Homeಮುಖಪುಟ8,000ಕ್ಕೂ ಹೆಚ್ಚು ಖಾತೆಗಳನ್ನು ನಿರ್ಬಂಧಿಸಲು ಕೇಳಿಕೊಂಡ ಮೋದಿ ಸರ್ಕಾರ: ಎಕ್ಸ್ ಆರೋಪ

8,000ಕ್ಕೂ ಹೆಚ್ಚು ಖಾತೆಗಳನ್ನು ನಿರ್ಬಂಧಿಸಲು ಕೇಳಿಕೊಂಡ ಮೋದಿ ಸರ್ಕಾರ: ಎಕ್ಸ್ ಆರೋಪ

ಬಿಜೆಪಿ ಸರ್ಕಾರದ ಈ ಕ್ರಮವನ್ನು "ಮುಕ್ತ ಅಭಿವ್ಯಕ್ತಿಯ ಮೂಲಭೂತ ಹಕ್ಕಿಗೆ ವಿರುದ್ಧ" ಎಂದು ಎಕ್ಸ್‌ ಟೀಕಿಸಿದೆ

- Advertisement -
- Advertisement -

ಸಾಮಾಜಿಕ ಜಾಲತಾಣ ಎಕ್ಸ್‌ (ಹಿಂದಿನ ಟ್ವಿಟರ್) ಕೇಂದ್ರ ಸರ್ಕಾರದಿಂದ 8,000ಕ್ಕೂ ಹೆಚ್ಚು ಖಾತೆಗಳನ್ನು ಭಾರತದಲ್ಲಿ ಬ್ಲಾಕ್ ಮಾಡುವಂತೆ ಆದೇಶವನ್ನು ಪಡೆದಿದೆ ಎಂದು ಮೇ 08ರ ಗುರುವಾರ ಹೇಳಿದೆ. ಈ ಆದೇಶದಲ್ಲಿ, ಅಂತರರಾಷ್ಟ್ರೀಯ ಸುದ್ದಿ ಸಂಸ್ಥೆಗಳು ಮತ್ತು ಪ್ರಮುಖ ಎಕ್ಸ್‌ ಬಳಕೆದಾರರ ಖಾತೆಗಳು ಒಳಗೊಂಡಿದೆ ಎಂದು ಎಕ್ಸ್‌ನ Global Government Affairs ತಂಡ ತಿಳಿಸಿದೆ.  8000ಕ್ಕೂ ಹೆಚ್ಚು

ಅದಾಗ್ಯೂ, ಬಿಜೆಪಿ ಸರ್ಕಾರದ ಈ ಕ್ರಮವನ್ನು “ಮುಕ್ತ ಅಭಿವ್ಯಕ್ತಿಯ ಮೂಲಭೂತ ಹಕ್ಕಿಗೆ ವಿರುದ್ಧ” ಎಂದು ಎಕ್ಸ್‌ ಟೀಕಿಸಿದ್ದು, ಅದಾಗ್ಯೂ, ಸರ್ಕಾರದ ಈ ಆದೇಶವನ್ನು ಪಾಲಿಸುವ ಪ್ರಕ್ರಿಯೆಯನ್ನು ತಾನು ಆರಂಭಿಸಿರುವುದಾಗಿ ಎಂದು ಹೇಳಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಎಕ್ಸ್‌ನ ಗ್ಲೋಬಲ್ ಗೌವರ್ನಮೆಂಟ್ ಅಫೈರ್ಸ್‌, “ಭಾರತ ಸರ್ಕಾರದ ಈ ಕಾರ್ಯನಿರ್ವಾಹಕ ಆದೇಶಗಳು ಭಾರಿ ದಂಡ ಮತ್ತು ಕಂಪನಿಯ ಸ್ಥಳೀಯ ಉದ್ಯೋಗಿಗಳಿಗೆ ಜೈಲು ಶಿಕ್ಷೆಯಂತಹ ಸಂಭಾವ್ಯ ದಂಡನೆಗಳನ್ನು ಒಳಗೊಂಡಿವೆ” ಎಂದು ಹೇಳಿದೆ.

ಅದಾಗ್ಯೂ, ಬ್ಲಾಕ್ ಮಾಡಲು ಹೇಳಲಾಗಿರುವ ಹೆಚ್ಚಿನ ಖಾತೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಯಾವ ಪೋಸ್ಟ್‌ಗಳು ಭಾರತದ ಸ್ಥಳೀಯ ಕಾನೂನುಗಳನ್ನು ಉಲ್ಲಂಘಿಸಿವೆ ಎಂಬುದರ ಬಗ್ಗೆ ಯಾವುದೇ ಸ್ಪಷ್ಟತೆ ಅಥವಾ ಪುರಾವೆಗಳನ್ನು ನೀಡಿಲ್ಲ ಎಂದು ಎಕ್ಸ್‌ ಆರೋಪಿಸಿದೆ. “ಗಣನೀಯ ಸಂಖ್ಯೆಯ ಖಾತೆಗಳಿಗೆ, ಬ್ಲಾಕ್ ಮಾಡಲು ಯಾವುದೇ ಸಾಕ್ಷ್ಯ ಅಥವಾ ಸಮರ್ಥನೆಯನ್ನು ನೀಡಲಾಗಿಲ್ಲ,” ಎಂದು ಎಕ್ಸ್‌ ಹೇಳಿದೆ.

ಅದಾಗ್ಯೂ, ಕೇಂದ್ರ ಸರ್ಕಾರದ ಈ ಆದೇಶಗಳನ್ನು ತಾನು ಒಪ್ಪುವುದಿಲ್ಲ ಎಂದು ಎಕ್ಸ್‌ ಸ್ಪಷ್ಟಪಡಿಸಿದೆ. ಸಂಪೂರ್ಣ ಖಾತೆಗಳನ್ನು ಬ್ಲಾಕ್ ಮಾಡುವುದು “ಅನಗತ್ಯ”ವಾಗಿದ್ದು, ಅದು “ಸೆನ್ಸಾರ್‌ಶಿಪ್‌ಗೆ ಸಮಾನ”ವಾಗಿರುವತ್ತದೆ, ಇದು ಈಗಿರುವ ಮತ್ತು ಭವಿಷ್ಯದ ವಿಷಯಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಎಕ್ಸ್‌ ಆತಂಕ ವ್ಯಕ್ತಪಡಿಸಿದೆ.

ಸರ್ಕಾರದ ಈ ಆದೇಶವು ಇದು ಮುಕ್ತ ಅಭಿವ್ಯಕ್ತಿಯ ಮೂಲಭೂತ ಹಕ್ಕಿಗೆ ಧಕ್ಕೆ ತರುತ್ತದೆ ಎಂದು ಹೇಳಿರುವ ಎಕ್ಸ್‌, ಆದಾಗ್ಯೂ, ಭಾರತದಲ್ಲಿ ಪ್ಲಾಟ್‌ಫಾರ್ಮ್ ಅನ್ನು ಲಭ್ಯವಾಗಿಡುವುದು ಭಾರತೀಯರಿಗೆ ಮಾಹಿತಿಯನ್ನು ಪಡೆಯಲು ಅತ್ಯಂತ ಮುಖ್ಯ ಎಂದು ಪರಿಗಣಿಸಿ, ಆದೇಶವನ್ನು ಪಾಲಿಸುವ ಕಠಿಣ ನಿರ್ಧಾರವನ್ನು ತೆಗೆದುಕೊಂಡಿದೆ.

ಎಕ್ಸ್‌ ಈ ಕಾರ್ಯನಿರ್ವಾಹಕ ಆದೇಶಗಳನ್ನು ಸಾರ್ವಜನಿಕಗೊಳಿಸುವುದು ಪಾರದರ್ಶಕತೆಗೆ ಅತ್ಯಗತ್ಯ ಎಂದು ಪರಿಗಣಿಸಿರುವುದಾಗಿ ಹೇಳಿದ್ದು, ಅದನ್ನು ಪ್ರಕಟಿಸದೆ ಇರುವುದು ಜವಾಬ್ದಾರಿಯನ್ನು ಕಡಿಮೆ ಮಾಡುತ್ತದೆ ಮತ್ತು ಅನಿಯಂತ್ರಿತ ನಿರ್ಧಾರ ತೆಗೆದುಕೊಳ್ಳುವಿಕೆಗೆ ಕಾರಣವಾಗಬಹುದು ಎಂದು ಎಕ್ಸ್‌ ಹೇಳಿದೆ. ಆದರೆ, ಕಾನೂನು ನಿರ್ಬಂಧಗಳಿಂದಾಗಿ ಈ ಆದೇಶಗಳನ್ನು ಪ್ರಕಟಿಸಲು ಸಾಧ್ಯವಾಗಿಲ್ಲ ಎಂದು ಅದು ಸ್ಪಷ್ಟಪಡಿಸಿದೆ.

ಅದಾಗ್ಯೂ, ಈ ಆದೇಶಗಳ ವಿರುದ್ಧ ತನ್ನ ಕಾನೂನು ಆಯ್ಕೆಗಳನ್ನು ತಾನು ಪರಿಶೀಲಿಸುತ್ತಿರುವುದಾಗಿ ಎಕ್ಸ್‌ ಹೇಳಿದ್ದು, ಭಾರತದ ಕಾನೂನುಗಳ ಪ್ರಕಾರ ಎಕ್ಸ್‌ಗೆ ಈ ಆದೇಶಗಳ ವಿರುದ್ಧ ನೇರವಾಗಿ ಕಾನೂನು ಸವಾಲು ಹಾಕುವ ಸಾಮರ್ಥ್ಯ ಸೀಮಿತವಾಗಿದೆ ಎಂದು ಅದು ಹೇಳಿದೆ. ಆದರೆ, ಈ ಆದೇಶದಿಂದ ತೊಂದರೆಗೆ ಒಳಗಾದ ಬಳಕೆದಾರರು ನ್ಯಾಯಾಲಯದ ಮೂಲಕ ಸೂಕ್ತ ಪರಿಹಾರವನ್ನು ಕೋರಲು ಅದು ಕೇಳಿಕೊಂಡಿದೆ. ಈ ಸಂಬಂಧ ಕೆಲವು ಕಾನೂನು ಸಹಾಯ ಸಂಸ್ಥೆಗಳಾದ iProbono India, National Legal Services Authority, Karnataka Legal Services Authority, ಮತ್ತು Supreme Court Legal Services ಗಳ ಸಂಪರ್ಕ ವಿವರಗಳನ್ನು ಎಕ್ಸ್‌ ಒದಗಿಸಿದೆ.

ಈ ನಡುವೆ, ಮಾನವ ಹಕ್ಕುಗಳು ಮತ್ತು ಅಲ್ಪಸಂಖ್ಯಾತರ ವಿಷಯಗಳ ಮೇಲೆ ಕೇಂದ್ರೀಕರಿಸುವ ಸುದ್ದಿ ಸಂಸ್ಥೆ Maktoob Media, ಇಂಡಿಯನ್ ಎಕ್ಸ್‌ಪ್ರೆಸ್‌ನ ಉಪ ಸಂಪಾದಕ, ಹಿರಿಯ ಪತ್ರಕರ್ತ ಮುಝಮಿಲ್ ಜಲೀಲ್, ಸುದ್ದಿ ವೆಬ್‌ಸೈಟ್ ಕಾಶ್ಮೀರಿಯತ್, ಅರ್ಪಿತ್ ಶರ್ಮಾ, ರಕ್ಷಣಾ ವಿಷಯಗಳ ಮ್ಯಾಗಝೀನ್ ಫೋರ್ಸ್, ಜಾಕ್ಸನ್ ಹಿನ್‌ಕಲ್, ಮಾರಿಯೋ ನೌಫಲ್‌ರಂತಹ ಪ್ರಮುಖ ಬಳಕೆದಾರರ ಖಾತೆಗಳು ಸಹ ಬ್ಲಾಕ್ ಆಗಿವೆ ಎಂದು ವರದಿಯಾಗಿದೆ.

ಕೇಂದ್ರ ಸರ್ಕಾರದ ಈ ಕ್ರಮದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಕೆಲವರು ಈ ಖಾತೆಗಳು ತಪ್ಪು ಮಾಹಿತಿ ಹರಡುತ್ತವೆ ಎಂದು ಸರ್ಕಾರದ ಕ್ರಮವನ್ನು ಸಮರ್ಥಿಸಿದರೆ, ಇತರರು ಇದನ್ನು ಮುಕ್ತ ಅಭಿವ್ಯಕ್ತಿ ಮತ್ತು ಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿ ಎಂದು ಟೀಕಿಸಿದ್ದಾರೆ.

2024ರಲ್ಲಿ ತನ್ನ ವಿರುದ್ಧ ನಡೆದ ಬೃಹತ್ ರೈತ ಪ್ರತಿಭಟನೆಯ ಸಂದರ್ಭದಲ್ಲಿ ಕೂಡಾ ಕೇಂದ್ರ ಸರ್ಕಾರ ಎಕ್ಸ್‌ನ ಹಲವು ಖಾತೆಗಳನ್ನು ಬ್ಲಾಕ್ ಮಾಡುವಂತೆ ಆದೇಶಿಸಿತ್ತು. ಈ ವೇಳೆ ಕೂಡಾ ಎಕ್ಸ್‌ ಈ ಆದೇಶವನ್ನು ಮುಕ್ತ ಅಭಿವ್ಯಕ್ತಿಗೆ ಧಕ್ಕೆ ಎಂದು ಟೀಕಿಸಿತ್ತು. 8000ಕ್ಕೂ ಹೆಚ್ಚು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ನಕ್ಸಲರು ನಡೆಸಿದ ನೆಲಬಾಂಬ್ ಸ್ಫೋಟಕ್ಕೆ 3 ಗ್ರೇಹೌಂಡ್ಸ್ ಕಮಾಂಡೋ ಪೊಲೀಸರ ಸಾವು

ನಕ್ಸಲರು ನಡೆಸಿದ ನೆಲಬಾಂಬ್ ಸ್ಫೋಟಕ್ಕೆ 3 ಗ್ರೇಹೌಂಡ್ಸ್ ಕಮಾಂಡೋ ಪೊಲೀಸರ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...