Homeಮುಖಪುಟ8,000ಕ್ಕೂ ಹೆಚ್ಚು ಖಾತೆಗಳನ್ನು ನಿರ್ಬಂಧಿಸಲು ಕೇಳಿಕೊಂಡ ಮೋದಿ ಸರ್ಕಾರ: ಎಕ್ಸ್ ಆರೋಪ

8,000ಕ್ಕೂ ಹೆಚ್ಚು ಖಾತೆಗಳನ್ನು ನಿರ್ಬಂಧಿಸಲು ಕೇಳಿಕೊಂಡ ಮೋದಿ ಸರ್ಕಾರ: ಎಕ್ಸ್ ಆರೋಪ

ಬಿಜೆಪಿ ಸರ್ಕಾರದ ಈ ಕ್ರಮವನ್ನು "ಮುಕ್ತ ಅಭಿವ್ಯಕ್ತಿಯ ಮೂಲಭೂತ ಹಕ್ಕಿಗೆ ವಿರುದ್ಧ" ಎಂದು ಎಕ್ಸ್‌ ಟೀಕಿಸಿದೆ

- Advertisement -
- Advertisement -

ಸಾಮಾಜಿಕ ಜಾಲತಾಣ ಎಕ್ಸ್‌ (ಹಿಂದಿನ ಟ್ವಿಟರ್) ಕೇಂದ್ರ ಸರ್ಕಾರದಿಂದ 8,000ಕ್ಕೂ ಹೆಚ್ಚು ಖಾತೆಗಳನ್ನು ಭಾರತದಲ್ಲಿ ಬ್ಲಾಕ್ ಮಾಡುವಂತೆ ಆದೇಶವನ್ನು ಪಡೆದಿದೆ ಎಂದು ಮೇ 08ರ ಗುರುವಾರ ಹೇಳಿದೆ. ಈ ಆದೇಶದಲ್ಲಿ, ಅಂತರರಾಷ್ಟ್ರೀಯ ಸುದ್ದಿ ಸಂಸ್ಥೆಗಳು ಮತ್ತು ಪ್ರಮುಖ ಎಕ್ಸ್‌ ಬಳಕೆದಾರರ ಖಾತೆಗಳು ಒಳಗೊಂಡಿದೆ ಎಂದು ಎಕ್ಸ್‌ನ Global Government Affairs ತಂಡ ತಿಳಿಸಿದೆ.  8000ಕ್ಕೂ ಹೆಚ್ಚು

ಅದಾಗ್ಯೂ, ಬಿಜೆಪಿ ಸರ್ಕಾರದ ಈ ಕ್ರಮವನ್ನು “ಮುಕ್ತ ಅಭಿವ್ಯಕ್ತಿಯ ಮೂಲಭೂತ ಹಕ್ಕಿಗೆ ವಿರುದ್ಧ” ಎಂದು ಎಕ್ಸ್‌ ಟೀಕಿಸಿದ್ದು, ಅದಾಗ್ಯೂ, ಸರ್ಕಾರದ ಈ ಆದೇಶವನ್ನು ಪಾಲಿಸುವ ಪ್ರಕ್ರಿಯೆಯನ್ನು ತಾನು ಆರಂಭಿಸಿರುವುದಾಗಿ ಎಂದು ಹೇಳಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಎಕ್ಸ್‌ನ ಗ್ಲೋಬಲ್ ಗೌವರ್ನಮೆಂಟ್ ಅಫೈರ್ಸ್‌, “ಭಾರತ ಸರ್ಕಾರದ ಈ ಕಾರ್ಯನಿರ್ವಾಹಕ ಆದೇಶಗಳು ಭಾರಿ ದಂಡ ಮತ್ತು ಕಂಪನಿಯ ಸ್ಥಳೀಯ ಉದ್ಯೋಗಿಗಳಿಗೆ ಜೈಲು ಶಿಕ್ಷೆಯಂತಹ ಸಂಭಾವ್ಯ ದಂಡನೆಗಳನ್ನು ಒಳಗೊಂಡಿವೆ” ಎಂದು ಹೇಳಿದೆ.

ಅದಾಗ್ಯೂ, ಬ್ಲಾಕ್ ಮಾಡಲು ಹೇಳಲಾಗಿರುವ ಹೆಚ್ಚಿನ ಖಾತೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಯಾವ ಪೋಸ್ಟ್‌ಗಳು ಭಾರತದ ಸ್ಥಳೀಯ ಕಾನೂನುಗಳನ್ನು ಉಲ್ಲಂಘಿಸಿವೆ ಎಂಬುದರ ಬಗ್ಗೆ ಯಾವುದೇ ಸ್ಪಷ್ಟತೆ ಅಥವಾ ಪುರಾವೆಗಳನ್ನು ನೀಡಿಲ್ಲ ಎಂದು ಎಕ್ಸ್‌ ಆರೋಪಿಸಿದೆ. “ಗಣನೀಯ ಸಂಖ್ಯೆಯ ಖಾತೆಗಳಿಗೆ, ಬ್ಲಾಕ್ ಮಾಡಲು ಯಾವುದೇ ಸಾಕ್ಷ್ಯ ಅಥವಾ ಸಮರ್ಥನೆಯನ್ನು ನೀಡಲಾಗಿಲ್ಲ,” ಎಂದು ಎಕ್ಸ್‌ ಹೇಳಿದೆ.

ಅದಾಗ್ಯೂ, ಕೇಂದ್ರ ಸರ್ಕಾರದ ಈ ಆದೇಶಗಳನ್ನು ತಾನು ಒಪ್ಪುವುದಿಲ್ಲ ಎಂದು ಎಕ್ಸ್‌ ಸ್ಪಷ್ಟಪಡಿಸಿದೆ. ಸಂಪೂರ್ಣ ಖಾತೆಗಳನ್ನು ಬ್ಲಾಕ್ ಮಾಡುವುದು “ಅನಗತ್ಯ”ವಾಗಿದ್ದು, ಅದು “ಸೆನ್ಸಾರ್‌ಶಿಪ್‌ಗೆ ಸಮಾನ”ವಾಗಿರುವತ್ತದೆ, ಇದು ಈಗಿರುವ ಮತ್ತು ಭವಿಷ್ಯದ ವಿಷಯಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಎಕ್ಸ್‌ ಆತಂಕ ವ್ಯಕ್ತಪಡಿಸಿದೆ.

ಸರ್ಕಾರದ ಈ ಆದೇಶವು ಇದು ಮುಕ್ತ ಅಭಿವ್ಯಕ್ತಿಯ ಮೂಲಭೂತ ಹಕ್ಕಿಗೆ ಧಕ್ಕೆ ತರುತ್ತದೆ ಎಂದು ಹೇಳಿರುವ ಎಕ್ಸ್‌, ಆದಾಗ್ಯೂ, ಭಾರತದಲ್ಲಿ ಪ್ಲಾಟ್‌ಫಾರ್ಮ್ ಅನ್ನು ಲಭ್ಯವಾಗಿಡುವುದು ಭಾರತೀಯರಿಗೆ ಮಾಹಿತಿಯನ್ನು ಪಡೆಯಲು ಅತ್ಯಂತ ಮುಖ್ಯ ಎಂದು ಪರಿಗಣಿಸಿ, ಆದೇಶವನ್ನು ಪಾಲಿಸುವ ಕಠಿಣ ನಿರ್ಧಾರವನ್ನು ತೆಗೆದುಕೊಂಡಿದೆ.

ಎಕ್ಸ್‌ ಈ ಕಾರ್ಯನಿರ್ವಾಹಕ ಆದೇಶಗಳನ್ನು ಸಾರ್ವಜನಿಕಗೊಳಿಸುವುದು ಪಾರದರ್ಶಕತೆಗೆ ಅತ್ಯಗತ್ಯ ಎಂದು ಪರಿಗಣಿಸಿರುವುದಾಗಿ ಹೇಳಿದ್ದು, ಅದನ್ನು ಪ್ರಕಟಿಸದೆ ಇರುವುದು ಜವಾಬ್ದಾರಿಯನ್ನು ಕಡಿಮೆ ಮಾಡುತ್ತದೆ ಮತ್ತು ಅನಿಯಂತ್ರಿತ ನಿರ್ಧಾರ ತೆಗೆದುಕೊಳ್ಳುವಿಕೆಗೆ ಕಾರಣವಾಗಬಹುದು ಎಂದು ಎಕ್ಸ್‌ ಹೇಳಿದೆ. ಆದರೆ, ಕಾನೂನು ನಿರ್ಬಂಧಗಳಿಂದಾಗಿ ಈ ಆದೇಶಗಳನ್ನು ಪ್ರಕಟಿಸಲು ಸಾಧ್ಯವಾಗಿಲ್ಲ ಎಂದು ಅದು ಸ್ಪಷ್ಟಪಡಿಸಿದೆ.

ಅದಾಗ್ಯೂ, ಈ ಆದೇಶಗಳ ವಿರುದ್ಧ ತನ್ನ ಕಾನೂನು ಆಯ್ಕೆಗಳನ್ನು ತಾನು ಪರಿಶೀಲಿಸುತ್ತಿರುವುದಾಗಿ ಎಕ್ಸ್‌ ಹೇಳಿದ್ದು, ಭಾರತದ ಕಾನೂನುಗಳ ಪ್ರಕಾರ ಎಕ್ಸ್‌ಗೆ ಈ ಆದೇಶಗಳ ವಿರುದ್ಧ ನೇರವಾಗಿ ಕಾನೂನು ಸವಾಲು ಹಾಕುವ ಸಾಮರ್ಥ್ಯ ಸೀಮಿತವಾಗಿದೆ ಎಂದು ಅದು ಹೇಳಿದೆ. ಆದರೆ, ಈ ಆದೇಶದಿಂದ ತೊಂದರೆಗೆ ಒಳಗಾದ ಬಳಕೆದಾರರು ನ್ಯಾಯಾಲಯದ ಮೂಲಕ ಸೂಕ್ತ ಪರಿಹಾರವನ್ನು ಕೋರಲು ಅದು ಕೇಳಿಕೊಂಡಿದೆ. ಈ ಸಂಬಂಧ ಕೆಲವು ಕಾನೂನು ಸಹಾಯ ಸಂಸ್ಥೆಗಳಾದ iProbono India, National Legal Services Authority, Karnataka Legal Services Authority, ಮತ್ತು Supreme Court Legal Services ಗಳ ಸಂಪರ್ಕ ವಿವರಗಳನ್ನು ಎಕ್ಸ್‌ ಒದಗಿಸಿದೆ.

ಈ ನಡುವೆ, ಮಾನವ ಹಕ್ಕುಗಳು ಮತ್ತು ಅಲ್ಪಸಂಖ್ಯಾತರ ವಿಷಯಗಳ ಮೇಲೆ ಕೇಂದ್ರೀಕರಿಸುವ ಸುದ್ದಿ ಸಂಸ್ಥೆ Maktoob Media, ಇಂಡಿಯನ್ ಎಕ್ಸ್‌ಪ್ರೆಸ್‌ನ ಉಪ ಸಂಪಾದಕ, ಹಿರಿಯ ಪತ್ರಕರ್ತ ಮುಝಮಿಲ್ ಜಲೀಲ್, ಸುದ್ದಿ ವೆಬ್‌ಸೈಟ್ ಕಾಶ್ಮೀರಿಯತ್, ಅರ್ಪಿತ್ ಶರ್ಮಾ, ರಕ್ಷಣಾ ವಿಷಯಗಳ ಮ್ಯಾಗಝೀನ್ ಫೋರ್ಸ್, ಜಾಕ್ಸನ್ ಹಿನ್‌ಕಲ್, ಮಾರಿಯೋ ನೌಫಲ್‌ರಂತಹ ಪ್ರಮುಖ ಬಳಕೆದಾರರ ಖಾತೆಗಳು ಸಹ ಬ್ಲಾಕ್ ಆಗಿವೆ ಎಂದು ವರದಿಯಾಗಿದೆ.

ಕೇಂದ್ರ ಸರ್ಕಾರದ ಈ ಕ್ರಮದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಕೆಲವರು ಈ ಖಾತೆಗಳು ತಪ್ಪು ಮಾಹಿತಿ ಹರಡುತ್ತವೆ ಎಂದು ಸರ್ಕಾರದ ಕ್ರಮವನ್ನು ಸಮರ್ಥಿಸಿದರೆ, ಇತರರು ಇದನ್ನು ಮುಕ್ತ ಅಭಿವ್ಯಕ್ತಿ ಮತ್ತು ಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿ ಎಂದು ಟೀಕಿಸಿದ್ದಾರೆ.

2024ರಲ್ಲಿ ತನ್ನ ವಿರುದ್ಧ ನಡೆದ ಬೃಹತ್ ರೈತ ಪ್ರತಿಭಟನೆಯ ಸಂದರ್ಭದಲ್ಲಿ ಕೂಡಾ ಕೇಂದ್ರ ಸರ್ಕಾರ ಎಕ್ಸ್‌ನ ಹಲವು ಖಾತೆಗಳನ್ನು ಬ್ಲಾಕ್ ಮಾಡುವಂತೆ ಆದೇಶಿಸಿತ್ತು. ಈ ವೇಳೆ ಕೂಡಾ ಎಕ್ಸ್‌ ಈ ಆದೇಶವನ್ನು ಮುಕ್ತ ಅಭಿವ್ಯಕ್ತಿಗೆ ಧಕ್ಕೆ ಎಂದು ಟೀಕಿಸಿತ್ತು. 8000ಕ್ಕೂ ಹೆಚ್ಚು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ನಕ್ಸಲರು ನಡೆಸಿದ ನೆಲಬಾಂಬ್ ಸ್ಫೋಟಕ್ಕೆ 3 ಗ್ರೇಹೌಂಡ್ಸ್ ಕಮಾಂಡೋ ಪೊಲೀಸರ ಸಾವು

ನಕ್ಸಲರು ನಡೆಸಿದ ನೆಲಬಾಂಬ್ ಸ್ಫೋಟಕ್ಕೆ 3 ಗ್ರೇಹೌಂಡ್ಸ್ ಕಮಾಂಡೋ ಪೊಲೀಸರ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...