು ಎಕ್ಸ್‌ ಸ್ಪಷ್ಟಪಡಿಸಿದೆ. ಸಂಪೂರ್ಣ ಖಾತೆಗಳನ್ನು ಬ್ಲಾಕ್ ಮಾಡುವುದು “ಅನಗತ್ಯ”ವಾಗಿದ್ದು, ಅದು “ಸೆನ್ಸಾರ್‌ಶಿಪ್‌ಗೆ ಸಮಾನ”ವಾಗಿರುವತ್ತದೆ, ಇದು ಈಗಿರುವ ಮತ್ತು ಭವಿಷ್ಯದ ವಿಷಯಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಎಕ್ಸ್‌ ಆತಂಕ ವ್ಯಕ್ತಪಡಿಸಿದೆ.

ಸರ್ಕಾರದ ಈ ಆದೇಶವು ಇದು ಮುಕ್ತ ಅಭಿವ್ಯಕ್ತಿಯ ಮೂಲಭೂತ ಹಕ್ಕಿಗೆ ಧಕ್ಕೆ ತರುತ್ತದೆ ಎಂದು ಹೇಳಿರುವ ಎಕ್ಸ್‌, ಆದಾಗ್ಯೂ, ಭಾರತದಲ್ಲಿ ಪ್ಲಾಟ್‌ಫಾರ್ಮ್ ಅನ್ನು ಲಭ್ಯವಾಗಿಡುವುದು ಭಾರತೀಯರಿಗೆ ಮಾಹಿತಿಯನ್ನು ಪಡೆಯಲು ಅತ್ಯಂತ ಮುಖ್ಯ ಎಂದು ಪರಿಗಣಿಸಿ, ಆದೇಶವನ್ನು ಪಾಲಿಸುವ ಕಠಿಣ ನಿರ್ಧಾರವನ್ನು ತೆಗೆದುಕೊಂಡಿದೆ.

ಎಕ್ಸ್‌ ಈ ಕಾರ್ಯನಿರ್ವಾಹಕ ಆದೇಶಗಳನ್ನು ಸಾರ್ವಜನಿಕಗೊಳಿಸುವುದು ಪಾರದರ್ಶಕತೆಗೆ ಅತ್ಯಗತ್ಯ ಎಂದು ಪರಿಗಣಿಸಿರುವುದಾಗಿ ಹೇಳಿದ್ದು, ಅದನ್ನು ಪ್ರಕಟಿಸದೆ ಇರುವುದು ಜವಾಬ್ದಾರಿಯನ್ನು ಕಡಿಮೆ ಮಾಡುತ್ತದೆ ಮತ್ತು ಅನಿಯಂತ್ರಿತ ನಿರ್ಧಾರ ತೆಗೆದುಕೊಳ್ಳುವಿಕೆಗೆ ಕಾರಣವಾಗಬಹುದು ಎಂದು ಎಕ್ಸ್‌ ಹೇಳಿದೆ. ಆದರೆ, ಕಾನೂನು ನಿರ್ಬಂಧಗಳಿಂದಾಗಿ ಈ ಆದೇಶಗಳನ್ನು ಪ್ರಕಟಿಸಲು ಸಾಧ್ಯವಾಗಿಲ್ಲ ಎಂದು ಅದು ಸ್ಪಷ್ಟಪಡಿಸಿದೆ.

ಅದಾಗ್ಯೂ, ಈ ಆದೇಶಗಳ ವಿರುದ್ಧ ತನ್ನ ಕಾನೂನು ಆಯ್ಕೆಗಳನ್ನು ತಾನು ಪರಿಶೀಲಿಸುತ್ತಿರುವುದಾಗಿ ಎಕ್ಸ್‌ ಹೇಳಿದ್ದು, ಭಾರತದ ಕಾನೂನುಗಳ ಪ್ರಕಾರ ಎಕ್ಸ್‌ಗೆ ಈ ಆದೇಶಗಳ ವಿರುದ್ಧ ನೇರವಾಗಿ ಕಾನೂನು ಸವಾಲು ಹಾಕುವ ಸಾಮರ್ಥ್ಯ ಸೀಮಿತವಾಗಿದೆ ಎಂದು ಅದು ಹೇಳಿದೆ. ಆದರೆ, ಈ ಆದೇಶದಿಂದ ತೊಂದರೆಗೆ ಒಳಗಾದ ಬಳಕೆದಾರರು ನ್ಯಾಯಾಲಯದ ಮೂಲಕ ಸೂಕ್ತ ಪರಿಹಾರವನ್ನು ಕೋರಲು ಅದು ಕೇಳಿಕೊಂಡಿದೆ. ಈ ಸಂಬಂಧ ಕೆಲವು ಕಾನೂನು ಸಹಾಯ ಸಂಸ್ಥೆಗಳಾದ iProbono India, National Legal Services Authority, Karnataka Legal Services Authority, ಮತ್ತು Supreme Court Legal Services ಗಳ ಸಂಪರ್ಕ ವಿವರಗಳನ್ನು ಎಕ್ಸ್‌ ಒದಗಿಸಿದೆ.

ಈ ನಡುವೆ, ಮಾನವ ಹಕ್ಕುಗಳು ಮತ್ತು ಅಲ್ಪಸಂಖ್ಯಾತರ ವಿಷಯಗಳ ಮೇಲೆ ಕೇಂದ್ರೀಕರಿಸುವ ಸುದ್ದಿ ಸಂಸ್ಥೆ Maktoob Media, ಇಂಡಿಯನ್ ಎಕ್ಸ್‌ಪ್ರೆಸ್‌ನ ಉಪ ಸಂಪಾದಕ, ಹಿರಿಯ ಪತ್ರಕರ್ತ ಮುಝಮಿಲ್ ಜಲೀಲ್, ಸುದ್ದಿ ವೆಬ್‌ಸೈಟ್ ಕಾಶ್ಮೀರಿಯತ್, ಅರ್ಪಿತ್ ಶರ್ಮಾ, ರಕ್ಷಣಾ ವಿಷಯಗಳ ಮ್ಯಾಗಝೀನ್ ಫೋರ್ಸ್, ಜಾಕ್ಸನ್ ಹಿನ್‌ಕಲ್, ಮಾರಿಯೋ ನೌಫಲ್‌ರಂತಹ ಪ್ರಮುಖ ಬಳಕೆದಾರರ ಖಾತೆಗಳು ಸಹ ಬ್ಲಾಕ್ ಆಗಿವೆ ಎಂದು ವರದಿಯಾಗಿದೆ.

ಕೇಂದ್ರ ಸರ್ಕಾರದ ಈ ಕ್ರಮದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಕೆಲವರು ಈ ಖಾತೆಗಳು ತಪ್ಪು ಮಾಹಿತಿ ಹರಡುತ್ತವೆ ಎಂದು ಸರ್ಕಾರದ ಕ್ರಮವನ್ನು ಸಮರ್ಥಿಸಿದರೆ, ಇತರರು ಇದನ್ನು ಮುಕ್ತ ಅಭಿವ್ಯಕ್ತಿ ಮತ್ತು ಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿ ಎಂದು ಟೀಕಿಸಿದ್ದಾರೆ.

2024ರಲ್ಲಿ ತನ್ನ ವಿರುದ್ಧ ನಡೆದ ಬೃಹತ್ ರೈತ ಪ್ರತಿಭಟನೆಯ ಸಂದರ್ಭದಲ್ಲಿ ಕೂಡಾ ಕೇಂದ್ರ ಸರ್ಕಾರ ಎಕ್ಸ್‌ನ ಹಲವು ಖಾತೆಗಳನ್ನು ಬ್ಲಾಕ್ ಮಾಡುವಂತೆ ಆದೇಶಿಸಿತ್ತು. ಈ ವೇಳೆ ಕೂಡಾ ಎಕ್ಸ್‌ ಈ ಆದೇಶವನ್ನು ಮುಕ್ತ ಅಭಿವ್ಯಕ್ತಿಗೆ ಧಕ್ಕೆ ಎಂದು ಟೀಕಿಸಿತ್ತು. 8000ಕ್ಕೂ ಹೆಚ್ಚು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ನಕ್ಸಲರು ನಡೆಸಿದ ನೆಲಬಾಂಬ್ ಸ್ಫೋಟಕ್ಕೆ 3 ಗ್ರೇಹೌಂಡ್ಸ್ ಕಮಾಂಡೋ ಪೊಲೀಸರ ಸಾವು

ನಕ್ಸಲರು ನಡೆಸಿದ ನೆಲಬಾಂಬ್ ಸ್ಫೋಟಕ್ಕೆ 3 ಗ್ರೇಹೌಂಡ್ಸ್ ಕಮಾಂಡೋ ಪೊಲೀಸರ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...